TOP STORIES:

ಕೇರಳದ ಶಿವಗಿರಿಯ ಶಾಖಾ ಮಠವನ್ನು ಉಡುಪಿ ಅಥವಾ ಮಂಗಳೂರಿನಲ್ಲಿ ಸ್ಥಾಪಿಸಲು ಅಗತ್ಯ ಇರುವ ಐದು ಎಕರೆ ಜಮೀನನ್ನು ಒದಗಿಸಲಾಗುವುದು : ಮುಖ್ಯಮಂತ್ರಿ ಸಿದ್ದರಾಮಯ್ಯ


ಕೇರಳದ ಶಿವಗಿರಿಯ ಶಾಖಾ ಮಠವನ್ನು ಉಡುಪಿ ಅಥವಾ ಮಂಗಳೂರಿನಲ್ಲಿ ಸ್ಥಾಪಿಸಲು ಅಗತ್ಯ ಇರುವ ಐದು ಎಕರೆ ಜಮೀನನ್ನು ಒದಗಿಸಲಾಗುವುದು : ಮುಖ್ಯಮಂತ್ರಿ ಸಿದ್ದರಾಮಯ್ಯ

ಉಳ್ಳಾಲ: ಕೇರಳದ ಶಿವಗಿರಿಯ ಶಾಖಾ ಮಠವನ್ನು ಉಡುಪಿ ಅಥವಾ ಮಂಗಳೂರಿನಲ್ಲಿ ಸ್ಥಾಪಿಸಲು ಅಗತ್ಯ ಇರುವ ಐದು ಎಕರೆ ಜಮೀನನ್ನು ಒದಗಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಶ್ರೀ ನಾರಾಯಣ ಗುರು-ಗಾಂಧೀಜಿ ಸಂವಾದ ಶತಮಾನೋತ್ಸವದ ಪ್ರಯುಕ್ತ ಶಿವಗಿರಿ ಮಠ, ವರ್ಕಲ ಮತ್ತು ಬ್ರಹ್ಮಶ್ರೀ ನಾರಾಯಣ ಗುರು ಅಧ್ಯಯನ ಪೀಠ, ಮಂಗಳೂರು ವಿಶ್ವವಿದ್ಯಾನಿಲಯದ ಆಶ್ರಯದಲ್ಲಿ ಕೊಣಾಜೆಯ ಮಂಗಳೂರು ವಿಶ್ವವಿದ್ಯಾನಿಲಯ ಕ್ಯಾಂಪಸ್ ನಲ್ಲಿ ಆಯೋಜಿಸಿರುವ ಶ್ರೀ ಮಹಾಗುರುವಿನ ಮಹಾ ಸಮಾಧಿ ಶತಾಬ್ದಿ ಸರ್ವಮತ ಸಮ್ಮೇಳನ ಶತಮಾನೋತ್ಸವ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡುತ್ತಿದ್ದರು.

ಶಿವಗಿರಿ ಮಠದಿಂದ ಮನವಿ ಮಾಡಿದಂತೆ ಐದು ಎಕರೆ ಭೂಮಿಗೆ ಬಿ.ಕೆ.ಹರಿಪ್ರಸಾದ್ ಮತ್ತು ಇತರ ನಾಯಕರು ಭೂಮಿ ಗುರುತಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ನಾರಾಯಣ ಗುರು ಮತ್ತು ಗಾಂಧಿ ಸಮಾಗಮ ಬಗ್ಗೆ ಪ್ರಧಾನ ಸಂದೇಶ ಭಾಷಣ ಮಾಡಿದ ಲೋಕಸಭೆ ಸಾರ್ವಜನಿಕ ಲೆಕ್ಕ ಪತ್ರ ಸಮಿತಿ ಅಧ್ಯಕ್ಷ ಕೆ. ಸಿ. ವೇಣುಗೋಪಾಲ್, ಬಸವಣ್ಣ, ಮಹಾತ್ಮ ಗಾಂಧಿ, ನಾರಾಯಣ ಗುರು ತತ್ವಗಳು ದೇಶದ ಸಂವಿಧಾನದಲ್ಲಿ ಅಡಕವಾಗಿವೆ. ಇಂಥ ಮಹಾನ್ ಸಂವಿಧಾನವೇ ಈಗ ಬೆದರಿಕೆ ಎದುರಿಸುತ್ತಿದೆ. ಗಾಂಧಿ, ಗುರುಗಳು ದಶಕಗಳ ಹಿಂದೆ ಎದುರಿಸಿದ ಬೆದರಿಕೆಯಂತೆಯೇ ಸಂವಿಧಾನ ಬೆದರಿಕೆ ಎದುರಿಸುತ್ತಿರುವುದು ದುರದೃಷ್ಟ. ಈ ಮಹಾನ್ ನಾಯಕರ ತತ್ವ ಸಿದ್ಧಾಂತವನ್ನು ಅಳವಡಿಸಿಕೊಂಡು ಮುಂದುವರಿಯಬೇಕಿದೆ ಎಂದರು. ಒಂದೇ ದೇಶ ಒಂದೇ ಮತ ಒಂದೇ ದೇವರು ಎಂಬ ಸಿದ್ಧಾಂತ ಪಸರಿಸಿದವರು ನಾರಾಯಣ ಗುರುಗಳು. ಸತ್ಯ ಅಹಿಂಸೆಯ ಸಂದೇಶ ಗಾಂಧಿ ಅವರದು. 1925ರಲ್ಲಿ ಈ ಇಬ್ಬರು ಮಹಾನ್ ನಾಯಕರು ಸಂವಾದ ನಡೆಸಿದ್ದು ಐತಿಹಾಸಿಕ ದಾಖಲೆಯಾಗಿ ಉಳಿದಿದೆ. ಆ ಕಾಲದಲ್ಲಿ ಒಂದೆಡೆ ಸ್ವಾತಂತ್ರ್ಯ ಹೋರಾಟ ಇದ್ದರೆ ಇನ್ನೊಂದೆಡೆ ಅಸ್ಪೃಶ್ಯತೆ, ಅಸಮಾನತೆ ತಾಂಡವ ಆಡುತಿತ್ತು. ಈ ಸಂವಾದ ದೇಶದ ಸಾಮಾಜಿಕ ನ್ಯಾಯದ ನಿಟ್ಟಿನಲ್ಲಿ ಮಹತ್ವದ ಹೆಜ್ಜೆಯಾಗಿತ್ತು ಎಂದು ಹೇಳಿದರು. ಗಾಂಧಿ- ಗುರುಗಳ ಈ ಐತಿಹಾಸಿಕ ಸಂವಾದದಿಂದ ಸುದೀರ್ಘ ವೈಕಂ ಸತ್ಯಾಗ್ರಹಕ್ಕೆ ಕಾರಣವಾಯಿತು ಎಂದು ಹೇಳಿದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಸ್ಪೀಕರ್ ಯು.ಟಿ.ಖಾದರ್ ಮಾತನಾಡಿ, ಇತಿಹಾಸವನ್ನು ಭವಿಷ್ಯಕ್ಕೆ ತಿಳಿಸುವ ಈ ಕಾರ್ಯಕ್ರಮ ನಡೆದ ಈ ಮೈದಾನಕ್ಕೆ ಗುರು-ಗಾಂಧಿ ಮೈದಾನ ಎಂದು ನಾಮಕರಣಗೊಳಿಸಿ ಪಾರ್ಕ್, ಕ್ರೀಡಾಂಗಣ ನಿರ್ಮಾಣಕ್ಕೆ ಅನುದಾನ ನೀಡಲಾಗುವುದು ಎಂದರು. ನನ್ನ ಪ್ರಕಾರ ಅಭಿವೃದ್ಧಿ ಎಂದರೆ ರಸ್ತೆ, ಸೇತುವೆ ನಿರ್ಮಾಣ ಮಾತ್ರ ಅಲ್ಲ, ನನ್ನ ಕ್ಷೇತ್ರದಲ್ಲಿ ಹಿಂದೂ, ಮುಸ್ಲಿಮ್, ದಲಿತರು, ಕ್ರೈಸ್ತರು, ಶ್ರೀಮಂತರು, ಶೋಷಿತರ ಮಕ್ಕಳು ಕೈ ಕೈ ಹಿಡಿದು ಜೊತೆಯಾಗಿ ಸಾಗುವ ವಾತಾವರಣ ನಿರ್ಮಾಣ ಅದಾಗ ಅಭಿವೃದ್ಧಿ ಆದಂತೆ ಎಂದವರು ಹೇಳಿದರು. ಕಾರ್ಯಕ್ರಮದ ರೂಪುರೇಷೆಗಳ ಬಗ್ಗೆ ಮಾತನಾಡಿದ ಶತಮಾನೋತ್ಸವ ಕಾರ್ಯಕ್ರಮದ ಅಧ್ಯಕ್ಷ ಬಿ.ಕೆ.ಹರಿಪ್ರಸಾದ್, 2013ರಲ್ಲಿ ಮಂಗಳೂರು ವಿವಿಯಲ್ಲಿ ನಾರಾಯಣ ಗುರುಗಳ ಪೀಠ ಸ್ಥಾಪನೆಗೆ ಮನವಿ ಮಾಡಿ ಹಿಂದುಳಿದ ನಾಯಕರು ಮುಂದೆ ಬಂದು ನಾರಾಯಣ ಗುರು ಪೀಠ ಸ್ಥಾಪನೆಗೆ ಮುಂದಾದ ಸಂದರ್ಭ ನನ್ನ ಎಂಎಲ್ಸಿ ನಿಧಿಯಿಂದ 35 ಲಕ್ಷ ರೂ. ಒದಗಿಸಿದ್ದೆ. ಸಂಸದರಾಗಿದ್ದ ಸಂದರ್ಭ ನಳಿನ್ ಕುಮಾರ್ ಹಾಗೂ ವಿಧಾನ ಪರಿಷತ್ ಸದಸ್ಯರಾಗಿದ್ದ ಹರೀಶ್ ಕುಮಾರ್ ತಲಾ 10 ಲಕ್ಷ ರೂ. ಅನುದಾನ ಒದಗಿಸಿದ್ದರು. ಅಧ್ಯಯನ ಪೀಠದ ಕಾರ್ಯಕ್ಕೆ ಇನ್ನಷ್ಟು ಅನುದಾನ ಅಗತ್ಯ ಇದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯರಿಗೆ ಮನವಿ ಮಾಡಿದಾಗ ಎರಡು ಕೋಟಿ ರೂ. ಅನುದಾನ ಒದಗಿಸಿದ್ದರು. ಇದೀಗ ಶಿವಗಿರಿ ಮಠದ ಶಾಖೆ ಸ್ಥಾಪಿಸಲು ಐದು ಎಕರೆ ಜಾಗ ಗುರುತಿಸುವಂತೆ ಮುಖ್ಯ ಮಂತ್ರಿ ಹೇಳಿದ್ದಾರೆ ಎಂದರು. ಶಿವಗಿರಿ ಮಠದ ಕಾರ್ಯದರ್ಶಿ ಶುಭಗಾನಂದ ಸ್ವಾಮೀಜಿ, ಗೃಹಸಚಿವ ಡಾ.ಜಿ.ಪರಮೇಶ್ವರ್, ದ.ಕ. ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್, ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ, ವಸತಿ ಮತ್ತು ವಕ್ಫ್ ಸಚಿವ ಝಮೀರ್ ಅಹ್ಮದ್, ಮಾಜಿ ಸಚಿವ ಜನಾರ್ದನ ಪೂಜಾರಿ. ಶಾಸಕರಾದ ಅಶೋಕ್ ರೈ, ಹರೀಶ್ ಪೂಂಜಾ, ರಾಜೇಶ್ ನಾಯ್ಕ್, ಡಾ.ಭರತ್ ಶೆಟ್ಟಿ, ವೇದವ್ಯಾಸ ಕಾಮತ್, ಭಾಗೀರಥಿ ಮುರುಳ್ಯ, ವಿಧಾನ ಪರಿಷತ್ ಸದಸ್ಯರಾದ ಮಂಜುನಾಥ ಭಂಡಾರಿ, ಐವನ್ ಡಿಸೋಜ, ಮಾಜಿ ಸಚಿವರಾದ ಬಿ.ರಮಾನಾಥ ರೈ, ವಿನಯ ಕುಮಾರ್ ಸೊರಕೆ, ಅಭಯಚಂದ್ರ ಜೈನ್, ಕಾಂಗ್ರೆಸ್ ನಾಯಕರಾದ ಹರೀಶ್ ಕುಮಾರ್, ಪಿವಿ ಮೋಹನ್, ಎಂ.ಎ.ಗಫೂರ್, ಪದ್ಮರಾಜ್, ರಕ್ಷಿತ್ ಶಿವರಾಂ, ಪ್ರತಿಭಾ ಕುಳಾಯಿ, ವಿಶ್ವಾಸ್ ಕುಮಾರ್ ದಾಸ್, ಶಶಿಧರ್ ಹೆಗ್ಡೆ ಮತ್ತಿತರರು ಉಪಸ್ಥಿತರಿದ್ದರು.ಮಂಗಳೂರು ವಿವಿ ಕುಲಪತಿ ಪ್ರೊ. ಧರ್ಮ ಸ್ವಾಗತಿಸಿದರು. ಜಮೀನು ಒದಗಿಸಲು ಸ್ವಾಮೀಜಿ ಮನವಿ ಶಿವಗಿರಿ ಮಠದ ಸಚ್ಚಿದಾನಂದ ಸ್ವಾಮೀಜಿ ಆಶೀರ್ವಚನ ನೀಡಿ, ಶಿವಗಿರಿ ಮಠದ ಶಾಖೆಯನ್ನು ಕರ್ನಾಟಕದಲ್ಲಿ ಸ್ಥಾಪಿಸಲು ಉದ್ದೇಶಿಸಲಾಗಿದೆ. ಈ ಬಗ್ಗೆ ಮುಖ್ಯಮಂತ್ರಿ ಆದ್ಯತೆ ನೀಡಿ ಅಗತ್ಯ ಭೂಮಿಯನ್ನು ಒದಗಿಸಬೇಕು ಎಂದು ಮನವಿ ಮಾಡಿದರು. ಬಳಿಕ ಮಠದ ವತಿಯಿಂದ ಮನವಿ ಪತ್ರವನ್ನು ಕೆ.ವೇಣುಗೋಪಾಲ್ ಮೂಲಕ ಮುಖ್ಯಮಂತ್ರಿಗೆ ಸಲ್ಲಿಸಲಾಯಿತು.

ಕೊಣಾಜೆಯ ಮಂಗಳಗಂಗೋತ್ರಿಯಲ್ಲಿ , ಶಿವಗಿರಿ ಮಠ ವರ್ಕಲಾ , ಮಂಗಳೂರು ವಿಶ್ವವಿದ್ಯಾನಿಲಯದ ಶ್ರೀ ನಾರಾಯಣ ಗುರು ಅಧ್ಯಯನ ಪೀಠ ಆಶ್ರಯದಲ್ಲಿ ಬುಧವಾರ ಆಯೋಜಿಸಲಾದ ಶತಮಾನದ ಪ್ರಸ್ತಾನ ಶ್ರೀನಾರಾಯಣ ಗುರು-ಮಹಾತ್ಮ ಗಾಂಧಿ ಐತಿಹಾಸಿಕ ಸಂವಾದ ಶತಮಾನೋತ್ಸವ , ಶ್ರೀಗುರುವಿನ ಮಹಾಸಮಾಧಿ ಶತಾಬ್ದಿ ಸರ್ವಮತ ಸಮ್ಮೇಳನ , ಯತಿ ಪೂಜೆ ಕಾರ್ಯಕ್ರಮವನ್ನು ಮುಖ್ಯ ಮಂತ್ರಿ ಸಿದ್ದರಾಮಯ್ಯ ಉದ್ಘಾಟಿಸಿದರು.ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್, ವಿಧಾನ ಸಭೆಯ ಸ್ಪೀಕರ್ ಯು.ಟಿ.ಖಾದರ್, ಗೃಹ ಸಚಿವ ಡಾ.ಜಿ.ಪರಮೇಶ್ವರ, ಸಚಿವರಾದ ದಿನೇಶ್ ಗುಂಡೂ ರಾವ್, ಸಚಿರಾದ ಝಮೀರ್ ಅಹ್ಮದ್, ಸತೀಶ್ ಜಾರಕಿಹೊಳಿ , ಮಾಜಿ ಕೇಂದ್ರ ಸಚಿವ ಬಿ.ಜನಾರ್ದನ ಪೂಜಾರಿ, ಕೇಂದ್ರ ಸಂಘಟನಾ ಸಮಿತಿಯ ರಕ್ಷಣಾಧಿಕಾರಿ ಶ್ರೀ ಶಿವಗಿರಿ ಮಠದ ಶ್ರೀ ಜ್ಞಾನ ತೀರ್ಥ ಸ್ವಾಮೀಜಿ, ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ಮತ್ತಿತರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

 

ಗುರು–ಗಾಂಧಿ ಸಂವಾದ ಶತಮಾನೋತ್ಸವದಲ್ಲಿ ಸೌಹಾರ್ದ–ಮಾನವೀಯ ಮೌಲ್ಯಗಳ ಸಂದೇಶ

ಉಳ್ಳಾಲ: ಗುರು–ಗಾಂಧಿ ಸಂವಾದ ಶತಮಾನೋತ್ಸವ ಕಾರ್ಯಕ್ರಮವು ಮಾನವ ಸಹೋದರತೆ, ಧಾರ್ಮಿಕ ಸಹಿಷ್ಣುತೆ, ಸತ್ಯ ಮತ್ತು ಅಹಿಂಸೆ ಎಂಬ ಮೌಲ್ಯಗಳನ್ನು ಮರುಜಾಗೃತಗೊಳಿಸಿದ ಸಾರ್ಥಕ ಮಹೋತ್ಸವವಾಗಿ ನೆರವೇರಿತು. ವಿವಿಧ ಧಾರ್ಮಿಕ ಮತ್ತು ಸಾಮಾಜಿಕ ಕ್ಷೇತ್ರಗಳ ಗಣ್ಯರು ಒಂದೇ ವೇದಿಕೆಯಲ್ಲಿ ಸೇರಿ ಸಮಾನತೆ, ಸ್ನೇಹ ಮತ್ತು ಶಾಂತಿಯ ಸಂದೇಶವನ್ನು ಹರಡಿದ ಈ ಆಚರಣೆ, ಗುರು–ಗಾಂಧಿಗಳ ತತ್ವಗಳಿಗೆ ಹೊಸ ಜೀವ ತುಂಬಿತು.

ಕಾರ್ಯಕ್ರಮಕ್ಕೆ ವಿಧಾನಪರಿಷತ್‌ ಸದಸ್ಯರಾದ ಬಿ.ಕೆ. ಹರಿಪ್ರಸಾದ್ ಅವರು ಅಧ್ಯಕ್ಷತೆ ವಹಿಸಿ “ಸರ್ವಮತ ಸಂದೇಶ”ದ ಮಹತ್ವವನ್ನು ಪ್ರಸ್ತಾಪಿಸಿದರು. ಶಿವಗಿರಿ ಮಠದ ಸ್ವಾಮಿ ರೀತಾಂಭರಾನಂದ, ಮಂಗಳೂರು ರಾಮಕೃಷ್ಣ ಮಠದ ಅಧ್ಯಕ್ಷರಾದ ಶ್ರೀಮತ್ ಸ್ವಾಮಿ ಜಿತಕಾಮಾನಂದಜಿ ಮಹಾರಾಜ, ಖ್ಯಾತ ಬರಹಗಾರ ಮತ್ತು ಶಿಕ್ಷಣ ತಜ್ಞರಾದ ಸಯ್ಯದ್ ಪಾಣಕ್ಕಾಡ್ ಮುನವರ್ ಆಲಿ ಹಾಗೂ ಶಿಹಾಬ್ ತಂಜಳ್, ಮಂಗಳೂರು ಧರ್ಮ ಪ್ರಾಂತ್ಯದ ಅತಿ ವಂದನೀಯ ಬಿಷಪ್ ಡಾ. ಪೀಟರ್ ಪೌಲ್ ಸಲ್ದಾನ, ಚಿಂತಕರಾದ ಗಣೇಶ್ ದೇವಿ, ಪ್ರಜಾಪಿತ ಬ್ರಹ್ಮಕುಮಾರಿ ಈಶ್ವರೀಯ ವಿಶ್ವವಿದ್ಯಾಲಯ ಶಿರಸಿಯ ಬ್ರಹ್ಮಕುಮಾರಿ ವೀಣಾ ಬೆಹನ್‌ಜಿ, ಅತಿ ವಂದನೀಯ ಬಿಷಪ್ ಮಾರ್ ಜೇಮ್ಸ್ ಪಟ್ಟಿರಿಲ್ ಹಾಗೂ ಹನೂರು ಅಶೋಕ ಆರಾಮ ಬುದ್ಧವಿಹಾರದ ಪೂಜ್ಯ ಭಿಕ್ಕು ಧಮ್ಮತಿಸ್ಸ ಸೇರಿದಂತೆ ತಿರುವನಂತಪುರಂನ ಧಾರ್ಮಿಕ ಗಣ್ಯರು ಕಾರ್ಯಕ್ರಮದಲ್ಲಿ ಭಾಗವಹಿಸಿ ಪ್ರಭಾವಿ ಸಂವಾದಕ್ಕೆ ಕಾರಣರಾದರು.

ಅತಿಥಿಗಳು ಮಾನವೀಯ ಮೌಲ್ಯಗಳು ಮತ್ತು ಶಾಂತಿಯ ಬದುಕು ಇಂದಿನ ಜಗತ್ತಿಗೆ ಅತ್ಯವಶ್ಯಕವಾಗಿದ್ದು, ಗುರು ಹಾಗೂ ಗಾಂಧಿಯವರ ಸಂದೇಶಗಳು ಸಮಾಜವನ್ನು ಒಗ್ಗೂಡಿಸುವ ಶಕ್ತಿಯಾಗಿದೆ ಎಂದು ತಮ್ಮ ಭಾಷಣದಲ್ಲಿ ಒತ್ತಿ ಹೇಳಿದರು. ವಿವಿಧ ಮತಗಳ ಪ್ರತಿನಿಧಿಗಳು ಒಂದೇ ವೇದಿಕೆಯಲ್ಲಿ ಮಾನವೀಯತೆ ಮತ್ತು ಸೌಹಾರ್ದವನ್ನು ಪ್ರತಿಪಾದಿಸಿದ ಕಾರಣ ಕಾರ್ಯಕ್ರಮವು ಎಲ್ಲರ ಮನದಲ್ಲಿ ವಿಶೇಷ ಸ್ಥಾನ ಗಳಿಸಿತು.

 

ಕರಾವಳಿ ಶೈಲಿಯ ಭರ್ಜರಿ ಮೀನು ಊಟ ಸವಿದ

ಮುಖ್ಯಮಂತ್ರಿ ಸಿದ್ಧರಾಮಯ್ಯ

ಉಳ್ಳಾಲ: ಗುರು–ಗಾಂಧಿ ಸಂವಾದ ಶತಮಾನೋತ್ಸವ ಸಮಾರಂಭದಲ್ಲಿ ಭಾಗವಹಿಸಿದ ನಂತರ, ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಕೊಣಾಜೆಯ ಮಂಗಳೂರು ವಿಶ್ವವಿದ್ಯಾಲಯದ ಕಾವೇರಿ ಗೆಸ್ಟ್‌ ಹೌಸ್‌ನಲ್ಲಿ ವಿಶೇಷವಾಗಿ ಸಿದ್ಧಪಡಿಸಿದ್ದ ಕರಾವಳಿ ಶೈಲಿಯ ಭರ್ಜರಿ ಮೀನು ಊಟವನ್ನು ಸವಿದರು.

ಮುಖ್ಯಮಂತ್ರಿಗಾಗಿ ಅಂಜಲ್‌, ಕಾನೆ, ಪಾಮ್ಲೆಟ್‌ ಮೀನು ಫ್ರೈ, ಜೊತೆಗೆ ನಾಟಿ ಕೋಳಿ, ನೀರು ದೋಸೆ, ಆಪಂ, ಪ್ರಾನ್ಸ್‌ ಗೀ ರೋಸ್ಟ್‌ , ಅಂಜಲ್‌ ತವಾ ಫ್ರೈ, ಲೈವ್‌ ಆಪಂ ತಯಾರಿ ಸೇರಿದಂತೆ ಮಂಗಳೂರಿನ ವೈವಿಧ್ಯಮಯ ಅಡುಗೆ ಪರಂಪರೆಯನ್ನು ಒಳಗೊಂಡ ವಿಶೇಷ ಆಹಾರ ಪಥ್ಯವನ್ನು ವ್ಯವಸ್ಥೆ ಮಾಡಲಾಗಿತ್ತು. ಬಾಯ್ಲ್ಡ್‌ ರೈಸ್‌ ಸಹಿತ ಸ್ಥಳೀಯ ರುಚಿಗುಣಗಳನ್ನು ಪ್ರತಿಬಿಂಬಿಸುವಂತೆ ಖಾದ್ಯಗಳನ್ನು ನಗರದ ಖ್ಯಾತ ಹೊಟೇಲ್‌ನಿಂದ ತರಿಸಲಾಗಿತ್ತು. ಕರಾವಳಿ ತಿನಿಸುಗಳ ಖ್ಯಾತಿಯನ್ನು ಮುಖ್ಯಮಂತ್ರಿ ಅನುಭವಿಸುವುದಕ್ಕಾಗಿ ಆಯೋಜಕರು ವಿಶೇಷ ಗಮನ ಹರಿಸಿದ್ದರು. ರುಚಿಗರ ಊಟದ ನಂತರ, ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಕೊಣಾಜೆ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ, ಕೊಣಾಜೆ ನಡುಪದವಿ ನಿವಾಸಿ ನಝರ್‌ ಷಾ ಅವರ ಮನೆಯಲ್ಲಿ ನಡೆದ ಚಹಾ ಕೂಟದಲ್ಲಿ ಪಾಲ್ಗೊಂಡರು.


Related Posts

ಅನಿತಾ ಪಿ. ತಾಕೊಡೆ ಅವರ ‘ಮೇಣಕ್ಕಂಟಿದ ಬತ್ತಿ’ ಕವನಕ್ಕೆ ಒಲಿದ ಸಂಕಮ್ಮ ಸಂಕಣ್ಣನವರ್ ದತ್ತಿ ಪ್ರಶಸ್ತಿ


Share         ಕರ್ನಾಟಕ ಲೇಖಕಿಯರ ಸಂಘವು 2025ನೇ ಸಾಲಿನ ವಿವಿಧ ದತ್ತಿನಿಧಿ ವಾರ್ಷಿಕ ಪ್ರಶಸ್ತಿಗಳನ್ನು ಪ್ರಕಟಿಸಿದೆ. ಹಸ್ತಪ್ರತಿಯಲ್ಲಿ ಗವಿಸಿದ್ದ ಎನ್. ಬಳ್ಳಾರಿ ಕಾವ್ಯ ಪ್ರಶಸ್ತಿ ಪಡೆದ, ಅನಿತಾ ತಾಕೊಡೆಯವರ ‘ಮೇಣಕ್ಕಂಟಿದ ಬತ್ತಿ’ ಕವನ ಸಂಕಲನ ಕ್ಕೆ 


Read More »

ಚಿಕ್ಕ ವಯಸ್ಸಿನಲ್ಲಿ ಸಾಧನೆ ಇಂಡಿಯಾ ಬುಕ್ ಆಫ್ ರೆಕಾರ್ಡ್‌ನಲ್ಲಿ ಬಾಲಕ ಸುಹಾಂಶ್‌ನ ಎಸ್ ಬಂಗೇರ ದಾಖಲೆ


Share         ದಾವಣಗೆರೆ : ನಗರದ ಶಾಂತಪ್ಪ ಪೂಜಾರಿ ಹಾಗೂ ಶ್ರೀಮತಿ ಹೇಮಾ ಶಾಂತಪ್ಪ ಪೂಜಾರಿ ಇವರ ಮೊಮ್ಮಗನಾದ ಕು. ಸುಹಾಂಶ್ ಎಸ್ ಬಂಗೇರ “ಇಂಡಿಯಾ ಬುಕ್ ಆಫ್ ರೆಕಾರ್ಡ್’ನ ಸಾಧಕನಾಗಿದ್ದು, ಸರಿಸುಮಾರು 195 ರಾಷ್ಟ್ರಗಳ


Read More »

ಖೇಲೋ ಇಂಡಿಯಾ ರಾಷ್ಟ್ರೀಯ ಕರಾಟೆ ತಂಡಕ್ಕೆ ಆಯ್ಕೆಯಾದ ಕರಾಟೆ ಪಟು ಛಾಯಾ ಎಸ್. ಪೂಜಾರಿ.


Share         ಚಿನ್ನ 30 ಬೆಳ್ಳಿ 1 ಕಂಚು – ಇದು ಛಾಯಾ ಎಸ್. ಪೂಜಾರಿ ಅವರ ಒಂದು ದಶಕದ ಪರಿಶ್ರಮ ಹಾಗೂ ಸಾಧನೆಗೆ ಸಂದಿರುವ ಗೌರವದ ತುರಾಯಿ. ಉಡುಪಿ ಜಿಲ್ಲೆಯ ಹೆರ್ಗ ಕಾಂತಾ ಬೆಟ್ಟು


Read More »

ಪವರ್‌ಲಿಫ್ಟಿಂಗ್ ಕ್ರೀಡಾಪಟು ಶ್ರೀಮತಿ ಅಕ್ಷತಾ ಪೂಜಾರಿ ಅವರಿಗೆ ‘ಮಹಿಳಾ ಮಾಣಿಕ್ಯ’ ಪ್ರಶಸ್ತಿ


Share         ನಮ್ಮ ಹೆಮ್ಮೆಯ ಕರಾವಳಿಯ ಪ್ರತಿಭೆ, ಅಂತರಾಷ್ಟ್ರೀಯ ಪವರ್‌ಲಿಫ್ಟಿಂಗ್ ಕ್ರೀಡಾಪಟು ಶ್ರೀಮತಿ ಅಕ್ಷತಾ ಪೂಜಾರಿ ಸಿದ್ದಕಟ್ಟೆ ಅವರಿಗೆ ಫಸ್ಟ್ ನ್ಯೂಸ್ ವಾಹಿನಿಯ ಪ್ರತಿಷ್ಠಿತ ‘ಮಹಿಳಾ ಮಾಣಿಕ್ಯ’ ಪ್ರಶಸ್ತಿ ಲಭಿಸಿರುವುದು ನಾಡಿಗೆ ಸಂದ ಗೌರವ. ಗ್ರಾಮೀಣ


Read More »

ಪುತ್ತೂರು:ಶಾಂತಿಗೋಡು ಬಿಲ್ಲವ ಗ್ರಾಮ ಸಮಿತಿಯ ಮಾಜಿ ಅಧ್ಯಕ್ಷ ರವಿಕುಮಾರ್ ಕಲ್ಕಾರ್ ನಿಧನ


Share         ಪುತ್ತೂರು: ಶಾಂತಿಗೋಡು ಕಲ್ಕಾರ್ ನಿವಾಸಿ ರವಿಕುಮಾರ್ ಕಲ್ಕಾರ್(48ವ.)ರವರು ಫೆ.15ರಂದು ಹೃದಯಾಘಾತದಿಂದ ನಿಧನ ಹೊಂದಿದ್ದಾರೆ. ಬ್ರಹ್ಮಶ್ರೀ ನಾರಾಯಣ ಗುರುಪೂಜೆ ಸಂದರ್ಭ ಶಾಂತಿಗೋಡು ಬಿಲ್ಲವ ಗ್ರಾಮ ಸಮಿತಿ ವತಿಯಿಂದ ನಡೆಸಲ್ಪಟ್ಟ ಕ್ರೀಡಾಕೂಟದಲ್ಲಿ ರವಿ ಕಲ್ಕಾರ್ ರವರು


Read More »

ಉದಯೋನ್ಮುಖ ಪ್ರತಿಭಾ ಪುರಸ್ಕಾರಕ್ಕೆ ಅಕ್ಷತಾ ಸುಧೀರ್


Share         ಮಂಗಳೂರು/ಬೆಂಗಳೂರು: ಕರ್ನಾಟಕ ಆರ್ಯ ಈಡಿಗ ಮಹಿಳಾ ಸಂಘದ ವತಿಯಿಂದ ಆಯೋಜಿಸಲಾದ ರಾಷ್ಟ್ರೀಯ ಸಮ್ಮೇಳನದಲ್ಲಿ, ಯುವವಾಹಿನಿಯ ಬೆಂಗಳೂರು ಘಟಕದ ಹೆಮ್ಮೆಯ ಸದಸ್ಯೆಯೂ ಹಾಗೂ ಪ್ರಸಕ್ತ ಲೆಕ್ಕಪರಿಶೋಧಕರೂ ಆಗಿರುವ ಶ್ರೀಮತಿ ಅಕ್ಷತಾ ಸುಧೀರ್ ಅವರಿಗೆ ಉದಯೋನ್ಮುಖ


Read More »