TOP STORIES:

FOLLOW US

Adhar card ಹೊಂದಿರುವವರಿಗೆ UIDAI ವತಿಯಿಂದ ಬಹುದೊಡ್ಡ ಉಡುಗೊರೆ


ಭಾರತೀಯ ವಿಶಿಷ್ಟ ಗುರುತಿನ ಪ್ರಾಧಿಕಾರ (UIDAI) ದೇಶಾದ್ಯಂತ 166 ಸ್ವತಂತ್ರ ಆಧಾರ್ ದಾಖಲಾತಿ ಮತ್ತು ನವೀಕರಣ ಕೇಂದ್ರಗಳನ್ನು ತೆರೆಯಲು ಸಜ್ಜಾಗಿದೆ. ಈ ಕುರಿತು ಯುಐಡಿಎಐ ಅಧಿಕೃತ ಹೇಳಿಕೆಯನ್ನು ನೀಡುವ ಮೂಲಕ ಈ ಮಾಹಿತಿಯನ್ನು ನೀಡಿದೆ.

ಪ್ರಸ್ತುತ 166 ಕೇಂದ್ರಗಳಲ್ಲಿ 55 ಆಧಾರ್ ಸೇವಾ ಕೇಂದ್ರಗಳು (ASKs) ಕಾರ್ಯನಿರ್ವಹಿಸುತ್ತಿವೆ. ಇದಲ್ಲದೇ 52,000 ಆಧಾರ್ ದಾಖಲಾತಿ ಕೇಂದ್ರಗಳು ಬ್ಯಾಂಕುಗಳು, ಅಂಚೆ ಕಚೇರಿಗಳು ಮತ್ತು ರಾಜ್ಯ ಸರ್ಕಾರಗಳ ಮೂಲಕ ಕಾರ್ಯ ನಿರ್ವಹಿಸುತ್ತಿವೆ.

 

ಹೇಳಿಕೆ ಬಿಡುಗಡೆಗೊಳಿಸಿದ UIDAI

UIDAI ಬಿಡುಗಡೆ ಮಾಡಿದ ಹೇಳಿಕೆಯಲ್ಲಿ, UIDAI 122 ನಗರಗಳಲ್ಲಿ 166 ಸ್ವತಂತ್ರ ಆಧಾರ್ ದಾಖಲಾತಿ ಮತ್ತು ನವೀಕರಣ ಕೇಂದ್ರಗಳನ್ನು ತೆರೆಯಲು ಯೋಜಿಸಿದೆ ಎಂದು ಹೇಳಲಾಗಿದೆ. ವಾರದಲ್ಲಿ ಏಳು ದಿನಗಳು ಆಧಾರ್ ಸೇವಾ ಕೇಂದ್ರಗಳನ್ನು ತೆರೆದಿರಲಿವೆ ಎಂಬುದು ಇಲ್ಲಿ ಗಮನಾರ್ಹ. ಆಧಾರ್ ಕೇಂದ್ರಗಳು ವಿಕಲಚೇತನರು ಸೇರಿದಂತೆ 70 ಲಕ್ಷ ಜನರ ಅಗತ್ಯಗಳನ್ನು ಪೂರೈಸಲಿದೆ.

 

A ಮಾದರಿಯ ಆಧಾರ್ ಸೇವಾ ಕೇಂದ್ರಗಳು (Model-A ASKs) ದಿನಕ್ಕೆ 1,000 ದಾಖಲಾತಿಗಳನ್ನು ಮತ್ತು ನವೀಕರಣ ವಿನಂತಿಗಳನ್ನು ನಿರ್ವಹಿಸುವ ಸಾಮರ್ಥ್ಯವನ್ನು ಹೊಂದಿವೆ. ಇದೇ ವೇಳೆ Model-B ASKಗಳು 500 ಮತ್ತು Model-C ASKಗಳು 250 ದಾಖಲಾತಿ ಮತ್ತು ನವೀಕರಣ ವಿನಂತಿಗಳನ್ನು ಪೂರೈಸುವ ಸಾಮರ್ಥ್ಯವನ್ನು ಹೊಂದಿವೆ. ಗಮನಿಸಬೇಕಾದ ಸಂಗತಿಯೆಂದರೆ ಇಲ್ಲಿಯವರೆಗೆ UIDAI 130.9 ಕೋಟಿ ಜನರಿಗೆ ಆಧಾರ್ ಸಂಖ್ಯೆಯನ್ನು ನೀಡಿದೆ.

 

ಖಾಸಗಿ ಆಧಾರ್ ಕೇಂದ್ರಗಳನ್ನು ತೆರೆಯಲಾಗುವುದಿಲ್ಲ

ಆಧಾರ್ ಸೇವಾ ಕೇಂದ್ರ ಖಾಸಗಿ ತೆರೆಯಲು ಸಾಧ್ಯವಿಲ್ಲ. ಅಂದರೆ, ಆಧಾರ್ ಸೇವೆಗಳು ಬ್ಯಾಂಕ್‌ಗಳು, ಅಂಚೆ ಕಚೇರಿಗಳು, ಸಾಮಾನ್ಯ ಸೇವಾ ಕೇಂದ್ರಗಳು (Aadhaar Common Service Centres), ರಾಜ್ಯ ಸರ್ಕಾರಿ ಅಧಿಕಾರಿಗಳ ಕಚೇರಿ ಮತ್ತು UIDAI ನಿರ್ವಹಿಸುವ ಆಧಾರ್ ಸೇವಾ ಕೇಂದ್ರಗಳಲ್ಲಿ ಮಾತ್ರ ಲಭ್ಯವಿದೆ. ನಿಮಗೆ ಇದರ ಬಗ್ಗೆ ಹೆಚ್ಚಿನ ಮಾಹಿತಿ ಬೇಕಾದರೆ, ನೀವು ಅದನ್ನು ರಾಜ್ಯ ಸರ್ಕಾರದ ಸ್ಥಳೀಯ ಅಧಿಕಾರಿಗಳಿಂದ ಪಡೆಯಬಹುದು (ಇದರ ಅಡಿಯಲ್ಲಿ ಆಧಾರ್ ಕೇಂದ್ರಗಳು ನಡೆಯುತ್ತಿವೆ).

ಇಂಟರ್ನೆಟ್ ಕೆಫೆಗಳು ಈ ಕೆಲಸ ಮಾಡುತ್ತವೆ

UIDAI ಸಾಮಾನ್ಯ ನಾಗರಿಕರಿಗೆ ನೀಡುವ ಅಧಿಕಾರಗಳನ್ನು ಇಂಟರ್ನೆಟ್ ಕೆಫೆಗಳಿಗೂ ಕೂಡ ನೀಡುತ್ತದೆ. ಈ ಅಧಿಕಾರಗಳಲ್ಲಿ ಆಧಾರ್ ಕಾರ್ಡ್ ನಲ್ಲಿ ಹೆಸರು, ವಿಳಾಸ, ಹುಟ್ಟಿದ ದಿನಾಂಕ ಅಥವಾ ಇತರ ವಿವರಗಳ ತಿದ್ದುಪಡಿ, ಫೋಟೋ ಬದಲಾಯಿಸುವುದು, ಪಿವಿಸಿ ಕಾರ್ಡ್ ಮುದ್ರಿಸುವುದು, ಸಾಮಾನ್ಯ ಆಧಾರ್ ಕಾರ್ಡ್ ಕೇಳುವುದು ಇತ್ಯಾದಿ ಸೌಲಭ್ಯ ಮಾತ್ರ ಲಭ್ಯವಿದೆ.

 

ಆಧಾರ್‌ನಲ್ಲಿ ಯಾವುದೇ ತಿದ್ದುಪಡಿಗಾಗಿ ಅಥವಾ ಪಿವಿಸಿ ಕಾರ್ಡ್ ಪಡೆಯಲು ಯುಐಡಿಎಐ ನಿಗದಿಪಡಿಸಿದ ಶುಲ್ಕ 50 ರೂ. ಆದರೆ, ಕೆಫೆ ಮಾಲೀಕರು ಇದಕ್ಕಾಗಿ 70 ರಿಂದ 100 ರೂ. ಪಡೆಯುತ್ತಾರೆ. ಈ ರೀತಿಯಾಗಿ, ಅವರು ಈ ಕೆಲಸಗಳಿಗಾಗಿ 30 ರಿಂದ 50 ಅಥವಾ 100 ರೂಪಾಯಿಗಳನ್ನು ಗಳಿಸುತ್ತಾರೆ.

 

 


Share:

More Posts

Category

Send Us A Message

Related Posts

ಭಾರತ್ ಬ್ಯಾಂಕ್‌ನ ಕಾರ್ಯಾಧ್ಯಕ್ಷರಾದ ಸೂರ್ಯಕಾಂತ್ ಜಯ ಸುವರ್ಣರಿಗೆ ಐವತ್ತರ ಸಂಭ್ರಮ


Share       ಸಮಾಜದಲ್ಲಿ ಮಹತ್ವದ ಜವಾಬ್ದಾರಿಯನ್ನು ವಹಿಸಿಕೊಂಡಿರುವ ವ್ಯಕ್ತಿ ಸಾಮಾಜಿಕವಾಗಿ ಮತ್ತು ಭಾವನಾತ್ಮಕವಾಗಿ ಸಮತೋಲನವನ್ನು ಸಾಧಿಸಿದರೆ ಮಾತ್ರ ಅವನು ಯಶಸ್ಸಿನ ಮೆಟ್ಟಿಲೇರಲು ಸಾಧ್ಯ. ‘ಸುಖ-ದುಃಖ, ಲಾಭ -ನಷ್ಟ ಸೋಲು-ಗೆಲುವನ್ನು ಸಮಾನವಾಗಿ ತೆಗೆದುಕೊಳ್ಳುವವನೇ ನಿಜವಾದ ಸುಖಿ’ ಎಂಬ


Read More »

ಮೂಡಬಿದಿರಿಯಲ್ಲೊಂದು 75 ಸಂಭ್ರಮ ಕ್ಕೆ ಸ್ನೇಹ ಸೇತುವಾದ ಸಿಂಗಾಪೂರ ಬಿಲ್ಲವ ಅಸೋಸಿಯೇಷನ್


Share       ಮೂಡಬಿದಿರಿಯಿಂದ ಸಿಂಗಪೂರಿಗೆ 🇸🇬: ಜಾಗತಿಕ ಸಮುದಾಯ ಸಂಬಂಧಗಳ ಬಲವರ್ಧನೆ: ಜಾಗತಿಕ ಸಮುದಾಯ ಸಂಬಂಧಗಳನ್ನು ಬಲಪಡಿಸುವ ದಿಕ್ಕಿನಲ್ಲಿ ಮಹತ್ವಪೂರ್ಣ ಹೆಜ್ಜೆವಹಿಸಿ, ಬಿಲ್ಲವ ಅಸೋಸಿಯೇಷನ್ ಸಿಂಗಪೂರಿನ ಸ್ಥಾಪಕರಾದ ಅಶ್ವಿತ್ ಬಂಗೇರಾ ಅವರು, ಬಿಲ್ಲವ ಅಸೋಸಿಯೇಷನ್ ಮೂಡಬಿದಿರಿಯ


Read More »

ಬಿಲ್ಲವಾಸ್ ಕತಾರ್ ನ ಇತಿಹಾಸದಲ್ಲಿ ಇನ್ನೊಂದು ಮೈಲಿಗಲ್ಲು. ಉಚಿತ ಆರೋಗ್ಯತಪಾಸಣಾ ಶಿಬಿರ ಮತ್ತು ಬಿಲ್ಲವಾಸ್ ಕತಾರ್ ನ ಅಧೀಕೃತ ಲಾಂಛನ (ಲೋಗೋ) ಬಿಡುಗಡೆ


Share       Noಹಲವು ಸಮಾಜಮುಖಿ ಕಾರ್ಯಕ್ರಮಗಳ ಮೂಲಕ ಗಮನ ಸೆಳೆಯುತ್ತಿರುವ ಬಿಲ್ಲವಾಸ್ ಕತಾರ್ ರವರ  ವತಿಯಿಂದ ದಿನಾಂಕ ೧೧.೦೪.೨೦೨೫ ರಂದು ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಕಿಮ್ಸ್ ಮೆಡಿಕಲ್ ಸೆಂಟರ್, ಅಲ್ ಮಿಶಾಫ್, ಕತಾರ್ ಅವರ


Read More »

“ವಿಶ್ವವಾಣಿ ಗ್ಲೋಬಲ್ ಅಚೀವರ್ಸ್ ಅವಾರ್ಡ್ ” ಪ್ರತಿಭಾ ಕುಳಾಯಿ ಆಯ್ಕೆ 


Share       ಮಂಗಳೂರು: ಸಮಾಜ ಸೇವೆಗಾಗಿ ಕುಳಾಯಿ ಫೌಂಡೇಶನ್ ರಚಿಸಿ ೫೦೦ಕ್ಕೂ ಹೆಚ್ಚು ಮಹಿಳೆ ಮತ್ತು ಮಕ್ಕಳಿಗೆ ಬದುಕು ಕಟ್ಟಿಕೊಡುತ್ತಿರುವ, ಯುವ ರಾಜಕಾರಣಿ ಪ್ರತಿಭಾ ಕುಳಾಯಿ, ವಿಶ್ವವಾಣಿ ಗ್ಲೋಬಲ್ ಅಚೀವರ್ಸ್ ಅವಾರ್ಡ್ಸ್ ಗೆ ಆಯ್ಕೆಯಾಗಿದ್ದಾರೆ. ರಷ್ಯಾದ


Read More »

ವಿದೇಶದ ಇಸ್ರೇಲ್ ನಲ್ಲಿದ್ದು ತುಳುನಾಡಿನ ಸಂಕಷ್ಟದ ಕುಟುಂಬಕ್ಕೆ ಆರ್ಥಿಕ ಶಕ್ತಿ ತುಂಬಿದ ಮಹನೀಯ ವ್ಯಕ್ತಿ ದಿನಕರ ಪೂಜಾರಿ


Share       ನಾನು ನನ್ನವರು ಎಂಬ ಈ ಕಾಲ ಘಟ್ಟದಲ್ಲಿ ಸಮಾನ ಮನಸ್ಕರ ಜೊತೆ  ಸೇರಿ ದುಡಿದದ್ದರಲ್ಲಿ ಸ್ವಲ್ಪ ಪಾಲನ್ನು ಸಮಾಜಕ್ಕಾಗಿ ವಿನಿಯೋಗಿಸುವ ಮಹೋನ್ನತ ಕಾರ್ಯಗೈಯುತ್ತಿರುವ ವ್ಯಕ್ತಿ ದಿನಕರ ಪೂಜಾರಿ. ವಿದೇಶದಲ್ಲಿದ್ದು ಸಂಕಷ್ಟದ ಕುಟುಂಬಕ್ಕೆ ಆರ್ಥಿಕ


Read More »

ಬಿಲ್ಲವ ಸಮಾಜಕ್ಕಾಗಿ ಪಂದ್ಯಾಟದ ಜೊತೆಗೆ ಆರ್ಥಿಕ ಯೋಜನೆಯನ್ನು ರೂಪಿಸಿದ ರುವಾರಿ ವಿಶ್ವನಾಥ ಪೂಜಾರಿ ಕಡ್ತಲ


Share       ಆದರಣೀಯ ಕ್ಷಣಗಳನ್ನು ‌ಮತ್ತೊಮ್ಮೆ ಮರಳಿಸಿ ವಿದೇಶದ  ಮಣ್ಣಲ್ಲೂ ಬಿಲ್ಲವರನ್ನು ಒಗ್ಗೂಡಿಸಿಕೊಂಡು ಒಂದು ಪಂದ್ಯಾಟ ನಡೆಸುವುದು ಕಷ್ಟ ಎಂಬ ಸನ್ನಿವೇಶದಲ್ಲಿ ಮಾಡಿಯೇ ಸಿದ್ಧ ಎಂಬ ಸ್ಪಷ್ಟ ನಿಲುವಿನೊಂದಿಗೆ ಎಲ್ಲರಿಗೂ ಇಷ್ಟವಾಗಿಸಿದ ಕ್ರಿಕೆಟ್ ಪಂದ್ಯಾಟ ಮಾಡಿ


Read More »