TOP STORIES:

ಬಿಲ್ಲವಾಸ್ ಫ್ಯಾಮಿಲಿ ದುಬೈ ಸಂಘಟನೆ ; ಉಪ ಪೊಲೀಸ್ ಅಧಿಕ್ಷಕರಾದ ಎಸ್ ಮಹೇಶ್ ಕುಮಾರ್ ರವರ ಮನದಾಳದ ಮಾತು


ಬಿಲ್ಲವಾಸ್ ಫ್ಯಾಮಿಲಿ ದುಬೈ, ಸಮುದಾಯದ ಸಾಮಾಜಿಕ ಚಟುವಟಿಕೆಗಳಲ್ಲಿ ಮಂಚೂಣಿ ಯಲ್ಲಿರುವ ಸಂಘಟನೆ. ಇತ್ತೀಚೆಗೆ ಖಾಸಗಿ ಕಾರ್ಯಕ್ರಮದ ನಿಮಿತ್ತ ದುಬೈಗೆ ಪ್ರಯಾಣ ಬೆಳೆಸಿದಾಗ ಈ ಸಂಘಟನೆಯ ಕಾರ್ಯವೈಖರಿ ಯನ್ನು ಕಣ್ಣಾರೆ ನೋಡುವ ಅವಕಾಶ ಒದಗಿ ಬಂತು.

ನಾನು ಕಳೆದ ವಾರ ಸ್ನೇಹಿತರೊಂದಿಗೆ ದುಬೈಗೆ ತೆರಳಿದ್ದು ಈ ವಿಚಾರವನ್ನು ನನ್ನ ಸ್ನೇಹಿತರೊಬ್ಬರಲ್ಲಿ (ಮಂಗಳೂರಿನ)ಹಂಚಿಕೊಂಡಿದ್ದೆ ಬಹುಷಃ ಅವರಿಂದಾಗಿ ನನಗೆ ಬಿಲ್ಲವಾಸ್ ಫ್ಯಾಮಿಲಿ ಯ ಸಂಪರ್ಕ ಸಾಧ್ಯವಾಯಿತು.

ದುಬೈಗೆ ಆಗಮಿಸಿದ ವಿಷಯ ತಿಳಿದ ಬಿಲ್ಲವಾಸ್ ಫ್ಯಾಮಿಲಿ ಯವರು ನನ್ನನ್ನು ಸಂಪರ್ಕಿಸಿ ಭಾನುವಾರದ ಕಾರ್ಯಕ್ರಮಕ್ಕೆ ಪ್ರೀತಿಯಿಂದ ಆಹ್ವಾನಿಸಿದರು.ಈ ಸಂಘಟನೆಯ ಒಂದಿಬ್ಬರ ಪರಿಚಯ ಬಿಟ್ಟರೆ ಉಳಿದವರಿಗೆ ನಾನು ಅಪರಿಚಿತ ಆದರೆ ನಾನು ಕಾರ್ಯಕ್ರಮ ಕ್ಕೆ ಆಗಮಿಸಿದ ಸಂದರ್ಭದಲ್ಲಿ ನನಗೆ ನೀಡಿದ ಸ್ವಾಗತ, ಗೌರವ, ಪ್ರೀತಿಯ ಆತಿಥ್ಯ ಮುಕ್ತ ಮಾತುಕತೆ ಇವೆಲ್ಲವೂ ನನ್ನನ್ನು ಭಾವಪರವಶನನ್ನಾಗಿಸಿತು.

ಕಾರ್ಯಕ್ರಮದ ಬಳಿಕ ಸಮಾಜದ ಅಭಿವೃದ್ಧಿ ಯ ಬಗ್ಗೆ ಒಂದಿಷ್ಟು ವಿಚಾರ ವಿನಿಮಯ ನಡೆಯಿತು. ಜೀವನ ನಿರ್ವಹಣೆ ಗಾಗಿ ಜನ್ಮಭೂಮಿಯಿಂದ( ಭಾರತ) ಕರ್ಮಭೂಮಿಗೆ ( ದುಬೈ )ಆಗಮಿಸಿ ಇಲ್ಲಿ ಬಿಡುವಿಲ್ಲದ ಕರ್ತವ್ಯ ದ ಒತ್ತಡ ದ ನಡುವೆಯೂ ಸಮುದಾಯದ ವರನ್ನು ಒಗ್ಗೂಡಿಸಿ ಅಲ್ಲಿ ಸಮಾಜಮುಖಿ ಕಾರ್ಯಕ್ರಮಗಳನ್ನು ನಡೆಸುವ ಬಿಲ್ಲವಾಸ್ ಫ್ಯಾಮಿಲಿ ಬಗ್ಗೆ ಬಹಳ ಹೆಮ್ಮೆ ಎನಿಸುತ್ತಿದೆ.

ಕೆಲವೇ ಸಮಯ ಜತೆಗೆ ಕಳೆದರೂ ನಾನೂ ಈ ಕುಟುಂಬ ದ ಸದಸ್ಯರಲ್ಲಿ ಓರ್ವ ಎಂಬಂತೆ ಭಾಸವಾಯಿತು. ಮುಜುಗರ ದಿಂದ ಕಾರ್ಯಕ್ರಮ ಕ್ಕೆ ಹೋದ ನಾನು ನನ್ನ ಕುಟುಂಬವನ್ನೇ ಬಿಟ್ಟು ಬರುತ್ತಿರುವೇನೋ ಅನ್ನಿಸುವಷ್ಟು ಭಾರವಾದ ಹೃದಯದೊಂದಿಗೆ ವಿದಾಯ ಹೇಳಬೇಕಾಯಿತು.

ನೀವುಗಳು ನೀಡಿದ ಪ್ರೀತಿ ಗೌರವಾತಿಥ್ಯಕ್ಕೆ ಸದಾ ಚಿರಋಣಿ. ಈ ಪ್ರೀತಿ ವಿಶ್ವಾಸ ಸದಾ ಹೀಗೇ ಇರಲಿ.


Related Posts

ಯುವ ವೈಭವ 2025 -ಯುವವಾಹಿನಿ (ರಿ.)ಬೆಂಗಳೂರು ಘಟಕದ ಪತ್ರಿಕಾಗೋಷ್ಠಿ


Share         #ಯುವ ವೈಭವ 2025 05/12/25 ಇಂದು ಪ್ರೆಸ್ ಕ್ಲಬ್ ಆಫ್ ಬೆಂಗಳೂರು ಇಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಯುವವಾಹಿನಿ (ರಿ.)ಬೆಂಗಳೂರು ಘಟಕ ಅಧ್ಯಕ್ಷರಾದ ಶಶಿಧರ್ ಕೋಟ್ಯಾನ್ ಮತ್ತು ಕಾರ್ಯದರ್ಶಿ ಸಂತೋಷ್ ಪೂಜಾರಿ ಪಣಪಿಲ ಅವರು


Read More »

ಕೇರಳದ ಶಿವಗಿರಿಯ ಶಾಖಾ ಮಠವನ್ನು ಉಡುಪಿ ಅಥವಾ ಮಂಗಳೂರಿನಲ್ಲಿ ಸ್ಥಾಪಿಸಲು ಅಗತ್ಯ ಇರುವ ಐದು ಎಕರೆ ಜಮೀನನ್ನು ಒದಗಿಸಲಾಗುವುದು : ಮುಖ್ಯಮಂತ್ರಿ ಸಿದ್ದರಾಮಯ್ಯ


Share         ಕೇರಳದ ಶಿವಗಿರಿಯ ಶಾಖಾ ಮಠವನ್ನು ಉಡುಪಿ ಅಥವಾ ಮಂಗಳೂರಿನಲ್ಲಿ ಸ್ಥಾಪಿಸಲು ಅಗತ್ಯ ಇರುವ ಐದು ಎಕರೆ ಜಮೀನನ್ನು ಒದಗಿಸಲಾಗುವುದು : ಮುಖ್ಯಮಂತ್ರಿ ಸಿದ್ದರಾಮಯ್ಯ ಉಳ್ಳಾಲ: ಕೇರಳದ ಶಿವಗಿರಿಯ ಶಾಖಾ ಮಠವನ್ನು ಉಡುಪಿ ಅಥವಾ


Read More »

ವಿಶೇಷ ಮಕ್ಕಳ ಕಲೆಗಾರಿಕೆಯಿಂದ ರೂಪುಗೊಂಡ ಜನನಾಯಕ ಪದ್ಮರಾಜ್ ಆರ್. ಪೂಜಾರಿಯವರ ಭಾವಚಿತ್ರ


Share         ಕಲಾಸೇತು — ಬಂಟ್ವಾಳ ತಾಲೂಕಿನ ಕಾವಳಕಟ್ಟೆಯ ಗುರಿಮಜಲ್ ಹಿದಾಯ ವಿಶೇಷ ಮಕ್ಕಳ ವಸತಿ ಶಾಲೆ ದಶಮಾನೋತ್ಸವ ಕಾರ್ಯಕ್ರಮದಲ್ಲಿ, ವಿಶೇಷ ಮಕ್ಕಳ ಕಲೆಗಾರಿಕೆಯಿಂದ ರೂಪುಗೊಂಡ ಜನನಾಯಕ ಪದ್ಮರಾಜ್ ಆರ್. ಪೂಜಾರಿಯವರ ಭಾವಚಿತ್ರ ವನ್ನು ಶಾಲೆಯ


Read More »

ಯುವವಾಹಿನಿ ಪುತ್ತೂರು ಘಟಕದಿಂದ ಅವಿಭಜಿತ ಪುತ್ತೂರು ತಾ ಮಟ್ಟದ ಕೋಟಿ-ಚೆನ್ನಯ ಕ್ರೀಡಾಕೂಟ ಸಮಾರೋಪ.


Share         ಪುತ್ತೂರು:ವಿದ್ಯೆ, ಉದ್ಯೋಗ, ಸಂಪರ್ಕ ಧ್ಯೇಯವನ್ನೊಳಗೊಂಡ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಯುವವಾಹಿನಿ ಪುತ್ತೂರು ಘಟಕ ಇದರ ಆಶ್ರಯದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಸ್ವಾಮಿ ಬಿಲ್ಲವ ಸಂಘ ಪುತ್ತೂರು ಇದರ ವ್ಯಾಪ್ತಿಗೆ ಒಳಪಟ್ಟ ಸಮಾಜ ಬಾಂಧವರಿಗಾಗಿ


Read More »

🏆ವಿಶ್ವ ಚಾಂಪಿಯನ್ ಭಾರತ 🇮🇳🏆ಮೂಡಬಿದಿರೆಯ ಆಳ್ವಾಸ್ ಕಾಲೇಜಿನ ವಿದ್ಯಾರ್ಥಿನಿ ಧನಲಕ್ಷ್ಮಿ ಪೂಜಾರಿ


Share         🏆ವಿಶ್ವ ಚಾಂಪಿಯನ್ ಭಾರತ 🇮🇳🏆 ಢಾಕಾದಲ್ಲಿ ನಡೆದ 2025ರ ಕಬಡ್ಡಿ ವಿಶ್ವಕಪ್ ಟೂರ್ನಿಯಲ್ಲಿ ಚೈನೀಸ್ ತೈಪೆ ತಂಡವನ್ನು ರೋಚಕವಾಗಿ ಮಣಿಸಿ ಪ್ರತಿಷ್ಠಿತ ಕಬಡ್ಡಿ ವಿಶ್ವಕಪ್ ಟ್ರೋಫಿಯನ್ನು ಗೆದ್ದ ಭಾರತೀಯ ಮಹಿಳಾ ಕಬಡ್ಡಿ ತಂಡಕ್ಕೆ


Read More »

ಮಸ್ಕತ್ ನ ಭೀಷ್ಮ ಎಂಬ ಹೆಗ್ಗಳಿಕೆಗೆ ಪಾತ್ರರಾದ ಹಿರಿಯ ಉದ್ಯಮಿ ಶ್ರೀಯುತ ಎಸ್ ಕೆ ಪೂಜಾರಿ


Share         ಮೂಲತಃ ಗಂಜಿಮಠ ಪೆರಾರ ಎಂಬಲ್ಲಿ 1956 ರಲ್ಲಿ ಜನಿಸಿದ ಶ್ರೀಯುತರು ಕಿರಿಯ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣವನ್ನು ಊರಿನಲ್ಲಿ ಪ್ರಾರಂಭಿಸಿ ನಂತರ ಮುಂಬೈಗೆ ಬಂದು ಕೆಲಸದ ಜೊತೆಗೆ ಹೆಚ್ಚಿನ ವಿದ್ಯಾಭ್ಯಾಸವನ್ನು ಮುಂಬೈನಲ್ಲಿ ಪ್ರಾರಂಭಿಸಿ


Read More »