TOP STORIES:

FOLLOW US

ಸಂಸದ ಕೋಟ ಶ್ರೀನಿವಾಸ ಪೂಜಾರಿಯವರಿಗೆ ಮಾತೃ ವಿಯೋಗ

ಸಂಸದ ಕೋಟ ಶ್ರೀನಿವಾಸ ಪೂಜಾರಿಯವರಿಗೆ ಮಾತೃ ವಿಯೋಗ ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ನೂತನ ಸಂಸದ ಕೋಟ ಶ್ರೀನಿವಾಸ ಪೂಜಾರಿಯವರಿಗೆ ಮಾತೃ ವಿಯೋಗ. ಕೋಟ ಶ್ರೀನಿವಾಸ ಪೂಜಾರಿ ಅವರ ಮಾತೃಶ್ರೀ ಶ್ರೀಮತಿ ಲಚ್ಚಿ ಪೂಜಾರಿ ಅವರು ಇಂದು ಮಧ್ಯಾಹ್ನ ವಿಧಿವಶರಾಗಿದ್ದಾರೆ. ವಯೋ ಸಹಜ ಕಾರಣದಿಂದಾಗಿ ಸುಮಾರು 95 ವರ್ಷ ವಯಸ್ಸಿನ ಕೋಟ ಶ್ರೀನಿವಾಸ ಪೂಜಾರಿಯವರ ತಾಯಿ ಇಂದು ಇಹಲೋಕ ತ್ಯಜಿಸಿದ್ದಾರೆ.

ಕಾಸರಗೋಡು ಜಿಲ್ಲಾ ಕನ್ನಡ ಪತ್ರಕರ್ತರ ಕ್ಷೇಮಭಿವೃದ್ಧಿ ಸಂಘದ ದತ್ತಿನಿಧಿ ಪ್ರಶಸ್ತಿಗೆ ಮುಂಬೈಯ ನಿಷ್ಠಾವಂತ ಪತ್ರಕರ್ತ ನವೀನ್ ಕೆ ಇನ್ನ ಆಯ್ಕೆ

ಕಾಸರಗೋಡು ಜಿಲ್ಲಾ ಕನ್ನಡ ಪತ್ರಕರ್ತರ ಕ್ಷೇಮಾಭಿವೃದ್ಧಿ ಸಂಘವು, ಕಳೆದ ಎರಡು ದಶಕಗಳಿಂದ ಕನ್ನಡ ಭಾಷೆ, ಸಂಸ್ಕೃತಿ, ಕಲೆಗಳ ಉಳಿವಿಗಾಗಿ ಶ್ರಮಿಸುತ್ತಿದೆ. ಸಂಘವು ಪ್ರತಿ ವರ್ಷ ದತ್ತಿನಿಧಿ ಪ್ರಶಸ್ತಿಯನ್ನು ಪ್ರಧಾನಿಸುತ್ತಿದ್ದು ಈ ಬಾರಿಯ ನ್ಯಾಯವಾದಿ ಮಹಮ್ಮದ್ ಇಬ್ರಾಹಿಂ ಪಾರ ಸ್ವರಣಾರ್ಥ, ನ್ಯಾಯವಾದಿ ಇಬ್ರಾಹಿಂ ಖಲೀಲ್ ಅರಿಮಲ ದುಬೈ ಅವರು ನೀಡುವ ದತ್ತಿನಿಧಿ ಪ್ರಶಸ್ತಿಗೆ ಮುಂಬಯಿಯ ಪ್ರಾಮಾಣಿಕ, ನಿಷ್ಠಾವಂತ ಪತ್ರಕರ್ತ ನವೀನ್ ಕೆ ಇನ್ನ ಆಯ್ಕೆಯಾಗಿದ್ದಾರೆ. ಪ್ರಶಸ್ತಿ ಪ್ರಧಾನ ಸಮಾರಂಭ ಜುಲೈ 13ರಂದು ಬೆಳ್ಳಿಗ್ಗೆ, ಕಾಸರಗೋಡು ಜಿಲ್ಲೆಯ ಸೀತಾಂಗೋಳಿ ಲಯನ್ಸ್ […]

ಕದ್ರಿ ಮಂಜುನಾಥ ದೇವಸ್ಥಾನ,ಪಣಂಬೂರು ನಂದನೇಶ್ವರ ದೇವಸ್ಥಾನಕ್ಕೂ ಬಿಲ್ಲವರಿಗೂ ಪ್ರಾಚೀನ ನಂಟು

ಕದ್ರಿ ಮಂಜುನಾಥ ದೇವಸ್ಥಾನ,ಪಣಂಬೂರು ನಂದನೇಶ್ವರ ದೇವಸ್ಥಾನಕ್ಕೂ ಬಿಲ್ಲವರಿಗೂ  ಪ್ರಾಚೀನ ನಂಟು ಬಿಲ್ಲವ ಸಮಾಜದ ಪ್ರಮುಖರಾದ ಅರಸಪ್ಪನವರು 1865ರಲ್ಲಿ ಕದ್ರಿ ಮಂಜುನಾಥ ದೇವಸ್ಥಾನಕ್ಕೆ ಬಿಲ್ಲವರಿಗೆ ಪ್ರವೇಶ ಬೇಕೆಂದು ನ್ಯಾಯಾಲಯದಲ್ಲಿ ದಾವೆ ಹೂಡಿದ್ದರು ಆದರೆ ಪ್ರಯೋಜನ ಆಗಲಿಲ್ಲ. ಈ ನೆಲವನ್ನು ಆಳಿದ ಬಿಲ್ಲವರಿಗೂ ಕದ್ರಿ ದೇವಸ್ಥಾನಕ್ಕೂ  ಪ್ರಾಚೀನ ನಂಟು. ಈ ದೇವಸ್ಥಾನದ ಬದಿಯಲ್ಲೇ ಪೂರ್ವ ದಿಕ್ಕಿನಲ್ಲಿ ಬಿಲ್ಲವರ ಮನೆ ಇದ್ದು, ಆ ಮನೆತನದವರೇ ಇಲ್ಲಿಯ ದುರ್ಗಾದೇವಿಗೆ ವಜ್ರದ ಮೂಗುತಿಯನ್ನು ಮತ್ತು ಮಂಜುನಾಥನಿಗೆ ಕಂಚಿನ ದೀಪದಾನಿಯನ್ನು ಹರಕೆಯಾಗಿ ಒಪ್ಪಿಸಿದರೆಂದು ಐತಿಹ್ಯಗಳ ಉಲ್ಲೇಖವಿದೆ. […]

ಕೋಟ ಶ್ರೀನಿವಾಸ ಪೂಜಾರಿಯಿಂದ ತೆರವಾದ ವಿಧಾನ ಪರಿಷತ್ ಸ್ಥಾನಕ್ಕೆ ಬಿಜೆಪಿಯಲ್ಲಿ ಭಾರೀ ಪೈಪೋಟಿ: ಗೀತಾಂಜಲಿ ಸುವರ್ಣ ಹೆಸರು ಮುಂಚೂಣಿಗೆ

ಸ್ಥಳೀಯ ಸಂಸ್ಥೆಗಳಿಂದ ಆಯ್ಕೆಯಾದ ಕೋಟ ಅವರ ಸ್ಥಾನಕ್ಕೆ ಯಾರು ಎಂಬ ಪ್ರಶ್ನೆ ಉದ್ಭವ ವಾಗುತ್ತಲೇ ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಪೈಪೋಟಿ ಶುರುವಾಗಿದ್ದು, ಜಾತಿ ಲೆಕ್ಕಾಚಾರ, ಪಕ್ಷದಲ್ಲಿನ ಹಿರಿತನ ಎಲ್ಲವೂ ಗಣನೆಗೆ ತೆಗೆದುಕೊಂಡು ತೆರೆಮರೆಯಲ್ಲಿ ಕಸರತ್ತು ನಡೆಯುತ್ತಿದೆ. ಈ ನಡುವೆ ಸಾರ್ವಜನಿಕ ವಲಯದಲ್ಲಿ ಸದಾ ಸಮಾಜ ಸೇವೆಯಲ್ಲಿ ತಮನ್ನು ತಾವು ತೊಡಗಿಸಿಕೊಳ್ಳುವ ಬಿಲ್ಲವ ಸಮುದಾಯದ ಶ್ರೀಮತಿ ಗೀತಾಂಜಲಿ ಸುವರ್ಣ ಅವರ ಹೆಸರು ಮುಂಚೂಣಿಯಲ್ಲಿ ಕೇಳಿಬರುತ್ತಿದೆ. ಇವರು ರಾಜಕೀಯವಾಗಿ 2 ಬಾರಿ ಪಡುಬಿದ್ರಿ ಮತ್ತು ಕುರ್ಕಾಲುವಿನ ಜಿಲ್ಲಾ […]

ಫ್ರೆಂಡ್ಸ್ ಸುರತ್ಕಲ್ ತುಳುನಾಡ ಬಿರುವೆರ್ ರಿ ವತಿಯಿಂದ 5ನೇ ವರ್ಷದ ಪುಸ್ತಕ ವಿತರಣಾ ಕಾರ್ಯಕ್ರಮ

ಫ್ರೆಂಡ್ಸ್ ಸುರತ್ಕಲ್ ತುಳುನಾಡ ಬಿರುವೆರ್ ಸಂಘಟನೆಯ ವತಿಯಿಂದ ಇಂದು ವೆಂಕಟರಮಣ ಹಿರಿಯ ಪ್ರಾಥಮಿಕ ಶಾಲೆ ಕುಳಾಯಿ 5ನೇ ವರ್ಷದ ಪುಸ್ತಕ ವಿತರಣೆ ಕಾರ್ಯಕ್ರಮವು ಅದ್ದೂರಿಯಾಗಿ ನಡೆಯಿತು. ಹಿಂದು ಹಿಂದುಗಳನ್ನೇ ತುಳಿದು ಬಡಿದಾಡಿಕೊಳ್ಳುತ್ತಿರುವ ಈ ಸಂದರ್ಭದಲ್ಲಿ ಸಮಾಜಕ್ಕೆ ತನ್ನಿಂದೆನಾದರೂ ಸಹಾಯ ಹಸ್ತವನ್ನು ನೀಡ ಬೇಕೆನ್ನುವ ಸದುದ್ದೇಶದಿಂದ ಹುಟ್ಟಿ ಕೊಂಡಿರುವ ಸಂಘಟನೆ ಫ್ರೆಂಡ್ಸ್ ಸುರತ್ಕಲ್ ತುಳುನಾಡ ಬಿರುವೆರ್ 5ವರ್ಷದಿಂದ ನಿರಂತರ 400ಮಕ್ಕಳಿಗೆ ಪುಸ್ತಕ ವಿತರಣೆ ನೀಡುತ್ತಿರುವ ನಮ್ಮ ಸಂಸ್ಥೆಯು ಈ ವರ್ಷ 500ಮಂದಿ ವಿದ್ಯಾರ್ಥಿಗಳಿಗೆ ಪುಸ್ತಕ ವಿತರಿಸುವ ಮೂಲಕ ಹೊಸ […]

ಬಿರುವೆರ್ ಕುಡ್ಲ-ಫ್ರೆಂಡ್ಸ್ ಬಳ್ಳಾಲ್‍ಬಾಗ್ 5 ಕುಟುಂಬಗಳಿಗೆ 1.50 ಲಕ್ಷ ರೂ ವೈದ್ಯಕೀಯ ನೆರವು

ಬಿರುವೆರ್ ಕುಡ್ಲ-ಫ್ರೆಂಡ್ಸ್  ಬಳ್ಳಾಲ್‍ಬಾಗ್ 5 ಕುಟುಂಬಗಳಿಗೆ ವೈದ್ಯಕೀಯ ನೆರವು ಕುದ್ರೋಳಿ,ಜೂ.1: ಉದಯ ಪೂಜಾರಿ ಬಳ್ಳಾಲ್ ಬಾಗ್ ನೇತೃತ್ವದಲ್ಲಿ ಫ್ರೆಂಡ್ಸ್ ಬಳ್ಳಾಲ್‍ಬಾಗ್ ,ಬಿರುವೆರ್ ಕುಡ್ಲದ ವತಿಯಿಂದ ಐದು ಅರ್ಹ ಕುಟುಂಬಗಳ ಸದಸ್ಯರ ವೈದ್ಯಕೀಯ ನೆರವಿಗೆ ಆರ್ಥಿಕ ಸಹಾಯ ವಿತರಣೆ ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನದ ವಠಾರದಲ್ಲಿ ಜರಗಿತು. ವಿಧಾನ ಸಭೆಯ ಸಭಾಪತಿ ಯು.ಟಿ  ಖಾದರ್ ಅವರು ಫಲಾನುಭವಿಗಳಿಗೆ ಚೆಕ್ ವಿತರಿಸಿ ಕಳೆದ ಹತ್ತು ವರ್ಷಗಳಿಂದ ಯಾವುದೇ ಜಾತಿ ಮತ ವನ್ನು ನೋಡದೆ ಬಡ ವರ್ಗಕ್ಕೆ ಆರ್ಥಕ ನೆರವು ಹಾಗೂ […]

ಬಹುಮುಖ ಪ್ರತಿಭೆಯ ರಿಷಿತ್ ರಾಜ್ ಗೆ ಸುಳ್ಯ ರಂಗಮನೆ ಪ್ರತಿಭಾ ಪುರಸ್ಕಾರ

ಸುಳ್ಯ ರಂಗಮನೆ ಸಾಂಸ್ಕೃತಿಕ ಕಲಾ ಕೇಂದ್ರ ಆಶ್ರಯದಲ್ಲಿ ನಡೆದ ರಾಜ್ಯಮಟ್ಟದ ಅಭಿನಯ ಪ್ರಧಾನ ಚಿಣ್ಣರಮೇಳದಲ್ಲಿ  ಝೀ ಕನ್ನಡ ಡ್ರಾಮಾ ಜ್ಯೂನಿಯರ್ ಸೀಸನ್ 5 ರ ಫೈನಲಿಸ್ಟ್ ಪ್ರತಿಭಾನ್ವಿತ ಬಾಲಪ್ರತಿಭೆ ರಿಷಿತ್ ರಾಜ್ ವಿಟ್ಲ ಇವರಿಗೆ 2024 ನೇ ಸಾಲಿನ ರಂಗಮನೆ ಪ್ರತಿಭಾ ಪುರಸ್ಕಾರ ನೀಡಿ ಗೌರವಿಸಲಾಯಿತು. ರಂಗಮನೆಯ ಅಧ್ಯಕ್ಷ ಹಾಗೂ ಪ್ರಸಿದ್ಧ ರಂಗ ನಿರ್ದೇಶಕ ಡಾ| ಜೀವನ್ ರಾಂ ಸುಳ್ಯರವರು ಪ್ರಧಾನ ಮಾಡಿದರು. ವೇದಿಕೆಯಲ್ಲಿ ಸುಳ್ಯ ರೋಟರಿ ಕ್ಲಬ್ ಅಧ್ಯಕ್ಷರಾದ ಆನಂದ ಖಂಡಿಗೆ, ರಂಗ ನಿರ್ದೇಶಕರುಗಳಾದ ಸತ್ಯನಾರಾಯಣ […]

ಬಂಟ್ವಾಳ ಬಿ. ಸಿ. ರೋಡಿನ ಬ್ರಹ್ಮ ಶ್ರೀ ನಾರಾಯಣ ಗುರು ವೃತ್ತ ತೆರವು

ಬಂಟ್ವಾಳ: ಬಿ.ಸಿ.ರೋಡಿನ ಪ್ರಮುಖ ಲ್ಯಾಂಡ್ ಮಾರ್ಕ್ ಎನಿಸಿಕೊಂಡಿದ್ದ ಬ್ರಹ್ಮಶ್ರೀ ನಾರಾಯಣ ಗುರು ವೃತ್ತವು ಹೆದ್ದಾರಿ ಅಭಿವೃದ್ಧಿ ಕಾಮಗಾರಿಯ‌ ಹಿನ್ನೆಲೆಯಲ್ಲಿ ತೆರವುಗೊಂಡಿದೆ. ನಾರಾಯಣ ಗುರು ವೃತ್ತದ ನಿರ್ಮಾಣ ಹಾಗೂ ನಿರ್ವಹಣೆಯನ್ನು ಬಂಟ್ವಾಳ ತಾಲೂಕು ಬಿಲ್ಲವ ಸಂಘ ಮಾಡುತ್ತಿದ್ದ ಹಿನ್ನೆಲೆಯಲ್ಲಿ ಸಂಘಕ್ಕೆ ಮಾಹಿತಿ ನೀಡಿ ತೆರವು ಕಾರ್ಯ ನಡೆದಿದೆ. ಮುಂದೆ ಅದೇ ಪ್ರದೇಶದಲ್ಲಿ ಹೊಸ ವೃತ್ತವನ್ನು ನಿರ್ಮಿಸಿ ನಾರಾಯಣ ಗುರುಗಳ ಹೆಸರನ್ನಿಡುವ ಭರವಸೆಯನ್ನೂ ನೀಡಿದ್ದಾರೆ. ಇಂದು ವೃತ್ತವನ್ನು ತೆರವು ಮಾಡುವ ಸಂದರ್ಭದಲ್ಲಿ ಸಂಘದ ಅಧ್ಯಕ್ಷ ಸಂಜೀವ ಪೂಜಾರಿ, ಕಾರ್ಯದರ್ಶಿ ರಮೇಶ್ […]

ಬಿಲ್ಲವ ಸಮಾಜ ಜಿಲ್ಲೆಯಲ್ಲಿ ರಾಜಕೀಯವನ್ನು ಬಿಟ್ಟು ಒಟ್ಟಾಗ ಬೇಕಿದೆ. ಉದಯ ಪೂಜಾರಿ ಬಲ್ಲಾಳ್ ಭಾಗ್.

ಬಿಲ್ಲವ ಸಮಾಜ ಜಿಲ್ಲೆಯಲ್ಲಿ ರಾಜಕೀಯವನ್ನು ಬಿಟ್ಟು ಒಟ್ಟಾಗ ಬೇಕಿದೆ. ಬಿಲ್ಲವರು ಎಲ್ಲವನ್ನೂ ಬಲ್ಲವರು. ಹಿಂದುತ್ವ ಸಿದ್ಧಾಂತವನ್ನು ಅರಿತುಕೊಂಡವರು, ಜಿಲ್ಲೆಯ ಬಹು ಸಂಖ್ಯಾತ ಸಮಾಜ,ರಾಜಕೀಯವನ್ನು ನಿರ್ಧಾರ ಮಾಡುವ ನಿರ್ಣಾಯಕರಾಗಿದ್ದಾರೆ. ಉದಯ ಪೂಜಾರಿಯವನ್ನು ತುಳಿಯುವ ಪ್ರಯತ್ನ ಬಹಳ ಹಿಂದಿನಿಂದ ನಡೆಯುತ್ತಾ ಇದೆ.ಈ ಹುನ್ನಾರಕ್ಕೆ ಉದಯ ಪೂಜಾರಿಯವರು ಯಾವತ್ತೂ ಹೆದರಿಲ್ಲ,ಹೆದರುವ ಜಾಯಮಾನವು ಅವರದಲ್ಲ. ಸುಳ್ಳು ಕೇಸ್ ದಾಖಲಿಸಿ ಮನೋ ಸ್ಟೈರ್ಯ ಕುಗ್ಗಿಸಲು ಪ್ರಯತ್ನ ಪಟ್ಟ ಕೆಲ ಬಿಜೆಪಿಯ ಬೆರಣಿಕೆಯ ನಾಯಕರೇ ನೀವು ನಿಮ್ಮ ಬಗ್ಗೆ ಮೊದಲು ತಿಳಿದು ಕೊಳ್ಳಿ,ಯಾವ ಹುತ್ತದಲ್ಲಿ ಯಾವ […]

ಭಾರತ್ ಬ್ಯಾಂಕ್ ನ ಕಾರ್ಯಾಧ್ಯಕ್ಷರಾದ ಸೂರ್ಯಕಾಂತ್ ಜಯ ಸುವರ್ಣರಿಗೆ ಬೆಸ್ಟ್ ಚೇರ್ಮನ್ ಅವಾರ್ಡ್

ಮಲ್ಟಿ ಸ್ಟೇಟ್ ಸಹಕಾರಿ ಬ್ಯಾಂಕ್ ಗಳಲ್ಲಿ  ಒಂದಾದ ಮುಂಬೈಯ ಪ್ರತಿಷ್ಠಿತ *ಭಾರತ್ ಬ್ಯಾಂಕ್ ನ ಕಾರ್ಯಧ್ಯಕ್ಷರಾದ ಸೂರ್ಯಕಾಂತ್ ಜಯ ಸುವರ್ಣರ ದಕ್ಷ  *ಬೆಸ್ಟ್ ಚೇರ್ಮನ್* ಪ್ರಶಸ್ತಿಯನ್ನು *ಭಾರತ ಸರಕಾರದ ಜನರಲ್ ಮಿನಿಸ್ಟ್ರಿ ಆಫ್ ಕಮ್ಯುನಿಕೇಶನ್ಸ್ ನ ನಿರ್ದೇಶಕ ಶ್ರೀ ಸುಮ್ನೆಶ್ ಜೋಶಿರವರು* ಇಂದು ಮುಂಬಯಿ ನ ಲಲಿತ್ ಗ್ರಾಂಡ್ ಹೋಟೆಲ್ ನ ಸಭಾಗೃಹದಲ್ಲಿ ನಡೆದ ಕೋ ಆಪರೇಟಿವ್ ಬ್ಯಾಂಕ್ ನ ಸಭೆಯಲ್ಲಿ ಹಸ್ತಾಂತರಿಸಿದರು. ಸೂರ್ಯಕಾಂತ್ ಬ್ಯಾಂಕಿನ ಜವಾಬ್ದಾರಿಯನ್ನು ದಕ್ಷತೆಯಿಂದ ನಿರ್ವಹಿಸಿದ ಫಲವಾಗಿ ಅಧಿಕಾರದ ಚುಕ್ಕಾಣಿಯನ್ನು ಹಿಡಿದ ಏಳು […]