ಬೆಳ್ಳಿ ಹಬ್ಬದ ಸಂದರ್ಭದಲ್ಲಿ ನಮ್ಮಕುಡ್ಲ ಗೂಡುದೀಪ ಪಂಥ: ಚಾಲನೆ ನೀಡಿದ ಜನಾರ್ದನ ಪೂಜಾರಿ ದಂಪತಿ
![](https://billavaswarriors.com/wp-content/uploads/2024/10/IMG_1806-1024x665.jpeg)
ನಮ್ಮ ಕುಡ್ಲ ವಾಹಿನಿ ಆಯೋಜಿಸಿದ್ದ 25ನೇ ವರ್ಷದ ಗೂಡುದೀಪ ಸ್ಪರ್ಧೆ ಕುದ್ರೋಳಿ ಶ್ರೀ ಗೋಕರ್ಣನಾಥೇಶ್ವರ ದೇವಸ್ಥಾನದಲ್ಲಿ ನಡೆದಿದೆ. ಕುದ್ರೋಳಿ ಕ್ಷೇತ್ರದ ನವೀಕರಣ ರೂವಾರಿ ಮಾಜಿ ಕೇಂದ್ರ ಸಚಿವ ಬಿ.ಜನಾರ್ಧನ ಪೂಜಾರಿ ಹಾಗೂ ಅವರ ಧರ್ಮಪತ್ನಿ ಮಾಲತಿ ಜೆ ಪೂಜಾರಿ ಅವರು ದೀಪ ಬೆಳಗಿಸುವ ಮೂಲಕ ಗೂಡುದೀಪ ಸ್ಪರ್ಧೆಯನ್ನು ಉದ್ಘಾಟಿಸಿದ್ದಾರೆ. ಗೂಡುದೀಪವನ್ನು ಏರಿಸಿ ದೀಪ ಉರಿಸುವ ಮೂಲಕ ಮಾಜಿ ಸಚಿವ ಕೃಷ್ಣ ಜೆ ಪಾಲೇಮಾರ್ ಅವರು ಚಾಲನೆ ನೀಡಿದ್ದಾರೆ. ದೀಪಾವಳಿಯ ಸಂದೇಶ ನೀಡಿದ ಮಾಜಿ ಸಚಿವ ಕೃಷ್ಣ ಜೆ […]
ಸಂಘಟನೆಗಾಗಿ ಜೀವನವನ್ನೇ ಮುಡಿಪಾಗಿಟ್ಟವರು ಸತ್ಯಜಿತ್ ಸುರತ್ಕಲ್. ಸಂಪೂರ್ಣ ಕಥೆ
![](https://billavaswarriors.com/wp-content/uploads/2024/10/601f3d39-17a8-4d90-bc5e-2f82c0ff0486-1024x628.jpeg)
ಕಟ್ಟರ್ ಹಿಂದೂ ಹೋರಾಟಗಾರ, ಸಂಘಟನೆಯೇ ಕುಟುಂಬ ಎಂದು ಸಂಘಟನೆಗಾಗಿ ಜೀವನವನ್ನೇ ಮುಡಿಪಾಗಿಟ್ಟವರು ಸತ್ಯಜಿತ್ ಸುರತ್ಕಲ್. ಹಿಂದೂ ಧರ್ಮಕ್ಕಾಗಿ ಹೋರಾಟ ನಡೆಸುತ್ತ ಬಂದಿರುವ ಸತ್ಯಜಿತ್ ಸುರತ್ಕಲ್ ಅವರ ಸೇವಾ ಮನೋಭಾವ, ಕಾರ್ಯವೈಖರಿ ಬಗ್ಗೆ ಹೇಳೋದಾದ್ರೆ ಅವರೊಬ್ಬ ನಿಷ್ಠಾವಂತ ಪ್ರಾಮಾಣಿಕ ಜನ ನಾಯಕ ಎಂದರೆ ಅತಿಶಯೋಕ್ತಿ ಖಂಡಿತ ಆಗಲಾರದು. ತನ್ನ 15-16ನೇ ವಯಸ್ಸಿನಲ್ಲಿಯೇ ರಾಷ್ಟ್ರೀಯ ಸ್ವಯಂ ಸೇವಕ ಸಂಘಕ್ಕೆ ತನ್ನ ಅಣ್ಣನ ಮೂಲಕ ಕಾಲಿಟ್ಟ ಸತ್ಯಜಿತ್ ಸುರತ್ಕಲ್, ನಿರಂತರವಾಗಿ ಸಂಘದ ಚಟುವಟಿಕೆಗಳಲ್ಲಿ ಭಾಗವಹಿಸಿದವರು. ತನ್ನ ಕಾಲೇಜು ಶಿಕ್ಷಣದ ಜೊತೆಗೆ ಸಂಘದ […]
ಸರ್ವಸಮಾನತೆಯ ಧಾರ್ಮಿಕ ತೆಯನ್ನು ಸಾಮಾಜಿಕ ನ್ಯಾಯದ ಪಥದಲ್ಲಿ ಮುನ್ನಡೆಸುವಲ್ಲಿ ಮುಂಚೂಣಿಯಲ್ಲಿ ಕೆಲಸ ಮಾಡಿದವರು ಜನಾರ್ಧನ ಪೂಜಾರಿ ಹಾಗೂ ಅವರ ಜೊತೆ ಗಟ್ಟಿಯಾಗಿ ನಿಂತವರು ಪದ್ಮರಾಜ್ ಆರ್
![](https://billavaswarriors.com/wp-content/uploads/2024/10/IMG-20241022-WA0021-1024x1024.jpg)
ಸರ್ವಸಮಾನತೆಯ ಧಾರ್ಮಿಕ ತೆಯನ್ನು ಸಾಮಾಜಿಕ ನ್ಯಾಯದ ಪಥದಲ್ಲಿ ಮುನ್ನಡೆಸುವಲ್ಲಿ ಮುಂಚೂಣಿಯಲ್ಲಿ ಕೆಲಸ ಮಾಡಿದವರು ಜನಾರ್ಧನ ಪೂಜಾರಿ ಹಾಗೂ ಅವರ ಜೊತೆ ಗಟ್ಟಿಯಾಗಿ ನಿಂತವರು ಪದ್ಮರಾಜ್ ಆರ್ ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರ ಬ್ರಹ್ಮ ಶ್ರೀ ನಾರಾಯಣ ಗುರುಗಳಿಂದ ಸ್ಥಾಪಿತವಾದ ಕರ್ನಾಟಕದ ಏಕೈಕ ಕ್ಷೇತ್ರ..ಸರ್ವ ಸಮಾನತೆಯ ಆಧ್ಯಾತ್ಮಿಕ ತೆಯ ಅರಿವು ಮೂಡಿಸುವ ಶ್ರೀ ಕ್ಷೇತ್ರವು ಗುರುದೇವರ ಸಾಮಾಜಿಕ ನ್ಯಾಯದಿಂದ ಕೂಡಿದ ಪರಿವರ್ತನೆಯ ಪಥದಲ್ಲಿ ಜನ ಸಮುದಾಯವನ್ನು ಮುನ್ನಡೆಸುವಲ್ಲಿ ಮುಂಚೂಣಿಯಲ್ಲಿ ನಿಂತು ಕೆಲಸ ಮಾಡಿದವರು ಶ್ರೀ ಬಿ ಜನಾರ್ಧನ ಪೂಜಾರಿ, […]
ಬಂಟ್ವಾಳ: ಬಾಳೆಕಲ್ಲು ಗರಡಿಮನೆ ದೇವಕಿ ನಿಧನ
![](https://billavaswarriors.com/wp-content/uploads/2024/10/Screenshot_2024_1022_104225.jpg)
ಬಂಟ್ವಾಳ: ಬಾಳೆಕಲ್ಲು ಗರಡಿಮನೆ ಶ್ರೀ ಕೊರಗಪ್ಪ ಪೂಜಾರಿಯವರ ಧರ್ಮಪತ್ನಿ ಶ್ರೀಮತಿ ದೇವಕಿ(85 ವ ) ಇವರು 21.10.2024 ನೇ ಸೋಮವಾರ ನಿಧನರಾಗಿದ್ದಾರೆ. ಇತ್ತೀಚೆಗೆ ಅನಾರೋಗ್ಯಕ್ಕೆ ತುತ್ತಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಚೇತರಿಸಿಕೊಂಡಿದ್ದರು. ಎರಡು ದಿನಗಳ ಹಿಂದೆ ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಾಗಿದ್ದರು. ನಿನ್ನೆ ಸಂಜೆ ಅವರು ನಿಧಾನರಾಗಿದ್ದಾರೆ. ಮೃತರು ಪತಿ ಮತ್ತು ಒಂದು ಗಂಡು, ಆರು ಜನ ಹೆಣ್ಣು ಮಕ್ಕಳನ್ನು ಅಗಲಿದ್ದಾರೆ.
ಬಿರುವೆರ್ ಕುಡ್ಲ ಸಂಘಟನೆಯಿಂದ ಯುವವಾಹಿನಿಗೆ ಗೌರವದ ಸನ್ಮಾನ.. ಕೇಂದ್ರ ಸಮಿತಿಯ ಅಧ್ಯಕ್ಷರಾದ ಹರೀಶ್ ಕೆ ಪೂಜಾರಿ ಸನ್ಮಾನ ಸ್ವೀಕಾರ
![](https://billavaswarriors.com/wp-content/uploads/2024/10/IMG-20241015-WA0000-1024x1024.jpg)
ಮಂಗಳೂರು : ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರ ಬಿರುವೆರ್ ಕುಡ್ಲ(ರಿ) ಮಂಗಳೂರು ಸಂಘಟನಯ ದಶಮಾನೋತ್ಸವದ ಸವಿನೆನಪಿಗಾಗಿ, ರಾಜ್ಯದ ಪ್ರತಿಷ್ಠಿತ ಯುವವಾಹಿನಿ ಸಂಸ್ಥೆಯು ಕಳೆದ 36 ವರ್ಷಗಳ ಸಮಾಜಮುಖಿ ಸೇವೆಯನ್ನು ಗುರುತಿಸಿ ಗೌರವಿಸಿ ಗೌರವದ ಸನ್ಮಾನ ನೀಡಿದೆ. ಯುವವಾಹಿನಿ ಕೇಂದ್ರ ಸಮಿತಿಯ ಅಧ್ಯಕ್ಷರಾದ ಹರೀಶ್ ಕೆ.ಪೂಜಾರಿ ಯುವವಾಹಿನಿಯ ಪರವಾಗಿ ಸನ್ಮಾನವನ್ನು ಸ್ವೀಕರಿಸಿದರು. ಈ ಸಂದರ್ಭದಲ್ಲಿ ಕೇಂದ್ರ ಸಮಿತಿಯ ಪ್ರಧಾನ ಕಾರ್ಯದರ್ಶಿ ಜಗದೀಶ್ಚಂದ್ರ ಡಿ ಕೆ ಜೊತೆ ಕಾರ್ಯದರ್ಶಿ ರೇಖಾ ಗೋಪಾಲ್, ಕಾರ್ಯಕಾರಿ ಸಮಿತಿ ಸದಸ್ಯರು ಹಾಗೂ ಕೇಂದ್ರ ಸಮಿತಿಯ […]
ದೇಯಿ ಬೈದೆತಿ- ಕೋಟಿ ಚೆನ್ನಯರ ಮೂಲಸ್ಥಾನ ಶ್ರೀ ಕ್ಷೇತ್ರ ಗೆಜ್ಜೆಗಿರಿ ಎಂಬ ಪುಣ್ಯಭೂಮಿ
![](https://billavaswarriors.com/wp-content/uploads/2024/10/sddefault.jpg)
ಗೆಜ್ಜೆಗಿರಿ ನಂದನ ಬಿತ್ತಲ್ ಎಂಬ ಹೆಸರು ಕೇಳುತ್ತಿದ್ದಂತೆ ಮೈ ರೋಮಾಂಚನಗೊಳ್ಳುತ್ತದೆ. ಕ್ಷೇತ್ರದ ಇತಿಹಾಸವನ್ನು ಕೇಳುವಾಗ ಅವಳಿ ವೀರಪುರುಷರ ಮೂಲಸ್ಥಾನ ಯಾವುದು ಎಂಬ ಪ್ರಶ್ನೆಗೂ ಉತ್ತರ ಸಿಗುತ್ತದೆ. ಅಂತಹ ಪುಣ್ಯ-ಪವಿತ್ರ ಭೂಮಿಯಲ್ಲಿ ದೇಯಿ ಬೈದೈತಿ – ಕೋಟಿ ಚೆನ್ನಯರ ಭವ್ಯ ಆಲಯ ನಿರ್ಮಾಣಗೊಂಡಿದೆ. ಕ್ಷೇತ್ರದ ನಿರ್ಮಾಣ-ಬ್ರಹ್ಮಕಲಶ ಕಾರ್ಯ ಇಡೀ ತುಳುನಾಡಿದ ಧಾರ್ಮಿಕ ಪರಂಪರೆಯಲ್ಲಿ ಹೊಸ ಇತಿಹಾಸವನ್ನು ಸೃಷ್ಟಿಸಿದ್ದು ಇಂದಿಗೂ ನಿತ್ಯ- ನಿರಂತರ ಕ್ಷೇತ್ರಕ್ಕೆ ನೂರಾರು ಸಂಖ್ಯೆಯಲ್ಲಿ ಭಕ್ತರು ಆಗಮಿಸುತ್ತಿರುವುದು ಗೆಜ್ಜೆಗಿರಿ ಕಾರಣಿಕ ಶಕ್ತಿಯನ್ನು ಜಗತ್ತಿಗೆ ಸಾರುತ್ತಿದೆ. ಏರಾರ್ಜೆ ಬರ್ಕೆ […]
” ನವ ಕರ್ನಾಟಕ ರತ್ನ ” ಪ್ರಶಸ್ತಿಗೆ ಸತೀಶ್ ಕುಮಾರ್ ಬಜಾಲ್ ಆಯ್ಕೆ
![](https://billavaswarriors.com/wp-content/uploads/2024/10/IMG-20241002-WA0003-1024x754.jpg)
ಬೆಂಗಳೂರು: ವಿದೇಶಗಳಲ್ಲಿ ನೆಲೆಸಿರುವ ಕನ್ನಡಿಗರನ್ನು ಒಂದುಗೂಡಿಸುವ ಉದ್ದೇಶದಿಂದ ಇದೇ ಮೊದಲ ಬಾರಿಗೆ ಅ. 4 ಮತ್ತು 5ರಂದು ಬೆಂಗಳೂರಿನಲ್ಲಿ ಅನಿವಾಸಿ ಕನ್ನಡಿಗರ ಸಮ್ಮೇಳನವನ್ನು ಆಯೋಜಿಸಲಾಗಿದ್ದು, ಬೆಂಗಳೂರಿನ ರವೀಂದ್ರ ಕಲಾ ಕ್ಷೇತ್ರದಲ್ಲಿ ನಡೆಯಲಿದ್ದು. ಅಂದು ನಾಡು ನುಡಿ ಕಲೆ ಮತ್ತು. ಸಂಸ್ಕ್ರತಿಗಳ ನವಿರುತನಕ್ಕೆ ಹಾಗು ಸಂಘಟನ ಕ್ಷೇತ್ರಕ್ಕೆ ಸಲ್ಲಿಸಿದ ಅನುಪಮ ಕೊಡುಗೆಯನ್ನು ಪರಿಗಣಿಸಿ “ನವ ಕರ್ನಾಟಕ ರತ್ನ “ ಪ್ರಶಸ್ತಿ ಗೌರವ ಪುರಸ್ಕಾರವನ್ನು ಸತೀಶ್ ಕುಮಾರ್ ಬಜಾಲ್ ಗೆ ಪ್ರಾಧಾನ ಮಾಡಲಿದ್ದಾರೆ. ಸೌದಿ ಅರೇಬಿಯಾದ ದಮ್ಮಮ್ ನಲ್ಲಿ 24*7 […]
ಊದುಪೂಜೆಯಲ್ಲಿ ಪಿಲಿಯಾವೇಶ ಎಷ್ಟು ಸರಿ?
![](https://billavaswarriors.com/wp-content/uploads/2024/09/maxresdefault-1024x576.jpg)
ಇನ್ನು ಪಿಲಿಕೋಲ ನೋಡಲು ವರ್ಷಕ್ಕೊಮ್ಮೆ ಕಾಪುವಿಗೆ ಹೋಗಬೇಕಾಗಿಲ್ಲ. ಅಷ್ಟಮಿ, ಚೌತಿ, ಮಾರ್ನೆಮಿಗಳಲ್ಲಿ ನಮ್ಮೂರಿನಲ್ಲೂ ಪಿಲಿಕೋಲಗಳು ಆರಂಭವಾಗಿವೆ. ಹಿಂದೆ ಅಪೂರ್ವವಾಗಿ ಎಲ್ಲಾದರೂ ಒಂದು ಕಡೆ ಊದುಹಾಕುವಾಗ ವೇಷಸಂಕಲ್ಪಿಸಿಕೊಂಡವನಿಗೆ ಆವೇಶ ಆಗುವುದಿತ್ತು. ಹೀಗೆ ಆವೇಶವಾಗುವುದು ಶುಭಲಕ್ಷಣ ಅಲ್ಲ ಎಂಬರ್ಥದಲ್ಲೇ ಪರಿಗಣಿತವಾಗಿತ್ತು. ಒಂದೇ ಆ ವ್ಯಕ್ತಿಯಲ್ಲಿ ಅಥವಾ ಗೈದ ವಿಧಿವಿಧಾನಗಳಲ್ಲಿ ಏನಾದರೂ ಲೋಪದೋಷಗಳಾದಾಗ ಮಾತ್ರ ಹೀಗಾಗುವುದಿತ್ತು. ಹೆಚ್ಚಿನ ಸಂದರ್ಭಗಳಲ್ಲಿ ಆ ವ್ಯಕ್ತಿಯ ಭಾವೋದ್ವೇಗವೇ ಇದಕ್ಕೆ ಕಾರಣ. ಆದರೆ, ಮೂರು ನಾಲ್ಕು ವರ್ಷಗಳಲ್ಲಿ ಊರಿನ ಐದಾರು ಕಡೆಯ ಊದುವಿನ ಸಂದರ್ಭದಲ್ಲಿ ಹುಲಿಯಾವೇಶ. ಕೆಲವೆಡೆ […]
ದುಬೈ: ದುಬೈ ಬಿಲ್ಲವಸ್ ಫ್ಯಾಮಿಲಿ ವತಿಯಿಂದ ನಡೆದ 170 ನೇ ಬ್ರಹ್ಮ ಶ್ರೀ ನಾರಾಯಣ ಗುರುಜಯಂತಿ
![](https://billavaswarriors.com/wp-content/uploads/2024/09/IMG_0464.jpeg)
ದುಬೈ: ಬಿಲ್ಲವಸ್ ಫ್ಯಾಮಿಲಿ ದುಬೈ ಇವರ ವತಿಯಿಂದ ಬ್ರಹ್ಮ ಶ್ರೀ ನಾರಾಯಣ ಗುರುವರ್ಯರ 170 ನೇ ಗುರು ಜಯಂತಿಯು ದುಬೈ ನ ಗ್ಲೆಂಡಲೆ ಇಂಟರ್ ನ್ಯಾಷನಲ್ ಸ್ಕೂಲ್ ನಲ್ಲಿ ಭಾನುವಾರದಂದು ವಿಜೃಂಭಣೆಯಿಂದ ನಡೆಯಿತು. ಶ್ರೀ ರಾಜರಾಜೇಶ್ವರಿ ಭಜನ ಮಂಡಳಿ ಯವರ ಭಜನೆಯ ಮೂಲಕ ಪ್ರಾರಂಭಗೊಂಡು ನಂತರ ಬಿಲ್ಲವ ಸಮಾಜದ ಪುಟಾಣಿ ಮಕ್ಕಳು, ಮಹಿಳೆಯರ ಹಾಗೂ ಪುರುಷರ ತಂಡಗಳ ನೃತ್ಯ ಭಜನೆ ನೆರವೇರಿತು. ಕಾರ್ಯಕ್ರಮದಲ್ಲಿ ಅತ್ಯಧಿಕ ಸಂಖ್ಯೆಯಲ್ಲಿ ಭಕ್ತರು ಪಾಲ್ಗೊಂಡಿದ್ದು ಮಹಾಪೂಜೆಯ ನಂತರ ಭಕ್ತರಿಗೆ ಮಹಾಪ್ರಸಾದ ಹಾಗೂ ಅನ್ನ […]
ಸಾಲುಮರದ ತಿಮ್ಮಕ್ಕ ಪ್ರಶಸ್ತಿ ನ್ಯಾಷನಲ್ ಗ್ರೀನರಿ ಬಾಲ ಪುರಸ್ಕಾರ 2024 ಪ್ರಶಸ್ತಿಗೆ ಆಯ್ಕೆಯಾದ ಧನ್ವಿ ಪೂಜಾರಿ
![](https://billavaswarriors.com/wp-content/uploads/2024/09/IMG_0235.jpeg)
ಮರವಂತೆ : ಈ ಬಾರಿಯ ಸಾಲುಮರದ ತಿಮ್ಮಕ್ಕ ನ್ಯಾಷನಲ್ ಗ್ರೀನರಿ ಬಾಲ ಪುರಸ್ಕಾರ 2024 ಪ್ರಶಸ್ತಿಗೆ ಮರವಂತೆಯ ಧನ್ವಿ ಪೂಜಾರಿ ಆಯ್ಕೆಯಾಗಿದ್ದಾರೆ. ಮರವಂತೆಯ ಜ್ಯೋತಿ ಚಂದ್ರಶೇಖರ ಪೂಜಾರಿ ಇವರ ಪುತ್ರಿಯಾಗಿದ್ದು ಪ್ರಸ್ತುತ ಜನತಾ ಇಂಡಿಪೆಂಡೆಂಟ್ ಪಿಯು ಕಾಲೇಜ್ ಹೆಮ್ಮಾಡಿ ಇಲ್ಲಿನ ಪ್ರಥಮ ಪಿಯುಸಿ ವಿಜ್ಞಾನ ವಿಭಾಗದಲ್ಲಿ ವ್ಯಾಸಂಗ ಮಾಡತ್ತಿದ್ದಾಳೆ. ಇದೇ ತಿಂಗಳು 26 ನೇ ತಾರೀಖಿನಂದು ಬೆಂಗಳೂರಿನ ಅಂಬೇಡ್ಕರ್ ಭವನದಲ್ಲಿ ನಡೆಯುವ ಸಾಲು ಮರದ ತಿಮ್ಮಕ್ಕನ 113 ನೇ ಜನ್ಮದಿನದ ಸಂಭ್ರಮಚಾರಣೆಯ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಹಾಗೂ ಗ್ರಹ […]