TOP STORIES:

FOLLOW US

Adhar card ಹೊಂದಿರುವವರಿಗೆ UIDAI ವತಿಯಿಂದ ಬಹುದೊಡ್ಡ ಉಡುಗೊರೆ


ಭಾರತೀಯ ವಿಶಿಷ್ಟ ಗುರುತಿನ ಪ್ರಾಧಿಕಾರ (UIDAI) ದೇಶಾದ್ಯಂತ 166 ಸ್ವತಂತ್ರ ಆಧಾರ್ ದಾಖಲಾತಿ ಮತ್ತು ನವೀಕರಣ ಕೇಂದ್ರಗಳನ್ನು ತೆರೆಯಲು ಸಜ್ಜಾಗಿದೆ. ಈ ಕುರಿತು ಯುಐಡಿಎಐ ಅಧಿಕೃತ ಹೇಳಿಕೆಯನ್ನು ನೀಡುವ ಮೂಲಕ ಈ ಮಾಹಿತಿಯನ್ನು ನೀಡಿದೆ.

ಪ್ರಸ್ತುತ 166 ಕೇಂದ್ರಗಳಲ್ಲಿ 55 ಆಧಾರ್ ಸೇವಾ ಕೇಂದ್ರಗಳು (ASKs) ಕಾರ್ಯನಿರ್ವಹಿಸುತ್ತಿವೆ. ಇದಲ್ಲದೇ 52,000 ಆಧಾರ್ ದಾಖಲಾತಿ ಕೇಂದ್ರಗಳು ಬ್ಯಾಂಕುಗಳು, ಅಂಚೆ ಕಚೇರಿಗಳು ಮತ್ತು ರಾಜ್ಯ ಸರ್ಕಾರಗಳ ಮೂಲಕ ಕಾರ್ಯ ನಿರ್ವಹಿಸುತ್ತಿವೆ.

 

ಹೇಳಿಕೆ ಬಿಡುಗಡೆಗೊಳಿಸಿದ UIDAI

UIDAI ಬಿಡುಗಡೆ ಮಾಡಿದ ಹೇಳಿಕೆಯಲ್ಲಿ, UIDAI 122 ನಗರಗಳಲ್ಲಿ 166 ಸ್ವತಂತ್ರ ಆಧಾರ್ ದಾಖಲಾತಿ ಮತ್ತು ನವೀಕರಣ ಕೇಂದ್ರಗಳನ್ನು ತೆರೆಯಲು ಯೋಜಿಸಿದೆ ಎಂದು ಹೇಳಲಾಗಿದೆ. ವಾರದಲ್ಲಿ ಏಳು ದಿನಗಳು ಆಧಾರ್ ಸೇವಾ ಕೇಂದ್ರಗಳನ್ನು ತೆರೆದಿರಲಿವೆ ಎಂಬುದು ಇಲ್ಲಿ ಗಮನಾರ್ಹ. ಆಧಾರ್ ಕೇಂದ್ರಗಳು ವಿಕಲಚೇತನರು ಸೇರಿದಂತೆ 70 ಲಕ್ಷ ಜನರ ಅಗತ್ಯಗಳನ್ನು ಪೂರೈಸಲಿದೆ.

 

A ಮಾದರಿಯ ಆಧಾರ್ ಸೇವಾ ಕೇಂದ್ರಗಳು (Model-A ASKs) ದಿನಕ್ಕೆ 1,000 ದಾಖಲಾತಿಗಳನ್ನು ಮತ್ತು ನವೀಕರಣ ವಿನಂತಿಗಳನ್ನು ನಿರ್ವಹಿಸುವ ಸಾಮರ್ಥ್ಯವನ್ನು ಹೊಂದಿವೆ. ಇದೇ ವೇಳೆ Model-B ASKಗಳು 500 ಮತ್ತು Model-C ASKಗಳು 250 ದಾಖಲಾತಿ ಮತ್ತು ನವೀಕರಣ ವಿನಂತಿಗಳನ್ನು ಪೂರೈಸುವ ಸಾಮರ್ಥ್ಯವನ್ನು ಹೊಂದಿವೆ. ಗಮನಿಸಬೇಕಾದ ಸಂಗತಿಯೆಂದರೆ ಇಲ್ಲಿಯವರೆಗೆ UIDAI 130.9 ಕೋಟಿ ಜನರಿಗೆ ಆಧಾರ್ ಸಂಖ್ಯೆಯನ್ನು ನೀಡಿದೆ.

 

ಖಾಸಗಿ ಆಧಾರ್ ಕೇಂದ್ರಗಳನ್ನು ತೆರೆಯಲಾಗುವುದಿಲ್ಲ

ಆಧಾರ್ ಸೇವಾ ಕೇಂದ್ರ ಖಾಸಗಿ ತೆರೆಯಲು ಸಾಧ್ಯವಿಲ್ಲ. ಅಂದರೆ, ಆಧಾರ್ ಸೇವೆಗಳು ಬ್ಯಾಂಕ್‌ಗಳು, ಅಂಚೆ ಕಚೇರಿಗಳು, ಸಾಮಾನ್ಯ ಸೇವಾ ಕೇಂದ್ರಗಳು (Aadhaar Common Service Centres), ರಾಜ್ಯ ಸರ್ಕಾರಿ ಅಧಿಕಾರಿಗಳ ಕಚೇರಿ ಮತ್ತು UIDAI ನಿರ್ವಹಿಸುವ ಆಧಾರ್ ಸೇವಾ ಕೇಂದ್ರಗಳಲ್ಲಿ ಮಾತ್ರ ಲಭ್ಯವಿದೆ. ನಿಮಗೆ ಇದರ ಬಗ್ಗೆ ಹೆಚ್ಚಿನ ಮಾಹಿತಿ ಬೇಕಾದರೆ, ನೀವು ಅದನ್ನು ರಾಜ್ಯ ಸರ್ಕಾರದ ಸ್ಥಳೀಯ ಅಧಿಕಾರಿಗಳಿಂದ ಪಡೆಯಬಹುದು (ಇದರ ಅಡಿಯಲ್ಲಿ ಆಧಾರ್ ಕೇಂದ್ರಗಳು ನಡೆಯುತ್ತಿವೆ).

ಇಂಟರ್ನೆಟ್ ಕೆಫೆಗಳು ಈ ಕೆಲಸ ಮಾಡುತ್ತವೆ

UIDAI ಸಾಮಾನ್ಯ ನಾಗರಿಕರಿಗೆ ನೀಡುವ ಅಧಿಕಾರಗಳನ್ನು ಇಂಟರ್ನೆಟ್ ಕೆಫೆಗಳಿಗೂ ಕೂಡ ನೀಡುತ್ತದೆ. ಈ ಅಧಿಕಾರಗಳಲ್ಲಿ ಆಧಾರ್ ಕಾರ್ಡ್ ನಲ್ಲಿ ಹೆಸರು, ವಿಳಾಸ, ಹುಟ್ಟಿದ ದಿನಾಂಕ ಅಥವಾ ಇತರ ವಿವರಗಳ ತಿದ್ದುಪಡಿ, ಫೋಟೋ ಬದಲಾಯಿಸುವುದು, ಪಿವಿಸಿ ಕಾರ್ಡ್ ಮುದ್ರಿಸುವುದು, ಸಾಮಾನ್ಯ ಆಧಾರ್ ಕಾರ್ಡ್ ಕೇಳುವುದು ಇತ್ಯಾದಿ ಸೌಲಭ್ಯ ಮಾತ್ರ ಲಭ್ಯವಿದೆ.

 

ಆಧಾರ್‌ನಲ್ಲಿ ಯಾವುದೇ ತಿದ್ದುಪಡಿಗಾಗಿ ಅಥವಾ ಪಿವಿಸಿ ಕಾರ್ಡ್ ಪಡೆಯಲು ಯುಐಡಿಎಐ ನಿಗದಿಪಡಿಸಿದ ಶುಲ್ಕ 50 ರೂ. ಆದರೆ, ಕೆಫೆ ಮಾಲೀಕರು ಇದಕ್ಕಾಗಿ 70 ರಿಂದ 100 ರೂ. ಪಡೆಯುತ್ತಾರೆ. ಈ ರೀತಿಯಾಗಿ, ಅವರು ಈ ಕೆಲಸಗಳಿಗಾಗಿ 30 ರಿಂದ 50 ಅಥವಾ 100 ರೂಪಾಯಿಗಳನ್ನು ಗಳಿಸುತ್ತಾರೆ.

 

 


Share:

More Posts

Category

Send Us A Message

Related Posts

ವಿಶ್ವ ಮಾನ್ಯ ಕನ್ನಡಿಗ. 2024 ಪ್ರಶಸ್ತಿಗೆ ಭಾಜನರಾದ ಸನ್ಮಾನ್ಯ ಶ್ರೀ ಕೆ.ಪಿ ಮಂಜುನಾಥ್ ಸಾಗರ್ 


Share       ಅಮೆರಿಕದ ರಿಚ್ಮಂಡ್ ನಗರ ದ ಗ್ರೇಟರ್ ರಿಚ್ಮಂಡ್ ಕನ್ವೆನ್ಷನ್ ಸೆಂಟರ್ ನಲ್ಲಿ ನಡೆದ 12 ನೇ ಅಕ್ಕ ವಿಶ್ವ ಮಾನ್ಯ ಕನ್ನಡ ಸಮ್ಮೇಳನವು ನಡೆಯಿತು. ಈ ಸಂದರ್ಭದಲ್ಲಿ ಕನ್ನಡ ಭಾಷೆ, ಸಂಸ್ಕೃತಿ, ಸಾಹಿತ್ಯ


Read More »

ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮದಲ್ಲಿ ಶಾಲೆಗೆ ಶಾಲಾ ವಾಹನ ಕೊಡುಗೆ ನೀಡಿದ ಉದ್ಯಮಿ…!! ಸುಭಾಷ್ ಪೂಜಾರಿ


Share       ಬೈಂದೂರು : ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ತಗ್ಗರ್ಸೆ – ಬೈಂದೂರು ಇಲ್ಲಿ 78 ನೇ ಸ್ವಾತಂತ್ರ್ಯೋತ್ಸವ ದಿನಾಚರಣೆಯನ್ನು  ಎಸ್.ಡಿ.ಎಮ್.ಸಿ ಅಧ್ಯಕ್ಷರಾದ ಸುರೇಶ್ ಪೂಜಾರಿ ಧ್ವಜಾರೋಹಣ ಕಾರ್ಯಕ್ರಮ ನೆರೆವೆರೆಸಿದರು. ಈ ಸಮಯದಲ್ಲಿ ಶಾಲೆಗೆ


Read More »

ಬಿರುವೆರ್ ಕುಡ್ಲದಿಂದ ಸ್ವಾತಂತ್ರ್ಯ ದಿನಾಚರಣೆ ಮೂರು ಕುಟುಂಬಗಳಿಗೆ 1 ಲಕ್ಷ ರೂ.ನೆರವು


Share       ಕುದ್ರೋಳಿ,ಆ.15: ಬಿರುವೆರ್ ಕುಡ್ಲ ದಿಂದ ಲೇಡಿಹಿಲ್ ಸರ್ಕಲ್ ನಲ್ಲಿ ಅದ್ದೂರಿಯ ಸ್ವಾತಂತ್ರ್ಯ ದಿನಾಚರಣೆ ಹಾಗೂ ಮೂರು ಕುಟುಂಬಗಳಿಗೆ ಒಂದು ಲಕ್ಷ ರೂ.ನೆರವು ಹಸ್ತಾಂತರ ಕಾರ್ಯಕ್ರಮವು ಬಿರುವೆರ್ ಕುಡ್ಲ ಸ್ಥಾಪಕಾಧ್ಯಕ್ಷ ಉದಯ ಪೂಜಾರಿ ಬಳ್ಳಾಲ್


Read More »

ಶ್ರೀ ರಾಮ್ ಫ್ರೆಂಡ್ಸ್ ಕಟೀಲ್ ಸಂಸ್ಥೆ : ಬಿರುವೆರ್ ಕುಡ್ಲ ಸಂಸ್ಥೆಯ ಸ್ಥಾಪಕ ಅಧ್ಯಕ್ಷ ಉದಯ ಪೂಜಾರಿಗೆ ಸಮ್ಮಾನ


Share       ಶ್ರೀ ರಾಮ್ ಫ್ರೆಂಡ್ಸ್ ಕಟೀಲ್ ಸಂಸ್ಥೆಯ 5 ನೇ ವಾರ್ಷಿಕೋತ್ಸವದ ಸಂಭ್ರಮ. ಕಾರ್ಯಕ್ರಮದಲ್ಲಿ ಫ್ರೆಂಡ್ಸ್ ಬಲ್ಲಾಳ್ ಭಾಗ್,ಬಿರುವೆರ್ ಕುಡ್ಲ ಸಂಸ್ಥೆಯ ಸ್ಥಾಪಕ ಅಧ್ಯಕ್ಷರಾದ ಶ್ರೀ ಉದಯ ಪೂಜಾರಿಯವರ ಸಮಾಜ ಸೇವೆಯನ್ನು ಗುರುತಿಸಿ ಸಮ್ಮಾನ


Read More »

ವಿಟ್ಲ ಕಸಬಾ ಗ್ರಾಮದ ನೆತ್ರೆಕೆರೆ ನಿವಾಸಿ ನಿವೃತ್ತ ಶಿಕ್ಷಕ ಗುಡ್ಡಪ್ಪ ಪೂಜಾರಿ ನಿಧನ


Share       ವಿಟ್ಲ; ವಿಟ್ಲ ಕಸಬಾ ಗ್ರಾಮದ ನೆತ್ರೆಕೆರೆ ನಿವಾಸಿ ನಿವೃತ್ತ ಶಿಕ್ಷಕ ಗುಡ್ಡಪ್ಪ ಪೂಜಾರಿ( 92 ವರ್ಷ) ಇತ್ತೀಚಿಗೆ ತನ್ನ ಸ್ವಗೃಹದಲ್ಲಿ ವಯೋ ಸಹಜವಾಗಿ ನಿಧನರಾದರು. ಇವರು ಸರಕಾರಿ ಪ್ರಾಥಮಿಕ ಶಾಲೆ ಅನಿಲಕಟ್ಟೆಯಲ್ಲಿ ಶಿಕ್ಷಕರಾಗಿ


Read More »

ಫ್ರೆಂಡ್ಸ್ ಸುರತ್ಕಲ್ ತುಳುನಾಡ ಬಿರುವೆರ್ (ರಿ )ವತಿಯಿಂದ ಸಹಾಯ ಧನ ವಿತರಣೆ


Share       ಫ್ರೆಂಡ್ಸ್ ಸುರತ್ಕಲ್ ತುಳುನಾಡ ಬಿರುವೆರ್ ಸಂಘಟನೆಯ ಸಕ್ರಿಯ ಕಾರ್ಯಕರ್ತ ಹಾಗೂ ನಮ್ಮೆಲ್ಲರ ಅತ್ಮೀಯರಾದ ಯಶೋಧರ ಹೊಸಬೆಟ್ಟು ರುವರು ಹಲವು ದಿನಗಳ ಹಿಂದೆ ತೀವ್ರ ಅನಾರೋಗ್ಯಕ್ಕಿಡಾಗಿದ್ದು,  ಅವರ ಚಿಕಿತ್ಸೆಗಾಗಿ ಲಕ್ಷಾಂತರ ರೂಪಾಯಿಗಳ ಅಗತ್ಯವಿದ್ದು, ಅವರ


Read More »