TOP STORIES:

FOLLOW US

Adhar card ಹೊಂದಿರುವವರಿಗೆ UIDAI ವತಿಯಿಂದ ಬಹುದೊಡ್ಡ ಉಡುಗೊರೆ


ಭಾರತೀಯ ವಿಶಿಷ್ಟ ಗುರುತಿನ ಪ್ರಾಧಿಕಾರ (UIDAI) ದೇಶಾದ್ಯಂತ 166 ಸ್ವತಂತ್ರ ಆಧಾರ್ ದಾಖಲಾತಿ ಮತ್ತು ನವೀಕರಣ ಕೇಂದ್ರಗಳನ್ನು ತೆರೆಯಲು ಸಜ್ಜಾಗಿದೆ. ಈ ಕುರಿತು ಯುಐಡಿಎಐ ಅಧಿಕೃತ ಹೇಳಿಕೆಯನ್ನು ನೀಡುವ ಮೂಲಕ ಈ ಮಾಹಿತಿಯನ್ನು ನೀಡಿದೆ.

ಪ್ರಸ್ತುತ 166 ಕೇಂದ್ರಗಳಲ್ಲಿ 55 ಆಧಾರ್ ಸೇವಾ ಕೇಂದ್ರಗಳು (ASKs) ಕಾರ್ಯನಿರ್ವಹಿಸುತ್ತಿವೆ. ಇದಲ್ಲದೇ 52,000 ಆಧಾರ್ ದಾಖಲಾತಿ ಕೇಂದ್ರಗಳು ಬ್ಯಾಂಕುಗಳು, ಅಂಚೆ ಕಚೇರಿಗಳು ಮತ್ತು ರಾಜ್ಯ ಸರ್ಕಾರಗಳ ಮೂಲಕ ಕಾರ್ಯ ನಿರ್ವಹಿಸುತ್ತಿವೆ.

 

ಹೇಳಿಕೆ ಬಿಡುಗಡೆಗೊಳಿಸಿದ UIDAI

UIDAI ಬಿಡುಗಡೆ ಮಾಡಿದ ಹೇಳಿಕೆಯಲ್ಲಿ, UIDAI 122 ನಗರಗಳಲ್ಲಿ 166 ಸ್ವತಂತ್ರ ಆಧಾರ್ ದಾಖಲಾತಿ ಮತ್ತು ನವೀಕರಣ ಕೇಂದ್ರಗಳನ್ನು ತೆರೆಯಲು ಯೋಜಿಸಿದೆ ಎಂದು ಹೇಳಲಾಗಿದೆ. ವಾರದಲ್ಲಿ ಏಳು ದಿನಗಳು ಆಧಾರ್ ಸೇವಾ ಕೇಂದ್ರಗಳನ್ನು ತೆರೆದಿರಲಿವೆ ಎಂಬುದು ಇಲ್ಲಿ ಗಮನಾರ್ಹ. ಆಧಾರ್ ಕೇಂದ್ರಗಳು ವಿಕಲಚೇತನರು ಸೇರಿದಂತೆ 70 ಲಕ್ಷ ಜನರ ಅಗತ್ಯಗಳನ್ನು ಪೂರೈಸಲಿದೆ.

 

A ಮಾದರಿಯ ಆಧಾರ್ ಸೇವಾ ಕೇಂದ್ರಗಳು (Model-A ASKs) ದಿನಕ್ಕೆ 1,000 ದಾಖಲಾತಿಗಳನ್ನು ಮತ್ತು ನವೀಕರಣ ವಿನಂತಿಗಳನ್ನು ನಿರ್ವಹಿಸುವ ಸಾಮರ್ಥ್ಯವನ್ನು ಹೊಂದಿವೆ. ಇದೇ ವೇಳೆ Model-B ASKಗಳು 500 ಮತ್ತು Model-C ASKಗಳು 250 ದಾಖಲಾತಿ ಮತ್ತು ನವೀಕರಣ ವಿನಂತಿಗಳನ್ನು ಪೂರೈಸುವ ಸಾಮರ್ಥ್ಯವನ್ನು ಹೊಂದಿವೆ. ಗಮನಿಸಬೇಕಾದ ಸಂಗತಿಯೆಂದರೆ ಇಲ್ಲಿಯವರೆಗೆ UIDAI 130.9 ಕೋಟಿ ಜನರಿಗೆ ಆಧಾರ್ ಸಂಖ್ಯೆಯನ್ನು ನೀಡಿದೆ.

 

ಖಾಸಗಿ ಆಧಾರ್ ಕೇಂದ್ರಗಳನ್ನು ತೆರೆಯಲಾಗುವುದಿಲ್ಲ

ಆಧಾರ್ ಸೇವಾ ಕೇಂದ್ರ ಖಾಸಗಿ ತೆರೆಯಲು ಸಾಧ್ಯವಿಲ್ಲ. ಅಂದರೆ, ಆಧಾರ್ ಸೇವೆಗಳು ಬ್ಯಾಂಕ್‌ಗಳು, ಅಂಚೆ ಕಚೇರಿಗಳು, ಸಾಮಾನ್ಯ ಸೇವಾ ಕೇಂದ್ರಗಳು (Aadhaar Common Service Centres), ರಾಜ್ಯ ಸರ್ಕಾರಿ ಅಧಿಕಾರಿಗಳ ಕಚೇರಿ ಮತ್ತು UIDAI ನಿರ್ವಹಿಸುವ ಆಧಾರ್ ಸೇವಾ ಕೇಂದ್ರಗಳಲ್ಲಿ ಮಾತ್ರ ಲಭ್ಯವಿದೆ. ನಿಮಗೆ ಇದರ ಬಗ್ಗೆ ಹೆಚ್ಚಿನ ಮಾಹಿತಿ ಬೇಕಾದರೆ, ನೀವು ಅದನ್ನು ರಾಜ್ಯ ಸರ್ಕಾರದ ಸ್ಥಳೀಯ ಅಧಿಕಾರಿಗಳಿಂದ ಪಡೆಯಬಹುದು (ಇದರ ಅಡಿಯಲ್ಲಿ ಆಧಾರ್ ಕೇಂದ್ರಗಳು ನಡೆಯುತ್ತಿವೆ).

ಇಂಟರ್ನೆಟ್ ಕೆಫೆಗಳು ಈ ಕೆಲಸ ಮಾಡುತ್ತವೆ

UIDAI ಸಾಮಾನ್ಯ ನಾಗರಿಕರಿಗೆ ನೀಡುವ ಅಧಿಕಾರಗಳನ್ನು ಇಂಟರ್ನೆಟ್ ಕೆಫೆಗಳಿಗೂ ಕೂಡ ನೀಡುತ್ತದೆ. ಈ ಅಧಿಕಾರಗಳಲ್ಲಿ ಆಧಾರ್ ಕಾರ್ಡ್ ನಲ್ಲಿ ಹೆಸರು, ವಿಳಾಸ, ಹುಟ್ಟಿದ ದಿನಾಂಕ ಅಥವಾ ಇತರ ವಿವರಗಳ ತಿದ್ದುಪಡಿ, ಫೋಟೋ ಬದಲಾಯಿಸುವುದು, ಪಿವಿಸಿ ಕಾರ್ಡ್ ಮುದ್ರಿಸುವುದು, ಸಾಮಾನ್ಯ ಆಧಾರ್ ಕಾರ್ಡ್ ಕೇಳುವುದು ಇತ್ಯಾದಿ ಸೌಲಭ್ಯ ಮಾತ್ರ ಲಭ್ಯವಿದೆ.

 

ಆಧಾರ್‌ನಲ್ಲಿ ಯಾವುದೇ ತಿದ್ದುಪಡಿಗಾಗಿ ಅಥವಾ ಪಿವಿಸಿ ಕಾರ್ಡ್ ಪಡೆಯಲು ಯುಐಡಿಎಐ ನಿಗದಿಪಡಿಸಿದ ಶುಲ್ಕ 50 ರೂ. ಆದರೆ, ಕೆಫೆ ಮಾಲೀಕರು ಇದಕ್ಕಾಗಿ 70 ರಿಂದ 100 ರೂ. ಪಡೆಯುತ್ತಾರೆ. ಈ ರೀತಿಯಾಗಿ, ಅವರು ಈ ಕೆಲಸಗಳಿಗಾಗಿ 30 ರಿಂದ 50 ಅಥವಾ 100 ರೂಪಾಯಿಗಳನ್ನು ಗಳಿಸುತ್ತಾರೆ.

 

 


Share:

More Posts

Category

Send Us A Message

Related Posts

ಬಿರುವೆರ್ ಕುಡ್ಲ ಸಂಘಟನೆಯಿಂದ ಯುವವಾಹಿನಿಗೆ ಗೌರವದ ಸನ್ಮಾನ.. ಕೇಂದ್ರ ಸಮಿತಿಯ ಅಧ್ಯಕ್ಷರಾದ ಹರೀಶ್ ಕೆ ಪೂಜಾರಿ ಸನ್ಮಾನ ಸ್ವೀಕಾರ


Share       ಮಂಗಳೂರು : ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರ ಬಿರುವೆರ್ ಕುಡ್ಲ(ರಿ) ಮಂಗಳೂರು ಸಂಘಟನಯ ದಶಮಾನೋತ್ಸವದ ಸವಿನೆನಪಿಗಾಗಿ, ರಾಜ್ಯದ ಪ್ರತಿಷ್ಠಿತ ಯುವವಾಹಿನಿ ಸಂಸ್ಥೆಯು ಕಳೆದ 36 ವರ್ಷಗಳ ಸಮಾಜಮುಖಿ ಸೇವೆಯನ್ನು ಗುರುತಿಸಿ ಗೌರವಿಸಿ ಗೌರವದ


Read More »

ದೇಯಿ ಬೈದೆತಿ- ಕೋಟಿ ಚೆನ್ನಯರ ಮೂಲಸ್ಥಾನ ಶ್ರೀ ಕ್ಷೇತ್ರ ಗೆಜ್ಜೆಗಿರಿ ಎಂಬ ಪುಣ್ಯಭೂಮಿ


Share       ಗೆಜ್ಜೆಗಿರಿ ನಂದನ ಬಿತ್ತಲ್ ಎಂಬ ಹೆಸರು ಕೇಳುತ್ತಿದ್ದಂತೆ ಮೈ ರೋಮಾಂಚನಗೊಳ್ಳುತ್ತದೆ. ಕ್ಷೇತ್ರದ ಇತಿಹಾಸವನ್ನು ಕೇಳುವಾಗ ಅವಳಿ ವೀರಪುರುಷರ ಮೂಲಸ್ಥಾನ ಯಾವುದು ಎಂಬ ಪ್ರಶ್ನೆಗೂ ಉತ್ತರ ಸಿಗುತ್ತದೆ. ಅಂತಹ ಪುಣ್ಯ-ಪವಿತ್ರ ಭೂಮಿಯಲ್ಲಿ ದೇಯಿ ಬೈದೈತಿ


Read More »

” ನವ ಕರ್ನಾಟಕ ರತ್ನ ” ಪ್ರಶಸ್ತಿಗೆ ಸತೀಶ್ ಕುಮಾರ್ ಬಜಾಲ್ ಆಯ್ಕೆ


Share       ಬೆಂಗಳೂರು: ವಿದೇಶಗಳಲ್ಲಿ ನೆಲೆಸಿರುವ ಕನ್ನಡಿಗರನ್ನು ಒಂದುಗೂಡಿಸುವ ಉದ್ದೇಶದಿಂದ ಇದೇ ಮೊದಲ ಬಾರಿಗೆ ಅ. 4 ಮತ್ತು 5ರಂದು ಬೆಂಗಳೂರಿನಲ್ಲಿ ಅನಿವಾಸಿ ಕನ್ನಡಿಗರ ಸಮ್ಮೇಳನವನ್ನು ಆಯೋಜಿಸಲಾಗಿದ್ದು, ಬೆಂಗಳೂರಿನ ರವೀಂದ್ರ ಕಲಾ ಕ್ಷೇತ್ರದಲ್ಲಿ ನಡೆಯಲಿದ್ದು. ಅಂದು


Read More »

ಊದುಪೂಜೆಯಲ್ಲಿ ಪಿಲಿಯಾವೇಶ ಎಷ್ಟು ಸರಿ?


Share       ಇನ್ನು ಪಿಲಿಕೋಲ ನೋಡಲು ವರ್ಷಕ್ಕೊಮ್ಮೆ ಕಾಪುವಿಗೆ ಹೋಗಬೇಕಾಗಿಲ್ಲ. ಅಷ್ಟಮಿ, ಚೌತಿ, ಮಾರ್ನೆಮಿಗಳಲ್ಲಿ ನಮ್ಮೂರಿನಲ್ಲೂ ಪಿಲಿಕೋಲಗಳು ಆರಂಭವಾಗಿವೆ. ಹಿಂದೆ ಅಪೂರ್ವವಾಗಿ ಎಲ್ಲಾದರೂ ಒಂದು ಕಡೆ ಊದುಹಾಕುವಾಗ ವೇಷಸಂಕಲ್ಪಿಸಿಕೊಂಡವನಿಗೆ ಆವೇಶ ಆಗುವುದಿತ್ತು. ಹೀಗೆ ಆವೇಶವಾಗುವುದು ಶುಭಲಕ್ಷಣ


Read More »

ದುಬೈ: ದುಬೈ ಬಿಲ್ಲವಸ್ ಫ್ಯಾಮಿಲಿ ವತಿಯಿಂದ ನಡೆದ 170 ನೇ ಬ್ರಹ್ಮ ಶ್ರೀ ನಾರಾಯಣ ಗುರುಜಯಂತಿ


Share       ದುಬೈ: ಬಿಲ್ಲವಸ್ ಫ್ಯಾಮಿಲಿ ದುಬೈ ಇವರ ವತಿಯಿಂದ ಬ್ರಹ್ಮ ಶ್ರೀ ನಾರಾಯಣ ಗುರುವರ್ಯರ 170 ನೇ ಗುರು ಜಯಂತಿಯು ದುಬೈ ನ ಗ್ಲೆಂಡಲೆ ಇಂಟರ್ ನ್ಯಾಷನಲ್ ಸ್ಕೂಲ್ ನಲ್ಲಿ  ಭಾನುವಾರದಂದು ವಿಜೃಂಭಣೆಯಿಂದ ನಡೆಯಿತು.


Read More »

ಸಾಲುಮರದ ತಿಮ್ಮಕ್ಕ ಪ್ರಶಸ್ತಿ ನ್ಯಾಷನಲ್ ಗ್ರೀನರಿ ಬಾಲ ಪುರಸ್ಕಾರ 2024 ಪ್ರಶಸ್ತಿಗೆ ಆಯ್ಕೆಯಾದ ಧನ್ವಿ ಪೂಜಾರಿ


Share       ಮರವಂತೆ : ಈ ಬಾರಿಯ ಸಾಲುಮರದ ತಿಮ್ಮಕ್ಕ ನ್ಯಾಷನಲ್ ಗ್ರೀನರಿ ಬಾಲ ಪುರಸ್ಕಾರ 2024 ಪ್ರಶಸ್ತಿಗೆ ಮರವಂತೆಯ ಧನ್ವಿ ಪೂಜಾರಿ ಆಯ್ಕೆಯಾಗಿದ್ದಾರೆ. ಮರವಂತೆಯ ಜ್ಯೋತಿ ಚಂದ್ರಶೇಖರ ಪೂಜಾರಿ ಇವರ ಪುತ್ರಿಯಾಗಿದ್ದು ಪ್ರಸ್ತುತ ಜನತಾ


Read More »