TOP STORIES:

ಮಂಗಳೂರು ಬಜ್ಪೆ ಊರಿನಲ್ಲೊಬ್ಬ ಆಪತ್ಬಾಂಧವ… ದಿನೇಶಣ್ಣ ಬಜಪೆ.


#ಬಜ್ಪೆ_ರಿಕ್ಷ_ದಿನೇಶಣ್ಣೆ…. 😍

ಮಂಗಳೂರು ಬಜ್ಪೆ  ಊರಿನಲ್ಲೊಬ್ಬ ಆಪತ್ಬಾಂಧವ…. ನಮ್ಮ ಆಟೋ ದಿನೇಶಣ್ಣ ಬಜಪೆ.

ಎಲ್ಲೋ ಒಬ್ಬ ಆಟೋ ಚಾಲಕ ಮೀಟರ್  ಡಬಲ್ ಕೇಳಿದರೆ ನಾವು ಅವನಿಗೆ ಬಾಯಿ ತುಂಬಾ ಬೈದು ಮತ್ತೆ ಎಲ್ಲಾ ಆಟೋ ಚಾಲಕರ ಮೇಲೆ ಮುನಿಸಿಕೊಳ್ಳುತ್ತೇವೆ. ಆದರೆ ಅದೆಷ್ಟೋ ಆಟೋ ಚಾಲಕರು ತಮ್ಮ ದುಡಿಮೆಯ ಜೊತೆಗೆ ಸಮಾಜದ ಪ್ರತಿ ಒಂದು ವರ್ಗದ ಜಾತಿ ಧರ್ಮ ಭೇದ ಮರೆತು ಸಮಾಜದ ಕಟ್ಟ ಕಡೆಯ ವ್ಯಕ್ತಿಗೆ ತನ್ನ ಸೇವೆಯನ್ನು ನೀಡಿ ತನ್ನ ಜೀವನವನ್ನು ಸಮಾಜಕ್ಕೆ ಮುಡಿಪಾಗಿಟ್ಟ ಎಷ್ಟು ಆಟೋ ಚಾಲಕರು ನಮ್ಮ ಕಣ್ಣ ಮುಂದೆ ಇದ್ದಾರೆ. ಅದರಲ್ಲಿ ನಮ್ಮ ಬಜಪೆಯ ಆಪತ್ಬಾಂಧವ ದಿನೇಶಣ್ಣ ಒಬ್ಬರು…

ಶ್ರೀ ದಿನೇಶ್ ಬಂಗೇರ ಬಜಪೆ ಎಂದರೆ ಎಲ್ಲರಿಗೂ ಅಚ್ಚುಮೆಚ್ಚು. ಬಜಪೆಯಲ್ಲಿ ಆಟೋ ಚಾಲಕರಾಗಿರುವ ಇವರು ಕಳೆದ ಅನೇಕ ವರ್ಷಗಳಿಂದ ದುಡಿಮೆ ಜೊತೆಗೆ ಸಮಾಜಮುಖಿ ಕಾರ್ಯಗಳು, ಸಮಾಜದ ಕಡು ಬಡತನದಲ್ಲಿರುವ ಅಶಕ್ತರ ನೆನಪಿಗೆ ನೆರವಿಗೆ ಧಾವಿಸುವ ಆಪತ್ಬಾಂಧವ. ಕೆಲವು ವರ್ಷಗಳ ಹಿಂದೆ ನಾನು ಬಸ್ಸಿನಲ್ಲಿ ಕೈಕಂಬ ಮಾರ್ಗವಾಗಿ ಪ್ರಯಾಣಿಸುತ್ತಿದ್ದೆ ಆ ಸಂದರ್ಭದಲ್ಲಿ ಕ್ರಿಶ್ಚಿಯನ್ ವ್ಯಕ್ತಿಗೆ ಬಸ್ಸು ತಾಗಿ ಅವರು ನೆಲಕ್ಕೆ ಕುಸಿತರು ಬಸ್ಸಿನವ ಬಿಟ್ಟು ಹೋಗುವವನಿದ್ದ.. ಆ ಸಂದರ್ಭದಲ್ಲಿ ತಕ್ಷಣವೇ ದಿನೇಶಣ್ಣ ತಮ್ಮ ರಿಕ್ಷಾದಿಂದ ಹಾರಿ ಬಸ್ಸನ್ನು ನಿಲ್ಲಿಸಿ ಅಸಹಾಯಕತೆಯಲ್ಲಿ ಇದ್ದ ವ್ಯಕ್ತಿಗೆ ನ್ಯಾಯವನ್ನು ಸ್ಥಳದಲ್ಲಿ ಕೊಡಿಸುವ ಕೆಲಸ ಮಾಡಿದರು. ಇದು ನಾನು ಪ್ರತ್ಯಕ್ಷ ನೋಡಿದ ಘಟನೆ. ಅದೇ ರೀತಿ ಅದೆಷ್ಟೋ ಅಶಕ್ತರಿಗೆ ವೃದ್ಧರಿಗೆ ಸಹಾಯ ಮಾಡಿದ ಘಟನೆಗಳು ನೂರಾರು ಇದೆ.

ಬಿರುವೆರ್ ಕುಡ್ಲ ಬಜಪೆ ಘಟಕ ಎಲ್ಲರಿಗೂ ಗೊತ್ತಿರುವ ವಿಷಯ ಅವರು ಮಾಡುವ ಸೇವಾ ಯೋಜನೆಗಳು ಇಡೀ ಸಮಾಜಕ್ಕೆ ಗೊತ್ತಿರುವಂತಹ ವಿಷಯ, ಬಿರುವೆರ್ ಕುಡ್ಲ ಬಜಪೆ ಘಟಕ ಉಪಾಧ್ಯಕ್ಷರಾಗಿ ಕಳೆದ ನಾಲ್ಕು ವರ್ಷಗಳಿಂದ ಘಟಕದ ಸಮಾಜಕ್ಕೆ ಸೇವೆಗಳು ಯಶಸ್ವಿಯಾಗಿ ನಡೆಯಲು ಇವರು ಕೂಡ ಕಾರಣಿಭೂತರು. ಘಟಕದ ಪ್ರತಿಯೊಂದು ಹೆಜ್ಜೆಲ್ಲೂ   ಮಾರ್ಗದರ್ಶನ ನೀಡುತ್ತಾ, ಘಟಕದ ಸ್ಪಂದನ ತಂಡಕ್ಕೆ ಧನವನ್ನು ಕೂಡಿಕರಿಸುವುದರಲ್ಲಿ ಇವರ ಪರಿಶ್ರಮ ಅಪಾರ. ಕೇಸರಿ ಆಟೋ ಚಾಲಕರ ಸಂಘ ಬಜತಪೆ ಇದರ ಒಂದು ಯಶಸ್ವಿ ಪದಾಧಿಕಾರಿಯಾಗಿ ಕೆಲಸ ಮಾಡುತ್ತಿದ್ದಾರೆ. ಹಿರಿಯರಲ್ಲಿ ಹಿರಿಯರಂತೆ…. ಕಿರಿಯದಲ್ಲಿ ಕಿರಿಯರಂತೆ ಅತಿ ಮುಗ್ಧತೆಯಿಂದ ಇರುವ ಇವರ ವ್ಯಕ್ತಿತ್ವ ನಮಗೆಲ್ಲ ಆದರ್ಶವಾಗಿದೆ. ಅನಾರೋಗ್ಯದಲ್ಲಿರುವವರಿಗೆ, ಬಾಣಂತಿಯರಿಗೆ, ಹಿರಿಯರಿಗೆ ಮತ್ತು ಅಪಘಾತವಾದವರಿಗೆ ತಡ ರಾತ್ರಿ ನೋಡದೆ ತಕ್ಷಣವೇ ಸ್ಪಂದಿಸುವ ವ್ಯಕ್ತಿ ನಮ್ಮ ದಿನೇಶಣ್ಣ. ಬ್ರಹ್ಮಶ್ರೀ ನಾರಾಯಣ ಗುರುಗಳ ಅಪ್ಪಟ ಭಕ್ತ ಹಾಗೂ ಅತಿ ಶ್ರದ್ಧೆಯ ಅನುಯಾಯಿಯಾಗಿದ್ದಾರೆ. ಸ್ವಂತಕ್ಕೆ ಸ್ವಲ್ಪ ಸಮಾಜಕ್ಕೆ ಸರ್ವಸ್ವ ಎಂಬ ಮಾತಿನಂತೆ ನಡೆಯುತ್ತಿರುವ ಇವರು ತನ್ನ ಸಣ್ಣ ಕುಟುಂಬ ಜೊತೆಗೆ ಸುಖಿ ಜೀವನವನ್ನು ನಡೆಸುತ್ತಿದ್ದಾರೆ. ಇವರ ವೃತ್ತಿ ಹಾಗೂ ಇವರ ಸಮಾಜ ಬಗ್ಗೆ ಸೇವೆಗಳಿಗೆ ಆ ಭಗವಂತ ಇನ್ನಷ್ಟು ಆಶೀರ್ವಾದ ನೀಡಲಿ ಎಂದು ನಾವು ಪ್ರಾರ್ಥಿಸುತ್


Related Posts

ರಾಜ್ಯದಲ್ಲಿ ರಚನೆಯಾಗಲಿರುವ ನೂತನ ಸಚಿವ ಸಂಪುಟ ಸಚಿವ ಸಂಪುಟದಲ್ಲಿ ಬಿಲ್ಲವ ಸಮಾಜಕ್ಕೆ ಸೂಕ್ತ ಪ್ರಾತಿನಿಧ್ಯ ನೀಡಬೇಕು


Share         ಹಿರಿಯ ಕಾಂಗ್ರೆಸ್ ನಾಯಕ ಬಿ.ಕೆ. ಹರಿಪ್ರಸಾದ್ ಅವರಿಗೆ ಸಚಿವ ಸ್ಥಾನ ನೀಡಬೇಕು ಬಿಲ್ಲವ ಸಮಾಜಕ್ಕೆ ನ್ಯಾಯಯುತ ಪ್ರಾತಿನಿಧ್ಯ ಒದಗಿಸಬೇಕು ಸೋಲೂರು ಮಠದ ಪೀಠಾಧಿಪತಿಗಳಾದ ಶ್ರೀ ಶ್ರೀ ವಿಖ್ಯಾತಾನಂದ ಸ್ವಾಮೀಜಿ ಆಗ್ರಹ ರಾಜ್ಯದಲ್ಲಿ ರಚನೆಯಾಗಲಿರುವ


Read More »

ಕುಂದಾಪುರ ಬಿಲ್ಲವ ಸಮಾಜ ಸೇವಾ ಸಂಘದ ಅಧ್ಯಕ್ಷರಾಗಿ ಅಶೋಕ್ ಪೂಜಾರಿ ಪುನಾರಾಯ್ಕೆ


Share         ಕುಂದಾಪುರ, ಮೇ 24: ಬಿಲ್ಲವ ಸಮಾಜ ಸೇವಾ ಸಂಘ ಕುಂದಾಪುರ ಇದರ 2025-26ನೇ ಸಾಲಿನ ವಾರ್ಷಿಕ ಮಹಾಸಭೆಯು ರವಿವಾರ ಶ್ರೀ ನಾರಾಯಣ ಗುರು ಕಲ್ಯಾಣ ಮಂಟಪದಲ್ಲಿ ಜರಗಿತು. ಕುಂದಾಪುರ ಬಿಲ್ಲವ ಸಮಾಜ ಸೇವಾ


Read More »

ನಿಸ್ವಾರ್ಥ ಸೇವೆ ಸಲ್ಲಿಸಿ “ಜನಸ್ನೇಹಿ ಪೊಲೀಸ್” ಎಂಬ ಹೆಗ್ಗಳಿಕೆಗೆ ಪಾತ್ರರಾಗಿರುವ ನಮ್ಮ ಸಮಾಜದ ಹೆಮ್ಮೆ ಎಸಿಪಿ ಶ್ರೀ ಎಸ್. ಮಹೇಶ್ ಕುಮಾರ್


Share         ಶ್ರೀ ಎಸ್. ಮಹೇಶ್ ಕುಮಾರ್ ಅವರು ಕಳೆದ 25 ವರ್ಷಗಳಿಂದ ಪೊಲೀಸ್ ಇಲಾಖೆಯಲ್ಲಿ ನಿಸ್ವಾರ್ಥ ಸೇವೆ ಸಲ್ಲಿಸಿ “ಜನಸ್ನೇಹಿ ಪೊಲೀಸ್” ಎಂಬ ಹೆಗ್ಗಳಿಕೆಗೆ ಪಾತ್ರರಾಗಿರುವುದು ಅವರ ಕರ್ತವ್ಯನಿಷ್ಠೆ ಮತ್ತು ಮಾನವೀಯತೆಯ ಪ್ರತೀಕವಾಗಿದೆ. 2012ರಲ್ಲಿ


Read More »

10ನೇ ಅಖಿಲ ಭಾರತ ಅರ್ಬನ್ ಕೋ-ಆಪರೇಟಿವ್ ಬ್ಯಾಂಕಿಂಗ್ ಶೃಂಗಸಭೆಯಲ್ಲಿ ಭಾರತ್ ಬ್ಯಾಂಕಿಗೆ ಪ್ರತಿಷ್ಠಿತ ಲೀಡಿಂಗ್ ಬ್ಯಾಂಕ್ ಅವಾರ್ಡ್.


Share         ಪುಣೆಯ ಕೊರೆಗಾಂವ್ ಪಾರ್ಕ್‌ನ ಹೋಟೆಲ್ ವೆಸ್ಟಿನ್‌ನಲ್ಲಿ ನಡೆದ 10ನೇ ಅಖಿಲ ಭಾರತ ಅರ್ಬನ್ ಕೋ-ಆಪರೇಟಿವ್ ಬ್ಯಾಂಕಿಂಗ್ ಶೃಂಗಸಭೆಯಲ್ಲಿ ಭಾರತ್ ಬ್ಯಾಂಕಿಗೆ ಪ್ರತಿಷ್ಠಿತ “ಲೀಡಿಂಗ್ ಬ್ಯಾಂಕ್ ಅವಾರ್ಡ್” (Leading Bank Award) ನೀಡಿ ಗೌರವಿಸಲಾಯಿತು.


Read More »

ಕುದ್ರೋಳಿ ಗೋಕರ್ಣ ಕ್ಷೇತ್ರ ಅಭಿವೃದ್ಧಿ ರೂವಾರಿ ಬಿ. ಜನಾರ್ದನ ಪೂಜಾರಿ ಅವರ ಉಪಸ್ಥಿತಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಪದ್ಮರಾಜ್ ಆರ್. ಸ್ಪಷ್ಟನೆ


Share         ಮಂಗಳೂರು: ಕುದ್ರೋಳಿ ಗೋಕರ್ಣನಾಥ ಕ್ಷೇತ್ರದ ಆಡಳಿತ ನಿರ್ವಹಣೆಗೆ ಪ್ರಸ್ತುತ ಇರುವ ಸಮಿತಿಯ ಹೊರತಾಗಿ ಯಾವುದೇ ಹೊಸ ಸಮಿತಿ ರಚನೆಯಾಗಿಲ್ಲ ಎಂದು ಸಮಿತಿಯ ಕೋಶಾಧಿಕಾರಿ ಪದ್ಮರಾಜ್ ಆರ್. ಶನಿವಾರ ಇಲ್ಲಿ ತಿಳಿಸಿದರು. ಕ್ಷೇತ್ರದ ಅಭಿವೃದ್ಧಿ


Read More »

ಶೈಕ್ಷಣಿಕ ಸಾಧನೆಯಲ್ಲೂ ‘ಸೇಮ್ ಟು ಸೇಮ್’: ಕುಂದಾಪುರದ ಅವಳಿ ಸಹೋದರಿಯರ SSLC ಪವಾಡ!


Share         ​ಕುಂದಾಪುರ: ಅವಳಿ ಜವಳಿ ಮಕ್ಕಳು ಅಂದಮೇಲೆ ಅವರ ರೂಪ, ಬಣ್ಣ, ನಡವಳಿಕೆ ಹಾಗೂ ಆಲೋಚನೆಗಳಲ್ಲಿ ಸಾಮ್ಯತೆ ಇರುವುದು ಸಹಜ ಸಂಗತಿ. ಆದರೆ, ಕುಂದಾಪುರದ ಈ ಇಬ್ಬರು ಸಹೋದರಿಯರು ಶೈಕ್ಷಣಿಕ ಸಾಧನೆಯಲ್ಲೂ ತಾವು ಸಂಪೂರ್ಣವಾಗಿ


Read More »