TOP STORIES:

ಬಿಲ್ಲವಾಸ್ ಫ್ಯಾಮಿಲಿ ದುಬೈ ಸಂಘಟನೆ ; ಉಪ ಪೊಲೀಸ್ ಅಧಿಕ್ಷಕರಾದ ಎಸ್ ಮಹೇಶ್ ಕುಮಾರ್ ರವರ ಮನದಾಳದ ಮಾತು


ಬಿಲ್ಲವಾಸ್ ಫ್ಯಾಮಿಲಿ ದುಬೈ, ಸಮುದಾಯದ ಸಾಮಾಜಿಕ ಚಟುವಟಿಕೆಗಳಲ್ಲಿ ಮಂಚೂಣಿ ಯಲ್ಲಿರುವ ಸಂಘಟನೆ. ಇತ್ತೀಚೆಗೆ ಖಾಸಗಿ ಕಾರ್ಯಕ್ರಮದ ನಿಮಿತ್ತ ದುಬೈಗೆ ಪ್ರಯಾಣ ಬೆಳೆಸಿದಾಗ ಈ ಸಂಘಟನೆಯ ಕಾರ್ಯವೈಖರಿ ಯನ್ನು ಕಣ್ಣಾರೆ ನೋಡುವ ಅವಕಾಶ ಒದಗಿ ಬಂತು.

ನಾನು ಕಳೆದ ವಾರ ಸ್ನೇಹಿತರೊಂದಿಗೆ ದುಬೈಗೆ ತೆರಳಿದ್ದು ಈ ವಿಚಾರವನ್ನು ನನ್ನ ಸ್ನೇಹಿತರೊಬ್ಬರಲ್ಲಿ (ಮಂಗಳೂರಿನ)ಹಂಚಿಕೊಂಡಿದ್ದೆ ಬಹುಷಃ ಅವರಿಂದಾಗಿ ನನಗೆ ಬಿಲ್ಲವಾಸ್ ಫ್ಯಾಮಿಲಿ ಯ ಸಂಪರ್ಕ ಸಾಧ್ಯವಾಯಿತು.

ದುಬೈಗೆ ಆಗಮಿಸಿದ ವಿಷಯ ತಿಳಿದ ಬಿಲ್ಲವಾಸ್ ಫ್ಯಾಮಿಲಿ ಯವರು ನನ್ನನ್ನು ಸಂಪರ್ಕಿಸಿ ಭಾನುವಾರದ ಕಾರ್ಯಕ್ರಮಕ್ಕೆ ಪ್ರೀತಿಯಿಂದ ಆಹ್ವಾನಿಸಿದರು.ಈ ಸಂಘಟನೆಯ ಒಂದಿಬ್ಬರ ಪರಿಚಯ ಬಿಟ್ಟರೆ ಉಳಿದವರಿಗೆ ನಾನು ಅಪರಿಚಿತ ಆದರೆ ನಾನು ಕಾರ್ಯಕ್ರಮ ಕ್ಕೆ ಆಗಮಿಸಿದ ಸಂದರ್ಭದಲ್ಲಿ ನನಗೆ ನೀಡಿದ ಸ್ವಾಗತ, ಗೌರವ, ಪ್ರೀತಿಯ ಆತಿಥ್ಯ ಮುಕ್ತ ಮಾತುಕತೆ ಇವೆಲ್ಲವೂ ನನ್ನನ್ನು ಭಾವಪರವಶನನ್ನಾಗಿಸಿತು.

ಕಾರ್ಯಕ್ರಮದ ಬಳಿಕ ಸಮಾಜದ ಅಭಿವೃದ್ಧಿ ಯ ಬಗ್ಗೆ ಒಂದಿಷ್ಟು ವಿಚಾರ ವಿನಿಮಯ ನಡೆಯಿತು. ಜೀವನ ನಿರ್ವಹಣೆ ಗಾಗಿ ಜನ್ಮಭೂಮಿಯಿಂದ( ಭಾರತ) ಕರ್ಮಭೂಮಿಗೆ ( ದುಬೈ )ಆಗಮಿಸಿ ಇಲ್ಲಿ ಬಿಡುವಿಲ್ಲದ ಕರ್ತವ್ಯ ದ ಒತ್ತಡ ದ ನಡುವೆಯೂ ಸಮುದಾಯದ ವರನ್ನು ಒಗ್ಗೂಡಿಸಿ ಅಲ್ಲಿ ಸಮಾಜಮುಖಿ ಕಾರ್ಯಕ್ರಮಗಳನ್ನು ನಡೆಸುವ ಬಿಲ್ಲವಾಸ್ ಫ್ಯಾಮಿಲಿ ಬಗ್ಗೆ ಬಹಳ ಹೆಮ್ಮೆ ಎನಿಸುತ್ತಿದೆ.

ಕೆಲವೇ ಸಮಯ ಜತೆಗೆ ಕಳೆದರೂ ನಾನೂ ಈ ಕುಟುಂಬ ದ ಸದಸ್ಯರಲ್ಲಿ ಓರ್ವ ಎಂಬಂತೆ ಭಾಸವಾಯಿತು. ಮುಜುಗರ ದಿಂದ ಕಾರ್ಯಕ್ರಮ ಕ್ಕೆ ಹೋದ ನಾನು ನನ್ನ ಕುಟುಂಬವನ್ನೇ ಬಿಟ್ಟು ಬರುತ್ತಿರುವೇನೋ ಅನ್ನಿಸುವಷ್ಟು ಭಾರವಾದ ಹೃದಯದೊಂದಿಗೆ ವಿದಾಯ ಹೇಳಬೇಕಾಯಿತು.

ನೀವುಗಳು ನೀಡಿದ ಪ್ರೀತಿ ಗೌರವಾತಿಥ್ಯಕ್ಕೆ ಸದಾ ಚಿರಋಣಿ. ಈ ಪ್ರೀತಿ ವಿಶ್ವಾಸ ಸದಾ ಹೀಗೇ ಇರಲಿ.


Related Posts

ಶ್ರೀಯುತ ಮಂಜುನಾಥ ಪೂಜಾರಿ ಮುದ್ರಾಡಿ ಅವರಿಗೆ ಅವರಿಗೆ ರಾಜ್ಯ ಸಚಿವರ ಸ್ಥಾನಮಾನ


Share         ಶ್ರೀ ನಾರಾಯಣ ಗುರು ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಶ್ರೀಯುತ ಮಂಜುನಾಥ ಪೂಜಾರಿ ಮುದ್ರಾಡಿ ಅವರಿಗೆ ರಾಜ್ಯ ಸಚಿವರ ಸ್ಥಾನಮಾನ ಲಭಿಸಿರುವುದು ನಮ್ಮ ಸಮಾಜಕ್ಕೆ ಹೆಮ್ಮೆಯ ಸಂಗತಿ. ಈ ಕುರಿತು ಏಪ್ರಿಲ್ 2ರಂದು ಸರಕಾರದ


Read More »

ಕಾರ್ಕಳದ ಸುಧಾಕರ್ ಪೂಜಾರಿಗೆ ‘ಐಕಾನಿಕ್ ಟ್ರೈನರ್’ ಗೌರವ ಪದವಿ


Share         ಬೆಂಗಳೂರು: ಎಕ್ಕಾರ ಲೈಫ್ ಸೈನ್ಸಸ್ ಪ್ರೈವೇಟ್ ಲಿಮಿಟೆಡ್ ಇದರ ಆಡಳಿತ ನಿರ್ದೇಶಕರಾದ ಕಾರ್ಕಳದ ಸುಧಾಕರ್ ಪೂಜಾರಿ ಅವರಿಗೆ ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ವತಿಯಿಂದ “ಐಕಾನಿಕ್ ಟ್ರೈನರ್” ಎಂಬ ಗೌರವಪೂರ್ಣ ಪದವಿ ಪ್ರದಾನ ಮಾಡಲಾಗಿದೆ.


Read More »

ಅನಿತಾ ಪಿ. ತಾಕೊಡೆ ಅವರ ‘ಮೇಣಕ್ಕಂಟಿದ ಬತ್ತಿ’ ಕವನಕ್ಕೆ ಒಲಿದ ಸಂಕಮ್ಮ ಸಂಕಣ್ಣನವರ್ ದತ್ತಿ ಪ್ರಶಸ್ತಿ


Share         ಕರ್ನಾಟಕ ಲೇಖಕಿಯರ ಸಂಘವು 2025ನೇ ಸಾಲಿನ ವಿವಿಧ ದತ್ತಿನಿಧಿ ವಾರ್ಷಿಕ ಪ್ರಶಸ್ತಿಗಳನ್ನು ಪ್ರಕಟಿಸಿದೆ. ಹಸ್ತಪ್ರತಿಯಲ್ಲಿ ಗವಿಸಿದ್ದ ಎನ್. ಬಳ್ಳಾರಿ ಕಾವ್ಯ ಪ್ರಶಸ್ತಿ ಪಡೆದ, ಅನಿತಾ ತಾಕೊಡೆಯವರ ‘ಮೇಣಕ್ಕಂಟಿದ ಬತ್ತಿ’ ಕವನ ಸಂಕಲನ ಕ್ಕೆ 


Read More »

ಚಿಕ್ಕ ವಯಸ್ಸಿನಲ್ಲಿ ಸಾಧನೆ ಇಂಡಿಯಾ ಬುಕ್ ಆಫ್ ರೆಕಾರ್ಡ್‌ನಲ್ಲಿ ಬಾಲಕ ಸುಹಾಂಶ್‌ನ ಎಸ್ ಬಂಗೇರ ದಾಖಲೆ


Share         ದಾವಣಗೆರೆ : ನಗರದ ಶಾಂತಪ್ಪ ಪೂಜಾರಿ ಹಾಗೂ ಶ್ರೀಮತಿ ಹೇಮಾ ಶಾಂತಪ್ಪ ಪೂಜಾರಿ ಇವರ ಮೊಮ್ಮಗನಾದ ಕು. ಸುಹಾಂಶ್ ಎಸ್ ಬಂಗೇರ “ಇಂಡಿಯಾ ಬುಕ್ ಆಫ್ ರೆಕಾರ್ಡ್’ನ ಸಾಧಕನಾಗಿದ್ದು, ಸರಿಸುಮಾರು 195 ರಾಷ್ಟ್ರಗಳ


Read More »

ಖೇಲೋ ಇಂಡಿಯಾ ರಾಷ್ಟ್ರೀಯ ಕರಾಟೆ ತಂಡಕ್ಕೆ ಆಯ್ಕೆಯಾದ ಕರಾಟೆ ಪಟು ಛಾಯಾ ಎಸ್. ಪೂಜಾರಿ.


Share         ಚಿನ್ನ 30 ಬೆಳ್ಳಿ 1 ಕಂಚು – ಇದು ಛಾಯಾ ಎಸ್. ಪೂಜಾರಿ ಅವರ ಒಂದು ದಶಕದ ಪರಿಶ್ರಮ ಹಾಗೂ ಸಾಧನೆಗೆ ಸಂದಿರುವ ಗೌರವದ ತುರಾಯಿ. ಉಡುಪಿ ಜಿಲ್ಲೆಯ ಹೆರ್ಗ ಕಾಂತಾ ಬೆಟ್ಟು


Read More »

ಪವರ್‌ಲಿಫ್ಟಿಂಗ್ ಕ್ರೀಡಾಪಟು ಶ್ರೀಮತಿ ಅಕ್ಷತಾ ಪೂಜಾರಿ ಅವರಿಗೆ ‘ಮಹಿಳಾ ಮಾಣಿಕ್ಯ’ ಪ್ರಶಸ್ತಿ


Share         ನಮ್ಮ ಹೆಮ್ಮೆಯ ಕರಾವಳಿಯ ಪ್ರತಿಭೆ, ಅಂತರಾಷ್ಟ್ರೀಯ ಪವರ್‌ಲಿಫ್ಟಿಂಗ್ ಕ್ರೀಡಾಪಟು ಶ್ರೀಮತಿ ಅಕ್ಷತಾ ಪೂಜಾರಿ ಸಿದ್ದಕಟ್ಟೆ ಅವರಿಗೆ ಫಸ್ಟ್ ನ್ಯೂಸ್ ವಾಹಿನಿಯ ಪ್ರತಿಷ್ಠಿತ ‘ಮಹಿಳಾ ಮಾಣಿಕ್ಯ’ ಪ್ರಶಸ್ತಿ ಲಭಿಸಿರುವುದು ನಾಡಿಗೆ ಸಂದ ಗೌರವ. ಗ್ರಾಮೀಣ


Read More »