TOP STORIES:

ಮಾನ್ಯ ಸಂಸದರು ಶಾಸಕರುಗಳಿಗೆ. ಕೋಟಿ ಚೆನ್ನಯ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಮಂಗಳೂರು” ಎಂಬ ಹೆಸರಿನಿಂದ ನಾಮಕರಣ ಮಾಡುವ ಕುರಿತು ಮನವಿ :


ಮಾನ್ಯ ಸಂಸದರು ಶಾಸಕರುಗಳಿಗೆ.!

ಮಂಗಳೂರು ಬಜಪೆ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ “ಕೋಟಿ ಚೆನ್ನಯ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಮಂಗಳೂರು” ಎಂಬ ಹೆಸರಿನಿಂದ ನಾಮಕರಣ ಮಾಡುವ ಕುರಿತು ಮನವಿ.

✒️ ಪ್ರಶಾಂತ್ ಪೂಜಾರಿ ಮಸ್ಕತ್, ಪಜೀರ್

ಮೇಲ್ಕಾಣಿಸಿದ ವಿಷಯಕ್ಕೆ ಸಂಬಂಧಿಸಿದಂತೆ ನಿವೇದಿಸಿಕೊಳ್ಳುವುದೇನೆಂದರೆ ಸುಮಾರು ಐದು ಶತಮಾನಗಳ ಹಿಂದೆ ತುಳುನಾಡ ಮಣ್ಣಲ್ಲಿ ಅವತಾರ ತಾಳಿ ತಮ್ಮ ಜೀವಿತಾವಧಿಯ ಕಾಲದಲ್ಲಿಯೇ 66 ಗರಡಿ ಮತ್ತು 33 ತಾವು ಗಳನ್ನು ನಿರ್ಮಿಸಿ ಸತ್ಯ, ಧರ್ಮಕ್ಕಾಗಿ ಹೋರಾಡಿ ಅಮರರಾದ ಕಾಯ ಬಿಟ್ಟು ಮಹಾ ಶಕ್ತಿಗಳಾಗಿ ಬ್ರಹ್ಮೈಖ್ಯರಾದ ಕೋಟಿ ಚೆನ್ನಯರನ್ನು ಇಂದಿಗೂ ಕರ್ನಾಟಕದ ಕರಾವಳಿ ಭಾಗ, ಮಡಿಕೇರಿ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆ ಮಾತ್ರವಲ್ಲದೆ ನೆರೆಯ ರಾಜ್ಯವಾದ ಮಹರಾಷ್ಟ್ರದ ಮುಂಬೈ, ಕೇರಳದ ಕಾಸರಗೋಡು ಜಿಲ್ಲೆಯಲ್ಲಿ ಸೇರಿದಂತೆ ವಿವಿಧ ಧರ್ಮದವರು ಸುಮಾರು 260 ಕ್ಕೂ ಹೆಚ್ಚು ಗರಡಿಗಳನ್ನು ನಿರ್ಮಿಸಿ ಕೋಟಿ ಚೆನ್ನಯರನ್ನು ಆರಾಧಿಸುತ್ತಿದ್ದು, ಸದರಿ ಗರಡಿಗಳಿಗೆ ಜಾತಿ ಭೇದ ಮರೆತು ಜಾತ್ರಮಹೋತ್ಸವ ಹಾಗೂ ಇನ್ನಿತರ ಕಾರ್ಯಕ್ರಮಗಳಿಗೆ ಲಕ್ಷಾಂತರ ಭಕ್ತರು ಭಾಗವಹಿಸುತ್ತಾರೆ. ನಾಡಿನಾದ್ಯಂತ ದೇಶ, ವಿದೇಶಗಳಲ್ಲಿ ಕೋಟ್ಯಾಂತರ ಭಕ್ತರಿರುತ್ತಾರೆ. ಮಂಗಳೂರು ನಗರದ ಹೃದಯ ಭಾಗದಲ್ಲಿರುವ ಕಂಕನಾಡಿ ಶ್ರೀ ಬ್ರಹ್ಮಬೈದರ್ಕಳ ಗರೋಡಿ ಕ್ಷೇತ್ರದ ವರ್ಷಂಪ್ರತಿ ಜಾತ್ರೆಗೆ ಜಾತಿ ಭೇದ ಮರೆತು ಲಕ್ಷಾಂತರ ಭಕ್ತರು ದೇಶ ವಿದೇಶಗಳಿಂದ ಆಗಮಿಸುವ ಭಕ್ತಜನ ಸಮೂಹವೇ ಇದಕ್ಕೆ ಸಾಕ್ಷಿಯಾಗಿರುತ್ತದೆ.

           ಪ್ರಸ್ತುತ ಕೋಟಿ ಚೆನ್ನಯರು ಹುಟ್ಟಿ ಬೆಳೆದ ಸ್ಥಳವಾದ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಪಡುಮಲೆಯ ಗೆಜ್ಜೆಗಿರಿ ನಂದನ ಬಿತ್ತ್’ಲ್ ಎಂಬಲ್ಲಿ ಮೂಲಸ್ಥಾನ ಗರಡಿ 2020 ರ ಫೆಬ್ರುವರಿ 28 ರಂದು ಪ್ರತಿಷ್ಠಾ ಬ್ರಹ್ಮಕಲಶೋತ್ಸವದೊಂದಿಗೆ ಲೋಕಾರ್ಪಣೆಗೊಂಡಿದೆ. ಈ ಕಾರ್ಯಕ್ರಮದಲ್ಲಿ 15 ಲಕ್ಷಕ್ಕೂ ಅಧಿಕ ಭಕ್ತರು ಪಾಲ್ಗೊಂಡಿದ್ದು ಇದು ತುಳುನಾಡಿನ ಇತಿಹಾಸ ಪುಟದಲ್ಲಿ ಚರಿತ್ರೆ ನಿರ್ಮಾಣ ಆಗಿತ್ತು. ಈ ಸಂದರ್ಭದಲ್ಲಿ ಅವರುಗಳ ಭಕ್ತಾದಿಗಳೆಲ್ಲರ ಅಭಿಲಾಷೆಯಂತೆ, ಸರ್ವ ಧರ್ಮೀಯರು ಆರಾಧಿಸುವ ಆರಾಧ್ಯ ಪುರುಷರು, ಅವಳಿ ವೀರರೆಂದು ವಿರಾಜಮಾನರಾಗಿರುವ ಕೋಟಿ ಚೆನ್ನಯರ ಹೆಸರು ವಿಶ್ವ ಮಟ್ಟದಲ್ಲಿ ಬೆಳಗುವಂತೆ ಮಾಡಲು ಮಂಗಳೂರು ಬಜಪೆ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ *”ಕೋಟಿ ಚೆನ್ನಯ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಮಂಗಳೂರು”*  ಎಂಬ ಹೆಸರಿನಲ್ಲಿ ನಾಮಕರಣಗೊಳಿಸಿ ಆದೇಶ ಹೊರಡಿಸುವಂತೆ ಸಂಬಂಧಪಟ್ಟ ಇಲಾಖೆಗೆ ಸೂಚಿಸುವಂತೆ ವಿನಯ ಪೂರ್ವಕವಾಗಿ ವಿನಂತಿಸುತ್ತೇವೆ.

ನಾಲ್ಕು ವರ್ಷಗಳ ಹಿಂದೆ…

ಗಮನಕ್ಕೆ :-1, ಬಜಪೆ ವಿಮಾನ ನಿಲ್ದಾಣದ ಸ್ಥಳೀಯ ಮಳವೂರು ಗ್ರಾಮ ಪಂಚಾಯತ್ ನ ನಿರ್ಣಯ ಪ್ರತಿಯನ್ನು ಲಗತ್ತಿಸಲಾಗಿದೆ.

2, ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಅಧ್ಯಕ್ಷೆ ಮೀನಾಕ್ಷಿ ಶಾಂತಿಗೋಡು ನೇತೃತ್ವದಲ್ಲಿ ಮಂಗಳೂರು ವಿಮಾನ ನಿಲ್ದಾಣಕ್ಕೆ ಕೋಟಿ ಚೆನ್ನಯರ ಹೆಸರಿಡಲು ಸಾಮಾನ್ಯ ಸಭೆಯಲ್ಲಿ ಸರ್ವಾನುಮತದ ನಿರ್ಣಯ ಕೈಗೊಂಡು ಪ್ರಸ್ತಾವಣೆಯು ರಾಜ್ಯ ಸರಕಾರಕ್ಕೆ ಸಲ್ಲಿಕೆಯಾಗಿದೆ..

ಆದುದರಿಂದ ಕರ್ನಾಟಕ ಸರ್ಕಾರದ ಮಾನ್ಯ ಮುಖ್ಯಮಂತ್ರಿಗಳಿಗೆ ತಾವುಗಳು ಶ್ರೀ ಕೋಟಿ ಚೆನ್ನಯರ ಹೆಸರನ್ನು ಮಂಗಳೂರು ವಿಮಾನ ನಿಲ್ದಾಣಕ್ಕೆ ನಾಮಕರಣ ಮಾಡುವಂತೆ ಇದೇ ಬರುವ ವಿಧಾನ ಮಂಡಲದ ಅಧಿವೇಶನದಲ್ಲಿ ಶಿಫಾರಸು ಮಾಡುವ ನಿರ್ಧಾರವನ್ನು ಕೈಗೊಳ್ಳುವಂತೆ ಮನವಿ..


Related Posts

ರಾಜ್ಯದಲ್ಲಿ ರಚನೆಯಾಗಲಿರುವ ನೂತನ ಸಚಿವ ಸಂಪುಟ ಸಚಿವ ಸಂಪುಟದಲ್ಲಿ ಬಿಲ್ಲವ ಸಮಾಜಕ್ಕೆ ಸೂಕ್ತ ಪ್ರಾತಿನಿಧ್ಯ ನೀಡಬೇಕು


Share         ಹಿರಿಯ ಕಾಂಗ್ರೆಸ್ ನಾಯಕ ಬಿ.ಕೆ. ಹರಿಪ್ರಸಾದ್ ಅವರಿಗೆ ಸಚಿವ ಸ್ಥಾನ ನೀಡಬೇಕು ಬಿಲ್ಲವ ಸಮಾಜಕ್ಕೆ ನ್ಯಾಯಯುತ ಪ್ರಾತಿನಿಧ್ಯ ಒದಗಿಸಬೇಕು ಸೋಲೂರು ಮಠದ ಪೀಠಾಧಿಪತಿಗಳಾದ ಶ್ರೀ ಶ್ರೀ ವಿಖ್ಯಾತಾನಂದ ಸ್ವಾಮೀಜಿ ಆಗ್ರಹ ರಾಜ್ಯದಲ್ಲಿ ರಚನೆಯಾಗಲಿರುವ


Read More »

ಕುಂದಾಪುರ ಬಿಲ್ಲವ ಸಮಾಜ ಸೇವಾ ಸಂಘದ ಅಧ್ಯಕ್ಷರಾಗಿ ಅಶೋಕ್ ಪೂಜಾರಿ ಪುನಾರಾಯ್ಕೆ


Share         ಕುಂದಾಪುರ, ಮೇ 24: ಬಿಲ್ಲವ ಸಮಾಜ ಸೇವಾ ಸಂಘ ಕುಂದಾಪುರ ಇದರ 2025-26ನೇ ಸಾಲಿನ ವಾರ್ಷಿಕ ಮಹಾಸಭೆಯು ರವಿವಾರ ಶ್ರೀ ನಾರಾಯಣ ಗುರು ಕಲ್ಯಾಣ ಮಂಟಪದಲ್ಲಿ ಜರಗಿತು. ಕುಂದಾಪುರ ಬಿಲ್ಲವ ಸಮಾಜ ಸೇವಾ


Read More »

ನಿಸ್ವಾರ್ಥ ಸೇವೆ ಸಲ್ಲಿಸಿ “ಜನಸ್ನೇಹಿ ಪೊಲೀಸ್” ಎಂಬ ಹೆಗ್ಗಳಿಕೆಗೆ ಪಾತ್ರರಾಗಿರುವ ನಮ್ಮ ಸಮಾಜದ ಹೆಮ್ಮೆ ಎಸಿಪಿ ಶ್ರೀ ಎಸ್. ಮಹೇಶ್ ಕುಮಾರ್


Share         ಶ್ರೀ ಎಸ್. ಮಹೇಶ್ ಕುಮಾರ್ ಅವರು ಕಳೆದ 25 ವರ್ಷಗಳಿಂದ ಪೊಲೀಸ್ ಇಲಾಖೆಯಲ್ಲಿ ನಿಸ್ವಾರ್ಥ ಸೇವೆ ಸಲ್ಲಿಸಿ “ಜನಸ್ನೇಹಿ ಪೊಲೀಸ್” ಎಂಬ ಹೆಗ್ಗಳಿಕೆಗೆ ಪಾತ್ರರಾಗಿರುವುದು ಅವರ ಕರ್ತವ್ಯನಿಷ್ಠೆ ಮತ್ತು ಮಾನವೀಯತೆಯ ಪ್ರತೀಕವಾಗಿದೆ. 2012ರಲ್ಲಿ


Read More »

10ನೇ ಅಖಿಲ ಭಾರತ ಅರ್ಬನ್ ಕೋ-ಆಪರೇಟಿವ್ ಬ್ಯಾಂಕಿಂಗ್ ಶೃಂಗಸಭೆಯಲ್ಲಿ ಭಾರತ್ ಬ್ಯಾಂಕಿಗೆ ಪ್ರತಿಷ್ಠಿತ ಲೀಡಿಂಗ್ ಬ್ಯಾಂಕ್ ಅವಾರ್ಡ್.


Share         ಪುಣೆಯ ಕೊರೆಗಾಂವ್ ಪಾರ್ಕ್‌ನ ಹೋಟೆಲ್ ವೆಸ್ಟಿನ್‌ನಲ್ಲಿ ನಡೆದ 10ನೇ ಅಖಿಲ ಭಾರತ ಅರ್ಬನ್ ಕೋ-ಆಪರೇಟಿವ್ ಬ್ಯಾಂಕಿಂಗ್ ಶೃಂಗಸಭೆಯಲ್ಲಿ ಭಾರತ್ ಬ್ಯಾಂಕಿಗೆ ಪ್ರತಿಷ್ಠಿತ “ಲೀಡಿಂಗ್ ಬ್ಯಾಂಕ್ ಅವಾರ್ಡ್” (Leading Bank Award) ನೀಡಿ ಗೌರವಿಸಲಾಯಿತು.


Read More »

ಕುದ್ರೋಳಿ ಗೋಕರ್ಣ ಕ್ಷೇತ್ರ ಅಭಿವೃದ್ಧಿ ರೂವಾರಿ ಬಿ. ಜನಾರ್ದನ ಪೂಜಾರಿ ಅವರ ಉಪಸ್ಥಿತಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಪದ್ಮರಾಜ್ ಆರ್. ಸ್ಪಷ್ಟನೆ


Share         ಮಂಗಳೂರು: ಕುದ್ರೋಳಿ ಗೋಕರ್ಣನಾಥ ಕ್ಷೇತ್ರದ ಆಡಳಿತ ನಿರ್ವಹಣೆಗೆ ಪ್ರಸ್ತುತ ಇರುವ ಸಮಿತಿಯ ಹೊರತಾಗಿ ಯಾವುದೇ ಹೊಸ ಸಮಿತಿ ರಚನೆಯಾಗಿಲ್ಲ ಎಂದು ಸಮಿತಿಯ ಕೋಶಾಧಿಕಾರಿ ಪದ್ಮರಾಜ್ ಆರ್. ಶನಿವಾರ ಇಲ್ಲಿ ತಿಳಿಸಿದರು. ಕ್ಷೇತ್ರದ ಅಭಿವೃದ್ಧಿ


Read More »

ಶೈಕ್ಷಣಿಕ ಸಾಧನೆಯಲ್ಲೂ ‘ಸೇಮ್ ಟು ಸೇಮ್’: ಕುಂದಾಪುರದ ಅವಳಿ ಸಹೋದರಿಯರ SSLC ಪವಾಡ!


Share         ​ಕುಂದಾಪುರ: ಅವಳಿ ಜವಳಿ ಮಕ್ಕಳು ಅಂದಮೇಲೆ ಅವರ ರೂಪ, ಬಣ್ಣ, ನಡವಳಿಕೆ ಹಾಗೂ ಆಲೋಚನೆಗಳಲ್ಲಿ ಸಾಮ್ಯತೆ ಇರುವುದು ಸಹಜ ಸಂಗತಿ. ಆದರೆ, ಕುಂದಾಪುರದ ಈ ಇಬ್ಬರು ಸಹೋದರಿಯರು ಶೈಕ್ಷಣಿಕ ಸಾಧನೆಯಲ್ಲೂ ತಾವು ಸಂಪೂರ್ಣವಾಗಿ


Read More »