TOP STORIES:

FOLLOW US

ಪ್ರೀತಿಯಿಂದ ಕುಡ್ಲದ ಜನತೆ ಮನಗೆದ್ದೆ ಭಾವುಕರಾಗಿ ನುಡಿದ ಎಸಿಪಿ ಮಹೇಶ್‌ಕುಮಾರ್ ಮಂಗಳೂರು ನಾಗರಿಕ ಸಮಿತಿಯಿಂದ ಬೀಳ್ಕೊಡುಗೆ


ಮಂಗಳೂರು: ಮಂಗಳೂರು ಜನರನ್ನು ಕಾನೂನು ಮತ್ತು ಪ್ರೀತಿಯಿಂದ ಮಾತ್ರ ಗೆಲ್ಲಲು ಸಾಧ್ಯ. ಕರಾವಳಿ ಜನತೆಗೆ ಪ್ರೀತಿ ಕೊಟ್ಟರೆ ಅವರು ನೂರುಪಟ್ಟು ಪ್ರೀತಿ ತೋರಿಸುತ್ತಾರೆ. ಭಾವುಕರಾಗಿ ನುಡಿದವರು ಮಂಗಳೂರು ಸೆಂಟ್ರಲ್ ಉಪವಿಭಾಗದ ಸಹಾಯಕ ಪೊಲೀಸ್ ಆಯುಕ್ತ ಮಹೇಶ್‌ಕುಮಾರ್.

ಕೊಡಗಿಗೆ ವರ್ಗಾವಣೆಗೊಂಡ ಅವರನ್ನು ಮಂಗಳೂರು ನಾಗರಿಕ ಸಮಿತಿ ವತಿಯಿಂದ ಭಾನುವಾರ ಆಯೋಜಿಸಲಾದ ಅದ್ದೂರಿ ಬೀಳ್ಕೊಡುಗೆ ಸಮಾರಂಭದಲ್ಲಿ ಮಾತನಾಡಿದರು.

ಪೊಲೀಸ್ ಕೆಲಸದ ಜತೆಗೆ ಸಾಮಾಜಿಕ ಚಟುವಟಿಕೆಯಿಂದ ನಾನು ಜೀವನದಲ್ಲಿ ಖುಷಿ ಕಂಡಿದ್ದೇನೆ. ಮಂಗಳೂರು ಸರ್ವಧರ್ಮಗಳ ನೆಲೆಬೀಡು ಆಗಬೇಕು ಎನ್ನುವುದು ನಮ್ಮೆಲ್ಲರ ಕನಸು. ಈ ಸೌಹಾರ್ದದ ಮಂಗಳೂರಿನ ಗತವೈಭವ ಸಾರಲು ನಾವೆಲ್ಲ ಪ್ರಯತ್ನಿಸಬೇಕು ಎಂದು ಕಿವಿಮಾತು ಹೇಳಿದರು.

ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದ ಕೋಶಾಧಿಕಾರಿ ಪದ್ಮರಾಜ್ ಆರ್. ಮಾತನಾಡಿ, ಒಳ್ಳೆಯ ಕೆಲಸ ಮಾಡುವವರನ್ನು ಗುರುತಿಸಿ ಗೌರವಿಸುವುದು ನಮ್ಮೆಲ್ಲರ ಕರ್ತವ್ಯ. ಮಹೇಶ್‌ಕುಮಾರ್ ಒಬ್ಬ ದಕ್ಷ, ಪ್ರಾಮಾಣಿಕ, ಜನಸ್ನೇಹಿ ಅಧಿಯಾಗಿರುವ ಜತೆಗೆ ತಮ್ಮ ಸಾಮಾಜಿಕ ಚಟುವಟಿಕೆಗಳ ಮೂಲಕ ಅನೇಕ ಮಂದಿಯ ಕಣ್ಣೀರೊರೆಸಿದ್ದಾರೆ. ಕರಾವಳಿಯ ಮೂಲೆಮೂಲೆಯ ಕಲಾವಿದರನ್ನು ಗುರುತಿಸಿ ಅವರಿಗೊಂದು ವೇದಿಕೆ ಕಲ್ಪಿಸುವ ಮೂಲಕ ಕಲಾಮಾಣಿಕ್ಯರಾಗಿದ್ದರು ಎಂದು ಶ್ಲಾಘಿಸಿದರು.

ಮಾಜಿ ಮೇಯರ್ ಶಶಿಧರ ಹೆಗ್ಡೆ ಮಾತನಾಡಿ, ನಿಷ್ಠೆ, ಪ್ರಬುದ್ಧತೆ, ಪ್ರಾಮಾಣಿಕತೆಯಿಂದಾಗಿ ಎಸಿಪಿ ಮಹೇಶ್‌ಕುಮಾರ್ ಮಂಗಳೂರಿನ ಜನತೆಯ ಮನಗೆದ್ದಿದ್ದಾರೆ. ಇಂದು ಇಂತಹ ಅಧಿಕಾರಿಗಳ ಅನಿವಾರ್ಯತೆ ಇದೆ ಎಂದರು.

ಗಾಯಕರಾರ ರಮೇಶ್ಚಂದ್ರ, ಸಂಯುಕ್ತ ಕರಾವಳಿ ಸಾಂಸ್ಕೃತಿಕ ಪ್ರತಿಷ್ಠಾನ ಅಧ್ಯಕ್ಷ ಕೆ.ಕೆ.ನೌಷಾದ್, ಡಿವೈಎಸ್‌ಪಿ ರಾಜ್ಯಾಧ್ಯಕ್ಷ ಮುನೀರ್ ಕಾಟಿಪಳ್ಳ, ಡಾ.ಅಮರಶ್ರೀ ಅಮರನಾಥ ಶೆಟ್ಟಿ, ಜಯಪ್ರಕಾಶ್ ರೈ, ಕರಾವಳಿ ಸಂಗೀತ ಕಲಾವಿದರ ಒಕ್ಕೂಟ ಉಪಾಧ್ಯಕ್ಷ ಐವನ್ ಡಿಸೋಜ, ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದ ಅಭಿವೃದ್ಧಿ ಸಮಿತಿ ಅಧ್ಯಕ್ಷ ದೇವೇಂದ್ರ ಪೂಜಾರಿ, ಉದ್ಯಮಿ ಶೈಲೇಂದ್ರ ವೈ ಸೂವರ್ಣ, ಯುವವಾಹಿನಿ ಕೇಂದ್ರ ಸಮಿತಿ ಅಧ್ಯಕ್ಷ ಹರೀಶ್ ಪೂಜಾರಿ ಮೊದಲಾದವರಿದ್ದರು. ತೋನ್ಸೆ ಪುಷ್ಕಳ್‌ಕುಮಾರ್ ಸ್ವಾಗತಿಸಿದರು. ಆರ್.ಜೆ. ಅಭಿಷೇಕ್ ಕಾರ್ಯಕ್ರಮ ನಿರೂಪಿಸಿದರು.

ಪುಷ್ಪವೃಷ್ಟಿಗೈದು ಭಾವುಕರಾದರು ನಾಗರಿಕರು, ವಿವಿಧ ಸಂಘ ಸಂಸ್ಥೆಗಳ ವತಿಯಿಂದ ಎಸಿಪಿ ಮಹೇಶ್‌ಕುಮಾರ್ ಅವರನ್ನು ಗೌರವಿಸಲಾಯಿತು.


Share:

More Posts

Category

Send Us A Message

Related Posts

ಬಿರುವೆರ್ ಕುಡ್ಲ ಸಂಘಟನೆಯಿಂದ ಯುವವಾಹಿನಿಗೆ ಗೌರವದ ಸನ್ಮಾನ.. ಕೇಂದ್ರ ಸಮಿತಿಯ ಅಧ್ಯಕ್ಷರಾದ ಹರೀಶ್ ಕೆ ಪೂಜಾರಿ ಸನ್ಮಾನ ಸ್ವೀಕಾರ


Share       ಮಂಗಳೂರು : ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರ ಬಿರುವೆರ್ ಕುಡ್ಲ(ರಿ) ಮಂಗಳೂರು ಸಂಘಟನಯ ದಶಮಾನೋತ್ಸವದ ಸವಿನೆನಪಿಗಾಗಿ, ರಾಜ್ಯದ ಪ್ರತಿಷ್ಠಿತ ಯುವವಾಹಿನಿ ಸಂಸ್ಥೆಯು ಕಳೆದ 36 ವರ್ಷಗಳ ಸಮಾಜಮುಖಿ ಸೇವೆಯನ್ನು ಗುರುತಿಸಿ ಗೌರವಿಸಿ ಗೌರವದ


Read More »

ದೇಯಿ ಬೈದೆತಿ- ಕೋಟಿ ಚೆನ್ನಯರ ಮೂಲಸ್ಥಾನ ಶ್ರೀ ಕ್ಷೇತ್ರ ಗೆಜ್ಜೆಗಿರಿ ಎಂಬ ಪುಣ್ಯಭೂಮಿ


Share       ಗೆಜ್ಜೆಗಿರಿ ನಂದನ ಬಿತ್ತಲ್ ಎಂಬ ಹೆಸರು ಕೇಳುತ್ತಿದ್ದಂತೆ ಮೈ ರೋಮಾಂಚನಗೊಳ್ಳುತ್ತದೆ. ಕ್ಷೇತ್ರದ ಇತಿಹಾಸವನ್ನು ಕೇಳುವಾಗ ಅವಳಿ ವೀರಪುರುಷರ ಮೂಲಸ್ಥಾನ ಯಾವುದು ಎಂಬ ಪ್ರಶ್ನೆಗೂ ಉತ್ತರ ಸಿಗುತ್ತದೆ. ಅಂತಹ ಪುಣ್ಯ-ಪವಿತ್ರ ಭೂಮಿಯಲ್ಲಿ ದೇಯಿ ಬೈದೈತಿ


Read More »

” ನವ ಕರ್ನಾಟಕ ರತ್ನ ” ಪ್ರಶಸ್ತಿಗೆ ಸತೀಶ್ ಕುಮಾರ್ ಬಜಾಲ್ ಆಯ್ಕೆ


Share       ಬೆಂಗಳೂರು: ವಿದೇಶಗಳಲ್ಲಿ ನೆಲೆಸಿರುವ ಕನ್ನಡಿಗರನ್ನು ಒಂದುಗೂಡಿಸುವ ಉದ್ದೇಶದಿಂದ ಇದೇ ಮೊದಲ ಬಾರಿಗೆ ಅ. 4 ಮತ್ತು 5ರಂದು ಬೆಂಗಳೂರಿನಲ್ಲಿ ಅನಿವಾಸಿ ಕನ್ನಡಿಗರ ಸಮ್ಮೇಳನವನ್ನು ಆಯೋಜಿಸಲಾಗಿದ್ದು, ಬೆಂಗಳೂರಿನ ರವೀಂದ್ರ ಕಲಾ ಕ್ಷೇತ್ರದಲ್ಲಿ ನಡೆಯಲಿದ್ದು. ಅಂದು


Read More »

ಊದುಪೂಜೆಯಲ್ಲಿ ಪಿಲಿಯಾವೇಶ ಎಷ್ಟು ಸರಿ?


Share       ಇನ್ನು ಪಿಲಿಕೋಲ ನೋಡಲು ವರ್ಷಕ್ಕೊಮ್ಮೆ ಕಾಪುವಿಗೆ ಹೋಗಬೇಕಾಗಿಲ್ಲ. ಅಷ್ಟಮಿ, ಚೌತಿ, ಮಾರ್ನೆಮಿಗಳಲ್ಲಿ ನಮ್ಮೂರಿನಲ್ಲೂ ಪಿಲಿಕೋಲಗಳು ಆರಂಭವಾಗಿವೆ. ಹಿಂದೆ ಅಪೂರ್ವವಾಗಿ ಎಲ್ಲಾದರೂ ಒಂದು ಕಡೆ ಊದುಹಾಕುವಾಗ ವೇಷಸಂಕಲ್ಪಿಸಿಕೊಂಡವನಿಗೆ ಆವೇಶ ಆಗುವುದಿತ್ತು. ಹೀಗೆ ಆವೇಶವಾಗುವುದು ಶುಭಲಕ್ಷಣ


Read More »

ದುಬೈ: ದುಬೈ ಬಿಲ್ಲವಸ್ ಫ್ಯಾಮಿಲಿ ವತಿಯಿಂದ ನಡೆದ 170 ನೇ ಬ್ರಹ್ಮ ಶ್ರೀ ನಾರಾಯಣ ಗುರುಜಯಂತಿ


Share       ದುಬೈ: ಬಿಲ್ಲವಸ್ ಫ್ಯಾಮಿಲಿ ದುಬೈ ಇವರ ವತಿಯಿಂದ ಬ್ರಹ್ಮ ಶ್ರೀ ನಾರಾಯಣ ಗುರುವರ್ಯರ 170 ನೇ ಗುರು ಜಯಂತಿಯು ದುಬೈ ನ ಗ್ಲೆಂಡಲೆ ಇಂಟರ್ ನ್ಯಾಷನಲ್ ಸ್ಕೂಲ್ ನಲ್ಲಿ  ಭಾನುವಾರದಂದು ವಿಜೃಂಭಣೆಯಿಂದ ನಡೆಯಿತು.


Read More »

ಸಾಲುಮರದ ತಿಮ್ಮಕ್ಕ ಪ್ರಶಸ್ತಿ ನ್ಯಾಷನಲ್ ಗ್ರೀನರಿ ಬಾಲ ಪುರಸ್ಕಾರ 2024 ಪ್ರಶಸ್ತಿಗೆ ಆಯ್ಕೆಯಾದ ಧನ್ವಿ ಪೂಜಾರಿ


Share       ಮರವಂತೆ : ಈ ಬಾರಿಯ ಸಾಲುಮರದ ತಿಮ್ಮಕ್ಕ ನ್ಯಾಷನಲ್ ಗ್ರೀನರಿ ಬಾಲ ಪುರಸ್ಕಾರ 2024 ಪ್ರಶಸ್ತಿಗೆ ಮರವಂತೆಯ ಧನ್ವಿ ಪೂಜಾರಿ ಆಯ್ಕೆಯಾಗಿದ್ದಾರೆ. ಮರವಂತೆಯ ಜ್ಯೋತಿ ಚಂದ್ರಶೇಖರ ಪೂಜಾರಿ ಇವರ ಪುತ್ರಿಯಾಗಿದ್ದು ಪ್ರಸ್ತುತ ಜನತಾ


Read More »