TOP STORIES:

ಬೆಮ್ಮೆರ್ – ಬ್ರಹ್ಮ


Author Venkatesh Karkera

Team Prajnaanambrahmah

ತುಳುನಾಡ ದೈವಗಳಲ್ಲಿ ಅತಿಪ್ರಮುಖ ಶಕ್ತಿ ಎಂದರೆ ಬೆಮ್ಮೆರ್ ಯಾ ಬೆರ್ಮೆರ್. ಆಲಡೆಗಳಲ್ಲಿ, ನಾಗಮೂಲಸ್ಥಾನಗಳಲ್ಲಿ, ಗರಡಿಗಳಲ್ಲಿ, ದೈವಸ್ಥಾನಗಳಲ್ಲಿ ಹೀಗೆ ಹೆಚ್ಚುಕಡಿಮೆ ತುಳುನಾಡ ಉದ್ದಗಲಕ್ಕೂ ಬೇರೆ ಬೇರೆ ಹೆಸರಿನಿಂದ ಆರಾಧಿಸಲ್ಪಡುತ್ತಿದೆ. ಕೆಲವೆಡೆ ಬೆಮ್ಮೆರ್ ಕೋಲನೇಮ ಪಡೆದುಕೊಂಡು ದೈವಗಳಂತೆ ಆರಾಧನೆ ಪಡೆದರೆ ಇತರೆಡೆ ದೇವರಂತೆ ಪೂಜಿಸಲ್ಪಡುತ್ತಾರೆ.
ಕೆಲ‌ ಸ್ಥಳಗಳಲ್ಲಿ ಬೆಮ್ಮೆರ್ ಪುನರ್ನಾಮಕಗೊಂಡು ಬ್ರಹ್ಮಲಿಂಗೇಶ್ವರ / ಮಹಾಲಿಂಗೇಶ್ವರ/ ಖಡ್ಗೇಶ್ವರಿ ಹೀಗೆಲ್ಲಾ ಹೊಸ ಹೆಸರಿನೊಂದಿಗೆ ಪೂಜಿಸಲ್ಪಡುತ್ತಿದ್ದಾರೆ. ಈ ರೀತಿಯ ಪುನರ್ನಾಮಕರಣ ಸರಿಯೋ ತಪ್ಪೋ‌ ಎಂಬುದು ಖಂಡಿತವಾಗಿಯೂ ವಿಚಾರಾರ್ಹ. ಆದರೆ ಈಗೀಗ ಈ ವಿಚಾರ ಜಾತಿಯ‌ ಬಣ್ಣ ಪಡೆದುಕೊಳ್ಳುತ್ತಿರುವುದು ವಿಷಾದನೀಯ. ಈ ರೀತಿಯ ನಾಮಾಂತರಕ್ಕೆಲ್ಲಾ ವೈದಿಕರೇ ಕಾರಣ, ನಮ್ಮ ದೈವಗಳ ವೈದಿಕೀಕರಣ ಎಂದೆಲ್ಲ ವೈದಿಕ ಸಮುದಾಯವನ್ನು ದೂರುವುದು ಅಲ್ಲಲ್ಲಿ ಕಂಡುಬರುತ್ತಿದೆ. © https://prajnaanambrahmah.wordpress.com

‘ಬೆಮ್ಮೆರ್’ ಎಂಬ ಶಬ್ದ ‘ಪೆರಿಯಮ್ಮೆರ್’ ಎಂಬ ಪದದಿಂದ ಹುಟ್ಟಿದೆಯೇ ಹೊರತು ‘ಬ್ರಹ್ಮ’ ಎಂಬ ಪದದಿಂದ ಅಲ್ಲ, ಈ ‘ಬೆಮ್ಮೆರ್’ ಎಂಬಾತ ತುಳುನಾಡಿನ ಮೂಲನಿವಾಸಿಗಳ ಹಿರಿಯನೋ ಅಥವಾ ರಾಜನೋ ಆಗಿರಬೇಕು ಎಂಬುದು ವೈದಿಕೀಕರಣ ವಿರೋಧಿಗಳ ಅಭಿಪ್ರಾಯ. ಅಂತೂ ಇಂತೂ ಬೆಮ್ಮೆರ್ ಬ್ರಹ್ಮನಲ್ಲ ಎಂಬುದು ಅವರ ವಾದ. ಬೆಮ್ಮೆರ್ ಬ್ರಹ್ಮನೋ ಅಲ್ಲವೋ ಹೇಳುವುದು ಕಷ್ಟಸಾಧ್ಯ. ಆದರೆ ‘ಬ್ರಹ್ಮ’ ಅಂದ ಕೂಡಲೆ ತಥಾಕಥಿತ ‘ವೈದಿಕರ ಚತುರ್ಮುಖ ಬ್ರಹ್ಮ’ ಎಂದು ಅರ್ಥೈಸಿಕೊಳ್ಳುವುದು ತಥಾಕಥಿತ ಬುದ್ದಿಜೀವಿಗಳ ಮೊದಲ ಲಕ್ಷಣ. ನಮಗೆ ಅದು ಏನು ಎಂಬುದನ್ನು ಸಾಧಿಸುವುದಕ್ಕಿಂತ ಅದು ಏನು ಅಲ್ಲ ಎಂಬುದನ್ನು ಸಾಧಿಸುವುದೇ ಮುಖ್ಯವಾದಾಗ ಆಗುವ ಗೊಂದಲವಿದು. ಕತ್ತಲೆ ಕೋಣೆಯಲ್ಲಿ ನಡೆಯುವಾಗ ಕಣ್ಣನ್ನು ಸಾಧ್ಯವಿದ್ದಷ್ಟು ತೆರೆದಿಟ್ಟುಕೊಳ್ಳುವುದು ಜಾಣತನ. ಅದರ ಬದಲಿಗೆ ಮೊದಲೇ ಒಂದು ಕಣ್ಣುಪಟ್ಟಿ ಕಟ್ಟಿಕೊಂಡು ನಡೆವವರನ್ನು ಹಿಡಿಯಲು ಪ್ರಯತ್ನಿಸುವುದು ವ್ಯರ್ಥ.
ವೈದಿಕ ಸಾಹಿತ್ಯದಲ್ಲಿ ಬ್ರಹ್ಮ ಅಂದರೆ ಚತುರ್ಮುಖ ಬ್ರಹ್ಮ ಒಬ್ಬನೇ ಅಲ್ಲ. ಚತುರ್ಮುಖ ಬ್ರಹ್ಮನ ಸ್ಥಾನದಲ್ಲಿ ಈಗಾಗಲೆ ಹಲವಾರು ಬ್ರಹ್ಮರು ಆಗಿಹೋಗಿದ್ದಾರೆ. ಮುಂದೆಯೂ ಹಲವಾರು ಬ್ರಹ್ಮರು ಬರಲಿದ್ದಾರೆ. ತ್ರಿಮೂರ್ತಿಗಳು ಮತ್ತು ಇತರೆಲ್ಲಾ ದೇವತೆಗಳಿಗೂ ಸೃಷ್ಟಿಕರ್ತನಾದ ವಿಶ್ವನಿಯಾಮಕ ಶಕ್ತಿಯನ್ನು ವೇದಾಂತದಲ್ಲಿ ‘ಬ್ರಹ್ಮನ್’, ‘ಪರಬ್ರಹ್ಮ’, ‘ಆತ್ಮ’, ‘ಪರಮಾತ್ಮ’ ಇತ್ಯಾದಿಯಾಗಿ ಕರೆಯಲಾಗುತ್ತದೆ. ವೈಷ್ಣವರು ಅದನ್ನೇ ‘ಮಹಾವಿಷ್ಣು’ ಎಂದು, ಶೈವರು ‘ಪರಶಿವ’ ಎಂದು, ಶಾಕ್ತೇಯರು ‘ಆದಿಶಕ್ತಿ/ ಪರಾಶಕ್ತಿ’ ಎಂದು, ಗಾಣಪತ್ಯರು ‘ಮಹಾಗಣಪತಿ’ ಎನ್ನುವುದು. ನಮ್ಮಲ್ಲಿ ಕಂಡುಬರುವ ಪ್ರಾಚೀನ ದೇವಾಲಯಗಳಲ್ಲೆಲ್ಲಾ ‘ಮಹಾಗಣಪತಿ/ ಮಹಾಲಿಂಗೇಶ್ವರ/ ಮಹತೋಬಾರ ಎಂದೆಲ್ಲಾ ಈ ಮಹತ್ ತತ್ವಕ್ಕೇ ಮಣೆ ಹಾಕಿದ್ದನ್ನು ಗಮನಿಸಿ. ಹಾಗಾಗಿ ಬೆಮ್ಮೆರ್ ಚತುರ್ಮುಖ ಬ್ರಹ್ಮನೇ ಆಗಬೇಕಿಲ್ಲ, ಪರಬ್ರಹ್ಮನೂ ಆಗಬಹುದು, ಯಾಕೆ ಆಗಿರಬಾರದು?
ಬ್ರಹ್ಮ ಎಂಬುದಕ್ಕೆ ಬೃಹತ್ ಮಾತ್ರವಲ್ಲದೆ ಹಿರಿಯ ಎಂಬ ಅರ್ಥವೂ ಸಂಸ್ಕೃತದಲ್ಲಿ ಇದೆ. ಈ ಹಿರಿಯ ಮತ್ತು ಪೆರಿಯಮ್ಮೆರ್ ಎಂಬ ತುಳು ಮೂಲಗಳನ್ನು ಹೋಲಿಸಿ‌‌ ನೋಡಿ. ಬೆಮ್ಮೆರ್ ಮತ್ತು‌ ಬ್ರಹ್ಮ ಶಬ್ದಗಳಲ್ಲಿ ಅರ್ಥವ್ಯತ್ಯಾಸ ಏನಾದರೂ ಇದೆಯೆ?
ಬೆಮ್ಮೆರ್ ಬಗ್ಗೆ ಹೇಳುವುದು ಮುಂದಕ್ಕೂ ಇದ್ದೇ ಇದೆ. ಅಲ್ಲಿಯವರೆಗೆ ನಿಮ್ಮ ಅಂತರಂಗದಲ್ಲಿ ಬೆಮ್ಮೆರ್‌ರ ಬಗ್ಗೆ ಚಿಂತನೆ ನಡೆಸಲು ಹೇಳುತ್ತಾ ಇಂದಿನ ಬರವಣಿಗೆಗೆ ವಿಶ್ರಾಂತಿ‌ ನೀಡುತ್ತೇನೆ.


Related Posts

ಉದಯೋನ್ಮುಖ ಪ್ರತಿಭಾ ಪುರಸ್ಕಾರಕ್ಕೆ ಅಕ್ಷತಾ ಸುಧೀರ್


Share         ಮಂಗಳೂರು/ಬೆಂಗಳೂರು: ಕರ್ನಾಟಕ ಆರ್ಯ ಈಡಿಗ ಮಹಿಳಾ ಸಂಘದ ವತಿಯಿಂದ ಆಯೋಜಿಸಲಾದ ರಾಷ್ಟ್ರೀಯ ಸಮ್ಮೇಳನದಲ್ಲಿ, ಯುವವಾಹಿನಿಯ ಬೆಂಗಳೂರು ಘಟಕದ ಹೆಮ್ಮೆಯ ಸದಸ್ಯೆಯೂ ಹಾಗೂ ಪ್ರಸಕ್ತ ಲೆಕ್ಕಪರಿಶೋಧಕರೂ ಆಗಿರುವ ಶ್ರೀಮತಿ ಅಕ್ಷತಾ ಸುಧೀರ್ ಅವರಿಗೆ ಉದಯೋನ್ಮುಖ


Read More »

ಕಲರ್ಸ್ ಕನ್ನಡ ಬಿಗ್ ಬಾಸ್ 12ರ ಸ್ಪರ್ಧಿ ಧ್ರುವಂತ್ (ಚರಿತ್ ಬಾಳಪ್ಪ ಪೂಜಾರಿ) ಜೀವನದ ಯಶೋಗಾಥೆ


Share         ಜೀವನದಲ್ಲಿ ಅದೆಷ್ಟೋ ಕಷ್ಟಗಳನ್ನು ಸಹಿಸಿಕೊಂಡು, ಅವಕಾಶಗಳಿಂದ ವಂಚಿತನಾದರೂ ಧೃತಿಗೆಡದೆ, ಸಾಧನೆಯ ಹಾದಿಯಲ್ಲಿ ಹಂತ ಹಂತವಾಗಿ ಮುನ್ನಡೆಯುತ್ತ ಇಂದು ಎಲ್ಲರ ಮನಗಳಲ್ಲಿ ಮನೆ ಮಾಡಿರುವಂತಹ ನಮ್ಮೆಲ್ಲರ ಹೆಮ್ಮೆಯ ಸಾಧಕ ಧ್ರುವಂತ್ ಇವರ ಯಶಸ್ಸಿನ ಹಿಂದಿನ


Read More »

🩸 ಓಮಾನ್ ಬಿಲ್ಲವಾಸ್ ವತಿಯಿಂದ ಆಯೋಜಿಸಲಾದ ಸಾಮೂಹಿಕ ರಕ್ತದಾನ ಶಿಬಿರ 🩸 ಬೌಶರ್ ಬ್ಲಡ್ ಬ್ಯಾಂಕ್, ಘಾಲಾ ಇಲ್ಲಿ ಯಶಸ್ವಿಯಾಗಿ ನಡೆಯಿತು.


Share          ಒಂದು ಕಾಲದಲ್ಲಿ ತುಳುನಾಡಿನ ಮೂಲದವರಾದ ಬಿಲ್ಲವರು ಕೃಷಿಕರಾಗಿ ಹಾಗೂ ಬೈದರಾಗಿ ತಮ್ಮ ಪರಿಶ್ರಮ, ಶ್ರಮಸಾಧನೆ ಮತ್ತು ಸಾಮಾಜಿಕ ಜವಾಬ್ದಾರಿಗಳ ಮೂಲಕ ಸಮಾಜದಲ್ಲಿ ಗೌರವಯುತ ಸ್ಥಾನವನ್ನು ಪಡೆದವರು. ಪ್ರಕೃತಿಯೊಂದಿಗೆ ಸಮನ್ವಯದಿಂದ ಬದುಕನ್ನು ಸಾಗಿಸುತ್ತಾ, ಪರಸ್ಪರ


Read More »

ನಾನು ಕಂಡ ಪ್ರವೀಣ್ ಪೂಜಾರಿ


Share         ನಾನು ಕಂಡ ಪ್ರವೀಣ್ ಪೂಜಾರಿ ಸಾಧಾರಣ 15 ವರ್ಷಗಳಿಂದ ನಮ್ಮ ಆತ್ಮೀಯತೆ ಬಿಲ್ಲವ ಸಮಾಜದ ಸಾಮಾನ್ಯ ಜನರಿಗೂ ಸಮಸ್ಯೆ ಬಂದಂತ ಸಂದರ್ಭದಲ್ಲಿ ವಕೀಲನಾಗಿ ಅಥವಾ ಸಾಮಾಜಿಕ ಕಾರ್ಯಕರ್ತನಾಗಿ ನ್ಯಾಯ ದೊರಕಿಸಿಕೊಟ್ಟಂತಹ ಒಬ್ಬ ನಮ್ಮ


Read More »

ಚಾರ್ಟರ್ಡ್ ಅಕೌಂಟೆಂಟ್ (CA) ಪರೀಕ್ಷೆಯಲ್ಲಿ ಅತ್ಯುತ್ತಮ ಅಂಕಗಳನ್ನು ಗಳಿಸಿ ನಿಶಾ ಪೂಜಾರಿ ಉತ್ತೀರ್ಣರಾಗಿದ್ದಾರೆ.


Share         ಮುಂಬಯಿ : ಕಾಂದಿವಲಿ ಪೂರ್ವದ ಠಾಕೂರ್ ಕಾಂಪ್ಲೆಕ್ಸ್ ನಿವಾಸಿ ನಿಶಾ ಪೂಜಾರಿ ಅವರು ಇತ್ತೀಚೆಗೆ ಸೆಪ್ಟೆಂಬರ್‌ನಲ್ಲಿ ನಡೆದ ಚಾರ್ಟರ್ಡ್ ಅಕೌಂಟೆಂಟ್ (CA) ಪರೀಕ್ಷೆಯಲ್ಲಿ ಅತ್ಯುತ್ತಮ ಅಂಕಗಳನ್ನು ಗಳಿಸಿ ಯಶಸ್ವಿಯಾಗಿ ಉತ್ತೀರ್ಣರಾಗಿದ್ದಾರೆ. ಅವರು ಕಾರ್ಕಳ


Read More »

ಬಹುಮುಖ ಪ್ರತಿಭಾವಂತೆ ಹರ್ಷಿಕಾ ಕಾಣಿಯೂರು ಅವರಿಗೆ ಅಭಿನಂದನೆಗಳು


Share         ಹರ್ಷಿಕಾ ಕಾಣಿಯೂರು ಅವರ ಬಾಲ್ಯದ ವಯಸ್ಸಿನಲ್ಲಿಯೇ ಕೃಷಿ ಕಾರ್ಯದ ಮೇಲಿನ ಆಸಕ್ತಿ ಹಾಗೂ ಶ್ರಮವನ್ನು ಗುರುತಿಸಿ ಸೈಟ್ ರೀಟಾ ವಿದ್ಯಾ ಸಂಸ್ಥೆ ಗೌರವಿಸಿದ ಕ್ಷಣ ನಿಜಕ್ಕೂ ಹೆಮ್ಮೆಯದು. 🌾🌱👏   ಅಷ್ಟೇ ಅಲ್ಲದೆ,


Read More »