TOP STORIES:

ಮಂಗಳೂರು: ಅಳದಂಗಡಿಯ ಶ್ರೀಮತಿ ಅನುಷಾ ಪ್ರಸಾದ್ ಪೂಜಾರಿ ಅವರಿಗೆ ಗಣಿತಶಾಸ್ತ್ರ ವಿಷಯದಲ್ಲಿ ಪಿ.ಎಚ್.ಡಿ ಪದವಿ


ಮಣಿಪಾಲ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ, ಮಣಿಪಾಲ (Manipal Institute of Technology, Manipal) ನ ಗಣಿತಶಾಸ್ತ್ರ ವಿಭಾಗದ ಸಂಶೋಧನಾ ವಿದ್ಯಾರ್ಥಿನಿ ಶ್ರೀಮತಿ ಅನುಷಾ ಎಲ್ ಅವರು ಮಂಡಿಸಿದ

“A study on N-Covering Zagreb Indices and Posets of a Graph using Mixed Degree Conditions”

ಎಂಬ ಮಹಾ ಪ್ರಬಂಧಕ್ಕೆ ಮಣಿಪಾಲ ಅಕಾಡೆಮಿ ಆಫ್ ಹೈಯರ್ ಎಜುಕೇಶನ್ (Manipal Academy of Higher Education) ವಿಶ್ವವಿದ್ಯಾನಿಲಯವು 06-10-2025ರಂದು ಪಿ.ಎಚ್.ಡಿ. ಪದವಿ ಪ್ರದಾನ ಮಾಡಿದೆ.

ಈ ಸಂಶೋಧನಾ ಕಾರ್ಯಕ್ಕೆ ಡಾ. ಸಾಯಿನಾಥ್ ಉಡುಪ ಎನ್.ವಿ. ಹಾಗೂ ಡಾ. ಪೃಥ್ವಿರಾಜ್ ಎಂ. ಇವರು ಮಾರ್ಗದರ್ಶನ ನೀಡಿದ್ದರು.

ಇವರು ಬೆಳ್ತಂಗಡಿ ತಾಲೂಕಿನ ಪಿಲ್ಯ ಗ್ರಾಮ, ಬರಾಯದ ಲಕ್ಷ್ಮಣ ಪೂಜಾರಿ ಮತ್ತು ಲೀಲಾವತಿ ದಂಪತಿಯ ದ್ವಿತೀಯ ಪುತ್ರಿಯಾಗಿದ್ದು, ಅಳದಂಗಡಿಯ ಸಿವಿಲ್ ಇಂಜಿನಿಯರ್ ಪ್ರಸಾದ್ ಪೂಜಾರಿ ಇವರ ಪತ್ನಿಯಾಗಿದ್ದಾರೆ.

ಪ್ರಾಥಮಿಕ ಶಿಕ್ಷಣವನ್ನು ಸೂಳಬೆಟ್ಟು ಮತ್ತು ಬಡಗಕಾರಂದೂರು ಶಾಲೆಗಳಲ್ಲಿ ಮುಗಿಸಿರುವ ಇವರು, SDM ಕಾಲೇಜು, ಉಜಿರೆಯಲ್ಲಿ ಬಿಎಸ್ಸಿ ಹಾಗೂ ಸಂತ ಫಿಲೋಮಿನಾ ಕಾಲೇಜು, ಪುತ್ತೂರು ಇಲ್ಲಿ ಎಂಎಸ್ಸಿ ಗಣಿತಶಾಸ್ತ್ರ ಪದವಿ ಪಡೆದಿದ್ದಾರೆ.

ಇವರು 2018ರಲ್ಲಿ ಕೆ -ಸೆಟ್ (K-SET) ಹಾಗು 2021ರಲ್ಲಿ ನಡೆದ ಕರ್ನಾಟಕ ಸರ್ಕಾರದ ಅಸಿಸ್ಟೆಂಟ್ ಪ್ರೊಫೆಸರ್ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿದ್ದು, ಪ್ರಸ್ತುತ ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಕುಂದಾಪುರದಲ್ಲಿ ಗಣಿತಶಾಸ್ತ್ರ ವಿಭಾಗದ ಸಹಾಯಕ ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ.

ಡಾ. ಅನುಷಾ ಎಲ್ ಅವರ ಈ ಸಾಧನೆಗೆ ಕುಟುಂಬಸ್ಥರು, ಸಹೋದ್ಯೋಗಿಗಳು ಹಾಗೂ ಸ್ನೇಹಿತರು ಹೃತ್ಪೂರ್ವಕ ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.


Related Posts

ಶ್ರೀಯುತ ಮಂಜುನಾಥ ಪೂಜಾರಿ ಮುದ್ರಾಡಿ ಅವರಿಗೆ ಅವರಿಗೆ ರಾಜ್ಯ ಸಚಿವರ ಸ್ಥಾನಮಾನ


Share         ಶ್ರೀ ನಾರಾಯಣ ಗುರು ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಶ್ರೀಯುತ ಮಂಜುನಾಥ ಪೂಜಾರಿ ಮುದ್ರಾಡಿ ಅವರಿಗೆ ರಾಜ್ಯ ಸಚಿವರ ಸ್ಥಾನಮಾನ ಲಭಿಸಿರುವುದು ನಮ್ಮ ಸಮಾಜಕ್ಕೆ ಹೆಮ್ಮೆಯ ಸಂಗತಿ. ಈ ಕುರಿತು ಏಪ್ರಿಲ್ 2ರಂದು ಸರಕಾರದ


Read More »

ಕಾರ್ಕಳದ ಸುಧಾಕರ್ ಪೂಜಾರಿಗೆ ‘ಐಕಾನಿಕ್ ಟ್ರೈನರ್’ ಗೌರವ ಪದವಿ


Share         ಬೆಂಗಳೂರು: ಎಕ್ಕಾರ ಲೈಫ್ ಸೈನ್ಸಸ್ ಪ್ರೈವೇಟ್ ಲಿಮಿಟೆಡ್ ಇದರ ಆಡಳಿತ ನಿರ್ದೇಶಕರಾದ ಕಾರ್ಕಳದ ಸುಧಾಕರ್ ಪೂಜಾರಿ ಅವರಿಗೆ ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ವತಿಯಿಂದ “ಐಕಾನಿಕ್ ಟ್ರೈನರ್” ಎಂಬ ಗೌರವಪೂರ್ಣ ಪದವಿ ಪ್ರದಾನ ಮಾಡಲಾಗಿದೆ.


Read More »

ಅನಿತಾ ಪಿ. ತಾಕೊಡೆ ಅವರ ‘ಮೇಣಕ್ಕಂಟಿದ ಬತ್ತಿ’ ಕವನಕ್ಕೆ ಒಲಿದ ಸಂಕಮ್ಮ ಸಂಕಣ್ಣನವರ್ ದತ್ತಿ ಪ್ರಶಸ್ತಿ


Share         ಕರ್ನಾಟಕ ಲೇಖಕಿಯರ ಸಂಘವು 2025ನೇ ಸಾಲಿನ ವಿವಿಧ ದತ್ತಿನಿಧಿ ವಾರ್ಷಿಕ ಪ್ರಶಸ್ತಿಗಳನ್ನು ಪ್ರಕಟಿಸಿದೆ. ಹಸ್ತಪ್ರತಿಯಲ್ಲಿ ಗವಿಸಿದ್ದ ಎನ್. ಬಳ್ಳಾರಿ ಕಾವ್ಯ ಪ್ರಶಸ್ತಿ ಪಡೆದ, ಅನಿತಾ ತಾಕೊಡೆಯವರ ‘ಮೇಣಕ್ಕಂಟಿದ ಬತ್ತಿ’ ಕವನ ಸಂಕಲನ ಕ್ಕೆ 


Read More »

ಚಿಕ್ಕ ವಯಸ್ಸಿನಲ್ಲಿ ಸಾಧನೆ ಇಂಡಿಯಾ ಬುಕ್ ಆಫ್ ರೆಕಾರ್ಡ್‌ನಲ್ಲಿ ಬಾಲಕ ಸುಹಾಂಶ್‌ನ ಎಸ್ ಬಂಗೇರ ದಾಖಲೆ


Share         ದಾವಣಗೆರೆ : ನಗರದ ಶಾಂತಪ್ಪ ಪೂಜಾರಿ ಹಾಗೂ ಶ್ರೀಮತಿ ಹೇಮಾ ಶಾಂತಪ್ಪ ಪೂಜಾರಿ ಇವರ ಮೊಮ್ಮಗನಾದ ಕು. ಸುಹಾಂಶ್ ಎಸ್ ಬಂಗೇರ “ಇಂಡಿಯಾ ಬುಕ್ ಆಫ್ ರೆಕಾರ್ಡ್’ನ ಸಾಧಕನಾಗಿದ್ದು, ಸರಿಸುಮಾರು 195 ರಾಷ್ಟ್ರಗಳ


Read More »

ಖೇಲೋ ಇಂಡಿಯಾ ರಾಷ್ಟ್ರೀಯ ಕರಾಟೆ ತಂಡಕ್ಕೆ ಆಯ್ಕೆಯಾದ ಕರಾಟೆ ಪಟು ಛಾಯಾ ಎಸ್. ಪೂಜಾರಿ.


Share         ಚಿನ್ನ 30 ಬೆಳ್ಳಿ 1 ಕಂಚು – ಇದು ಛಾಯಾ ಎಸ್. ಪೂಜಾರಿ ಅವರ ಒಂದು ದಶಕದ ಪರಿಶ್ರಮ ಹಾಗೂ ಸಾಧನೆಗೆ ಸಂದಿರುವ ಗೌರವದ ತುರಾಯಿ. ಉಡುಪಿ ಜಿಲ್ಲೆಯ ಹೆರ್ಗ ಕಾಂತಾ ಬೆಟ್ಟು


Read More »

ಪವರ್‌ಲಿಫ್ಟಿಂಗ್ ಕ್ರೀಡಾಪಟು ಶ್ರೀಮತಿ ಅಕ್ಷತಾ ಪೂಜಾರಿ ಅವರಿಗೆ ‘ಮಹಿಳಾ ಮಾಣಿಕ್ಯ’ ಪ್ರಶಸ್ತಿ


Share         ನಮ್ಮ ಹೆಮ್ಮೆಯ ಕರಾವಳಿಯ ಪ್ರತಿಭೆ, ಅಂತರಾಷ್ಟ್ರೀಯ ಪವರ್‌ಲಿಫ್ಟಿಂಗ್ ಕ್ರೀಡಾಪಟು ಶ್ರೀಮತಿ ಅಕ್ಷತಾ ಪೂಜಾರಿ ಸಿದ್ದಕಟ್ಟೆ ಅವರಿಗೆ ಫಸ್ಟ್ ನ್ಯೂಸ್ ವಾಹಿನಿಯ ಪ್ರತಿಷ್ಠಿತ ‘ಮಹಿಳಾ ಮಾಣಿಕ್ಯ’ ಪ್ರಶಸ್ತಿ ಲಭಿಸಿರುವುದು ನಾಡಿಗೆ ಸಂದ ಗೌರವ. ಗ್ರಾಮೀಣ


Read More »