TOP STORIES:

ಮಂಗಳೂರಿನ ಅದ್ಭುತ ಕಲೆಗಾರ ಬಿ.ಎಸ್.ಎನ್.ಎಲ್ ಕಛೇರಿ ಕಾವಲುಗಾರ – ದಯಾನಂದ ಪಿ. ಅಂಚನ್


ಪ್ರತಿಭೆಗೆ ವಯಸ್ಸಿನ ಮೀತಿಯಾಗಲಿ ಮಾಡುವ ಕೆಲಸವಾಗಲಿ ಅಡ್ಡಿಯಾಗುವುದಿಲ್ಲ. ಆಸಕ್ತಿ ಇದ್ದರೆ ಸಾಕು ಸಮಯ ವ್ಯರ್ಥ ಮಾಡದೆಸಿಕ್ಕ ಬಿಡುವಿನ ಸಮಯದಲ್ಲಿ ಪ್ರತಿಭೆಯ ಅನಾವರಣ ಮಾಡಬಹುದು ಎಂಬುದಕ್ಕೆ ಉತ್ತಮ ಉದಾಹರಣೆ ನಮ್ಮ ನಡುವೆಮಂಗಳೂರಿನ ಬಿ.ಎಸ್.ಎನ್. ಎಲ್ ಕಛೇರಿಯಲ್ಲಿ ಕಾವಲುಗಾರರಾಗಿ ಬಿಡುವಿನ ವೇಳೆಯಲ್ಲಿ ಅಲ್ಲೇ ಮೂಲೆಯಲ್ಲಿ ಖುರ್ಚಿಯಲ್ಲಿಕುಳಿತು ಬಿಳಿ ಹಾಳೆಯಲ್ಲಿ ಚಿತ್ರ ಬಿಡಿಸುತ್ತ, ಗೋಡೆಯಲ್ಲಿ ತಮ್ಮ ಮೊಬೈಲ್ ಮೂಲಕ ಶೇಡೋ ಪ್ಲೇ ಮಾಡುವ ವಿಶಿಷ್ಟ ಕಲಾವಿದಹಾಗೇ ಎಲ್ಲಾರಲ್ಲೂ ಪ್ರೀತಿಯಿಂದ ಮಾತನಾಡುವ ಅಪರೂಪದ ವ್ಯಕ್ತಿ ದಯಾನಂದ ಪಿ. ಅಂಚನ್. ಚಿಕ್ಕದಿರುವಾಗ ತಮ್ಮ ಮನೆಯ ಸಮೀಪದಲ್ಲಿದ್ದ ಗೋವಿಂದ ಪೈ ಅನ್ನುವವರು ಶೇಡೋ ಪ್ಲೇ ಮೂಲಕ ಗೋಡೆಯಲ್ಲಿ ಕೈಚಲನೆ ಬಳಸಿಬೆಳಕಿನ ನೆರಳಿನಲ್ಲಿ ಮೂಡಿಸುತ್ತಿದ್ದ ಹಕ್ಕಿಗಳು,ಪ್ರಾಣಿಗಳ, ಮನುಷ್ಯನನ್ನು ನೋಡುತ್ತಾ ನೋಡುತ್ತಾ ತಾವು ನಿಧಾನವಾಗಿಆಸಕ್ತಿಯಿಂದ ಸತತ ಪ್ರಯತ್ನ ಪಟ್ಟು ಶೇಡೋ ಪ್ಲೇ ಮೂಲಕ ಗಿಳಿ, ಬಾತುಕೋಳಿ, ಕೊಕ್ಕರೆ, ಮನುಷ್ಯ,ಸಿಂಹ ಹೀಗೆ ಕಲಿತರು ಹಾಗೂಮನಸ್ಸಿದ್ದರೆ ಹೇಗೆದರೂ ಕಲಿಯಬಹುದು ತಾವು ಮೊದಲು ಕೆಲಸ ಮಾಡುತ್ತಿದ್ದ ರೈಸ್ ಮಿಲ್ ನಲ್ಲಿ ಬರುತ್ತಿದ್ದ ಧೂಳಿನಲ್ಲೇ ಚಿತ್ರಬಿಡಿಸುತ್ತಾ ನಂತರ ಕಾಗದದ ಮೇಲೆ ಚಿತ್ರಗಳನ್ನು ಬಿಡಿಸಲು ಪ್ರಾರಂಭಿಸಿದರು. ಅನೇಕ ವ್ಯಕ್ತಿಗಳ ಮುಖದ ಚಿತ್ರಗಳನ್ನು ಬಿಡಿಸಿದ್ದಾರೆ.

ಮಾಡುವ ಕಾಯಕದೊಂದಿಗೆ ಹವ್ಯಾಸವನ್ನು ಬಿಡದೆ ಅನೇಕ ವರ್ಷಗಳಿಂದ ಮುಂದುವರಿಸಿಕೊಂಡು ಹೋಗುತ್ತಿರುವ ದಯಾನಂದಪಿ.ಅಂಚನ್.ವೃತ್ತಿಯಲ್ಲಿ ತಾವು ಮಂಗಳೂರಿನಲ್ಲಿರುವ ಬಿ.ಎಸ್.ಎನ್.ಎಲ್ ಕಛೇರಿಯಲ್ಲಿ ಬೆಳಗ್ಗೆ ಕಾವಲುಗಾರರು ಆದರೆಹವ್ಯಾಸವಾಗಿ ಅಧ್ಬುತವಾಗಿ ಚಿತ್ರಗಳನ್ನು ಬಿಡಿಸುವ ಕಲಾ ಆರಾಧಕರು.ಯಾರು ಆಶ್ಚರ್ಯವೆಂದರೆ ಚಿತ್ರಕಲೆ,ಶೇಡೋ ಪ್ಲೇಯಾರಲ್ಲೂ ಕಲಿಯದೆ ತಾವೇ ಸ್ವತಃ ಆಸಕ್ತಿಯಿಂದ ಅನೇಕ ವರ್ಷಗಳ ಪರಿಶ್ರಮದಿಂದ ಕಲಿತುಕೊಂಡು ತಮ್ಮ ಹವ್ಯಾಸವನ್ನುಉದ್ಯೋಗದ ಜೊತೆಗೆ ಬೆಳೆಸುತ್ತಾ ಅಧ್ಬುತವಾಗಿ ವಿವಿಧ ವ್ಯಕ್ತಿಗಳ,ಹಲವು ಸಾಧಕರ ಮುಖಗಳ ಚಿತ್ರಗಳನ್ನು ಬಿಡಿಸುತ್ತಾ, ಮೊಬೈಲ್ಬೆಳಕಿನಲ್ಲೇ ಗೋಡೆಗಳ ಮೇಲೆ ಹಕ್ಕಿ,ಹುಲಿ, ಮನುಷ್ಯ ಮಾತಾನಾಡುವುದು ರೀತಿ ಶೇಡೋ ಪ್ಲೇ ಮಾಡಿ ತೋರಿಸುವ ಸರಳ ವ್ಯಕ್ತಿದಯಾನಂದ ಪಿ. ಅಂಚನ್

ಯಾರೇ ಅವರನ್ನು ಮಾತನಾಡಿಸಿ ಅವರ ಕಲೆಯ ಬಗ್ಗೆ ಕೇಳಿದಾಗ ಪ್ರೀತಿಯಿಂದ ಬಿಡಿಸಿದ ಚಿತ್ರಗಳನ್ನು ,ಶೇಡೋ ಪ್ಲೇ ತೋರಿಸಿಅಚ್ಚರಿ ಪಡಿಸುತ್ತಾರೆ. ಸಾಧಿಸಲು ಛಲ ಹಾಗೂ ಶ್ರದ್ಧೆ ಇದ್ದರೆ ಸಾಕು. ಸ್ವಂತ ತಾವೇ ಆಸಕ್ತಿಯಿಂದ ಕಲಿತು ಇಂದಿಗೂ ಉಳಿಸಿಕೊಂಡುಬಂದಿರುವ ಅವರ ಕಲೆಯ ಮೇಲಿನ ಪ್ರೀತಿ ನಿಜಕ್ಕೂ ಪ್ರೇರಣೆ ನೀಡುವಂತದ್ದು ಹಾಗೂ ಇಂತಹ ಎಲೆಮರೆಯ ಕಾಯಿಯಂತಿರುವಅನೇಕರನ್ನು ಗುರುತಿಸಿ ಅವರಿಗೆ ಇನ್ನಷ್ಟು ಪ್ರೋತ್ಸಾಹಿಸೋಣ. ಯಾವಾಗಲಾದರೂ ಬಿ.ಎಸ್.ಎನ್.ಎಲ್ ಮಂಗಳೂರಿನ ಕಛೇರಿಗೆಹೋದಾಗ ಅಲ್ಲೇ ಹೊರಗೆ ಕುಳಿತು ಸಮಯ ಸಿಕ್ಕಾಗ ಎಳೆಎಳೆಯಾಗಿ ಚಿತ್ರವನ್ನು ಬಿಡಿಸುತ್ತಾ ಅದರಲ್ಲೇ ಖುಷಿ ಪಡುವ ದಯಾನಂದಪಿ. ಅಂಚನ್ ಅವರನ್ನು ಮಾತನಾಡಿಸಲು ಮರೆಯದಿರಿ.


Related Posts

ಅನಿತಾ ಪಿ. ತಾಕೊಡೆ ಅವರ ‘ಮೇಣಕ್ಕಂಟಿದ ಬತ್ತಿ’ ಕವನಕ್ಕೆ ಒಲಿದ ಸಂಕಮ್ಮ ಸಂಕಣ್ಣನವರ್ ದತ್ತಿ ಪ್ರಶಸ್ತಿ


Share         ಕರ್ನಾಟಕ ಲೇಖಕಿಯರ ಸಂಘವು 2025ನೇ ಸಾಲಿನ ವಿವಿಧ ದತ್ತಿನಿಧಿ ವಾರ್ಷಿಕ ಪ್ರಶಸ್ತಿಗಳನ್ನು ಪ್ರಕಟಿಸಿದೆ. ಹಸ್ತಪ್ರತಿಯಲ್ಲಿ ಗವಿಸಿದ್ದ ಎನ್. ಬಳ್ಳಾರಿ ಕಾವ್ಯ ಪ್ರಶಸ್ತಿ ಪಡೆದ, ಅನಿತಾ ತಾಕೊಡೆಯವರ ‘ಮೇಣಕ್ಕಂಟಿದ ಬತ್ತಿ’ ಕವನ ಸಂಕಲನ ಕ್ಕೆ 


Read More »

ಚಿಕ್ಕ ವಯಸ್ಸಿನಲ್ಲಿ ಸಾಧನೆ ಇಂಡಿಯಾ ಬುಕ್ ಆಫ್ ರೆಕಾರ್ಡ್‌ನಲ್ಲಿ ಬಾಲಕ ಸುಹಾಂಶ್‌ನ ಎಸ್ ಬಂಗೇರ ದಾಖಲೆ


Share         ದಾವಣಗೆರೆ : ನಗರದ ಶಾಂತಪ್ಪ ಪೂಜಾರಿ ಹಾಗೂ ಶ್ರೀಮತಿ ಹೇಮಾ ಶಾಂತಪ್ಪ ಪೂಜಾರಿ ಇವರ ಮೊಮ್ಮಗನಾದ ಕು. ಸುಹಾಂಶ್ ಎಸ್ ಬಂಗೇರ “ಇಂಡಿಯಾ ಬುಕ್ ಆಫ್ ರೆಕಾರ್ಡ್’ನ ಸಾಧಕನಾಗಿದ್ದು, ಸರಿಸುಮಾರು 195 ರಾಷ್ಟ್ರಗಳ


Read More »

ಖೇಲೋ ಇಂಡಿಯಾ ರಾಷ್ಟ್ರೀಯ ಕರಾಟೆ ತಂಡಕ್ಕೆ ಆಯ್ಕೆಯಾದ ಕರಾಟೆ ಪಟು ಛಾಯಾ ಎಸ್. ಪೂಜಾರಿ.


Share         ಚಿನ್ನ 30 ಬೆಳ್ಳಿ 1 ಕಂಚು – ಇದು ಛಾಯಾ ಎಸ್. ಪೂಜಾರಿ ಅವರ ಒಂದು ದಶಕದ ಪರಿಶ್ರಮ ಹಾಗೂ ಸಾಧನೆಗೆ ಸಂದಿರುವ ಗೌರವದ ತುರಾಯಿ. ಉಡುಪಿ ಜಿಲ್ಲೆಯ ಹೆರ್ಗ ಕಾಂತಾ ಬೆಟ್ಟು


Read More »

ಪವರ್‌ಲಿಫ್ಟಿಂಗ್ ಕ್ರೀಡಾಪಟು ಶ್ರೀಮತಿ ಅಕ್ಷತಾ ಪೂಜಾರಿ ಅವರಿಗೆ ‘ಮಹಿಳಾ ಮಾಣಿಕ್ಯ’ ಪ್ರಶಸ್ತಿ


Share         ನಮ್ಮ ಹೆಮ್ಮೆಯ ಕರಾವಳಿಯ ಪ್ರತಿಭೆ, ಅಂತರಾಷ್ಟ್ರೀಯ ಪವರ್‌ಲಿಫ್ಟಿಂಗ್ ಕ್ರೀಡಾಪಟು ಶ್ರೀಮತಿ ಅಕ್ಷತಾ ಪೂಜಾರಿ ಸಿದ್ದಕಟ್ಟೆ ಅವರಿಗೆ ಫಸ್ಟ್ ನ್ಯೂಸ್ ವಾಹಿನಿಯ ಪ್ರತಿಷ್ಠಿತ ‘ಮಹಿಳಾ ಮಾಣಿಕ್ಯ’ ಪ್ರಶಸ್ತಿ ಲಭಿಸಿರುವುದು ನಾಡಿಗೆ ಸಂದ ಗೌರವ. ಗ್ರಾಮೀಣ


Read More »

ಪುತ್ತೂರು:ಶಾಂತಿಗೋಡು ಬಿಲ್ಲವ ಗ್ರಾಮ ಸಮಿತಿಯ ಮಾಜಿ ಅಧ್ಯಕ್ಷ ರವಿಕುಮಾರ್ ಕಲ್ಕಾರ್ ನಿಧನ


Share         ಪುತ್ತೂರು: ಶಾಂತಿಗೋಡು ಕಲ್ಕಾರ್ ನಿವಾಸಿ ರವಿಕುಮಾರ್ ಕಲ್ಕಾರ್(48ವ.)ರವರು ಫೆ.15ರಂದು ಹೃದಯಾಘಾತದಿಂದ ನಿಧನ ಹೊಂದಿದ್ದಾರೆ. ಬ್ರಹ್ಮಶ್ರೀ ನಾರಾಯಣ ಗುರುಪೂಜೆ ಸಂದರ್ಭ ಶಾಂತಿಗೋಡು ಬಿಲ್ಲವ ಗ್ರಾಮ ಸಮಿತಿ ವತಿಯಿಂದ ನಡೆಸಲ್ಪಟ್ಟ ಕ್ರೀಡಾಕೂಟದಲ್ಲಿ ರವಿ ಕಲ್ಕಾರ್ ರವರು


Read More »

ಉದಯೋನ್ಮುಖ ಪ್ರತಿಭಾ ಪುರಸ್ಕಾರಕ್ಕೆ ಅಕ್ಷತಾ ಸುಧೀರ್


Share         ಮಂಗಳೂರು/ಬೆಂಗಳೂರು: ಕರ್ನಾಟಕ ಆರ್ಯ ಈಡಿಗ ಮಹಿಳಾ ಸಂಘದ ವತಿಯಿಂದ ಆಯೋಜಿಸಲಾದ ರಾಷ್ಟ್ರೀಯ ಸಮ್ಮೇಳನದಲ್ಲಿ, ಯುವವಾಹಿನಿಯ ಬೆಂಗಳೂರು ಘಟಕದ ಹೆಮ್ಮೆಯ ಸದಸ್ಯೆಯೂ ಹಾಗೂ ಪ್ರಸಕ್ತ ಲೆಕ್ಕಪರಿಶೋಧಕರೂ ಆಗಿರುವ ಶ್ರೀಮತಿ ಅಕ್ಷತಾ ಸುಧೀರ್ ಅವರಿಗೆ ಉದಯೋನ್ಮುಖ


Read More »