TOP STORIES:

ಮಂಗಳೂರು ಬಜ್ಪೆ ಊರಿನಲ್ಲೊಬ್ಬ ಆಪತ್ಬಾಂಧವ… ದಿನೇಶಣ್ಣ ಬಜಪೆ.


#ಬಜ್ಪೆ_ರಿಕ್ಷ_ದಿನೇಶಣ್ಣೆ…. 😍

ಮಂಗಳೂರು ಬಜ್ಪೆ  ಊರಿನಲ್ಲೊಬ್ಬ ಆಪತ್ಬಾಂಧವ…. ನಮ್ಮ ಆಟೋ ದಿನೇಶಣ್ಣ ಬಜಪೆ.

ಎಲ್ಲೋ ಒಬ್ಬ ಆಟೋ ಚಾಲಕ ಮೀಟರ್  ಡಬಲ್ ಕೇಳಿದರೆ ನಾವು ಅವನಿಗೆ ಬಾಯಿ ತುಂಬಾ ಬೈದು ಮತ್ತೆ ಎಲ್ಲಾ ಆಟೋ ಚಾಲಕರ ಮೇಲೆ ಮುನಿಸಿಕೊಳ್ಳುತ್ತೇವೆ. ಆದರೆ ಅದೆಷ್ಟೋ ಆಟೋ ಚಾಲಕರು ತಮ್ಮ ದುಡಿಮೆಯ ಜೊತೆಗೆ ಸಮಾಜದ ಪ್ರತಿ ಒಂದು ವರ್ಗದ ಜಾತಿ ಧರ್ಮ ಭೇದ ಮರೆತು ಸಮಾಜದ ಕಟ್ಟ ಕಡೆಯ ವ್ಯಕ್ತಿಗೆ ತನ್ನ ಸೇವೆಯನ್ನು ನೀಡಿ ತನ್ನ ಜೀವನವನ್ನು ಸಮಾಜಕ್ಕೆ ಮುಡಿಪಾಗಿಟ್ಟ ಎಷ್ಟು ಆಟೋ ಚಾಲಕರು ನಮ್ಮ ಕಣ್ಣ ಮುಂದೆ ಇದ್ದಾರೆ. ಅದರಲ್ಲಿ ನಮ್ಮ ಬಜಪೆಯ ಆಪತ್ಬಾಂಧವ ದಿನೇಶಣ್ಣ ಒಬ್ಬರು…

ಶ್ರೀ ದಿನೇಶ್ ಬಂಗೇರ ಬಜಪೆ ಎಂದರೆ ಎಲ್ಲರಿಗೂ ಅಚ್ಚುಮೆಚ್ಚು. ಬಜಪೆಯಲ್ಲಿ ಆಟೋ ಚಾಲಕರಾಗಿರುವ ಇವರು ಕಳೆದ ಅನೇಕ ವರ್ಷಗಳಿಂದ ದುಡಿಮೆ ಜೊತೆಗೆ ಸಮಾಜಮುಖಿ ಕಾರ್ಯಗಳು, ಸಮಾಜದ ಕಡು ಬಡತನದಲ್ಲಿರುವ ಅಶಕ್ತರ ನೆನಪಿಗೆ ನೆರವಿಗೆ ಧಾವಿಸುವ ಆಪತ್ಬಾಂಧವ. ಕೆಲವು ವರ್ಷಗಳ ಹಿಂದೆ ನಾನು ಬಸ್ಸಿನಲ್ಲಿ ಕೈಕಂಬ ಮಾರ್ಗವಾಗಿ ಪ್ರಯಾಣಿಸುತ್ತಿದ್ದೆ ಆ ಸಂದರ್ಭದಲ್ಲಿ ಕ್ರಿಶ್ಚಿಯನ್ ವ್ಯಕ್ತಿಗೆ ಬಸ್ಸು ತಾಗಿ ಅವರು ನೆಲಕ್ಕೆ ಕುಸಿತರು ಬಸ್ಸಿನವ ಬಿಟ್ಟು ಹೋಗುವವನಿದ್ದ.. ಆ ಸಂದರ್ಭದಲ್ಲಿ ತಕ್ಷಣವೇ ದಿನೇಶಣ್ಣ ತಮ್ಮ ರಿಕ್ಷಾದಿಂದ ಹಾರಿ ಬಸ್ಸನ್ನು ನಿಲ್ಲಿಸಿ ಅಸಹಾಯಕತೆಯಲ್ಲಿ ಇದ್ದ ವ್ಯಕ್ತಿಗೆ ನ್ಯಾಯವನ್ನು ಸ್ಥಳದಲ್ಲಿ ಕೊಡಿಸುವ ಕೆಲಸ ಮಾಡಿದರು. ಇದು ನಾನು ಪ್ರತ್ಯಕ್ಷ ನೋಡಿದ ಘಟನೆ. ಅದೇ ರೀತಿ ಅದೆಷ್ಟೋ ಅಶಕ್ತರಿಗೆ ವೃದ್ಧರಿಗೆ ಸಹಾಯ ಮಾಡಿದ ಘಟನೆಗಳು ನೂರಾರು ಇದೆ.

ಬಿರುವೆರ್ ಕುಡ್ಲ ಬಜಪೆ ಘಟಕ ಎಲ್ಲರಿಗೂ ಗೊತ್ತಿರುವ ವಿಷಯ ಅವರು ಮಾಡುವ ಸೇವಾ ಯೋಜನೆಗಳು ಇಡೀ ಸಮಾಜಕ್ಕೆ ಗೊತ್ತಿರುವಂತಹ ವಿಷಯ, ಬಿರುವೆರ್ ಕುಡ್ಲ ಬಜಪೆ ಘಟಕ ಉಪಾಧ್ಯಕ್ಷರಾಗಿ ಕಳೆದ ನಾಲ್ಕು ವರ್ಷಗಳಿಂದ ಘಟಕದ ಸಮಾಜಕ್ಕೆ ಸೇವೆಗಳು ಯಶಸ್ವಿಯಾಗಿ ನಡೆಯಲು ಇವರು ಕೂಡ ಕಾರಣಿಭೂತರು. ಘಟಕದ ಪ್ರತಿಯೊಂದು ಹೆಜ್ಜೆಲ್ಲೂ   ಮಾರ್ಗದರ್ಶನ ನೀಡುತ್ತಾ, ಘಟಕದ ಸ್ಪಂದನ ತಂಡಕ್ಕೆ ಧನವನ್ನು ಕೂಡಿಕರಿಸುವುದರಲ್ಲಿ ಇವರ ಪರಿಶ್ರಮ ಅಪಾರ. ಕೇಸರಿ ಆಟೋ ಚಾಲಕರ ಸಂಘ ಬಜತಪೆ ಇದರ ಒಂದು ಯಶಸ್ವಿ ಪದಾಧಿಕಾರಿಯಾಗಿ ಕೆಲಸ ಮಾಡುತ್ತಿದ್ದಾರೆ. ಹಿರಿಯರಲ್ಲಿ ಹಿರಿಯರಂತೆ…. ಕಿರಿಯದಲ್ಲಿ ಕಿರಿಯರಂತೆ ಅತಿ ಮುಗ್ಧತೆಯಿಂದ ಇರುವ ಇವರ ವ್ಯಕ್ತಿತ್ವ ನಮಗೆಲ್ಲ ಆದರ್ಶವಾಗಿದೆ. ಅನಾರೋಗ್ಯದಲ್ಲಿರುವವರಿಗೆ, ಬಾಣಂತಿಯರಿಗೆ, ಹಿರಿಯರಿಗೆ ಮತ್ತು ಅಪಘಾತವಾದವರಿಗೆ ತಡ ರಾತ್ರಿ ನೋಡದೆ ತಕ್ಷಣವೇ ಸ್ಪಂದಿಸುವ ವ್ಯಕ್ತಿ ನಮ್ಮ ದಿನೇಶಣ್ಣ. ಬ್ರಹ್ಮಶ್ರೀ ನಾರಾಯಣ ಗುರುಗಳ ಅಪ್ಪಟ ಭಕ್ತ ಹಾಗೂ ಅತಿ ಶ್ರದ್ಧೆಯ ಅನುಯಾಯಿಯಾಗಿದ್ದಾರೆ. ಸ್ವಂತಕ್ಕೆ ಸ್ವಲ್ಪ ಸಮಾಜಕ್ಕೆ ಸರ್ವಸ್ವ ಎಂಬ ಮಾತಿನಂತೆ ನಡೆಯುತ್ತಿರುವ ಇವರು ತನ್ನ ಸಣ್ಣ ಕುಟುಂಬ ಜೊತೆಗೆ ಸುಖಿ ಜೀವನವನ್ನು ನಡೆಸುತ್ತಿದ್ದಾರೆ. ಇವರ ವೃತ್ತಿ ಹಾಗೂ ಇವರ ಸಮಾಜ ಬಗ್ಗೆ ಸೇವೆಗಳಿಗೆ ಆ ಭಗವಂತ ಇನ್ನಷ್ಟು ಆಶೀರ್ವಾದ ನೀಡಲಿ ಎಂದು ನಾವು ಪ್ರಾರ್ಥಿಸುತ್


Related Posts

ಶ್ರೀ ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನ ಆಡಳಿತ ಮತ್ತು ಅಭಿವೃದ್ಧಿ ಸಮಿತಿ ನೇತೃತ್ವದಲ್ಲಿ ಗುರುವಾರ ಬೆಳಗ್ಗೆ ಶತ ಸೀಯಾಳಾಭಿಷೇಕ


Share        ಕುದ್ರೋಳಿಯಲ್ಲಿ ವಿಶ್ವಶಾಂತಿಗಾಗಿ ಶತ ಸೀಯಾಳಾಭಿಷೇಕ ಮಂಗಳೂರು: ಜಗತ್ತಿನಾದ್ಯಂತ ಯುದ್ಧದ ಕಾರ್ಮೋಡ ಆವರಿಸಿರುವುದರಿಂದ ವಿಶ್ವ ಶಾಂತಿಗಾಗಿ ಶ್ರೀ ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನ ಆಡಳಿತ ಮತ್ತು ಅಭಿವೃದ್ಧಿ ಸಮಿತಿ ನೇತೃತ್ವದಲ್ಲಿ ಗುರುವಾರ ಬೆಳಗ್ಗೆ ಶತ


Read More »

ಹಿರಿಯ ವರದಿಗಾರ ನಮ್ಮ ಸಮಾಜದ ಹೆಮ್ಮೆಯ ವಿಜಯ ಕೋಟ್ಯಾನ್‌ಗೆ ಬ್ರಾಂಡ್ ಮಂಗಳೂರು ಪ್ರಶಸ್ತಿ ಪ್ರದಾನ


Share        ವಿಕ ಸುದ್ದಿಲೋಕ ಮಂಗಳೂರು ಸೌಹಾರ್ದತೆ ಬಿಂಬಿಸುವ ವರದಿಗೆ ದ.ಕ. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ನೀಡುವ ‘ಬ್ಯಾಂಡ್ ಮಂಗಳೂರು’ ಪ್ರಶಸ್ತಿಗೆ ವಿಜಯ ಕರ್ನಾಟಕ ಪತ್ರಿಕೆಯ ಹಿರಿಯ ವರದಿಗಾರ ನಮ್ಮ ಸಮಾಜದ ಹೆಮ್ಮೆಯ ವಿಜಯ


Read More »

ವಿಜಯ ಕರ್ನಾಟಕ ಹಿರಿಯ ವರದಿಗಾರ ವಿಜಯ ಕೋಟ್ಯಾನ್ ಬ್ರ್ಯಾಂಡ್ ಮಂಗಳೂರು ಪ್ರಶಸ್ತಿಗೆ ಆಯ್ಕೆ


Share        ಮಂಗಳೂರು: ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದಿಂದ ಸೌಹಾರ್ದ ಬಿಂಬಿಸುವ ವರದಿಗೆ ನೀಡಲಾಗುವ “ಬ್ರ‍್ಯಾಂಡ್ ಮಂಗಳೂರು” ಪ್ರಶಸ್ತಿಗೆ ವಿಜಯ ಕರ್ನಾಟಕ ಹಿರಿಯ ವರದಿಗಾರ ವಿಜಯಕೋಟ್ಯಾನ್ ಪಡು  ಆಯ್ಕೆಯಾಗಿದ್ದಾರೆ. ವಿಜಯ ಕರ್ನಾಟಕ ಪತ್ರಿಕೆಯಲ್ಲಿ 2024 ಅಕ್ಟೋಬರ್


Read More »

ದೇಯಿ ಬೈದ್ಯೆತಿ ಕೋಟಿ ಚೆನ್ನಯ ಮೂಲಸ್ಥಾನ ಅಭಿವೃದ್ಧಿ ಚಾರಿಟೇಬಲ್ ಟ್ರಸ್ಟ್( ರಿ) ಇದರ ನೂತನ ಅಧ್ಯಕ್ಷರಾಗಿ ಕೆ. ಸಂಜೀವ ಪೂಜಾರಿ ಆಯ್ಕೆ


Share        ಶ್ರೀ ಕ್ಷೇತ್ರ ಗೆಜ್ಜೆಗಿರಿಯ ದೇಯಿ ಬೈದ್ಯೆತಿ ಕೋಟಿ ಚೆನ್ನಯ ಮೂಲಸ್ಥಾನ ಅಭಿವೃದ್ಧಿ  ಚಾರಿಟೇಬಲ್ ಟ್ರಸ್ಟ್(ರಿ) ಇದರ ನೂತನ ಅಧ್ಯಕ್ಷರಾಗಿ ಬಿರ್ವ ಸೆಂಟರ್ ಇದರ ಮಾಲಕರಾದ  ಕೆ ಸಂಜೀವ ಪೂಜಾರಿ ಇವರನ್ನು ಕಂಕನಾಡಿ ಬ್ರಹ್ಮ


Read More »

8ನೇ ವಯಸ್ಸಿನಲ್ಲಿ ಕಪೋತಾಸನದ ಭಂಗಿಯಲ್ಲಿ ವಿಶ್ವ ದಾಖಲೆ ಮಾಡಿದ ಬಾಲಕಿ ಕುಮಾರಿ ಶರಣ್ಯ ಶರತ್!


Share        ಮಂಗಳೂರು, ಜೂ. 20 ಪನ್ನೀರಿನ ಸೈಂಟ್ ಮೇರೀಸ್ ವಿದ್ಯಾಸಂಸ್ಥೆಯಲ್ಲಿ ಎರಡನೇ ತರಗತಿಯಲ್ಲಿ ಕಲಿಯುತ್ತಿರುವ ಕುಮಾರಿ ಶರಣ್ಯ ಶರತ್ ಅವರು ತನ್ನ ಎಂಟನೆಯ ವಯಸ್ಸಿನಲ್ಲಿ ಯೋಗಾಸನದ ಕಪೋತಾಸನದ ಭಂಗಿಯಲ್ಲಿ ಇಂಡಿಯಾ ಬುಕ್ ಆಫ್ ರೆಕಾರ್ಡ್


Read More »

ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನದ ಕ್ಷೇತ್ರಾಡಳಿತ ಸಮಿತಿ ಅಧ್ಯಕ್ಷರಾಗಿ ಎಚ್.ಎಸ್.ಜಯರಾಜ್ ಆಯ್ಕೆ


Share        ಮಂಗಳೂರು: ಬ್ರಹ್ಮಶ್ರೀ ನಾರಾಯಣಗುರುಗಳು ಪ್ರತಿಷ್ಠಾಪಿಸಿದ ಕರ್ನಾಟಕದ ಏಕೈಕ ಕ್ಷೇತ್ರ ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನದ ಸಮಗ್ರ ಅಭಿವೃದ್ಧಿ ಹಿತದೃಷ್ಟಿಯಿಂದ ಆಡಳಿತ ಸಮಿತಿ ಮತ್ತು ಅಭಿವೃದ್ಧಿ ಸಮಿತಿ ಜಂಟಿ ಸಭೆ ಕೇಂದ್ರದ ಮಾಜಿ ಸಚಿವ


Read More »