TOP STORIES:

Adhar card ಹೊಂದಿರುವವರಿಗೆ UIDAI ವತಿಯಿಂದ ಬಹುದೊಡ್ಡ ಉಡುಗೊರೆ


ಭಾರತೀಯ ವಿಶಿಷ್ಟ ಗುರುತಿನ ಪ್ರಾಧಿಕಾರ (UIDAI) ದೇಶಾದ್ಯಂತ 166 ಸ್ವತಂತ್ರ ಆಧಾರ್ ದಾಖಲಾತಿ ಮತ್ತು ನವೀಕರಣ ಕೇಂದ್ರಗಳನ್ನು ತೆರೆಯಲು ಸಜ್ಜಾಗಿದೆ. ಈ ಕುರಿತು ಯುಐಡಿಎಐ ಅಧಿಕೃತ ಹೇಳಿಕೆಯನ್ನು ನೀಡುವ ಮೂಲಕ ಈ ಮಾಹಿತಿಯನ್ನು ನೀಡಿದೆ.

ಪ್ರಸ್ತುತ 166 ಕೇಂದ್ರಗಳಲ್ಲಿ 55 ಆಧಾರ್ ಸೇವಾ ಕೇಂದ್ರಗಳು (ASKs) ಕಾರ್ಯನಿರ್ವಹಿಸುತ್ತಿವೆ. ಇದಲ್ಲದೇ 52,000 ಆಧಾರ್ ದಾಖಲಾತಿ ಕೇಂದ್ರಗಳು ಬ್ಯಾಂಕುಗಳು, ಅಂಚೆ ಕಚೇರಿಗಳು ಮತ್ತು ರಾಜ್ಯ ಸರ್ಕಾರಗಳ ಮೂಲಕ ಕಾರ್ಯ ನಿರ್ವಹಿಸುತ್ತಿವೆ.

 

ಹೇಳಿಕೆ ಬಿಡುಗಡೆಗೊಳಿಸಿದ UIDAI

UIDAI ಬಿಡುಗಡೆ ಮಾಡಿದ ಹೇಳಿಕೆಯಲ್ಲಿ, UIDAI 122 ನಗರಗಳಲ್ಲಿ 166 ಸ್ವತಂತ್ರ ಆಧಾರ್ ದಾಖಲಾತಿ ಮತ್ತು ನವೀಕರಣ ಕೇಂದ್ರಗಳನ್ನು ತೆರೆಯಲು ಯೋಜಿಸಿದೆ ಎಂದು ಹೇಳಲಾಗಿದೆ. ವಾರದಲ್ಲಿ ಏಳು ದಿನಗಳು ಆಧಾರ್ ಸೇವಾ ಕೇಂದ್ರಗಳನ್ನು ತೆರೆದಿರಲಿವೆ ಎಂಬುದು ಇಲ್ಲಿ ಗಮನಾರ್ಹ. ಆಧಾರ್ ಕೇಂದ್ರಗಳು ವಿಕಲಚೇತನರು ಸೇರಿದಂತೆ 70 ಲಕ್ಷ ಜನರ ಅಗತ್ಯಗಳನ್ನು ಪೂರೈಸಲಿದೆ.

 

A ಮಾದರಿಯ ಆಧಾರ್ ಸೇವಾ ಕೇಂದ್ರಗಳು (Model-A ASKs) ದಿನಕ್ಕೆ 1,000 ದಾಖಲಾತಿಗಳನ್ನು ಮತ್ತು ನವೀಕರಣ ವಿನಂತಿಗಳನ್ನು ನಿರ್ವಹಿಸುವ ಸಾಮರ್ಥ್ಯವನ್ನು ಹೊಂದಿವೆ. ಇದೇ ವೇಳೆ Model-B ASKಗಳು 500 ಮತ್ತು Model-C ASKಗಳು 250 ದಾಖಲಾತಿ ಮತ್ತು ನವೀಕರಣ ವಿನಂತಿಗಳನ್ನು ಪೂರೈಸುವ ಸಾಮರ್ಥ್ಯವನ್ನು ಹೊಂದಿವೆ. ಗಮನಿಸಬೇಕಾದ ಸಂಗತಿಯೆಂದರೆ ಇಲ್ಲಿಯವರೆಗೆ UIDAI 130.9 ಕೋಟಿ ಜನರಿಗೆ ಆಧಾರ್ ಸಂಖ್ಯೆಯನ್ನು ನೀಡಿದೆ.

 

ಖಾಸಗಿ ಆಧಾರ್ ಕೇಂದ್ರಗಳನ್ನು ತೆರೆಯಲಾಗುವುದಿಲ್ಲ

ಆಧಾರ್ ಸೇವಾ ಕೇಂದ್ರ ಖಾಸಗಿ ತೆರೆಯಲು ಸಾಧ್ಯವಿಲ್ಲ. ಅಂದರೆ, ಆಧಾರ್ ಸೇವೆಗಳು ಬ್ಯಾಂಕ್‌ಗಳು, ಅಂಚೆ ಕಚೇರಿಗಳು, ಸಾಮಾನ್ಯ ಸೇವಾ ಕೇಂದ್ರಗಳು (Aadhaar Common Service Centres), ರಾಜ್ಯ ಸರ್ಕಾರಿ ಅಧಿಕಾರಿಗಳ ಕಚೇರಿ ಮತ್ತು UIDAI ನಿರ್ವಹಿಸುವ ಆಧಾರ್ ಸೇವಾ ಕೇಂದ್ರಗಳಲ್ಲಿ ಮಾತ್ರ ಲಭ್ಯವಿದೆ. ನಿಮಗೆ ಇದರ ಬಗ್ಗೆ ಹೆಚ್ಚಿನ ಮಾಹಿತಿ ಬೇಕಾದರೆ, ನೀವು ಅದನ್ನು ರಾಜ್ಯ ಸರ್ಕಾರದ ಸ್ಥಳೀಯ ಅಧಿಕಾರಿಗಳಿಂದ ಪಡೆಯಬಹುದು (ಇದರ ಅಡಿಯಲ್ಲಿ ಆಧಾರ್ ಕೇಂದ್ರಗಳು ನಡೆಯುತ್ತಿವೆ).

ಇಂಟರ್ನೆಟ್ ಕೆಫೆಗಳು ಈ ಕೆಲಸ ಮಾಡುತ್ತವೆ

UIDAI ಸಾಮಾನ್ಯ ನಾಗರಿಕರಿಗೆ ನೀಡುವ ಅಧಿಕಾರಗಳನ್ನು ಇಂಟರ್ನೆಟ್ ಕೆಫೆಗಳಿಗೂ ಕೂಡ ನೀಡುತ್ತದೆ. ಈ ಅಧಿಕಾರಗಳಲ್ಲಿ ಆಧಾರ್ ಕಾರ್ಡ್ ನಲ್ಲಿ ಹೆಸರು, ವಿಳಾಸ, ಹುಟ್ಟಿದ ದಿನಾಂಕ ಅಥವಾ ಇತರ ವಿವರಗಳ ತಿದ್ದುಪಡಿ, ಫೋಟೋ ಬದಲಾಯಿಸುವುದು, ಪಿವಿಸಿ ಕಾರ್ಡ್ ಮುದ್ರಿಸುವುದು, ಸಾಮಾನ್ಯ ಆಧಾರ್ ಕಾರ್ಡ್ ಕೇಳುವುದು ಇತ್ಯಾದಿ ಸೌಲಭ್ಯ ಮಾತ್ರ ಲಭ್ಯವಿದೆ.

 

ಆಧಾರ್‌ನಲ್ಲಿ ಯಾವುದೇ ತಿದ್ದುಪಡಿಗಾಗಿ ಅಥವಾ ಪಿವಿಸಿ ಕಾರ್ಡ್ ಪಡೆಯಲು ಯುಐಡಿಎಐ ನಿಗದಿಪಡಿಸಿದ ಶುಲ್ಕ 50 ರೂ. ಆದರೆ, ಕೆಫೆ ಮಾಲೀಕರು ಇದಕ್ಕಾಗಿ 70 ರಿಂದ 100 ರೂ. ಪಡೆಯುತ್ತಾರೆ. ಈ ರೀತಿಯಾಗಿ, ಅವರು ಈ ಕೆಲಸಗಳಿಗಾಗಿ 30 ರಿಂದ 50 ಅಥವಾ 100 ರೂಪಾಯಿಗಳನ್ನು ಗಳಿಸುತ್ತಾರೆ.

 

 


Related Posts

ಉದಯೋನ್ಮುಖ ಪ್ರತಿಭಾ ಪುರಸ್ಕಾರಕ್ಕೆ ಅಕ್ಷತಾ ಸುಧೀರ್


Share         ಮಂಗಳೂರು/ಬೆಂಗಳೂರು: ಕರ್ನಾಟಕ ಆರ್ಯ ಈಡಿಗ ಮಹಿಳಾ ಸಂಘದ ವತಿಯಿಂದ ಆಯೋಜಿಸಲಾದ ರಾಷ್ಟ್ರೀಯ ಸಮ್ಮೇಳನದಲ್ಲಿ, ಯುವವಾಹಿನಿಯ ಬೆಂಗಳೂರು ಘಟಕದ ಹೆಮ್ಮೆಯ ಸದಸ್ಯೆಯೂ ಹಾಗೂ ಪ್ರಸಕ್ತ ಲೆಕ್ಕಪರಿಶೋಧಕರೂ ಆಗಿರುವ ಶ್ರೀಮತಿ ಅಕ್ಷತಾ ಸುಧೀರ್ ಅವರಿಗೆ ಉದಯೋನ್ಮುಖ


Read More »

ಕಲರ್ಸ್ ಕನ್ನಡ ಬಿಗ್ ಬಾಸ್ 12ರ ಸ್ಪರ್ಧಿ ಧ್ರುವಂತ್ (ಚರಿತ್ ಬಾಳಪ್ಪ ಪೂಜಾರಿ) ಜೀವನದ ಯಶೋಗಾಥೆ


Share         ಜೀವನದಲ್ಲಿ ಅದೆಷ್ಟೋ ಕಷ್ಟಗಳನ್ನು ಸಹಿಸಿಕೊಂಡು, ಅವಕಾಶಗಳಿಂದ ವಂಚಿತನಾದರೂ ಧೃತಿಗೆಡದೆ, ಸಾಧನೆಯ ಹಾದಿಯಲ್ಲಿ ಹಂತ ಹಂತವಾಗಿ ಮುನ್ನಡೆಯುತ್ತ ಇಂದು ಎಲ್ಲರ ಮನಗಳಲ್ಲಿ ಮನೆ ಮಾಡಿರುವಂತಹ ನಮ್ಮೆಲ್ಲರ ಹೆಮ್ಮೆಯ ಸಾಧಕ ಧ್ರುವಂತ್ ಇವರ ಯಶಸ್ಸಿನ ಹಿಂದಿನ


Read More »

🩸 ಓಮಾನ್ ಬಿಲ್ಲವಾಸ್ ವತಿಯಿಂದ ಆಯೋಜಿಸಲಾದ ಸಾಮೂಹಿಕ ರಕ್ತದಾನ ಶಿಬಿರ 🩸 ಬೌಶರ್ ಬ್ಲಡ್ ಬ್ಯಾಂಕ್, ಘಾಲಾ ಇಲ್ಲಿ ಯಶಸ್ವಿಯಾಗಿ ನಡೆಯಿತು.


Share          ಒಂದು ಕಾಲದಲ್ಲಿ ತುಳುನಾಡಿನ ಮೂಲದವರಾದ ಬಿಲ್ಲವರು ಕೃಷಿಕರಾಗಿ ಹಾಗೂ ಬೈದರಾಗಿ ತಮ್ಮ ಪರಿಶ್ರಮ, ಶ್ರಮಸಾಧನೆ ಮತ್ತು ಸಾಮಾಜಿಕ ಜವಾಬ್ದಾರಿಗಳ ಮೂಲಕ ಸಮಾಜದಲ್ಲಿ ಗೌರವಯುತ ಸ್ಥಾನವನ್ನು ಪಡೆದವರು. ಪ್ರಕೃತಿಯೊಂದಿಗೆ ಸಮನ್ವಯದಿಂದ ಬದುಕನ್ನು ಸಾಗಿಸುತ್ತಾ, ಪರಸ್ಪರ


Read More »

ನಾನು ಕಂಡ ಪ್ರವೀಣ್ ಪೂಜಾರಿ


Share         ನಾನು ಕಂಡ ಪ್ರವೀಣ್ ಪೂಜಾರಿ ಸಾಧಾರಣ 15 ವರ್ಷಗಳಿಂದ ನಮ್ಮ ಆತ್ಮೀಯತೆ ಬಿಲ್ಲವ ಸಮಾಜದ ಸಾಮಾನ್ಯ ಜನರಿಗೂ ಸಮಸ್ಯೆ ಬಂದಂತ ಸಂದರ್ಭದಲ್ಲಿ ವಕೀಲನಾಗಿ ಅಥವಾ ಸಾಮಾಜಿಕ ಕಾರ್ಯಕರ್ತನಾಗಿ ನ್ಯಾಯ ದೊರಕಿಸಿಕೊಟ್ಟಂತಹ ಒಬ್ಬ ನಮ್ಮ


Read More »

ಚಾರ್ಟರ್ಡ್ ಅಕೌಂಟೆಂಟ್ (CA) ಪರೀಕ್ಷೆಯಲ್ಲಿ ಅತ್ಯುತ್ತಮ ಅಂಕಗಳನ್ನು ಗಳಿಸಿ ನಿಶಾ ಪೂಜಾರಿ ಉತ್ತೀರ್ಣರಾಗಿದ್ದಾರೆ.


Share         ಮುಂಬಯಿ : ಕಾಂದಿವಲಿ ಪೂರ್ವದ ಠಾಕೂರ್ ಕಾಂಪ್ಲೆಕ್ಸ್ ನಿವಾಸಿ ನಿಶಾ ಪೂಜಾರಿ ಅವರು ಇತ್ತೀಚೆಗೆ ಸೆಪ್ಟೆಂಬರ್‌ನಲ್ಲಿ ನಡೆದ ಚಾರ್ಟರ್ಡ್ ಅಕೌಂಟೆಂಟ್ (CA) ಪರೀಕ್ಷೆಯಲ್ಲಿ ಅತ್ಯುತ್ತಮ ಅಂಕಗಳನ್ನು ಗಳಿಸಿ ಯಶಸ್ವಿಯಾಗಿ ಉತ್ತೀರ್ಣರಾಗಿದ್ದಾರೆ. ಅವರು ಕಾರ್ಕಳ


Read More »

ಬಹುಮುಖ ಪ್ರತಿಭಾವಂತೆ ಹರ್ಷಿಕಾ ಕಾಣಿಯೂರು ಅವರಿಗೆ ಅಭಿನಂದನೆಗಳು


Share         ಹರ್ಷಿಕಾ ಕಾಣಿಯೂರು ಅವರ ಬಾಲ್ಯದ ವಯಸ್ಸಿನಲ್ಲಿಯೇ ಕೃಷಿ ಕಾರ್ಯದ ಮೇಲಿನ ಆಸಕ್ತಿ ಹಾಗೂ ಶ್ರಮವನ್ನು ಗುರುತಿಸಿ ಸೈಟ್ ರೀಟಾ ವಿದ್ಯಾ ಸಂಸ್ಥೆ ಗೌರವಿಸಿದ ಕ್ಷಣ ನಿಜಕ್ಕೂ ಹೆಮ್ಮೆಯದು. 🌾🌱👏   ಅಷ್ಟೇ ಅಲ್ಲದೆ,


Read More »