TOP STORIES:

FOLLOW US

ಮಂಗಳೂರಿನ ಅದ್ಭುತ ಕಲೆಗಾರ ಬಿ.ಎಸ್.ಎನ್.ಎಲ್ ಕಛೇರಿ ಕಾವಲುಗಾರ – ದಯಾನಂದ ಪಿ. ಅಂಚನ್


ಪ್ರತಿಭೆಗೆ ವಯಸ್ಸಿನ ಮೀತಿಯಾಗಲಿ ಮಾಡುವ ಕೆಲಸವಾಗಲಿ ಅಡ್ಡಿಯಾಗುವುದಿಲ್ಲ. ಆಸಕ್ತಿ ಇದ್ದರೆ ಸಾಕು ಸಮಯ ವ್ಯರ್ಥ ಮಾಡದೆಸಿಕ್ಕ ಬಿಡುವಿನ ಸಮಯದಲ್ಲಿ ಪ್ರತಿಭೆಯ ಅನಾವರಣ ಮಾಡಬಹುದು ಎಂಬುದಕ್ಕೆ ಉತ್ತಮ ಉದಾಹರಣೆ ನಮ್ಮ ನಡುವೆಮಂಗಳೂರಿನ ಬಿ.ಎಸ್.ಎನ್. ಎಲ್ ಕಛೇರಿಯಲ್ಲಿ ಕಾವಲುಗಾರರಾಗಿ ಬಿಡುವಿನ ವೇಳೆಯಲ್ಲಿ ಅಲ್ಲೇ ಮೂಲೆಯಲ್ಲಿ ಖುರ್ಚಿಯಲ್ಲಿಕುಳಿತು ಬಿಳಿ ಹಾಳೆಯಲ್ಲಿ ಚಿತ್ರ ಬಿಡಿಸುತ್ತ, ಗೋಡೆಯಲ್ಲಿ ತಮ್ಮ ಮೊಬೈಲ್ ಮೂಲಕ ಶೇಡೋ ಪ್ಲೇ ಮಾಡುವ ವಿಶಿಷ್ಟ ಕಲಾವಿದಹಾಗೇ ಎಲ್ಲಾರಲ್ಲೂ ಪ್ರೀತಿಯಿಂದ ಮಾತನಾಡುವ ಅಪರೂಪದ ವ್ಯಕ್ತಿ ದಯಾನಂದ ಪಿ. ಅಂಚನ್. ಚಿಕ್ಕದಿರುವಾಗ ತಮ್ಮ ಮನೆಯ ಸಮೀಪದಲ್ಲಿದ್ದ ಗೋವಿಂದ ಪೈ ಅನ್ನುವವರು ಶೇಡೋ ಪ್ಲೇ ಮೂಲಕ ಗೋಡೆಯಲ್ಲಿ ಕೈಚಲನೆ ಬಳಸಿಬೆಳಕಿನ ನೆರಳಿನಲ್ಲಿ ಮೂಡಿಸುತ್ತಿದ್ದ ಹಕ್ಕಿಗಳು,ಪ್ರಾಣಿಗಳ, ಮನುಷ್ಯನನ್ನು ನೋಡುತ್ತಾ ನೋಡುತ್ತಾ ತಾವು ನಿಧಾನವಾಗಿಆಸಕ್ತಿಯಿಂದ ಸತತ ಪ್ರಯತ್ನ ಪಟ್ಟು ಶೇಡೋ ಪ್ಲೇ ಮೂಲಕ ಗಿಳಿ, ಬಾತುಕೋಳಿ, ಕೊಕ್ಕರೆ, ಮನುಷ್ಯ,ಸಿಂಹ ಹೀಗೆ ಕಲಿತರು ಹಾಗೂಮನಸ್ಸಿದ್ದರೆ ಹೇಗೆದರೂ ಕಲಿಯಬಹುದು ತಾವು ಮೊದಲು ಕೆಲಸ ಮಾಡುತ್ತಿದ್ದ ರೈಸ್ ಮಿಲ್ ನಲ್ಲಿ ಬರುತ್ತಿದ್ದ ಧೂಳಿನಲ್ಲೇ ಚಿತ್ರಬಿಡಿಸುತ್ತಾ ನಂತರ ಕಾಗದದ ಮೇಲೆ ಚಿತ್ರಗಳನ್ನು ಬಿಡಿಸಲು ಪ್ರಾರಂಭಿಸಿದರು. ಅನೇಕ ವ್ಯಕ್ತಿಗಳ ಮುಖದ ಚಿತ್ರಗಳನ್ನು ಬಿಡಿಸಿದ್ದಾರೆ.

ಮಾಡುವ ಕಾಯಕದೊಂದಿಗೆ ಹವ್ಯಾಸವನ್ನು ಬಿಡದೆ ಅನೇಕ ವರ್ಷಗಳಿಂದ ಮುಂದುವರಿಸಿಕೊಂಡು ಹೋಗುತ್ತಿರುವ ದಯಾನಂದಪಿ.ಅಂಚನ್.ವೃತ್ತಿಯಲ್ಲಿ ತಾವು ಮಂಗಳೂರಿನಲ್ಲಿರುವ ಬಿ.ಎಸ್.ಎನ್.ಎಲ್ ಕಛೇರಿಯಲ್ಲಿ ಬೆಳಗ್ಗೆ ಕಾವಲುಗಾರರು ಆದರೆಹವ್ಯಾಸವಾಗಿ ಅಧ್ಬುತವಾಗಿ ಚಿತ್ರಗಳನ್ನು ಬಿಡಿಸುವ ಕಲಾ ಆರಾಧಕರು.ಯಾರು ಆಶ್ಚರ್ಯವೆಂದರೆ ಚಿತ್ರಕಲೆ,ಶೇಡೋ ಪ್ಲೇಯಾರಲ್ಲೂ ಕಲಿಯದೆ ತಾವೇ ಸ್ವತಃ ಆಸಕ್ತಿಯಿಂದ ಅನೇಕ ವರ್ಷಗಳ ಪರಿಶ್ರಮದಿಂದ ಕಲಿತುಕೊಂಡು ತಮ್ಮ ಹವ್ಯಾಸವನ್ನುಉದ್ಯೋಗದ ಜೊತೆಗೆ ಬೆಳೆಸುತ್ತಾ ಅಧ್ಬುತವಾಗಿ ವಿವಿಧ ವ್ಯಕ್ತಿಗಳ,ಹಲವು ಸಾಧಕರ ಮುಖಗಳ ಚಿತ್ರಗಳನ್ನು ಬಿಡಿಸುತ್ತಾ, ಮೊಬೈಲ್ಬೆಳಕಿನಲ್ಲೇ ಗೋಡೆಗಳ ಮೇಲೆ ಹಕ್ಕಿ,ಹುಲಿ, ಮನುಷ್ಯ ಮಾತಾನಾಡುವುದು ರೀತಿ ಶೇಡೋ ಪ್ಲೇ ಮಾಡಿ ತೋರಿಸುವ ಸರಳ ವ್ಯಕ್ತಿದಯಾನಂದ ಪಿ. ಅಂಚನ್

ಯಾರೇ ಅವರನ್ನು ಮಾತನಾಡಿಸಿ ಅವರ ಕಲೆಯ ಬಗ್ಗೆ ಕೇಳಿದಾಗ ಪ್ರೀತಿಯಿಂದ ಬಿಡಿಸಿದ ಚಿತ್ರಗಳನ್ನು ,ಶೇಡೋ ಪ್ಲೇ ತೋರಿಸಿಅಚ್ಚರಿ ಪಡಿಸುತ್ತಾರೆ. ಸಾಧಿಸಲು ಛಲ ಹಾಗೂ ಶ್ರದ್ಧೆ ಇದ್ದರೆ ಸಾಕು. ಸ್ವಂತ ತಾವೇ ಆಸಕ್ತಿಯಿಂದ ಕಲಿತು ಇಂದಿಗೂ ಉಳಿಸಿಕೊಂಡುಬಂದಿರುವ ಅವರ ಕಲೆಯ ಮೇಲಿನ ಪ್ರೀತಿ ನಿಜಕ್ಕೂ ಪ್ರೇರಣೆ ನೀಡುವಂತದ್ದು ಹಾಗೂ ಇಂತಹ ಎಲೆಮರೆಯ ಕಾಯಿಯಂತಿರುವಅನೇಕರನ್ನು ಗುರುತಿಸಿ ಅವರಿಗೆ ಇನ್ನಷ್ಟು ಪ್ರೋತ್ಸಾಹಿಸೋಣ. ಯಾವಾಗಲಾದರೂ ಬಿ.ಎಸ್.ಎನ್.ಎಲ್ ಮಂಗಳೂರಿನ ಕಛೇರಿಗೆಹೋದಾಗ ಅಲ್ಲೇ ಹೊರಗೆ ಕುಳಿತು ಸಮಯ ಸಿಕ್ಕಾಗ ಎಳೆಎಳೆಯಾಗಿ ಚಿತ್ರವನ್ನು ಬಿಡಿಸುತ್ತಾ ಅದರಲ್ಲೇ ಖುಷಿ ಪಡುವ ದಯಾನಂದಪಿ. ಅಂಚನ್ ಅವರನ್ನು ಮಾತನಾಡಿಸಲು ಮರೆಯದಿರಿ.


Share:

More Posts

Category

Send Us A Message

Related Posts

ಬಿರುವೆರ್ ಕುಡ್ಲ ಸಂಘಟನೆಯಿಂದ ಯುವವಾಹಿನಿಗೆ ಗೌರವದ ಸನ್ಮಾನ.. ಕೇಂದ್ರ ಸಮಿತಿಯ ಅಧ್ಯಕ್ಷರಾದ ಹರೀಶ್ ಕೆ ಪೂಜಾರಿ ಸನ್ಮಾನ ಸ್ವೀಕಾರ


Share       ಮಂಗಳೂರು : ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರ ಬಿರುವೆರ್ ಕುಡ್ಲ(ರಿ) ಮಂಗಳೂರು ಸಂಘಟನಯ ದಶಮಾನೋತ್ಸವದ ಸವಿನೆನಪಿಗಾಗಿ, ರಾಜ್ಯದ ಪ್ರತಿಷ್ಠಿತ ಯುವವಾಹಿನಿ ಸಂಸ್ಥೆಯು ಕಳೆದ 36 ವರ್ಷಗಳ ಸಮಾಜಮುಖಿ ಸೇವೆಯನ್ನು ಗುರುತಿಸಿ ಗೌರವಿಸಿ ಗೌರವದ


Read More »

ದೇಯಿ ಬೈದೆತಿ- ಕೋಟಿ ಚೆನ್ನಯರ ಮೂಲಸ್ಥಾನ ಶ್ರೀ ಕ್ಷೇತ್ರ ಗೆಜ್ಜೆಗಿರಿ ಎಂಬ ಪುಣ್ಯಭೂಮಿ


Share       ಗೆಜ್ಜೆಗಿರಿ ನಂದನ ಬಿತ್ತಲ್ ಎಂಬ ಹೆಸರು ಕೇಳುತ್ತಿದ್ದಂತೆ ಮೈ ರೋಮಾಂಚನಗೊಳ್ಳುತ್ತದೆ. ಕ್ಷೇತ್ರದ ಇತಿಹಾಸವನ್ನು ಕೇಳುವಾಗ ಅವಳಿ ವೀರಪುರುಷರ ಮೂಲಸ್ಥಾನ ಯಾವುದು ಎಂಬ ಪ್ರಶ್ನೆಗೂ ಉತ್ತರ ಸಿಗುತ್ತದೆ. ಅಂತಹ ಪುಣ್ಯ-ಪವಿತ್ರ ಭೂಮಿಯಲ್ಲಿ ದೇಯಿ ಬೈದೈತಿ


Read More »

” ನವ ಕರ್ನಾಟಕ ರತ್ನ ” ಪ್ರಶಸ್ತಿಗೆ ಸತೀಶ್ ಕುಮಾರ್ ಬಜಾಲ್ ಆಯ್ಕೆ


Share       ಬೆಂಗಳೂರು: ವಿದೇಶಗಳಲ್ಲಿ ನೆಲೆಸಿರುವ ಕನ್ನಡಿಗರನ್ನು ಒಂದುಗೂಡಿಸುವ ಉದ್ದೇಶದಿಂದ ಇದೇ ಮೊದಲ ಬಾರಿಗೆ ಅ. 4 ಮತ್ತು 5ರಂದು ಬೆಂಗಳೂರಿನಲ್ಲಿ ಅನಿವಾಸಿ ಕನ್ನಡಿಗರ ಸಮ್ಮೇಳನವನ್ನು ಆಯೋಜಿಸಲಾಗಿದ್ದು, ಬೆಂಗಳೂರಿನ ರವೀಂದ್ರ ಕಲಾ ಕ್ಷೇತ್ರದಲ್ಲಿ ನಡೆಯಲಿದ್ದು. ಅಂದು


Read More »

ಊದುಪೂಜೆಯಲ್ಲಿ ಪಿಲಿಯಾವೇಶ ಎಷ್ಟು ಸರಿ?


Share       ಇನ್ನು ಪಿಲಿಕೋಲ ನೋಡಲು ವರ್ಷಕ್ಕೊಮ್ಮೆ ಕಾಪುವಿಗೆ ಹೋಗಬೇಕಾಗಿಲ್ಲ. ಅಷ್ಟಮಿ, ಚೌತಿ, ಮಾರ್ನೆಮಿಗಳಲ್ಲಿ ನಮ್ಮೂರಿನಲ್ಲೂ ಪಿಲಿಕೋಲಗಳು ಆರಂಭವಾಗಿವೆ. ಹಿಂದೆ ಅಪೂರ್ವವಾಗಿ ಎಲ್ಲಾದರೂ ಒಂದು ಕಡೆ ಊದುಹಾಕುವಾಗ ವೇಷಸಂಕಲ್ಪಿಸಿಕೊಂಡವನಿಗೆ ಆವೇಶ ಆಗುವುದಿತ್ತು. ಹೀಗೆ ಆವೇಶವಾಗುವುದು ಶುಭಲಕ್ಷಣ


Read More »

ದುಬೈ: ದುಬೈ ಬಿಲ್ಲವಸ್ ಫ್ಯಾಮಿಲಿ ವತಿಯಿಂದ ನಡೆದ 170 ನೇ ಬ್ರಹ್ಮ ಶ್ರೀ ನಾರಾಯಣ ಗುರುಜಯಂತಿ


Share       ದುಬೈ: ಬಿಲ್ಲವಸ್ ಫ್ಯಾಮಿಲಿ ದುಬೈ ಇವರ ವತಿಯಿಂದ ಬ್ರಹ್ಮ ಶ್ರೀ ನಾರಾಯಣ ಗುರುವರ್ಯರ 170 ನೇ ಗುರು ಜಯಂತಿಯು ದುಬೈ ನ ಗ್ಲೆಂಡಲೆ ಇಂಟರ್ ನ್ಯಾಷನಲ್ ಸ್ಕೂಲ್ ನಲ್ಲಿ  ಭಾನುವಾರದಂದು ವಿಜೃಂಭಣೆಯಿಂದ ನಡೆಯಿತು.


Read More »

ಸಾಲುಮರದ ತಿಮ್ಮಕ್ಕ ಪ್ರಶಸ್ತಿ ನ್ಯಾಷನಲ್ ಗ್ರೀನರಿ ಬಾಲ ಪುರಸ್ಕಾರ 2024 ಪ್ರಶಸ್ತಿಗೆ ಆಯ್ಕೆಯಾದ ಧನ್ವಿ ಪೂಜಾರಿ


Share       ಮರವಂತೆ : ಈ ಬಾರಿಯ ಸಾಲುಮರದ ತಿಮ್ಮಕ್ಕ ನ್ಯಾಷನಲ್ ಗ್ರೀನರಿ ಬಾಲ ಪುರಸ್ಕಾರ 2024 ಪ್ರಶಸ್ತಿಗೆ ಮರವಂತೆಯ ಧನ್ವಿ ಪೂಜಾರಿ ಆಯ್ಕೆಯಾಗಿದ್ದಾರೆ. ಮರವಂತೆಯ ಜ್ಯೋತಿ ಚಂದ್ರಶೇಖರ ಪೂಜಾರಿ ಇವರ ಪುತ್ರಿಯಾಗಿದ್ದು ಪ್ರಸ್ತುತ ಜನತಾ


Read More »