ಬಿಕ್ಕಳಿಕೆ ಬಂದಾಗ ಈ ಸರಳ ಟೆಕ್ನಿಕ್ ಟ್ರೈ ಮಾಡಿ ನೋಡಿ, ತಕ್ಷಣ ಕಡಿಮೆಯಾಗುತ್ತೆ

ಬಿಕ್ಕಳಿಕೆ ಯಾರಿಗೆ ಬರಲ್ಲ ಹೇಳಿ? ಅದರಲ್ಲಿಯೂ ಈ ಬಿಕ್ಕಳಿಕೆ ಯಾರನ್ನೂ ಹೇಳಿ, ಕೇಳಿ ಬರುವಂತದ್ದಲ್ಲ. ಆದರೆ ಅವು ಬಂದಾಗ ಎಲ್ಲರ ಮುಂದೆ ಮುಜುಗರ ಆಗುವುದು ಮಾತ್ರ ತಪ್ಪುವುದಿಲ್ಲ. ಏಕೆಂದರೆ ಇದು ಯಾವಾಗ ಬೇಕಾದರೂ ಬರಬಹುದು, ಜೊತೆಗೆ ಇದು ಬಂದಾಗ ಸುತ್ತಮುತ್ತಲಿರುವವರು ನಮ್ಮನ್ನು ನೋಡುವುದರಿಂದ ಸಹಜವಾಗಿ ಏನು ಮಾಡಬೇಕು ಎಂಬುದೇ ತಿಳಿಯುವುದಿಲ್ಲ. ಕೆಲವರು ಬಿಕ್ಕಳಿಕೆ ಬಂದಾಗ ತಕ್ಷಣ ನೀರು ಕುಡಿಯುತ್ತಾರೆ, ಇನ್ನು ಕೆಲವರು ಸಕ್ಕರೆಯನ್ನು ಬಾಯಿಗೆ ಹಾಕಿಕೊಳ್ಳುತ್ತಾರೆ. ಹಗಲಿನಲ್ಲಿ ಈ ರೀತಿ ಬಿಕ್ಕಳಿಕೆ ಬಂದರೆ ಪರವಾಗಿಲ್ಲ. ಆದರೆ ರಾತ್ರಿ […]
ಭಾರತೀಯ ಸೇನೆಯಲ್ಲಿ ಲೆಫ್ಟಿನೆಂಟ್ ಗೆಜೆಟೆಡ್ ಅಧಿಕಾರಿಯಾಗಿ ಆಯ್ಕೆಯಾದ ಸುದೀಪ್ ರಾಜ್ ಮನೆಗೆ ಸೌದಿ ಬಿಲ್ಲಾವಾಸ್ ಅಧ್ಯಕ್ಷರಾದ ಸತೀಶ್ ಕುಮಾರ್ ಬಜಾಲ್ ಭೇಟಿ

ಮಂಗಳೂರು: ಕೇಂದ್ರ ಲೋಕಸೇವಾ ಆಯೋಗ (UPSC) ನಡೆಸಲಾದ ಪರೀಕ್ಷೆಯಲ್ಲಿ ಲೆಫ್ಟಿನೆಂಟ್ (ವರ್ಗ -1 )ಗೆಜೆಟೆಡ್ ಅಧಿಕಾರಿ ಯಾಗಿ ಆಯ್ಕೆಯಾದ ಮಂಗಳೂರಿನ ಚಿಲಿಂಬಿ ಆದರ್ಶನಗರದ ಸುದೀಪ್ ರಾಜ್ ಅವರ ಮನೆಗೆ ತೆರಳಿ ಸೌದಿ ಬಿಲ್ಲಾವಾಸ್ ಅಧ್ಯಕ್ಷರಾದ ಸತೀಶ್ ಕುಮಾರ್ ಬಜಾಲ್ ಹಾಗೂ ಶ್ರೀ ಕ್ಷೇತ್ರ ಗೆಜ್ಜೆಗಿರಿಯ ಮಾಧ್ಯಮ ವಕ್ತಾರ ರಾಜೇಂದ್ರ ಚಿಲಿಂಬಿಯವರು ಅಭಿನಂದನೆ ಸಲ್ಲಿಸಿದರು. ಈ ಸಂಧರ್ಭದಲ್ಲಿ ಸುದೀಪ್ ರಾಜ್ ತಂದೆ ಶಿವರಾಜ್ ಹಾಗೂ ತಾಯಿ ರಾಜೀವಿ ಉಪಸ್ಥಿತರಿದ್ದರು. ಭಾರತೀಯ ಸೇನೆಯಲ್ಲಿ ಲೆಫ್ಟಿನೆಂಟ್ ಗೆಜೆಟೆಡ್ ಅಧಿಕಾರಿಯಾಗಿ ಸೇವೆ […]
UPSC ನಡೆಸಲಾದ ಪರೀಕ್ಷೆಯಲ್ಲಿ. ಲೆಫ್ಟಿನೆಂಟ್ (ವರ್ಗ -1 )ಗೆಜೆಟೆಡ್ ಅಧಿಕಾರಿ ಯಾಗಿ ಸುದೀಪ್ ರಾಜ್ ಆಯ್ಕೆ

ಕೇಂದ್ರ ಲೋಕಸೇವಾ ಆಯೋಗ (UPSC), ಮೇ 23, 2025 ರಂದು ಕಂಬೈನ್ಡ್ ಡಿಫೆನ್ಸ್ ಸರ್ವೀಸಸ್ (CDS) ಪರೀಕ್ಷೆ (II), 2024 ರ ಅಂತಿಮ ಮೆರಿಟ್ ಪಟ್ಟಿಯನ್ನು ಬಿಡುಗಡೆ ಮಾಡಿದೆ, ಅದರಲ್ಲಿ ನಮ್ಮ ಬಿಲ್ಲವ ಸಮಾಜದ ಸುದೀಪ್ ರಾಜ್ ಆಯ್ಕೆಯಾಗಿದ್ದು ಹೆಮ್ಮೆಯ ವಿಚಾರ. 510 ಪುರುಷರು ಮತ್ತು 64 ಮಹಿಳೆಯರನ್ನು ಒಳಗೊಂಡ ಒಟ್ಟು 574 ಅಭ್ಯರ್ಥಿಗಳು ಚೆನ್ನೈನ ಆಫೀಸರ್ಸ್ ಟ್ರೈನಿಂಗ್ ಅಕಾಡೆಮಿ (OTA) ಗೆ ಪ್ರವೇಶ ಪಡೆಯಲು ಅರ್ಹತೆ ಪಡೆದಿದ್ದಾರೆ. ಸೇಂಟ್ ಅಲೋಶಿಯಸ್ ವಿಶ್ವವಿದ್ಯಾಲಯದಲ್ಲಿ ಬಿ.ಎ. ಇತಿಹಾಸ ಮತ್ತು […]
ಮೊಂಟೆಪದವು ಕೋಡಿಯಲ್ಲಿ ಗುಡ್ಡ ಕುಸಿತ; ಪದ್ಮರಾಜ್ ಆರ್.ಪೂಜಾರಿ ಭೇಟಿ ಮಾಡಿ ಸಾಂತ್ವನ

ಮಂಗಳೂರು: ಕರ್ನಾಟಕದ ಕರಾವಳಿ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಭಾರೀ ಮಳೆಯಾಗುತ್ತಿದ್ದು, ಭೂಕುಸಿತ ಸಂಭವಿಸಿ ಮೂವರು ಸಾವನ್ನಪ್ಪಿದ್ದಾರೆ. ಒಬ್ಬ ಮಹಿಳೆ ಮತ್ತು ಆಕೆಯ ಮಗುವನ್ನು ಅವಶೇಷಗಳಿಂದ ರಕ್ಷಿಸಿ, ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅವರ ಸ್ಥಿತಿ ಗಂಭೀರವಾಗಿದೆ ಎನ್ನಲಾಗಿದೆ, ವಿಪರೀತವಾಗಿ ಸುರಿದ ಭಾರಿ ಮಳೆಗೆ ಉಳ್ಳಾಲ ತಾಲೂಕಿನ ಮೊಂಟೆಪದವಿನಲ್ಲಿ ಸೀತಾರಾಮ ಪೂಜಾರಿಯವರ ಮನೆ ಕುಸಿದು ಬಿದ್ದು ಮಣ್ಣಿನಡಿ ಸಿಲುಕಿ ಅವರ ಇಬ್ಬರು ಕಂದಮ್ಮಗಳು, ತಾಯಿ ಮೃತಪಟ್ಟಿದ್ದು, ಸೀತಾರಾಮರವರ ತಂದೆ ಹಾಗು ಪತ್ನಿ ಗಂಭೀರ ಗಾಯಗೊಂಡಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಅವರನ್ನು ಪದ್ಮರಾಜ್ […]
ಶಾಸಕ ಸುನಿಲ್ ಕುಮಾರ್ ಸಹೋದರ ಸುಜಿತ್ ಕುಮಾರ್ ನಿಧನ

ಕಾರ್ಕಳ: ಕಾರ್ಕಳ ಶಾಸಕ ವಿ.ಸುನಿಲ್ ಕುಮಾರ್ ಸಹೋದರ ಸುಜಿತ್ ಕುಮಾರ್ (53) ಶುಕ್ರವಾರ (ಮೇ 23) ಅನಾರೋಗ್ಯದಿಂದ ನಿಧನರಾಗಿದ್ದಾರೆ. ಅಂತಿಮ ವಿಧಿ ವಿಧಾನವು ಇಂದು ಶುಕ್ರವಾರ ನೆಕ್ಲಾಜೆ ಮನೆಯಲ್ಲಿ ಸಂಜೆ 6 ಗಂಟೆಗೆ ನೆರವೇರಲಿದೆ. ಕರಿಯಕಲ್ಲು ಹಿಂದೂ ರುದ್ರ ಭೂಮಿಯಲ್ಲಿ ಅಂತಿಮ ಸಂಸ್ಕಾರ ನಡೆಯಲಿರುವುದು ಎಂದು ಕುಟುಂಬ ಮೂಲಗಳು ತಿಳಿಸಿವೆ. ಮೃತರು ಪತ್ನಿ ಹಾಗೂ ಓರ್ವ ಪುತ್ರಿಯನ್ನು ಅಗಲಿದ್ದಾರೆ.
ಅಂತಾರಾಷ್ಟ್ರೀಯ ಆರ್ಯಭಟ ಪ್ರಶಸ್ತಿಗೆ ಪುಣೆಯ ಸಮಾಜಸೇವಕ “ವಿಶ್ವನಾಥ ಪೂಜಾರಿ ಕಡ್ತಲ’ ಆಯ್ಕೆ

ಪುಣೆ :ಪುಣೆ ಬಿಲ್ಲವ ಸಮಾಜ ಸೇವಾ ಸಂಘ ಇದರ ಅಧ್ಯಕ್ಷ ,ಸಾಮಾಜಿಕ ಚಟುವಟಿಕೆಗಳಲ್ಲಿ ಸದಾ ಗುರುತಿಸಿಕೊಂಡಿರುವ ವಿಶ್ವನಾಥ ಪೂಜಾರಿ ಕಡ್ತಲ ಇವರು ಪ್ರತಿಷ್ಠಿತ ಅಂತಾರಾಷ್ಟ್ರೀಯ ಆರ್ಯಭಟ ಪ್ರಶಸ್ತಿ -2025 ಗೆ ಆಯ್ಕೆಯಾಗಿರುತ್ತಾರೆ . ಬೆಂಗಳೂರಿನ” ಆರ್ಯಭಟ ಕಲ್ಚರಲ್ ಆರ್ಗನೈಶೇಶನ್ “ಕೊಡಮಾಡುವ ಈ ಪ್ರಶಸ್ತಿಯನ್ನು ವಿಶ್ವನಾಥ ಪೂಜಾರಿ ಕಡ್ತಲ ಇವರ ಸಾಮಾಜಿಕ ಹಾಗೂ ಧಾರ್ಮಿಕ ಸೇವೆಯನ್ನು ಗುರುತಿಸಿ ನೀಡಲಾಗಿದೆ . ಮೇ 22 ರಂದು ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ಪ್ರಶಸ್ತಿ ಪ್ರದಾನ ಸಮಾರಂಭವು ಜರಗಲಿದೆ . ಸಂಸ್ಥೆಯು ಪ್ರತೀ […]
ಅಯೋಧ್ಯೆಯಲ್ಲಿ ಮಹಾಮಂಡಲೇಶ್ಚರ 1008 ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ ಮುಂದಾಳತ್ವದಲ್ಲಿ 4 ಅಂತಸ್ತಿನ ಶಾಖಾ ಮಠಕ್ಕೆ ಭೂಮಿ ಪೂಜೆ,ಶಿಲಾನ್ಯಾಸ

ಅಯೋಧ್ಯೆಯಲ್ಲಿ ಮಹಾಮಂಡಲೇಶ್ಚರ 1008 ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ ಮುಂದಾಳತ್ವದಲ್ಲಿ 4 ಅಂತಸ್ತಿನ ಶಾಖಾ ಮಠಕ್ಕೆ ಭೂಮಿ ಪೂಜೆ,ಶಿಲಾನ್ಯಾಸ ಯತೀವರ್ಯರು, ಸಚಿವ ಮಾಂಕಳ್ ವೈದ್ಯ, ಶಾಸಕ ಹರೀಶ್ ಪೂಂಜ, ಸೇರಿದಂತೆ ಬೆಳ್ತಂಗಡಿಯಿಂದ ಸುಮಾರು 200 ಕ್ಕೂ ಹೆಚ್ಚು ಸ್ವಾಮೀಜಿಯವರ ಭಕ್ತವೃಂದ ಭಾಗಿ ರೂ 15 ಕೋಟಿ ವೆಚ್ಚದಲ್ಲಿ, 35 ಸಾವಿರ ಚದರಡಿಯ 4 ಅಂತಸ್ತಿನ ಭವನ,ಸತ್ಸಂಗ ಹಾಲ್,ಮೀಟಿಂಗ್ ಹಾಲ್,ಸ್ವಾಮೀಜಿಯ ಕೊಠಡಿ,ವಿವಿಐಪಿ,ವಿಐಪಿ ರೂಮ್,ಲಿಪ್ಟ್ ಸೌಲಭ್ಯ, ಮಲ್ಟಿ ಪರ್ಪಸ್ ಹಾಲ್ ನಿರ್ಮಾಣ ಬೆಳ್ತಂಗಡಿ: ವಿಶ್ವದ ಕೋಟ್ಯಾಂತರ ಭಕ್ತರ ಶ್ರದ್ದಾಕೇಂದ್ರ ಶ್ರೀರಾಮ ಜನ್ಮ […]
ಬೈದ್ಯೆರುಗಳಲ್ಲಿ ಲೀನವಾದ ದರ್ಶನ ಪಾತ್ರಿ ಶ್ರೀ ಸುರೇಶ್ ಪೂಜಾರಿ

ಪ್ರಸಿದ್ದ ಬೈದ್ಯೇರುಗಳ ಪಾತ್ರಿಯಾದ ಶ್ರೀ ಸುರೇಶ್ ಪೂಜಾರಿಯವರು ಅಲ್ಪಕಾಲದ ಅಸೌಖ್ಯದ ಕಾರಣ ಇಂದು ಭಗವಂತನ ಪಾದ ಸೇರಿದರು. ಕಳತ್ತೂರು ಹಿರಿಯಣ್ಣ ಪೂಜಾರಿ ಹಾಗೂ ಶ್ರೀಮತಿ ಲೀಲಾವತಿ ಪೂಜಾರಿಯವರ ಮಗನಾದ ಶ್ರೀ ಸುರೇಶ್ ಪೂಜಾರಿ ಪರಂಪರೆಯ ಕೌಟುಂಬಿಕ ಹಿನ್ನಲೆಯ ಬೈದ್ಯೇರುಗಳ ದರ್ಶನ ಪಾತ್ರಿಯಾಗಿ ಪ್ರಸಿದ್ದಿಯನ್ನು ಪಡೆದವರು. ಉಡುಪಿ ಜಿಲ್ಲೆಯ ಹಲವಾರು ಪ್ರಸಿದ್ದ ಗರೋಡಿಗಳಲ್ಲಿ ಸೇವೆ ಸಲ್ಲಿದವರು.ಪರಂಪರೆ, ಸಂಪ್ರದಾಯ, ಕಟ್ಟುಕಟ್ಟಲೆಗಳಿಗೆ ವಿಶೇಷ ಒತ್ತನ್ನು ನೀಡುತಿದ್ದ ಶ್ರೀ ಸುರೇಶ್ ಪೂಜಾರಿಯವರು ಬೈದ್ಯೇರುಗಳ ಸೇವೆಯನ್ನು ಕಾಯ ವಾಚಾ ಮನಪೂರ್ವಕವಾಗಿ ನೇರವೇರಿಸಿಕೊಂಡು ಬಂದವರು. […]
ಭಾರತ್ ಬ್ಯಾಂಕ್ನ ಕಾರ್ಯಾಧ್ಯಕ್ಷರಾದ ಸೂರ್ಯಕಾಂತ್ ಜಯ ಸುವರ್ಣರಿಗೆ ಐವತ್ತರ ಸಂಭ್ರಮ

ಸಮಾಜದಲ್ಲಿ ಮಹತ್ವದ ಜವಾಬ್ದಾರಿಯನ್ನು ವಹಿಸಿಕೊಂಡಿರುವ ವ್ಯಕ್ತಿ ಸಾಮಾಜಿಕವಾಗಿ ಮತ್ತು ಭಾವನಾತ್ಮಕವಾಗಿ ಸಮತೋಲನವನ್ನು ಸಾಧಿಸಿದರೆ ಮಾತ್ರ ಅವನು ಯಶಸ್ಸಿನ ಮೆಟ್ಟಿಲೇರಲು ಸಾಧ್ಯ. ‘ಸುಖ-ದುಃಖ, ಲಾಭ -ನಷ್ಟ ಸೋಲು-ಗೆಲುವನ್ನು ಸಮಾನವಾಗಿ ತೆಗೆದುಕೊಳ್ಳುವವನೇ ನಿಜವಾದ ಸುಖಿ’ ಎಂಬ ಭಗವದ್ಗೀತೆಯ ಸಂದೇಶವೂ ಇದೇ ಅರ್ಥವನ್ನು ಸೂಚಿಸುತ್ತದೆ. ಬದುಕಿನಲ್ಲಿ ಬಂದೆರಗುವ ಸನ್ನಿವೇಶ ಮತ್ತು ಸವಾಲುಗಳನ್ನು ನಗುಮುಖದಿಂದ ಎದುರಿಸಲು ಆಲೋಚನಾ ಕ್ರಮಗಳು ಸಕಾರಾತ್ಮಕವಾಗಿದ್ದರೆ ಮಾತ್ರ ಸಾಧ್ಯವಾಗುತ್ತದೆ. ಅಂಥವರ ವ್ಯಕ್ತಿತ್ವ ಎಲ್ಲರಿಗಿಂತಲೂ ಉನ್ನತವಾಗಿದ್ದು ಅವರ ನಡೆಯೂ ಇತರರಿಗೆ ಆದರ್ಶವಾಗಿರುತ್ತದೆ. ಈ ಗುಣವೇ ಅವರನ್ನು ನಾಯಕತ್ವದ ಹಾದಿಯಲ್ಲಿ ಮುನ್ನಡೆಸುತ್ತದೆ. […]
ಮೂಡಬಿದಿರಿಯಲ್ಲೊಂದು 75 ಸಂಭ್ರಮ ಕ್ಕೆ ಸ್ನೇಹ ಸೇತುವಾದ ಸಿಂಗಾಪೂರ ಬಿಲ್ಲವ ಅಸೋಸಿಯೇಷನ್

ಮೂಡಬಿದಿರಿಯಿಂದ ಸಿಂಗಪೂರಿಗೆ 🇸🇬: ಜಾಗತಿಕ ಸಮುದಾಯ ಸಂಬಂಧಗಳ ಬಲವರ್ಧನೆ: ಜಾಗತಿಕ ಸಮುದಾಯ ಸಂಬಂಧಗಳನ್ನು ಬಲಪಡಿಸುವ ದಿಕ್ಕಿನಲ್ಲಿ ಮಹತ್ವಪೂರ್ಣ ಹೆಜ್ಜೆವಹಿಸಿ, ಬಿಲ್ಲವ ಅಸೋಸಿಯೇಷನ್ ಸಿಂಗಪೂರಿನ ಸ್ಥಾಪಕರಾದ ಅಶ್ವಿತ್ ಬಂಗೇರಾ ಅವರು, ಬಿಲ್ಲವ ಅಸೋಸಿಯೇಷನ್ ಮೂಡಬಿದಿರಿಯ ಅಧ್ಯಕ್ಷರಾದ ಸುರೇಶ್ ಕೆ ಪೂಜಾರಿ ಅವರನ್ನು ಭೇಟಿಯಾಗಿ ಮೂಡಬಿದಿರಿ ಅಸೋಸಿಯೇಷನ್ನ 75ನೇ ವರ್ಷಾಚರಣೆಯ ಸಂಭ್ರಮಾಚರಣೆ ಬಗ್ಗೆ ಚರ್ಚಿಸಿದರು. ಈ ಐತಿಹಾಸಿಕ ಕಾರ್ಯಕ್ರಮವು 2025ರ ಡಿಸೆಂಬರ್ನಲ್ಲಿ ನಡೆಯಲಿದ್ದು, ಸಮುದಾಯ ಸೇವೆ, ಏಕತೆ ಮತ್ತು ಸಾಂಸ್ಕೃತಿಕ ಸಂರಕ್ಷಣೆಯ 7 ದಶಕಗಳಿಗಿಂತ ಹೆಚ್ಚು ಕಾಲದ ಪ್ರಯಾಣವನ್ನು ಚಿಹ್ನಿಸುತ್ತದೆ. […]