TOP STORIES:

FOLLOW US

ಮಂಗಳೂರು ಬಜ್ಪೆ ಊರಿನಲ್ಲೊಬ್ಬ ಆಪತ್ಬಾಂಧವ… ದಿನೇಶಣ್ಣ ಬಜಪೆ.


#ಬಜ್ಪೆ_ರಿಕ್ಷ_ದಿನೇಶಣ್ಣೆ…. 😍

ಮಂಗಳೂರು ಬಜ್ಪೆ  ಊರಿನಲ್ಲೊಬ್ಬ ಆಪತ್ಬಾಂಧವ…. ನಮ್ಮ ಆಟೋ ದಿನೇಶಣ್ಣ ಬಜಪೆ.

ಎಲ್ಲೋ ಒಬ್ಬ ಆಟೋ ಚಾಲಕ ಮೀಟರ್  ಡಬಲ್ ಕೇಳಿದರೆ ನಾವು ಅವನಿಗೆ ಬಾಯಿ ತುಂಬಾ ಬೈದು ಮತ್ತೆ ಎಲ್ಲಾ ಆಟೋ ಚಾಲಕರ ಮೇಲೆ ಮುನಿಸಿಕೊಳ್ಳುತ್ತೇವೆ. ಆದರೆ ಅದೆಷ್ಟೋ ಆಟೋ ಚಾಲಕರು ತಮ್ಮ ದುಡಿಮೆಯ ಜೊತೆಗೆ ಸಮಾಜದ ಪ್ರತಿ ಒಂದು ವರ್ಗದ ಜಾತಿ ಧರ್ಮ ಭೇದ ಮರೆತು ಸಮಾಜದ ಕಟ್ಟ ಕಡೆಯ ವ್ಯಕ್ತಿಗೆ ತನ್ನ ಸೇವೆಯನ್ನು ನೀಡಿ ತನ್ನ ಜೀವನವನ್ನು ಸಮಾಜಕ್ಕೆ ಮುಡಿಪಾಗಿಟ್ಟ ಎಷ್ಟು ಆಟೋ ಚಾಲಕರು ನಮ್ಮ ಕಣ್ಣ ಮುಂದೆ ಇದ್ದಾರೆ. ಅದರಲ್ಲಿ ನಮ್ಮ ಬಜಪೆಯ ಆಪತ್ಬಾಂಧವ ದಿನೇಶಣ್ಣ ಒಬ್ಬರು…

ಶ್ರೀ ದಿನೇಶ್ ಬಂಗೇರ ಬಜಪೆ ಎಂದರೆ ಎಲ್ಲರಿಗೂ ಅಚ್ಚುಮೆಚ್ಚು. ಬಜಪೆಯಲ್ಲಿ ಆಟೋ ಚಾಲಕರಾಗಿರುವ ಇವರು ಕಳೆದ ಅನೇಕ ವರ್ಷಗಳಿಂದ ದುಡಿಮೆ ಜೊತೆಗೆ ಸಮಾಜಮುಖಿ ಕಾರ್ಯಗಳು, ಸಮಾಜದ ಕಡು ಬಡತನದಲ್ಲಿರುವ ಅಶಕ್ತರ ನೆನಪಿಗೆ ನೆರವಿಗೆ ಧಾವಿಸುವ ಆಪತ್ಬಾಂಧವ. ಕೆಲವು ವರ್ಷಗಳ ಹಿಂದೆ ನಾನು ಬಸ್ಸಿನಲ್ಲಿ ಕೈಕಂಬ ಮಾರ್ಗವಾಗಿ ಪ್ರಯಾಣಿಸುತ್ತಿದ್ದೆ ಆ ಸಂದರ್ಭದಲ್ಲಿ ಕ್ರಿಶ್ಚಿಯನ್ ವ್ಯಕ್ತಿಗೆ ಬಸ್ಸು ತಾಗಿ ಅವರು ನೆಲಕ್ಕೆ ಕುಸಿತರು ಬಸ್ಸಿನವ ಬಿಟ್ಟು ಹೋಗುವವನಿದ್ದ.. ಆ ಸಂದರ್ಭದಲ್ಲಿ ತಕ್ಷಣವೇ ದಿನೇಶಣ್ಣ ತಮ್ಮ ರಿಕ್ಷಾದಿಂದ ಹಾರಿ ಬಸ್ಸನ್ನು ನಿಲ್ಲಿಸಿ ಅಸಹಾಯಕತೆಯಲ್ಲಿ ಇದ್ದ ವ್ಯಕ್ತಿಗೆ ನ್ಯಾಯವನ್ನು ಸ್ಥಳದಲ್ಲಿ ಕೊಡಿಸುವ ಕೆಲಸ ಮಾಡಿದರು. ಇದು ನಾನು ಪ್ರತ್ಯಕ್ಷ ನೋಡಿದ ಘಟನೆ. ಅದೇ ರೀತಿ ಅದೆಷ್ಟೋ ಅಶಕ್ತರಿಗೆ ವೃದ್ಧರಿಗೆ ಸಹಾಯ ಮಾಡಿದ ಘಟನೆಗಳು ನೂರಾರು ಇದೆ.

ಬಿರುವೆರ್ ಕುಡ್ಲ ಬಜಪೆ ಘಟಕ ಎಲ್ಲರಿಗೂ ಗೊತ್ತಿರುವ ವಿಷಯ ಅವರು ಮಾಡುವ ಸೇವಾ ಯೋಜನೆಗಳು ಇಡೀ ಸಮಾಜಕ್ಕೆ ಗೊತ್ತಿರುವಂತಹ ವಿಷಯ, ಬಿರುವೆರ್ ಕುಡ್ಲ ಬಜಪೆ ಘಟಕ ಉಪಾಧ್ಯಕ್ಷರಾಗಿ ಕಳೆದ ನಾಲ್ಕು ವರ್ಷಗಳಿಂದ ಘಟಕದ ಸಮಾಜಕ್ಕೆ ಸೇವೆಗಳು ಯಶಸ್ವಿಯಾಗಿ ನಡೆಯಲು ಇವರು ಕೂಡ ಕಾರಣಿಭೂತರು. ಘಟಕದ ಪ್ರತಿಯೊಂದು ಹೆಜ್ಜೆಲ್ಲೂ   ಮಾರ್ಗದರ್ಶನ ನೀಡುತ್ತಾ, ಘಟಕದ ಸ್ಪಂದನ ತಂಡಕ್ಕೆ ಧನವನ್ನು ಕೂಡಿಕರಿಸುವುದರಲ್ಲಿ ಇವರ ಪರಿಶ್ರಮ ಅಪಾರ. ಕೇಸರಿ ಆಟೋ ಚಾಲಕರ ಸಂಘ ಬಜತಪೆ ಇದರ ಒಂದು ಯಶಸ್ವಿ ಪದಾಧಿಕಾರಿಯಾಗಿ ಕೆಲಸ ಮಾಡುತ್ತಿದ್ದಾರೆ. ಹಿರಿಯರಲ್ಲಿ ಹಿರಿಯರಂತೆ…. ಕಿರಿಯದಲ್ಲಿ ಕಿರಿಯರಂತೆ ಅತಿ ಮುಗ್ಧತೆಯಿಂದ ಇರುವ ಇವರ ವ್ಯಕ್ತಿತ್ವ ನಮಗೆಲ್ಲ ಆದರ್ಶವಾಗಿದೆ. ಅನಾರೋಗ್ಯದಲ್ಲಿರುವವರಿಗೆ, ಬಾಣಂತಿಯರಿಗೆ, ಹಿರಿಯರಿಗೆ ಮತ್ತು ಅಪಘಾತವಾದವರಿಗೆ ತಡ ರಾತ್ರಿ ನೋಡದೆ ತಕ್ಷಣವೇ ಸ್ಪಂದಿಸುವ ವ್ಯಕ್ತಿ ನಮ್ಮ ದಿನೇಶಣ್ಣ. ಬ್ರಹ್ಮಶ್ರೀ ನಾರಾಯಣ ಗುರುಗಳ ಅಪ್ಪಟ ಭಕ್ತ ಹಾಗೂ ಅತಿ ಶ್ರದ್ಧೆಯ ಅನುಯಾಯಿಯಾಗಿದ್ದಾರೆ. ಸ್ವಂತಕ್ಕೆ ಸ್ವಲ್ಪ ಸಮಾಜಕ್ಕೆ ಸರ್ವಸ್ವ ಎಂಬ ಮಾತಿನಂತೆ ನಡೆಯುತ್ತಿರುವ ಇವರು ತನ್ನ ಸಣ್ಣ ಕುಟುಂಬ ಜೊತೆಗೆ ಸುಖಿ ಜೀವನವನ್ನು ನಡೆಸುತ್ತಿದ್ದಾರೆ. ಇವರ ವೃತ್ತಿ ಹಾಗೂ ಇವರ ಸಮಾಜ ಬಗ್ಗೆ ಸೇವೆಗಳಿಗೆ ಆ ಭಗವಂತ ಇನ್ನಷ್ಟು ಆಶೀರ್ವಾದ ನೀಡಲಿ ಎಂದು ನಾವು ಪ್ರಾರ್ಥಿಸುತ್


Share:

More Posts

Category

Send Us A Message

Related Posts

ACP ರೀನಾ ಸುವರ್ಣಗೆ ಜೀ ಕನ್ನಡ ನ್ಯೂಸ್‌ ಅಚೀವರ್ಸ್‌ ಅವಾರ್ಡ್ಸ್‌- 2025


Share       3ನೇ ವಾರ್ಷಿಕೋತ್ಸವದ ಅಂಗವಾಗಿ ಜೀ ಕನ್ನಡ ನ್ಯೂಸ್‌ ವತಿಯಿಂದ, Zee Achievers Awards ಕಾರ್ಯಕ್ರಮವನ್ನು ದಿ ರಿಟ್ಸ್‌ ಕಾರ್ಲ್‌ಟರ್ನ್‌ನಲ್ಲಿ ಆಯೋಜಿಸಲಾಗಿತ್ತು, ಈ ಕಾರ್ಯಕ್ರಮದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಗಣ್ಯಾತಿಗಣ್ಯರನ್ನು ಗುರುತಿಸಿ ಜೀ ಕನ್ನಡ


Read More »

ಮುಂಬಯಿ ಎನ್‌ಸಿಪಿ (ಎಸ್‌ಪಿ) ಈಶಾನ್ಯ ಜಿಲ್ಲಾ ನಿರೀಕ್ಷಕರಾಗಿ ಲಕ್ಷ್ಮಣ್ ಸಿ. ಪೂಜಾರಿ ಚಿತ್ರಾಪು ಆಯ್ಕೆ


Share       ಮುಂಬಯಿ, ಮಾ. 21: ಎನ್‌ಸಿಪಿ (ಎಸ್‌ಪಿ) ಈಶಾನ್ಯ (ಉತ್ತರ ಮುಂಬಯಿ) ಜಿಲ್ಲಾ ನಿರೀಕ್ಷಕರಾಗಿ ತುಳು-ಕನ್ನಡಿಗಲಕ್ಷ್ಮಣ್ ಸಿ. ಪೂಜಾರಿ ಚಿತ್ರಾಪು ಅವರನ್ನು ಪಕ್ಷದ ಅಧ್ಯಕ್ಷೆ ರಾಖಿ ಜಾಧವ್ ಅವರು ನೇಮಕ ಮಾಡಿದ್ದಾರೆ. ಮಂಗಳೂರು ಚಿತ್ರಾಪು


Read More »

ಬಿಲ್ಲವಾಸ್ ಫ್ಯಾಮಿಲಿ ದುಬೈ ಸಂಘಟನೆ ; ಉಪ ಪೊಲೀಸ್ ಅಧಿಕ್ಷಕರಾದ ಎಸ್ ಮಹೇಶ್ ಕುಮಾರ್ ರವರ ಮನದಾಳದ ಮಾತು


Share       ಬಿಲ್ಲವಾಸ್ ಫ್ಯಾಮಿಲಿ ದುಬೈ, ಸಮುದಾಯದ ಸಾಮಾಜಿಕ ಚಟುವಟಿಕೆಗಳಲ್ಲಿ ಮಂಚೂಣಿ ಯಲ್ಲಿರುವ ಸಂಘಟನೆ. ಇತ್ತೀಚೆಗೆ ಖಾಸಗಿ ಕಾರ್ಯಕ್ರಮದ ನಿಮಿತ್ತ ದುಬೈಗೆ ಪ್ರಯಾಣ ಬೆಳೆಸಿದಾಗ ಈ ಸಂಘಟನೆಯ ಕಾರ್ಯವೈಖರಿ ಯನ್ನು ಕಣ್ಣಾರೆ ನೋಡುವ ಅವಕಾಶ ಒದಗಿ


Read More »

ನಾರಾಯಣ ಗುರುಗಳ ತತ್ವದಂತೆ ಎಲ್ಲರೂ ಜೊತೆಗೂಡಿ ಮುನ್ನೆಡೆಯಬೇಕು : ಪದ್ಮರಾಜ್ ಆರ್ ಪೂಜಾರಿ


Share       ಬಂಟ್ವಾಳ: ಯುವವಾಹಿನಿ(ರಿ.) ಮಾಣಿ ಘಟಕದ 2025-26 ನೇ ಸಾಲಿನ ನೂತನ ಕಾರ್ಯಕಾರಿ ಸಮಿತಿಯ ಪದಗ್ರಹಣ ಸಮಾರಂಭ ದಿನಾಂಕ 10-03-2025 ರ ಸೋಮವಾರದಂದು ಬ್ರಹ್ಮಶ್ರೀ ನಾರಾಯಣ ಗುರು ಸಭಾಭವನದ ನೂತನ ನಿವೇಶನದಲ್ಲಿ ಜರುಗಿತು. ಪದಗ್ರಹಣ


Read More »

ಕೊಲ್ಲಿ ರಾಷ್ಟ್ರ ಕತಾ‌ರ್ ದೇಶದಲ್ಲಿ ಕತಾರ್ ಬಿಲ್ಲವಸ್ ಸಂಘದ ಮೊಟ್ಟ ಮೊದಲ ಬಾರಿಗೆ ಮಹಿಳಾ ಅಧ್ಯಕ್ಷರಾಗಿ ಆಯ್ಕೆಯಾದ ಶ್ರೀಮತಿ ಅಪರ್ಣ ಶರತ್


Share       ಕೊಲ್ಲಿ ರಾಷ್ಟ್ರ ಕತಾ‌ರ್ ದೇಶದಲ್ಲಿ ನಮ್ಮ ತುಳುವರು ಹಲವಾರು ವರ್ಷಗಳಿಂದ ವಾಸವಿದ್ದಿದ್ದು, ಇಂದಿಗೂ ತುಳುವ ಮಣ್ಣಿನ ಪ್ರೀತಿಯನ್ನು ಮರೆತಿಲ್ಲ. ತುಳುನಾಡಿನ ಸಂಸ್ಕೃತಿ, ಆಚಾರ-ವಿಚಾರಗಳನ್ನು ಮರೆಯದೆ ಇಂದಿಗೂ ತಾವು ನೆಲೆ ನಿಂತ ಮಣ್ಣಿನಲ್ಲಿ ಸಂಭ್ರಮಿಸುತ್ತಾರೆ


Read More »

ದಮ್ಮಾಮ್: ಸೌದಿ ಬಿಲ್ಲವಾಸ್ ದಮ್ಮಾಮ್ ಸಂಘದ ಮಹಾಸಭೆ


Share       ದಮ್ಮಾಮ್: ಶ್ರೀ ನಾರಾಯಣ ಗುರು ಅವರ ತತ್ವ ಸಂದೇಶಗಳನ್ನು ಅಳವಡಿಸಿಕೊಂಡು ದಮ್ಮಾಮ್ ಬಿಲ್ಲವಾಸ್ ಸೌದಿ ಅರೇಬಿಯ ಸಂಘವನ್ನು ಮುನ್ನಡೆಸಬೇಕೆಂದು ಹಾಗು ಸಮಾಜದಲ್ಲಿರುವ ಶೋಷಿತರ , ಅಸಹಾಯಕರ ಮತ್ತು ಆರ್ಥಿಕವಾಗಿ ಹಿಂದುಳಿದವರಿಗೆ ಸಹಾಯ ಹಾಗು


Read More »