TOP STORIES:

ಸುರತ್ಕಲ್‌ನಲ್ಲಿ ರಂಗುರಂಗಿನ ರಂಗೋತ್ಸವ ನವೀನ್ ಡಿ ಪಡೀಲ್ ಗೆ ರಂಗಚಾವಡಿ ಪ್ರಶಸ್ತಿ ಪ್ರದಾನ


ಸುರತ್ಕಲ್: ರಂಗಚಾವಡಿ ಮಂಗಳೂರು ಸಾಂಸ್ಕೃತಿಕ ಸಾಂಸ್ಕೃತಿಕ ಸಂಘಟನೆ ಮತ್ತು ಸುಭಾಷಿತನಗರ  ರೆಸಿಡೆಂಟ್ಸ್ ವೆಲ್ ಫೇರ್ ಅಸೋಸಿಯೇಶನ್ (ರಿ) ಸುರತ್ಕಲ್ ಇದರ ಆಶ್ರಯದಲ್ಲಿ ನಡೆದ ರಂಗಚಾವಡಿ ರಜತ ಸಂಭ್ರಮ ಮತ್ತು ರಂಗುರಂಗಿನ ರಂಗೋತ್ಸವ ಕಾರ್ಯಕ್ರಮ ಸುರತ್ಕಲ್ ಬಂಟರ ಭವನದಲ್ಲಿ ಜರಗಿತು.

ಕಾರ್ಯಕ್ರಮವನ್ನು ಮಂಬೈ ವಿ ಕೆ ಸಮೂಹ ಸಂಸ್ಥೆಯ ಚೆಯರ್ ಮ್ಮಾನ್ ಮಧ್ಯಗುತ್ತು ಕರುಣಾಕರ ಎಂ ಶೆಟ್ಟಿ, ಬಂಟರ ಯಾನೆ ನಾಡವರ ಮಾತೃಸಂಘದ ಅಧ್ಯಕ್ಷ ಕೆ ಅಜಿತ್ ಕುಮಾರ್ ರೈ ಮಾಲಾಡಿ, ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷ ಐಕಳ ಹರೀಶ್ ಶೆಟ್ಟಿ ಉದ್ಘಾಟಿಸಿದರು.

ಅಜಿತ್ ಕುಮಾರ್ ರೈ ಮಾಲಾಡಿ ಮಾತನಾಡಿ ರಂಗಚಾವಡಿ ಸಂಸ್ಥೆ ಕಲಾವಿದರನ್ನು ಪ್ರೋತ್ಸಾಹಿಸುತ್ತಾ ಬಂದಿರುವ ಸಂಸ್ಥೆ. ಅನೇಕ ಕಲಾವಿದರನ್ನು ಗುರುತಿಸಿ ನಾಡಿಗೆ ಪರಿಚಯಿಸಿದ ಕೀರ್ತಿ ರಂಗಚಾವಡಿ ಸಂಸ್ಥೆಗೆ ಸಲ್ಲುತ್ತದೆ. ಮುಂದಿನ ದಿನಗಳಲ್ಲಿ ರಂಗಚಾವಡಿ ಅಕಾಡೆಮಿಯನ್ನಾಗಿ ರಚಿಸಿ ಒಳ್ಳೆಯ ಕೆಲಸ ಕಾರ್ಯಗಳನ್ನು ಮಾಡುವಂತಾಗಲಿ ಎಂದು ಶುಭ ಹಾರೈಸಿದರು.

ಮಧ್ಯಗುತ್ತು ಕರುಣಾಕರ ಎಂ ಶೆಟ್ಟಿ ಮಾತನಾಡಿ ರಂಗಚಾವಡಿ ಸಂಸ್ಥೆ ರಜತ ಸಂಭ್ರಮವನ್ನು ಆಚರಿಸುತ್ತಿದೆ. ಇದರ ಕಾರ್ಯಚಟುವಟಿಕೆ ಇದೇ ರೀತಿ ಮುಂದುವರಿಯಲಿ ಎಂದರು.

ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷ ಐಕಳ ಹರೀಶ್ ಶೆಟ್ಟಿ ಮಾತನಾಡಿ ರಂಗಚಾವಡಿ ಸಂಸ್ಥೆ ಕಲಾವಿದರನ್ನು ಗುರುತಿಸಿ ಗೌರವಿಸುತ್ತಿರುವುದು ಶ್ಲಾಘನೀಯ ಕೆಲಸ. ನವೀನ್ ಪಡೀಲ್ ರಂತಹ ಮೇರು ನಟನಿಗೆ ರಂಗಚಾವಡಿ ಪ್ರಶಸ್ತಿ ಬಂದಿರುವುದು ಅತೀವ ಸಂತಸ ತಂದಿದೆ ಎಂದರು.

ಉದ್ಯಮಿ ಗಿರೀಶ್ ಎಂ ಶೆಟ್ಟಿ ಮಾತನಾಡಿ ನವೀನ್ ಪಡೀಲ್ ಮುಗ್ದ ಮನಸ್ಸಿನ ಪ್ರತಿಭಾವಂತ ಕಲಾವಿದ. ಸದಾ ಹಸನ್ಮುಖಿಯಾಗಿರುವ ನವೀನ್ ಕಷ್ಟ ಮತ್ತು ಸುಖಗಳನ್ನು ಸಮಾನವಾಗಿ ಸ್ವೀಕರಿಸಿದ್ದಾರೆ. ತುಳುರಂಗಭೂಮಿಗೆ ಅವರ ಕೊಡುಗೆ ದೊಡ್ಡದಿದೆ ಎಂದರು.

ಸಮಾರಂಭದಲ್ಲಿ ನವೀನ್ ಡಿ ಪಡೀಲ್‌ಗೆ ರಂಗಚಾವಡಿ ಪ್ರಶಸ್ತಿ ಪ್ರದಾನ ಮಾಡಿ ಸನ್ಮಾನಿಸಲಾಯಿತು.

ವೇದಿಕೆಯಲ್ಲಿ ಡಾ ಸಂಜೀವ ದಂಡೆಕೇರಿ, ಕಿಶೋರ್ ಡಿ ಶೆಟ್ಟಿ, ಕರ್ನೂರು ಮೋಹನ್ ರೈ,  ವಸಂತ ಶೆಟ್ಟಿ,  ಈಶ್ವರ್ ಪ್ರಸಾದ್ ಶೆಟ್ಟಿ, ಅಶೋಕ್ ಶೆಟ್ಟಿ ತಡಂಬೈಲ್, ಭವಾನಿ ಶಂಕರ್ ಶೆಟ್ಟಿ ಬಾಳ,  ರಮೆಶ್ ಶೆಟ್ಟಿ ಸುಭಾಷಿತನಗರ, ನಿಟ್ಟೆಗುತ್ತು ರವಿರಾಜ್ ಶೆಟ್ಟಿ, ಎಂ ದೇವಾನಂದ ಶೆಟ್ಟಿ,  ಸುಧಾಕರ ಎಸ್  ಪೂಂಜ, ಉ?ಲಾಸ್ ಆರ್ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು. ನಿತೇಶ್ ಶೆಟ್ಟಿ ಎಕ್ಕಾರ್ ಕಾರ್ಯಕ್ರಮ ನಿರೂಪಿಸಿದರು.


Related Posts

ಪುತ್ತೂರು:ಶಾಂತಿಗೋಡು ಬಿಲ್ಲವ ಗ್ರಾಮ ಸಮಿತಿಯ ಮಾಜಿ ಅಧ್ಯಕ್ಷ ರವಿಕುಮಾರ್ ಕಲ್ಕಾರ್ ನಿಧನ


Share         ಪುತ್ತೂರು: ಶಾಂತಿಗೋಡು ಕಲ್ಕಾರ್ ನಿವಾಸಿ ರವಿಕುಮಾರ್ ಕಲ್ಕಾರ್(48ವ.)ರವರು ಫೆ.15ರಂದು ಹೃದಯಾಘಾತದಿಂದ ನಿಧನ ಹೊಂದಿದ್ದಾರೆ. ಬ್ರಹ್ಮಶ್ರೀ ನಾರಾಯಣ ಗುರುಪೂಜೆ ಸಂದರ್ಭ ಶಾಂತಿಗೋಡು ಬಿಲ್ಲವ ಗ್ರಾಮ ಸಮಿತಿ ವತಿಯಿಂದ ನಡೆಸಲ್ಪಟ್ಟ ಕ್ರೀಡಾಕೂಟದಲ್ಲಿ ರವಿ ಕಲ್ಕಾರ್ ರವರು


Read More »

ಉದಯೋನ್ಮುಖ ಪ್ರತಿಭಾ ಪುರಸ್ಕಾರಕ್ಕೆ ಅಕ್ಷತಾ ಸುಧೀರ್


Share         ಮಂಗಳೂರು/ಬೆಂಗಳೂರು: ಕರ್ನಾಟಕ ಆರ್ಯ ಈಡಿಗ ಮಹಿಳಾ ಸಂಘದ ವತಿಯಿಂದ ಆಯೋಜಿಸಲಾದ ರಾಷ್ಟ್ರೀಯ ಸಮ್ಮೇಳನದಲ್ಲಿ, ಯುವವಾಹಿನಿಯ ಬೆಂಗಳೂರು ಘಟಕದ ಹೆಮ್ಮೆಯ ಸದಸ್ಯೆಯೂ ಹಾಗೂ ಪ್ರಸಕ್ತ ಲೆಕ್ಕಪರಿಶೋಧಕರೂ ಆಗಿರುವ ಶ್ರೀಮತಿ ಅಕ್ಷತಾ ಸುಧೀರ್ ಅವರಿಗೆ ಉದಯೋನ್ಮುಖ


Read More »

ಕಲರ್ಸ್ ಕನ್ನಡ ಬಿಗ್ ಬಾಸ್ 12ರ ಸ್ಪರ್ಧಿ ಧ್ರುವಂತ್ (ಚರಿತ್ ಬಾಳಪ್ಪ ಪೂಜಾರಿ) ಜೀವನದ ಯಶೋಗಾಥೆ


Share         ಜೀವನದಲ್ಲಿ ಅದೆಷ್ಟೋ ಕಷ್ಟಗಳನ್ನು ಸಹಿಸಿಕೊಂಡು, ಅವಕಾಶಗಳಿಂದ ವಂಚಿತನಾದರೂ ಧೃತಿಗೆಡದೆ, ಸಾಧನೆಯ ಹಾದಿಯಲ್ಲಿ ಹಂತ ಹಂತವಾಗಿ ಮುನ್ನಡೆಯುತ್ತ ಇಂದು ಎಲ್ಲರ ಮನಗಳಲ್ಲಿ ಮನೆ ಮಾಡಿರುವಂತಹ ನಮ್ಮೆಲ್ಲರ ಹೆಮ್ಮೆಯ ಸಾಧಕ ಧ್ರುವಂತ್ ಇವರ ಯಶಸ್ಸಿನ ಹಿಂದಿನ


Read More »

🩸 ಓಮಾನ್ ಬಿಲ್ಲವಾಸ್ ವತಿಯಿಂದ ಆಯೋಜಿಸಲಾದ ಸಾಮೂಹಿಕ ರಕ್ತದಾನ ಶಿಬಿರ 🩸 ಬೌಶರ್ ಬ್ಲಡ್ ಬ್ಯಾಂಕ್, ಘಾಲಾ ಇಲ್ಲಿ ಯಶಸ್ವಿಯಾಗಿ ನಡೆಯಿತು.


Share          ಒಂದು ಕಾಲದಲ್ಲಿ ತುಳುನಾಡಿನ ಮೂಲದವರಾದ ಬಿಲ್ಲವರು ಕೃಷಿಕರಾಗಿ ಹಾಗೂ ಬೈದರಾಗಿ ತಮ್ಮ ಪರಿಶ್ರಮ, ಶ್ರಮಸಾಧನೆ ಮತ್ತು ಸಾಮಾಜಿಕ ಜವಾಬ್ದಾರಿಗಳ ಮೂಲಕ ಸಮಾಜದಲ್ಲಿ ಗೌರವಯುತ ಸ್ಥಾನವನ್ನು ಪಡೆದವರು. ಪ್ರಕೃತಿಯೊಂದಿಗೆ ಸಮನ್ವಯದಿಂದ ಬದುಕನ್ನು ಸಾಗಿಸುತ್ತಾ, ಪರಸ್ಪರ


Read More »

ನಾನು ಕಂಡ ಪ್ರವೀಣ್ ಪೂಜಾರಿ


Share         ನಾನು ಕಂಡ ಪ್ರವೀಣ್ ಪೂಜಾರಿ ಸಾಧಾರಣ 15 ವರ್ಷಗಳಿಂದ ನಮ್ಮ ಆತ್ಮೀಯತೆ ಬಿಲ್ಲವ ಸಮಾಜದ ಸಾಮಾನ್ಯ ಜನರಿಗೂ ಸಮಸ್ಯೆ ಬಂದಂತ ಸಂದರ್ಭದಲ್ಲಿ ವಕೀಲನಾಗಿ ಅಥವಾ ಸಾಮಾಜಿಕ ಕಾರ್ಯಕರ್ತನಾಗಿ ನ್ಯಾಯ ದೊರಕಿಸಿಕೊಟ್ಟಂತಹ ಒಬ್ಬ ನಮ್ಮ


Read More »

ಚಾರ್ಟರ್ಡ್ ಅಕೌಂಟೆಂಟ್ (CA) ಪರೀಕ್ಷೆಯಲ್ಲಿ ಅತ್ಯುತ್ತಮ ಅಂಕಗಳನ್ನು ಗಳಿಸಿ ನಿಶಾ ಪೂಜಾರಿ ಉತ್ತೀರ್ಣರಾಗಿದ್ದಾರೆ.


Share         ಮುಂಬಯಿ : ಕಾಂದಿವಲಿ ಪೂರ್ವದ ಠಾಕೂರ್ ಕಾಂಪ್ಲೆಕ್ಸ್ ನಿವಾಸಿ ನಿಶಾ ಪೂಜಾರಿ ಅವರು ಇತ್ತೀಚೆಗೆ ಸೆಪ್ಟೆಂಬರ್‌ನಲ್ಲಿ ನಡೆದ ಚಾರ್ಟರ್ಡ್ ಅಕೌಂಟೆಂಟ್ (CA) ಪರೀಕ್ಷೆಯಲ್ಲಿ ಅತ್ಯುತ್ತಮ ಅಂಕಗಳನ್ನು ಗಳಿಸಿ ಯಶಸ್ವಿಯಾಗಿ ಉತ್ತೀರ್ಣರಾಗಿದ್ದಾರೆ. ಅವರು ಕಾರ್ಕಳ


Read More »