TOP STORIES:

🩸 ಓಮಾನ್ ಬಿಲ್ಲವಾಸ್ ವತಿಯಿಂದ ಆಯೋಜಿಸಲಾದ ಸಾಮೂಹಿಕ ರಕ್ತದಾನ ಶಿಬಿರ 🩸 ಬೌಶರ್ ಬ್ಲಡ್ ಬ್ಯಾಂಕ್, ಘಾಲಾ ಇಲ್ಲಿ ಯಶಸ್ವಿಯಾಗಿ ನಡೆಯಿತು.


 ಒಂದು ಕಾಲದಲ್ಲಿ ತುಳುನಾಡಿನ ಮೂಲದವರಾದ ಬಿಲ್ಲವರು ಕೃಷಿಕರಾಗಿ ಹಾಗೂ ಬೈದರಾಗಿ ತಮ್ಮ ಪರಿಶ್ರಮ, ಶ್ರಮಸಾಧನೆ ಮತ್ತು ಸಾಮಾಜಿಕ ಜವಾಬ್ದಾರಿಗಳ ಮೂಲಕ ಸಮಾಜದಲ್ಲಿ ಗೌರವಯುತ ಸ್ಥಾನವನ್ನು ಪಡೆದವರು. ಪ್ರಕೃತಿಯೊಂದಿಗೆ ಸಮನ್ವಯದಿಂದ ಬದುಕನ್ನು ಸಾಗಿಸುತ್ತಾ, ಪರಸ್ಪರ ಒಮ್ಮತ ಮತ್ತು ಸಹಕಾರದ ಜೀವನವನ್ನು ನಾವು ಅನುಸರಿಸಿಕೊಂಡು ಬಂದಿದ್ದೇವೆ. ಕಾಲಕ್ರಮೇಣ ಪರ ಊರುಗಳು, ಪರ ದೇಶಗಳತ್ತ ತೆರಳಿ, ಅಲ್ಲಿ ಕೂಡಾ ಯಶಸ್ವಿ ಬದುಕನ್ನು ಕಟ್ಟಿಕೊಂಡಿದ್ದೇವೆ.

 

ಈ ಪುಟ್ಟ ದೇಶವಾದ ಓಮಾನ್‌ನಲ್ಲಿಯೂ ನಮ್ಮ ಕೂಟಗಳ ಮುಖೇನ ಒಂದಾಗಿ, ದೈವ,ದೇವಾಲಯ ನಿರ್ಮಾಣದಿಂದ ಹಿಡಿದು ಅನೇಕ ಸಾಮಾಜಿಕ ಹಾಗೂ ಮಾನವೀಯ ಕೊಡುಗೆಗಳ ಕಾರ್ಯಗಳಲ್ಲಿ ತೊಡಗಿಸಿಕೊಂಡಿದ್ದೇವೆ. ದುಡಿದು ಉಳಿಸಿದ ಹಣದಿಂದ ಸಾಧ್ಯವಾದಷ್ಟು ನಮ್ಮವರಿಗೂ, ಅಗತ್ಯವಿರುವ ಬಂಧು-ಮಿತ್ರರಿಗೂ ಆಸರೆಯಾಗುತ್ತಿದ್ದೇವೆ. ಅದರ ಜೊತೆಗೆ, ನಮ್ಮ ಕರ್ಮಭೂಮಿಗೂ ಏನಾದರೂ ನಮ್ಮಿಂದ ಕೊಡುಗೆ ಇರಬೇಕು ಎಂಬ ನಿಟ್ಟಿನಲ್ಲಿ ಕೈಗೊಂಡ ಅತ್ಯಂತ ಮಹತ್ವದ ಸೇವೆಯೇ ರಕ್ತದಾನ ಶಿಬಿರ

 

ಒಂದು ಸಮಯದಲ್ಲಿ ಓಮಾನ್ ನಲ್ಲಿ ರಕ್ತದಾನ ಶಿಬಿರಗಳು ಹೆಚ್ಚಾಗಿ ಭಾರತೀಯ ಸಾಮಾಜಿಕ ಸಂಸ್ಥೆಗಳ ಮೂಲಕ ಅಥವಾ ಕೆಲವು ಕಂಪನಿಗಳ ಸಹಕಾರದಿಂದ ನಡೆಯುತ್ತಿದ್ದವು. ಆ ದಿನಗಳಲ್ಲಿ ಕರ್ನಾಟಕದ ಕಡೆಯಿಂದ, ವಿಶೇಷವಾಗಿ ಸಮುದಾಯಿಕವಾಗಿ ಇಂತಹ ಶಿಬಿರಗಳು ಹೆಚ್ಚಾಗಿ ನಡೆಯುತ್ತಿರಲಿಲ್ಲ. ಆದರೆ 2017ರಲ್ಲಿ ನಮ್ಮ ಬಿಲ್ಲವ ಬಂಧುಗಳು ಒಂದಾಗಿ ಮೊದಲ ಬಾರಿಗೆ ರಕ್ತದಾನ ಶಿಬಿರವನ್ನು ಆಯೋಜಿಸಿ, ಸುಮಾರು 65 ಜನರು ರಕ್ತದಾನ ಮಾಡುವ ಮೂಲಕ ಜೀವ ಉಳಿಸುವ ಕಾರ್ಯಕ್ಕೆ ಭದ್ರವಾದ ಚಾಲನೆ ನೀಡಿದರು.

 

ಅದರ ನಂತರದ ದಿನಗಳಲ್ಲಿ ನಮ್ಮ ಶಿಬಿರಗಳು ಸಾವಿರ ಯುನಿಟ್‌ಗಿಂತಲೂ ಹೆಚ್ಚು ರಕ್ತವನ್ನು ದಾನವಾಗಿ ಓಮನ್ ಬ್ಲಡ್ ಬ್ಯಾಂಕ್ ಗೆ ನೀಡಿರುವುದು ಗಮನಾರ್ಹ ಸಾಧನೆ. ರಕ್ತ ಶೇಖರಣೆ ಕಡಿಮೆಯಾದಾಗ ಅಥವಾ ವಿಶೇಷವಾಗಿ O ಪಾಸಿಟಿವ್ ರಕ್ತದ ಅಗತ್ಯವಿದ್ದ ಸಂದರ್ಭಗಳಲ್ಲಿ, ರಕ್ತ ಬ್ಯಾಂಕ್‌ಗಳಿಂದ ನಮ್ಮನ್ನು ನೇರವಾಗಿ ಸಂಪರ್ಕಿಸುವ ಮಟ್ಟಿಗೆ ನಮ್ಮ ಸೇವೆ ವಿಶ್ವಾಸಾರ್ಹವಾಗಿ ಬೆಳೆದಿದೆ.

 

ನಮ್ಮ ಶಿಬಿರಗಳ ಯಶಸ್ಸನ್ನು ಕಂಡು, ಇತರ ಜಾತಿ ಸಮುದಾಯದ ವರು ಹಾಗೂ ಅನ್ಯ ಧರ್ಮದವರೂ ಕೂಡಾ ನಮ್ಮ ಮಾದರಿಯನ್ನು ಅನುಸರಿಸಿ ರಕ್ತದಾನ ಶಿಬಿರಗಳನ್ನು ಆಯೋಜಿಸಿ ಜೀವ ಉಳಿಸುವ ಕಾರ್ಯಕ್ಕೆ ಮುಂದಾದರು. ಈ ಮೂಲಕ ನಮ್ಮ ಬಿಲ್ಲವ ಬಂಧುಗಳ ಸೇವೆ ಮಸ್ಕತ್‌ನಲ್ಲಷ್ಟೇ ಅಲ್ಲದೆ ಇತರ ಗಲ್ಫ್ ದೇಶಗಳಲ್ಲಿಯೂ ಪ್ರಶಂಸೆಗೆ ಪಾತ್ರವಾಯಿತು.

 

ರಕ್ತದಾನ ಶಿಬಿರವು ಕೇವಲ ದಾನದ ಕಾರ್ಯಕ್ರಮವಾಗಿರಲಿಲ್ಲ; ಅದು ನಮ್ಮತನದ, ಸೇರಿಕೆಯ ಮತ್ತು ಸಹೋದರತ್ವದ ಸಂಕೇತವಾಗಿತ್ತು. ನೂಲ ಹುಣ್ಣುಮೆಯ ತಿಂಗಳಲ್ಲಿ ನಡೆದ ಶಿಬಿರದಲ್ಲಿ ರಾಕಿ ಕಟ್ಟುವ ಕಾರ್ಯವನ್ನು ಮಾಡಲಾಗಿತ್ತು. ರಕ್ತ ದಾನಿಗಳಗಿ ನಮ್ಮ ಬಿಲ್ಲವ ಮಹಿಳಾ ಬಳಗವು ಪುರುಷರಷ್ಟೆ ಉತ್ಸಾಹ ತೋರಿದರು. ಕೋವಿಡ್‌ ನಂತರದ ಸಮಯದಲ್ಲಿಯೂ ಶಿಬಿರ ಅಯೂಜನೆ ನಡೆದವು ಮಾನವೀಯ ಸಂಬಂಧಗಳ ಮೌಲ್ಯವನ್ನು ಇನ್ನಷ್ಟು ಗಟ್ಟಿಗೊಳಿಸಿದ್ದೇವೆ ಎನ್ನುವ ಸಾರ್ಥಕ ಭಾವನೆ ನಮ್ಮಲ್ಲಿ ಎಂದಿಗೂ…..

ತಾವೂ ಬನ್ನಿ ತಮ್ಮವರ ಕರೆ ತನ್ನಿ ಜೀವ ಉಳಿಸುವ ಕಾರ್ಯಕ್ಕೆ ಜೈ ಎನ್ನಿ.

 

🙏🙏🙏

ಮಾನ್ಯದಲಿ

ಶಿವಾನಂದ ಕೋಟ್ಯಾನ್.


Related Posts

ಕುದ್ರೋಳಿ ಗೋಕರ್ಣ ಕ್ಷೇತ್ರ ಅಭಿವೃದ್ಧಿ ರೂವಾರಿ ಬಿ. ಜನಾರ್ದನ ಪೂಜಾರಿ ಅವರ ಉಪಸ್ಥಿತಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಪದ್ಮರಾಜ್ ಆರ್. ಸ್ಪಷ್ಟನೆ


Share         ಮಂಗಳೂರು: ಕುದ್ರೋಳಿ ಗೋಕರ್ಣನಾಥ ಕ್ಷೇತ್ರದ ಆಡಳಿತ ನಿರ್ವಹಣೆಗೆ ಪ್ರಸ್ತುತ ಇರುವ ಸಮಿತಿಯ ಹೊರತಾಗಿ ಯಾವುದೇ ಹೊಸ ಸಮಿತಿ ರಚನೆಯಾಗಿಲ್ಲ ಎಂದು ಸಮಿತಿಯ ಕೋಶಾಧಿಕಾರಿ ಪದ್ಮರಾಜ್ ಆರ್. ಶನಿವಾರ ಇಲ್ಲಿ ತಿಳಿಸಿದರು. ಕ್ಷೇತ್ರದ ಅಭಿವೃದ್ಧಿ


Read More »

ಶೈಕ್ಷಣಿಕ ಸಾಧನೆಯಲ್ಲೂ ‘ಸೇಮ್ ಟು ಸೇಮ್’: ಕುಂದಾಪುರದ ಅವಳಿ ಸಹೋದರಿಯರ SSLC ಪವಾಡ!


Share         ​ಕುಂದಾಪುರ: ಅವಳಿ ಜವಳಿ ಮಕ್ಕಳು ಅಂದಮೇಲೆ ಅವರ ರೂಪ, ಬಣ್ಣ, ನಡವಳಿಕೆ ಹಾಗೂ ಆಲೋಚನೆಗಳಲ್ಲಿ ಸಾಮ್ಯತೆ ಇರುವುದು ಸಹಜ ಸಂಗತಿ. ಆದರೆ, ಕುಂದಾಪುರದ ಈ ಇಬ್ಬರು ಸಹೋದರಿಯರು ಶೈಕ್ಷಣಿಕ ಸಾಧನೆಯಲ್ಲೂ ತಾವು ಸಂಪೂರ್ಣವಾಗಿ


Read More »

ಮಂಗಳೂರು ದಸರಾ ಇತಿಹಾಸದಲ್ಲಿ ಹೊಸ ಮೈಲಿಗಲ್ಲು – ₹67 ಕೋಟಿ ವೆಚ್ಚದ ಭೂಗತ ಕೇಬಲ್ ಯೋಜನೆಗೆ ಮಂಜೂರಾತಿ


Share         ವಿಶ್ವವಿಖ್ಯಾತ ಮಂಗಳೂರು ದಸರಾ ಮಹೋತ್ಸವದ ಮೆರವಣಿಗೆಗೆ ದಶಕಗಳಿಂದ ಎದುರಾಗಿದ್ದ ತಾಂತ್ರಿಕ ಸವಾಲಿಗೆ ಈಗ ಶಾಶ್ವತ ಪರಿಹಾರ ಸಿಕ್ಕಂತಾಗಿದೆ. ಕುದ್ರೋಳಿ ಶ್ರೀ ಗೋಕರ್ನಾಥ ಕ್ಷೇತ್ರದ ಆಡಳಿತ ಮಂಡಳಿಯ ಸುದೀರ್ಘ ಪ್ರಯತ್ನದ ಫಲವಾಗಿ, ಮೆರವಣಿಗೆ ಮಾರ್ಗದಲ್ಲಿ


Read More »

ಉಡುಪಿ ಸಿಟಿ ಬಸ್‌ ಚಾಲಕನ ಮಗಳು ಶಾಲೆಗೆ ಪ್ರಥಮ ರಾಂಕ್ – ದ್ರುತಿ ಪೂಜಾರಿ ಸಾಧನೆ…


Share         ಉಡುಪಿ: ಶ್ರಮ, ಸಂಕಲ್ಪ ಮತ್ತು ಕುಟುಂಬದ ಬೆಂಬಲ ಇದ್ದರೆ ಯಾವ ಸಾಧನೆಯೂ ಅಸಾಧ್ಯವಲ್ಲ ಎಂಬುದಕ್ಕೆ ನಗರದ ಸಿಟಿ ಬಸ್ ಚಾಲಕರ ಮಗಳು ದ್ರುತಿ ಪೂಜಾರಿ ಉತ್ತಮ ಉದಾಹರಣೆ ಆಗಿದ್ದಾಳೆ. 23/04/2026 ರಂದು ಪ್ರಕಟವಾದ


Read More »

ಶ್ರೀಯುತ ಮಂಜುನಾಥ ಪೂಜಾರಿ ಮುದ್ರಾಡಿ ಅವರಿಗೆ ಅವರಿಗೆ ರಾಜ್ಯ ಸಚಿವರ ಸ್ಥಾನಮಾನ


Share         ಶ್ರೀ ನಾರಾಯಣ ಗುರು ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಶ್ರೀಯುತ ಮಂಜುನಾಥ ಪೂಜಾರಿ ಮುದ್ರಾಡಿ ಅವರಿಗೆ ರಾಜ್ಯ ಸಚಿವರ ಸ್ಥಾನಮಾನ ಲಭಿಸಿರುವುದು ನಮ್ಮ ಸಮಾಜಕ್ಕೆ ಹೆಮ್ಮೆಯ ಸಂಗತಿ. ಈ ಕುರಿತು ಏಪ್ರಿಲ್ 2ರಂದು ಸರಕಾರದ


Read More »

ಕಾರ್ಕಳದ ಸುಧಾಕರ್ ಪೂಜಾರಿಗೆ ‘ಐಕಾನಿಕ್ ಟ್ರೈನರ್’ ಗೌರವ ಪದವಿ


Share         ಬೆಂಗಳೂರು: ಎಕ್ಕಾರ ಲೈಫ್ ಸೈನ್ಸಸ್ ಪ್ರೈವೇಟ್ ಲಿಮಿಟೆಡ್ ಇದರ ಆಡಳಿತ ನಿರ್ದೇಶಕರಾದ ಕಾರ್ಕಳದ ಸುಧಾಕರ್ ಪೂಜಾರಿ ಅವರಿಗೆ ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ವತಿಯಿಂದ “ಐಕಾನಿಕ್ ಟ್ರೈನರ್” ಎಂಬ ಗೌರವಪೂರ್ಣ ಪದವಿ ಪ್ರದಾನ ಮಾಡಲಾಗಿದೆ.


Read More »