TOP STORIES:

ಬೆಮ್ಮೆರ್ – ಬ್ರಹ್ಮ


Author Venkatesh Karkera

Team Prajnaanambrahmah

ತುಳುನಾಡ ದೈವಗಳಲ್ಲಿ ಅತಿಪ್ರಮುಖ ಶಕ್ತಿ ಎಂದರೆ ಬೆಮ್ಮೆರ್ ಯಾ ಬೆರ್ಮೆರ್. ಆಲಡೆಗಳಲ್ಲಿ, ನಾಗಮೂಲಸ್ಥಾನಗಳಲ್ಲಿ, ಗರಡಿಗಳಲ್ಲಿ, ದೈವಸ್ಥಾನಗಳಲ್ಲಿ ಹೀಗೆ ಹೆಚ್ಚುಕಡಿಮೆ ತುಳುನಾಡ ಉದ್ದಗಲಕ್ಕೂ ಬೇರೆ ಬೇರೆ ಹೆಸರಿನಿಂದ ಆರಾಧಿಸಲ್ಪಡುತ್ತಿದೆ. ಕೆಲವೆಡೆ ಬೆಮ್ಮೆರ್ ಕೋಲನೇಮ ಪಡೆದುಕೊಂಡು ದೈವಗಳಂತೆ ಆರಾಧನೆ ಪಡೆದರೆ ಇತರೆಡೆ ದೇವರಂತೆ ಪೂಜಿಸಲ್ಪಡುತ್ತಾರೆ.
ಕೆಲ‌ ಸ್ಥಳಗಳಲ್ಲಿ ಬೆಮ್ಮೆರ್ ಪುನರ್ನಾಮಕಗೊಂಡು ಬ್ರಹ್ಮಲಿಂಗೇಶ್ವರ / ಮಹಾಲಿಂಗೇಶ್ವರ/ ಖಡ್ಗೇಶ್ವರಿ ಹೀಗೆಲ್ಲಾ ಹೊಸ ಹೆಸರಿನೊಂದಿಗೆ ಪೂಜಿಸಲ್ಪಡುತ್ತಿದ್ದಾರೆ. ಈ ರೀತಿಯ ಪುನರ್ನಾಮಕರಣ ಸರಿಯೋ ತಪ್ಪೋ‌ ಎಂಬುದು ಖಂಡಿತವಾಗಿಯೂ ವಿಚಾರಾರ್ಹ. ಆದರೆ ಈಗೀಗ ಈ ವಿಚಾರ ಜಾತಿಯ‌ ಬಣ್ಣ ಪಡೆದುಕೊಳ್ಳುತ್ತಿರುವುದು ವಿಷಾದನೀಯ. ಈ ರೀತಿಯ ನಾಮಾಂತರಕ್ಕೆಲ್ಲಾ ವೈದಿಕರೇ ಕಾರಣ, ನಮ್ಮ ದೈವಗಳ ವೈದಿಕೀಕರಣ ಎಂದೆಲ್ಲ ವೈದಿಕ ಸಮುದಾಯವನ್ನು ದೂರುವುದು ಅಲ್ಲಲ್ಲಿ ಕಂಡುಬರುತ್ತಿದೆ. © https://prajnaanambrahmah.wordpress.com

‘ಬೆಮ್ಮೆರ್’ ಎಂಬ ಶಬ್ದ ‘ಪೆರಿಯಮ್ಮೆರ್’ ಎಂಬ ಪದದಿಂದ ಹುಟ್ಟಿದೆಯೇ ಹೊರತು ‘ಬ್ರಹ್ಮ’ ಎಂಬ ಪದದಿಂದ ಅಲ್ಲ, ಈ ‘ಬೆಮ್ಮೆರ್’ ಎಂಬಾತ ತುಳುನಾಡಿನ ಮೂಲನಿವಾಸಿಗಳ ಹಿರಿಯನೋ ಅಥವಾ ರಾಜನೋ ಆಗಿರಬೇಕು ಎಂಬುದು ವೈದಿಕೀಕರಣ ವಿರೋಧಿಗಳ ಅಭಿಪ್ರಾಯ. ಅಂತೂ ಇಂತೂ ಬೆಮ್ಮೆರ್ ಬ್ರಹ್ಮನಲ್ಲ ಎಂಬುದು ಅವರ ವಾದ. ಬೆಮ್ಮೆರ್ ಬ್ರಹ್ಮನೋ ಅಲ್ಲವೋ ಹೇಳುವುದು ಕಷ್ಟಸಾಧ್ಯ. ಆದರೆ ‘ಬ್ರಹ್ಮ’ ಅಂದ ಕೂಡಲೆ ತಥಾಕಥಿತ ‘ವೈದಿಕರ ಚತುರ್ಮುಖ ಬ್ರಹ್ಮ’ ಎಂದು ಅರ್ಥೈಸಿಕೊಳ್ಳುವುದು ತಥಾಕಥಿತ ಬುದ್ದಿಜೀವಿಗಳ ಮೊದಲ ಲಕ್ಷಣ. ನಮಗೆ ಅದು ಏನು ಎಂಬುದನ್ನು ಸಾಧಿಸುವುದಕ್ಕಿಂತ ಅದು ಏನು ಅಲ್ಲ ಎಂಬುದನ್ನು ಸಾಧಿಸುವುದೇ ಮುಖ್ಯವಾದಾಗ ಆಗುವ ಗೊಂದಲವಿದು. ಕತ್ತಲೆ ಕೋಣೆಯಲ್ಲಿ ನಡೆಯುವಾಗ ಕಣ್ಣನ್ನು ಸಾಧ್ಯವಿದ್ದಷ್ಟು ತೆರೆದಿಟ್ಟುಕೊಳ್ಳುವುದು ಜಾಣತನ. ಅದರ ಬದಲಿಗೆ ಮೊದಲೇ ಒಂದು ಕಣ್ಣುಪಟ್ಟಿ ಕಟ್ಟಿಕೊಂಡು ನಡೆವವರನ್ನು ಹಿಡಿಯಲು ಪ್ರಯತ್ನಿಸುವುದು ವ್ಯರ್ಥ.
ವೈದಿಕ ಸಾಹಿತ್ಯದಲ್ಲಿ ಬ್ರಹ್ಮ ಅಂದರೆ ಚತುರ್ಮುಖ ಬ್ರಹ್ಮ ಒಬ್ಬನೇ ಅಲ್ಲ. ಚತುರ್ಮುಖ ಬ್ರಹ್ಮನ ಸ್ಥಾನದಲ್ಲಿ ಈಗಾಗಲೆ ಹಲವಾರು ಬ್ರಹ್ಮರು ಆಗಿಹೋಗಿದ್ದಾರೆ. ಮುಂದೆಯೂ ಹಲವಾರು ಬ್ರಹ್ಮರು ಬರಲಿದ್ದಾರೆ. ತ್ರಿಮೂರ್ತಿಗಳು ಮತ್ತು ಇತರೆಲ್ಲಾ ದೇವತೆಗಳಿಗೂ ಸೃಷ್ಟಿಕರ್ತನಾದ ವಿಶ್ವನಿಯಾಮಕ ಶಕ್ತಿಯನ್ನು ವೇದಾಂತದಲ್ಲಿ ‘ಬ್ರಹ್ಮನ್’, ‘ಪರಬ್ರಹ್ಮ’, ‘ಆತ್ಮ’, ‘ಪರಮಾತ್ಮ’ ಇತ್ಯಾದಿಯಾಗಿ ಕರೆಯಲಾಗುತ್ತದೆ. ವೈಷ್ಣವರು ಅದನ್ನೇ ‘ಮಹಾವಿಷ್ಣು’ ಎಂದು, ಶೈವರು ‘ಪರಶಿವ’ ಎಂದು, ಶಾಕ್ತೇಯರು ‘ಆದಿಶಕ್ತಿ/ ಪರಾಶಕ್ತಿ’ ಎಂದು, ಗಾಣಪತ್ಯರು ‘ಮಹಾಗಣಪತಿ’ ಎನ್ನುವುದು. ನಮ್ಮಲ್ಲಿ ಕಂಡುಬರುವ ಪ್ರಾಚೀನ ದೇವಾಲಯಗಳಲ್ಲೆಲ್ಲಾ ‘ಮಹಾಗಣಪತಿ/ ಮಹಾಲಿಂಗೇಶ್ವರ/ ಮಹತೋಬಾರ ಎಂದೆಲ್ಲಾ ಈ ಮಹತ್ ತತ್ವಕ್ಕೇ ಮಣೆ ಹಾಕಿದ್ದನ್ನು ಗಮನಿಸಿ. ಹಾಗಾಗಿ ಬೆಮ್ಮೆರ್ ಚತುರ್ಮುಖ ಬ್ರಹ್ಮನೇ ಆಗಬೇಕಿಲ್ಲ, ಪರಬ್ರಹ್ಮನೂ ಆಗಬಹುದು, ಯಾಕೆ ಆಗಿರಬಾರದು?
ಬ್ರಹ್ಮ ಎಂಬುದಕ್ಕೆ ಬೃಹತ್ ಮಾತ್ರವಲ್ಲದೆ ಹಿರಿಯ ಎಂಬ ಅರ್ಥವೂ ಸಂಸ್ಕೃತದಲ್ಲಿ ಇದೆ. ಈ ಹಿರಿಯ ಮತ್ತು ಪೆರಿಯಮ್ಮೆರ್ ಎಂಬ ತುಳು ಮೂಲಗಳನ್ನು ಹೋಲಿಸಿ‌‌ ನೋಡಿ. ಬೆಮ್ಮೆರ್ ಮತ್ತು‌ ಬ್ರಹ್ಮ ಶಬ್ದಗಳಲ್ಲಿ ಅರ್ಥವ್ಯತ್ಯಾಸ ಏನಾದರೂ ಇದೆಯೆ?
ಬೆಮ್ಮೆರ್ ಬಗ್ಗೆ ಹೇಳುವುದು ಮುಂದಕ್ಕೂ ಇದ್ದೇ ಇದೆ. ಅಲ್ಲಿಯವರೆಗೆ ನಿಮ್ಮ ಅಂತರಂಗದಲ್ಲಿ ಬೆಮ್ಮೆರ್‌ರ ಬಗ್ಗೆ ಚಿಂತನೆ ನಡೆಸಲು ಹೇಳುತ್ತಾ ಇಂದಿನ ಬರವಣಿಗೆಗೆ ವಿಶ್ರಾಂತಿ‌ ನೀಡುತ್ತೇನೆ.


Related Posts

ನಿರೂಪಣಾ ಕ್ಷೇತ್ರದಲ್ಲಿ ಮಿಂಚುತ್ತಿರುವ ಉದಯೋನ್ಮುಖ ಪ್ರತಿಭೆ – ಕೃತಿ ಪೂಜಾರಿ ಮೂಡುಬೆಟ್ಟು


Share           ಸಾಧನೆಯೆಂಬುದು ಯಾರೊಬ್ಬನ ಸೊತ್ತೂ ಅಲ್ಲ, ಅದು ಕಠಿಣ ಪರಿಶ್ರಮ ಮತ್ತು ಸಮರ್ಪಣಾ ಭಾವದಿಂದ ಮುನ್ನಡೆಯುವ ಮನಸು ಮತ್ತು ವ್ಯಕ್ತಿಗಳ ಪಾಲಿನ ವರದಾನ. ಸಾಧನೆಯ ಮನಸ್ಸೆಂಬ ಸಸಿಗೆ ಸತತ ನೀರೆರೆದು ಪೋಷಿಸಿ, ಶ್ರಮವನ್ನು


Read More »

ಸುರತ್ಕಲ್‌ನಲ್ಲಿ ರಂಗುರಂಗಿನ ರಂಗೋತ್ಸವ ನವೀನ್ ಡಿ ಪಡೀಲ್ ಗೆ ರಂಗಚಾವಡಿ ಪ್ರಶಸ್ತಿ ಪ್ರದಾನ


Share         ಸುರತ್ಕಲ್: ರಂಗಚಾವಡಿ ಮಂಗಳೂರು ಸಾಂಸ್ಕೃತಿಕ ಸಾಂಸ್ಕೃತಿಕ ಸಂಘಟನೆ ಮತ್ತು ಸುಭಾಷಿತನಗರ  ರೆಸಿಡೆಂಟ್ಸ್ ವೆಲ್ ಫೇರ್ ಅಸೋಸಿಯೇಶನ್ (ರಿ) ಸುರತ್ಕಲ್ ಇದರ ಆಶ್ರಯದಲ್ಲಿ ನಡೆದ ರಂಗಚಾವಡಿ ರಜತ ಸಂಭ್ರಮ ಮತ್ತು ರಂಗುರಂಗಿನ ರಂಗೋತ್ಸವ ಕಾರ್ಯಕ್ರಮ


Read More »

ಸುರತ್ಕಲ್‌ನಲ್ಲಿ ರಂಗುರಂಗಿನ ರಂಗೋತ್ಸವ ನವೀನ್ ಡಿ ಪಡೀಲ್ ಗೆ ರಂಗಚಾವಡಿ ಪ್ರಶಸ್ತಿ ಪ್ರದಾನ


Share         ಸುರತ್ಕಲ್‌ನಲ್ಲಿ ರಂಗುರಂಗಿನ ರಂಗೋತ್ಸವ   ನವೀನ್ ಡಿ ಪಡೀಲ್ ಗೆ ರಂಗಚಾವಡಿ ಪ್ರಶಸ್ತಿ ಪ್ರದಾನ   ಸುರತ್ಕಲ್: ರಂಗಚಾವಡಿ ಮಂಗಳೂರು ಸಾಂಸ್ಕೃತಿಕ ಸಾಂಸ್ಕೃತಿಕ ಸಂಘಟನೆ ಮತ್ತು ಸುಭಾಷಿತನಗರ ರೆಸಿಡೆಂಟ್ಸ್ ವೆಲ್ ಫೇರ್ ಅಸೋಸಿಯೇಶನ್


Read More »

ಸ್ವಾಮಿಗಳ ಚಿತ್ರ ಮತ್ತು ಪ್ರತಿಮೆಯ ಮುಂದೆ ರಾಜ್ಯಪಾಲರೊಂದಿಗೆ ಇರುವ ಚಿತ್ರ


Share         ಶಿವಗಿರಿ: ರಾಜ್ಯಪಾಲ ಆರ್.ವಿ. ಅರ್ಲೆಕ್ಕರ್ ಅವರು ರಾಜಭವನದ ಅತಿಥಿ ಕೊಠಡಿಯಲ್ಲಿ ಶ್ರೀ ನಾರಾಯಣ ಗುರುಗಳ ಚಿತ್ರ ಮತ್ತು ಕಂಚಿನ ಪ್ರತಿಮೆಯನ್ನು ಸ್ವಾಮಿಗಳಿಗೆ ತೋರಿಸಿದರು. ಅತಿಥಿ ಕೊಠಡಿಯನ್ನು ಪ್ರವೇಶಿಸುವಾಗ ಮೊದಲು ನೋಡುವುದು ಗುರುಗಳ ಚಿತ್ರ.


Read More »

ಕವಿ ಗವಿಸಿದ್ದ ಎನ್. ಬಳ್ಳಾರಿ ಸಾಹಿತ್ಯೋತ್ಸವದಲ್ಲಿ ಅನಿತಾ ಪಿ. ತಾಕೊಡೆಯವರ “ಮೇಣಕ್ಕಂಟಿದ ಬತ್ತಿ” ಕವನ ಸಂಕಲನ ಬಿಡುಗಡೆ


Share         ಅ.26: ಕವಿ ಗವಿಸಿದ್ಧ ಎನ್. ಬಳ್ಳಾರಿ ಸಾಹಿತ್ಯೋತ್ಸವದಲ್ಲಿ ಅನಿತಾ ಪಿ. ತಾಕೊಡೆಯವರ ‘ಮೇಣಕ್ಕಂಟಿದ ಬತ್ತಿ’ಕವನ ಸಂಕಲನ ಬಿಡುಗಡೆ, ಪ್ರಶಸ್ತಿ ಪ್ರದಾನ,ಸಾಹಿತ್ಯ ಚರ್ಚೆ ಮುಂಬಯಿ, ಅ.23-  ಖ್ಯಾತ ಬಂಡಾಯ ಕವಿ ಗವಿಸಿದ್ದ ಎನ್. ಬಳ್ಳಾರಿ


Read More »

ಮಂಗಳೂರು: ಅಳದಂಗಡಿಯ ಶ್ರೀಮತಿ ಅನುಷಾ ಪ್ರಸಾದ್ ಪೂಜಾರಿ ಅವರಿಗೆ ಗಣಿತಶಾಸ್ತ್ರ ವಿಷಯದಲ್ಲಿ ಪಿ.ಎಚ್.ಡಿ ಪದವಿ


Share         ಮಣಿಪಾಲ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ, ಮಣಿಪಾಲ (Manipal Institute of Technology, Manipal) ನ ಗಣಿತಶಾಸ್ತ್ರ ವಿಭಾಗದ ಸಂಶೋಧನಾ ವಿದ್ಯಾರ್ಥಿನಿ ಶ್ರೀಮತಿ ಅನುಷಾ ಎಲ್ ಅವರು ಮಂಡಿಸಿದ “A study on N-Covering


Read More »