TOP STORIES:

FOLLOW US

ಮಾನ್ಯ ಸಂಸದರು ಶಾಸಕರುಗಳಿಗೆ. ಕೋಟಿ ಚೆನ್ನಯ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಮಂಗಳೂರು” ಎಂಬ ಹೆಸರಿನಿಂದ ನಾಮಕರಣ ಮಾಡುವ ಕುರಿತು ಮನವಿ :


ಮಾನ್ಯ ಸಂಸದರು ಶಾಸಕರುಗಳಿಗೆ.!

ಮಂಗಳೂರು ಬಜಪೆ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ “ಕೋಟಿ ಚೆನ್ನಯ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಮಂಗಳೂರು” ಎಂಬ ಹೆಸರಿನಿಂದ ನಾಮಕರಣ ಮಾಡುವ ಕುರಿತು ಮನವಿ.

✒️ ಪ್ರಶಾಂತ್ ಪೂಜಾರಿ ಮಸ್ಕತ್, ಪಜೀರ್

ಮೇಲ್ಕಾಣಿಸಿದ ವಿಷಯಕ್ಕೆ ಸಂಬಂಧಿಸಿದಂತೆ ನಿವೇದಿಸಿಕೊಳ್ಳುವುದೇನೆಂದರೆ ಸುಮಾರು ಐದು ಶತಮಾನಗಳ ಹಿಂದೆ ತುಳುನಾಡ ಮಣ್ಣಲ್ಲಿ ಅವತಾರ ತಾಳಿ ತಮ್ಮ ಜೀವಿತಾವಧಿಯ ಕಾಲದಲ್ಲಿಯೇ 66 ಗರಡಿ ಮತ್ತು 33 ತಾವು ಗಳನ್ನು ನಿರ್ಮಿಸಿ ಸತ್ಯ, ಧರ್ಮಕ್ಕಾಗಿ ಹೋರಾಡಿ ಅಮರರಾದ ಕಾಯ ಬಿಟ್ಟು ಮಹಾ ಶಕ್ತಿಗಳಾಗಿ ಬ್ರಹ್ಮೈಖ್ಯರಾದ ಕೋಟಿ ಚೆನ್ನಯರನ್ನು ಇಂದಿಗೂ ಕರ್ನಾಟಕದ ಕರಾವಳಿ ಭಾಗ, ಮಡಿಕೇರಿ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆ ಮಾತ್ರವಲ್ಲದೆ ನೆರೆಯ ರಾಜ್ಯವಾದ ಮಹರಾಷ್ಟ್ರದ ಮುಂಬೈ, ಕೇರಳದ ಕಾಸರಗೋಡು ಜಿಲ್ಲೆಯಲ್ಲಿ ಸೇರಿದಂತೆ ವಿವಿಧ ಧರ್ಮದವರು ಸುಮಾರು 260 ಕ್ಕೂ ಹೆಚ್ಚು ಗರಡಿಗಳನ್ನು ನಿರ್ಮಿಸಿ ಕೋಟಿ ಚೆನ್ನಯರನ್ನು ಆರಾಧಿಸುತ್ತಿದ್ದು, ಸದರಿ ಗರಡಿಗಳಿಗೆ ಜಾತಿ ಭೇದ ಮರೆತು ಜಾತ್ರಮಹೋತ್ಸವ ಹಾಗೂ ಇನ್ನಿತರ ಕಾರ್ಯಕ್ರಮಗಳಿಗೆ ಲಕ್ಷಾಂತರ ಭಕ್ತರು ಭಾಗವಹಿಸುತ್ತಾರೆ. ನಾಡಿನಾದ್ಯಂತ ದೇಶ, ವಿದೇಶಗಳಲ್ಲಿ ಕೋಟ್ಯಾಂತರ ಭಕ್ತರಿರುತ್ತಾರೆ. ಮಂಗಳೂರು ನಗರದ ಹೃದಯ ಭಾಗದಲ್ಲಿರುವ ಕಂಕನಾಡಿ ಶ್ರೀ ಬ್ರಹ್ಮಬೈದರ್ಕಳ ಗರೋಡಿ ಕ್ಷೇತ್ರದ ವರ್ಷಂಪ್ರತಿ ಜಾತ್ರೆಗೆ ಜಾತಿ ಭೇದ ಮರೆತು ಲಕ್ಷಾಂತರ ಭಕ್ತರು ದೇಶ ವಿದೇಶಗಳಿಂದ ಆಗಮಿಸುವ ಭಕ್ತಜನ ಸಮೂಹವೇ ಇದಕ್ಕೆ ಸಾಕ್ಷಿಯಾಗಿರುತ್ತದೆ.

           ಪ್ರಸ್ತುತ ಕೋಟಿ ಚೆನ್ನಯರು ಹುಟ್ಟಿ ಬೆಳೆದ ಸ್ಥಳವಾದ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಪಡುಮಲೆಯ ಗೆಜ್ಜೆಗಿರಿ ನಂದನ ಬಿತ್ತ್’ಲ್ ಎಂಬಲ್ಲಿ ಮೂಲಸ್ಥಾನ ಗರಡಿ 2020 ರ ಫೆಬ್ರುವರಿ 28 ರಂದು ಪ್ರತಿಷ್ಠಾ ಬ್ರಹ್ಮಕಲಶೋತ್ಸವದೊಂದಿಗೆ ಲೋಕಾರ್ಪಣೆಗೊಂಡಿದೆ. ಈ ಕಾರ್ಯಕ್ರಮದಲ್ಲಿ 15 ಲಕ್ಷಕ್ಕೂ ಅಧಿಕ ಭಕ್ತರು ಪಾಲ್ಗೊಂಡಿದ್ದು ಇದು ತುಳುನಾಡಿನ ಇತಿಹಾಸ ಪುಟದಲ್ಲಿ ಚರಿತ್ರೆ ನಿರ್ಮಾಣ ಆಗಿತ್ತು. ಈ ಸಂದರ್ಭದಲ್ಲಿ ಅವರುಗಳ ಭಕ್ತಾದಿಗಳೆಲ್ಲರ ಅಭಿಲಾಷೆಯಂತೆ, ಸರ್ವ ಧರ್ಮೀಯರು ಆರಾಧಿಸುವ ಆರಾಧ್ಯ ಪುರುಷರು, ಅವಳಿ ವೀರರೆಂದು ವಿರಾಜಮಾನರಾಗಿರುವ ಕೋಟಿ ಚೆನ್ನಯರ ಹೆಸರು ವಿಶ್ವ ಮಟ್ಟದಲ್ಲಿ ಬೆಳಗುವಂತೆ ಮಾಡಲು ಮಂಗಳೂರು ಬಜಪೆ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ *”ಕೋಟಿ ಚೆನ್ನಯ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಮಂಗಳೂರು”*  ಎಂಬ ಹೆಸರಿನಲ್ಲಿ ನಾಮಕರಣಗೊಳಿಸಿ ಆದೇಶ ಹೊರಡಿಸುವಂತೆ ಸಂಬಂಧಪಟ್ಟ ಇಲಾಖೆಗೆ ಸೂಚಿಸುವಂತೆ ವಿನಯ ಪೂರ್ವಕವಾಗಿ ವಿನಂತಿಸುತ್ತೇವೆ.

ನಾಲ್ಕು ವರ್ಷಗಳ ಹಿಂದೆ…

ಗಮನಕ್ಕೆ :-1, ಬಜಪೆ ವಿಮಾನ ನಿಲ್ದಾಣದ ಸ್ಥಳೀಯ ಮಳವೂರು ಗ್ರಾಮ ಪಂಚಾಯತ್ ನ ನಿರ್ಣಯ ಪ್ರತಿಯನ್ನು ಲಗತ್ತಿಸಲಾಗಿದೆ.

2, ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಅಧ್ಯಕ್ಷೆ ಮೀನಾಕ್ಷಿ ಶಾಂತಿಗೋಡು ನೇತೃತ್ವದಲ್ಲಿ ಮಂಗಳೂರು ವಿಮಾನ ನಿಲ್ದಾಣಕ್ಕೆ ಕೋಟಿ ಚೆನ್ನಯರ ಹೆಸರಿಡಲು ಸಾಮಾನ್ಯ ಸಭೆಯಲ್ಲಿ ಸರ್ವಾನುಮತದ ನಿರ್ಣಯ ಕೈಗೊಂಡು ಪ್ರಸ್ತಾವಣೆಯು ರಾಜ್ಯ ಸರಕಾರಕ್ಕೆ ಸಲ್ಲಿಕೆಯಾಗಿದೆ..

ಆದುದರಿಂದ ಕರ್ನಾಟಕ ಸರ್ಕಾರದ ಮಾನ್ಯ ಮುಖ್ಯಮಂತ್ರಿಗಳಿಗೆ ತಾವುಗಳು ಶ್ರೀ ಕೋಟಿ ಚೆನ್ನಯರ ಹೆಸರನ್ನು ಮಂಗಳೂರು ವಿಮಾನ ನಿಲ್ದಾಣಕ್ಕೆ ನಾಮಕರಣ ಮಾಡುವಂತೆ ಇದೇ ಬರುವ ವಿಧಾನ ಮಂಡಲದ ಅಧಿವೇಶನದಲ್ಲಿ ಶಿಫಾರಸು ಮಾಡುವ ನಿರ್ಧಾರವನ್ನು ಕೈಗೊಳ್ಳುವಂತೆ ಮನವಿ..


Share:

More Posts

Category

Send Us A Message

Related Posts

ಫ್ರೆಂಡ್ಸ್ ಸುರತ್ಕಲ್ ತುಳುನಾಡ ಬಿರುವೆರ್ (ರಿ )ವತಿಯಿಂದ ಸಹಾಯ ಧನ ವಿತರಣೆ


Share       ಫ್ರೆಂಡ್ಸ್ ಸುರತ್ಕಲ್ ತುಳುನಾಡ ಬಿರುವೆರ್ ಸಂಘಟನೆಯ ಸಕ್ರಿಯ ಕಾರ್ಯಕರ್ತ ಹಾಗೂ ನಮ್ಮೆಲ್ಲರ ಅತ್ಮೀಯರಾದ ಯಶೋಧರ ಹೊಸಬೆಟ್ಟು ರುವರು ಹಲವು ದಿನಗಳ ಹಿಂದೆ ತೀವ್ರ ಅನಾರೋಗ್ಯಕ್ಕಿಡಾಗಿದ್ದು,  ಅವರ ಚಿಕಿತ್ಸೆಗಾಗಿ ಲಕ್ಷಾಂತರ ರೂಪಾಯಿಗಳ ಅಗತ್ಯವಿದ್ದು, ಅವರ


Read More »

ಡಾ . ರಶ್ಮಿ ಹರ್ಷ ಪೂಜಾರಿಯವರಿಗೆ ಡಾಕ್ಟರೇಟ್ ಪದವಿ


Share       ಡಾ . ರಶ್ಮಿ ಹರ್ಷ ಪೂಜಾರಿಯವರಿಗೆ ಡಾಕ್ಟರೇಟ್ ಪದವಿ ಡಾ. ಪವಿತ್ರ ಜಿ. ಪಿ. ಹಾಗೂ ಪ್ರವೀಣ್ ಬಿ.ಎಮ್  ರವರ ಮಾರ್ಗದರ್ಶನದಲ್ಲಿ  ಡಾ. ರಶ್ಮಿ ಹರ್ಷ ಪೂಜಾರಿ ಇವರು ರಸಾಯನ ಶಾಸ್ತ್ರ ವಿಭಾಗದಲ್ಲಿ


Read More »

ದುಬೈಯಲ್ಲಿ ಯಶಸ್ವಿ ಉದ್ಯಮಿಯಾಗಿ ಲೆಕ್ಕವಿಲ್ಲದಷ್ಟು ಸೇವೆಯನ್ನು ಸಮಾಜಕ್ಕೆ ಅರ್ಪಿಸುತ್ತಿರು ಸೇವಾ ಮಾಣಿಕ್ಯ ನಿಟ್ಟೆ ಸಂದೀಪ್ ಕೋಟ್ಯಾನ್ ಕಾರ್ಕಳ..!


Share       ಅನೇಕ ಜನ ಉದ್ಯಮ ಕ್ಷೇತ್ರದ ಯಶಸ್ವಿಯಾಗಿ ಮುಂದುವರೆದ ಉದ್ಯಮಿಗಳು ಪ್ರಸ್ತುತ ದಿನಗಳಲ್ಲಿ ಸಿಗುತ್ತಾರೆ, ಆದರೆ ತಾವು ಸಂಪಾದಿಸಿರುವ ಹಣವನ್ನು ಮಾತ್ರ ಸಮಾಜದಲ್ಲಿ ಕೇವಲ ಕಾರ್ಯಕ್ರಮ ಮನೊರಂಜನೆಗಳಿಗೆ ಬಳಸಿ ರಾಜಕೀಯ ನಾಯಕರು, ಉದ್ಯಮಿಗಳನ್ನು ಕರೆದು


Read More »

ಮಂಗಳೂರಿನ ಖ್ಯಾತ ಯುರೋಲಜಿಸ್ಟ್ ಡಾ. ಸದಾನಂದ ಪೂಜಾರಿಯವರಿಗೆ ಪ್ರೈಡ್ ಆಫ್ ನ್ಯಾಷನ್ ಅವಾರ್ಡ್.


Share       ಮಂಗಳೂರು : ಕಳೆದ ವರ್ಷ ಕರ್ನಾಟಕ ಸರಕಾರದಿಂದ ಡಾ. ಬಿ.ಸಿ.ರಾಯ್ ರಾಜ್ಯ ಪ್ರಶಸ್ತಿ ಪುರಸ್ಕೃತ ಡಾ. ಸದಾನಂದ ಪೂಜಾರಿಯವರಿಗೆ ಬೆಂಗಳೂರಿನ ಅಶೋಕ ಪಂಚತಾರ ಹೋಟೆಲ್ ನಲ್ಲಿ ನಡೆದ ಏಷ್ಯಾ ಟುಡೇ ಹಮ್ಮಿ ಕೊಂಡಿದ್ದ


Read More »

ಅಂತಾರಾಷ್ಟ್ರೀಯ ಮಟ್ಟದಲ್ಲಿ ಮಿನುಗುತ್ತಿರುವ ನಕ್ಷತ್ರ ಮೇರು ವ್ಯಕ್ತಿತ್ವದ ಬಿಲ್ಲವ ಸಮಾಜದ ಕಣ್ಮಣಿ ಡಾ ಅಂಚನ್ ಸಿ.ಕೆ


Share       ಅಂತಾರಾಷ್ಟ್ರೀಯ ಮಟ್ಟದಲ್ಲಿ ಮಿನುಗುತ್ತಿರುವ ನಕ್ಷತ್ರ ಮೇರು ವ್ಯಕ್ತಿತ್ವದ ಬಿಲ್ಲವ ಸಮಾಜದ ಕಣ್ಮಣಿ ಡಾ ಅಂಚನ್ ಸಿ.ಕೆ ಅವರಿಗೆ ಜನುಮದಿನದ ಶುಭಾಶಯಗಳು🎂 ಅವರ ಬಗ್ಗೆ ಮಾಹಿತಿ ಡಾ.ಅಂಚನ್ ಸಿ ಕೆ, ಅಂತರರಾಷ್ಟ್ರೀಯ ವ್ಯಾಪಾರ ಮತ್ತು


Read More »

ಕುಂದಾಪುರ ಮಾತ ಆಸ್ಪತ್ರೆಯ ಮಾಲಿಕ ಡಾ. ಸತೀಶ್ ಪೂಜಾರಿ ಹೃದಯಾಘಾತದಿಂದ ನಿಧನ


Share       ಕುಂದಾಪುರ ಮಾತ ಆಸ್ಪತ್ರೆಯ ಮಾಲಿಕ ಡಾ. ಸತೀಶ್ ಪೂಜಾರಿ ಹೃದಯಾಘಾತದಿಂದ ನಿಧನ ಕೋಟ: ಶ್ರೀಮಾತಾ ಅಸ್ಪತ್ರೆಯ ಮಾಲಿಕರಾದ ಡಾ.ಸತೀಶ ಪೂಜಾರಿ (54) ಅವರು ಗುರುವಾರ ಬೆಳಿಗ್ಗೆ ಅವರ ಕೋಟತಟ್ಟು ಮಣೂರು ಸ್ವಗೃಹದಲ್ಲಿ ಹೃದಯಾಘಾತದಿಂದ


Read More »