TOP STORIES:

FOLLOW US

ಮಂಗಳೂರು 48 ಲಕ್ಷ ರೂ. ವೆಚ್ಚದಲ್ಲಿ ಬ್ರಹ್ಮಶ್ರೀ ನಾರಾಯಣ ಗುರು ವೃತ್ತದ ಶಿಲಾನ್ಯಾಸ


ಮಂಗಳೂರು, ಜು 24 : ಇಂಧನ, ಕನ್ನಡ ಹಾಗೂ ಸಂಸ್ಕೃತಿ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ವಿ. ಸುನಿಲ್ ಕುಮಾರ್ ಅವರು ಜು. 24ರ ಭಾನುವಾರದಂದು ನಗರದ ಲೇಡಿಹಿಲ್ ಶಾಲೆಯ ಬಳಿ ಬ್ರಹ್ಮಶ್ರೀ ನಾರಾಯಣ ಗುರು ವೃತ್ತದ ಶಿಲಾನ್ಯಾಸ ನೆರವೇರಿಸಿದರು.

ಬಳಿಕ ಮಾತನಾಡಿದ ಅವರು, ಮಂಗಳೂರು ನಗರಾಭಿವೃದ್ದಿ ಪ್ರಾಧಿಕಾರದ ಸಹಭಾಗಿತ್ವದೊಂದಿಗೆ ಸುಮಾರು 48 ಲಕ್ಷ ರೂ. ವೆಚ್ಚದಲ್ಲಿ ಒಂದು ಸುಂದರವಾದ ನಾರಾಯಣ ಗುರು ವೃತ್ತ ಮಾಡಬೇಕೆಂದು ತೀರ್ಮಾನಿಸಿದ್ದು, ಅದರಂತೆ ಇಂದು ಶಂಕುಸ್ಥಾಪನೆಯಾಗಿದೆ. ನಾರಾಯಣಗುರುಗಳು ಪಾದಸ್ಪರ್ಶ ಮಾಡಿದ ಮಂಗಳೂರಿಗೆ ಒಂದು ವಿಶೇಷವಾದ ಆಯಾಮವನ್ನು ನೀಡಬೇಕೆಂದು ಮುಡಾ ಮತ್ತು ಸ್ಥಳೀಯ ಶಾಸಕರು, ಜನಪ್ರತಿನಿಧಿಗಳ ಸಹಕಾರದೊಂದಿಗೆ ಒಂದು ವಿಶೇಷವಾದ ಅಭಿವೃದ್ದಿ ಚಟುವಟಿಕೆಗೆ ಇವತ್ತಿನಿಂದ ಚಾಲನೆ ಕೊಡುತ್ತಿದ್ದೇವೆ. ನಾರಾಯಣ ಗುರುಗಳ ಹೆಸರಿನ ಮುಖಾಂತರ ಸಮಾಜದಲ್ಲಿ ಸಾಮರಸ್ಯ ನಿರ್ಮಾಣವಾಗಬೇಕು. ಅವರ ಹೆಸರು ಬಳಕೆ ಮಾಡುವ ಮುಖಾಂತರ ಮಂಗಳೂರಿನ ಅಭಿವೃದ್ದಿಗೆ ಹೊಸ ಆಯಾಮ ನೀಡುವ ಪ್ರಯತ್ನ ನಡೆಯಲಿದೆ. ಪಾಲಿಕೆ, ಮುಡಾ, ಬಿಜೆಪಿಯು ಗುರುಗಳನ್ನು ವಿಶಿಷ್ಟವಾಗಿ ಕಣ್ಮುಂದೆ ಇಟ್ಟುಕೊಂಡು ಅವರ ಆದರ್ಶಗಳನ್ನು ವಿವಿಧ ಆಯಾಮಗಳಲ್ಲಿ ಪ್ರಕಟಿಸುವ ಪ್ರಯತ್ನ ಮಾಡಲಿದೆ ಎಂದರು.

ಮನೆಗಳಲ್ಲಿ ಹಾರಾಡಲಿ ರಾಷ್ಟ್ರಧ್ವಜ
ವೃತ್ತವನ್ನು ನವರಾತ್ರಿ ವೇಳೆಗೆ ಲೋಕಾರ್ಪಣೆಗೊಳಿಸಿ ಸಾರ್ವಜನಿಕರ ಬಳಕೆಗೆ ನೀಡಲಾಗುವುದು. ಹಣಕಾಸಿನ ನೆರವನ್ನು ನೀಡಲಾಗಿದ್ದು, ಕಾಲಮಿತಿಯಲ್ಲಿ ಕಾಮಗಾರಿ ಮುಗಿಸಲಾಗುವುದು ಎಂದವರು ತಿಳಿಸಿದರು. ಸ್ವಾತಂತ್ರ್ಯದ ಅಮೃತ ಮಹೋತ್ಸವ ಹಿನ್ನೆಲೆಯಲ್ಲಿ ಅಮೃತ ಭಾರತಿಗೆ ಕನ್ನಡದಾರತಿ ವಿಶೇಷ ಅಭಿಯಾನ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಮ್ಮಿಕೊಂಡಿದೆ. ಸ್ವಾತಂತ್ರ್ಯ ಹೋರಾಟಕ್ಕೆ ಕರ್ನಾಟಕದ ಕೊಡುಗೆಗಳನ್ನು ಜನ ಮಾನಸಕ್ಕೆ ತಲುಪಿಸುವ ಪ್ರಯತ್ನವನ್ನು ಈ ತಿಂಗಳು ಪೂರ್ತಿ ಮಾಡುತ್ತಿದ್ದೇವೆ. ವಿವಿಧ ಭಾಗಗಳಲ್ಲಿ ರಂಗಾಯಣದ ಮುಖಾಂತರ ನಾಟಕ, ಚಲನಚಿತ್ರ ಪ್ರದರ್ಶನ, ಕರಪತ್ರ ಹಂಚಿಕೆ, ರಥಯಾತ್ರೆ ಮಾಡಲಿದ್ದೇವೆ. ಆಗಸ್ಟ್‌ 12ರಿಂದ ಎಲ್ಲರ ಮನೆ ಮೇಲೆ ರಾಷ್ಟ್ರಧ್ವಜ ಹಾರಿಸುವ ಸಂಕಲ್ಪವನ್ನು ಪ್ರತಿಯೊಬ್ಬರೂ ಮಾಡಬೇಕು. ಪ್ಲಾಸ್ಟಿಕ್ ರಾಷ್ಟ್ರಧ್ವಜವನ್ನು ಬಳಕೆ ಮಾಡದೆ, ಖಾದಿ, ಕಾಟನ್ ಬಟ್ಟೆಗಳಿಗೆ ಆದ್ಯತೆ ನೀಡಬೇಕು ಎಂದು ಅವರು ಮನವಿ ಮಾಡಿದರು.

ಶಾಸಕರಾದ ಡಿ. ವೇದವ್ಯಾಸ ಕಾಮತ್, ಡಾ. ವೈ. ಭರತ್ ಶೆಟ್ಟಿ, ಮುಡಾ ನಿಕಟಪೂರ್ವ ಅಧ್ಯಕ್ಷ ರವಿಶಂಕರ್‍ ಮಿಜಾರ್, ಮೇಯರ್ ಪ್ರೇಮಾನಂದ ಶೆಟ್ಟಿ, ಉದಯ್ ಪೂಜಾರಿ, ಬಿರುವೆರ್ ಕುಡ್ಲ ಸ್ಥಾಪಕರು ,ಮಾಜಿ ಮೇಯರ್‍ ದಿವಾಕರ ಪಾಂಡೇಶ್ವರ, ಬಿಜೆಪಿ ಮುಖಂಡ ಹರಿಕೃಷ್ಣ ಬಂಟ್ವಾಳ್  ಮತ್ತಿತರರು ಉಪಸ್ಥಿತರಿದ್ದರು.


Share:

More Posts

Category

Send Us A Message

Related Posts

ಉಜಿರೆ ಕನ್ಯಾಡಿ ಸರ್ಕಾರಿ ಶಾಲೆಗೆ 1.65 ಲಕ್ಷ ರೂಪಾಯಿ ವೆಚ್ಚದ ಸ್ಮಾರ್ಟ್ ಕ್ಲಾಸ್ ಹಸ್ತಾಂತರ


Share       ಹಿಂದೂ ಧಾರ್ಮಿಕ ಸೇವಾ ಸಮಿತಿ ಆಶ್ರಯದಲ್ಲಿ ನಡೆದ ಸಾರ್ವಜನಿಕ ಶ್ರೀ ಗಣೇಶೋತ್ಸವದಲ್ಲಿ ಬೆಂಗಳೂರಿನ ಬಿಟ್ಸ್  & ಬೈಟ್ ಐಟಿ ಕಂಪನಿಯ ಶ್ರೀ ಪ್ರಕಾಶ್ ರಾವ್ ಇವರು ನೀಡಿದ ಒಂದು ಲಕ್ಷ ಅರವತ್ತೈದು ಸಾವಿರ


Read More »

ದುಬೈಯಲ್ಲಿ ಶಿಕ್ಷಣ ಪಡೆಯುತ್ತಿರುವ ಬಹುಮುಖ ಪ್ರತಿಭೆ ಪ್ರಿಷ ಪೂಜಾರಿ ಬೆಳ್ವಾಯಿ…


Share       ಬಹುಮುಖ ಪ್ರತಿಭೆ ಪ್ರಿಷ ಪೂಜಾರಿ ಬೆಳ್ವಾಯಿ… ಇತ್ತೀಚಿನ ಕಾಲಗಟ್ಟದಲ್ಲಿ ಮಕ್ಕಳು ಹೆಚ್ಚಾಗಿ ಮೊಬೈಲ್‌  ಟಿವಿ ಇಂಟರ್ನೆಟ್ ಗಳ ಜೊತೆಗೆ ಕಾಲ‌ ಕಳೆಯುತ್ತಿರುವಾಗ, ಇಳ್ಳೊಬ್ಬಲು ತನ್ನ ರಜಾದಿನಗಳನ್ನು ಯಕ್ಷಗಾನ ಭಜನೆ, ಇನ್ನು‌ ಅನೇಕ‌ ನೃತ್ಯಗಳ


Read More »

ಛಲ ಬಿಡದೆ ಹೋರಾಡಿ ವಿರೋಧಿಗಳ ಕುತಂತ್ರವನ್ನು ಮನದಟ್ಟು ಮಾಡುವಲ್ಲಿ ಯಶಸ್ವಿಯಾದ ಮಹೇಶ್ ಕೋಟ್ಯಾನ್


Share       lಮಂಗಳೂರು SEZ ಸಂತ್ರಸ್ತರ ನಡುವಿನ ಛಲ ಬಿಡದ ಹೋರಾಟಗಾರ ಆತ ಆಗ ಹದಿಹರೆಯದ ಹುಡುಗ, ಸಂಘಟನೆಗಳಲ್ಲಿ ತೊಡಗಿಸಿಕೊಂಡು ಸಮಾಜಮುಖಿ ಕಾರ್ಯಗಳನ್ನು ಮಾಡುತ್ತಾ ಜೀವನೋಪಾಯಕ್ಕಾಗಿ ಕುಟುಂಬದ 16 ಎಕರೆ ಜಾಗದಲ್ಲಿ ವಾಣಿಜ್ಯ ಕೃಷಿ ಬೆಳೆಯುವ


Read More »

ಚತುರ್ಭಾಷಾ ತಾರೆ, ಮಂಗಳೂರು ಮೂಲದ ಚಿರಶ್ರೀ ಅಂಚನ್ ಅವರು ಮುಂಬಯಿನಲ್ಲಿ ಉದ್ಯಮಿ ಲೋಹಿತ್ ಪೂಜಾರಿ ಜತೆ ನಿಶ್ಚಿತಾರ್ಥ


Share       ಉಡುಪಿ: ಚತುರ್ಭಾಷಾ ತಾರೆ, ಮಂಗಳೂರು ಮೂಲದ ಚಿರಶ್ರೀ ಅಂಚನ್ ಅವರು ಮುಂಬಯಿನಲ್ಲಿ ಉದ್ಯಮಿ ಲೋಹಿತ್ ಪೂಜಾರಿ ಜತೆ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ.ಇನ್ನು ದಾಂಪತ್ಯ ಜೀವನಕ್ಕೆ ಕಾಲಿಡಲಿದ್ದಾರೆ. ಮುಂಬೈ ಲೋನಾವಾಲದ ಉದ್ಯಮಿ ಲೋಹಿತ್ ಪೂಜಾರಿ ಅವರೊಂದಿಗೆ 


Read More »

ಬಂಟ್ವಾಳ ತಾಲೂಕು ಆಸ್ಪತ್ರೆಯ ಆರೋಗ್ಯ ರಕ್ಷಾ ಸಮಿತಿಯ ಸದಸ್ಯರಾಗಿ ವೆಂಕಪ್ಪ ಪೂಜಾರಿ ಆಯ್ಕೆ


Share       ಬಂಟ್ವಾಳ ತಾಲೂಕು ಆಸ್ಪತ್ರೆಯ ಆರೋಗ್ಯ ರಕ್ಷಾ ಸಮಿತಿಯ ಸದಸ್ಯರಾಗಿ ವೆಂಕಪ್ಪ ಪೂಜಾರಿ ಆಯ್ಕೆ ಬಂಟ್ವಾಳ : ಬಂಟ್ವಾಳ ತಾಲೂಕು ಆಸ್ಪತ್ರೆಯ ಆರೋಗ್ಯ ರಕ್ಷಾ ಸಮಿತಿಯ ಅಧಿಕಾರೇತರ ಸದಸ್ಯರಾಗಿ ವೆಂಕಪ್ಪ ಪೂಜಾರಿ ಅರ್ಬಿಗುಡ್ಡೆ ನಾಮ


Read More »

ವಿಶ್ವ ಮಾನ್ಯ ಕನ್ನಡಿಗ. 2024 ಪ್ರಶಸ್ತಿಗೆ ಭಾಜನರಾದ ಸನ್ಮಾನ್ಯ ಶ್ರೀ ಕೆ.ಪಿ ಮಂಜುನಾಥ್ ಸಾಗರ್ 


Share       ಅಮೆರಿಕದ ರಿಚ್ಮಂಡ್ ನಗರ ದ ಗ್ರೇಟರ್ ರಿಚ್ಮಂಡ್ ಕನ್ವೆನ್ಷನ್ ಸೆಂಟರ್ ನಲ್ಲಿ ನಡೆದ 12 ನೇ ಅಕ್ಕ ವಿಶ್ವ ಮಾನ್ಯ ಕನ್ನಡ ಸಮ್ಮೇಳನವು ನಡೆಯಿತು. ಈ ಸಂದರ್ಭದಲ್ಲಿ ಕನ್ನಡ ಭಾಷೆ, ಸಂಸ್ಕೃತಿ, ಸಾಹಿತ್ಯ


Read More »