TOP STORIES:

FOLLOW US

ಶ್ರೀಮತಿ ಶಾರದಾ ಅಂಚನ್ ಅವರಿಗೆ “ಪ್ರೊ| ನಳಿನಿ ವಿಶ್ವನಾಥ್ ಕಾರ್ನಾಡ್  ಸಂಸ್ಮರಣಾ ಪ್ರಶಸ್ತಿ”


ಶ್ರೀಮತಿ ಶಾರದಾ ಅಂಚನ್ ಅವರಿಗೆ “ಪ್ರೊ| ನಳಿನಿ ವಿಶ್ವನಾಥ್ ಕಾರ್ನಾಡ್  ಸಂಸ್ಮರಣಾ ಪ್ರಶಸ್ತಿ”

ಗೋರೆಗಾಂವ್ ಕರ್ನಾಟಕ ಸಂಘದ ಮಹಿಳಾ ವಿಭಾಗದ ವತಿಯಿಂದ ವಿಶ್ವ ಮಹಿಳಾ ದಿನಾಚರಣೆ ಮಾ. 8ರಂದು ಅಪರಾಹ್ನ 4ರಿಂದ ಸಂಘದ ಅಧ್ಯಕ್ಷ ನಿತ್ಯಾನಂದ ಡಿ. ಕೋಟ್ಯಾನ್ ಅಧ್ಯಕ್ಷತೆಯಲ್ಲಿ ಗೋರೆಗಾಂವ್‌ನ ಕೇಶವಗೋರೆ ಸ್ಮಾರಕ ಟ್ರಸ್ಟ್‌ನಲ್ಲಿ ನಡೆಯಲಿದೆ. 

ಸುಜಾತಾ ವಿ. ಕೋಟ್ಯಾನ್ ಮತ್ತು ಶೈಲಜಾ ಆರ್. ಅಂಚನ್ ಸಂಸ್ಮರಣೆಯಲ್ಲಿ ಸ್ಥಾಪಿಸಿದ ದತ್ತಿ ನಿಧಿ ಕಾಠ್ಯಕ್ರಮ ಜರಗಲಿದೆ. ಪ್ರೊ| ನಳಿನಿ ವಿಶ್ವನಾಥ್ ಕಾರ್ನಾಡ್ ಅವರ ಸಂಸ್ಮರಣೆಯಲ್ಲಿ ಡಾ| ವಿಶ್ವನಾಥ್ ಕಾರ್ನಾಡ್ ಅವರು ಪ್ರತಿ ವರ್ಷ ಮುಂಬಯಿಯ ಓರ್ವ ಮಹಿಳಾ ಸಾಹಿತಿಗೆ ಪ್ರಶಸ್ತಿ ನೀಡುತಿದ್ದು, ಈ ವರ್ಷದ ಪುರಸ್ಕಾರವು ಲೇಖಕಿ ಶಾರದಾ ಎ. ಅಂಚನ್ ಅವರಿಗೆ ಪ್ರದಾನ ಮಾಡಲಾಗುವುದು.

ಮುಖ್ಯ ಅತಿಥಿಯಾಗಿ ಸಮಾಜ ಸೇವಕಿ, ಮುಂಬಯಿ ಕನ್ನಡ ಸಂಘದ ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆ ರಜನಿ ವಿನಾಯಕ ಪೈ ಭಾಗವಹಿಸಲಿ ದ್ದಾರೆ. ಮಹಿಳೆ ಯರಲ್ಲಿ ತಲೆಮಾ ದಿನ ಅಂತರ ಎಂಬ ವಿಷಯದಲ್ಲಿ ಶ್ರೀಮತಿ ಕುಮಾರೇಶ್‌ ಆಚಾರ್ಯ ಉಪನ್ಯಾಸ ನೀಡಲಿದ್ದಾರೆ. 

ಹೆಚ್ಚಿನ ಸಂಖ್ಯೆಯಲ್ಲಿ ಸದಸ್ಯರು ಪಾಲ್ಗೊಂಡು ಕಾರ್ಯಕ್ರಮದ ಯಶಸ್ವಿಗೆ ಸಹಕರಿಸುವಂತೆ ಸಂಘದ ಗೌರವ ಪ್ರಧಾನ ಕಾರ್ಯದರ್ಶಿ ಸರಿತಾ ಸುರೇಶ್‌ ನಾಯಕ್, ಮಹಿಳಾ ವಿಭಾ ಗದ ಕಾರ್ಯಾಧ್ಯಕ್ಷೆ ಸಾವಿತ್ರಿ ಎಂ. ಶೆಟ್ಟಿ, ಸಂಚಾಲಕಿ ಸವಿತಾ ಭಟ್ ಹಾಗೂ ಚಂದ್ರಾವತಿ ಬಿ. ಶೆಟ್ಟಿ ಪ್ರಕಟಣೆಯಲ್ಲಿ  ತಿಳಿಸಿದ್ದಾರೆ.

ಲೇಖಕಿ, ಸಾಹಿತಿ ಶ್ರೀಮತಿ ಶಾರದಾ ಎ.ಅಂಚನ್  ಅವರ ಕಿರು ಪರಿಚಯ

ಮುಂಬಯಿ  ಲೇಖಕಿ, ಸಾಹಿತಿ ಶ್ರೀಮತಿ ಶಾರದಾ ಎ.ಅಂಚನ್ ಇವರು ಇದುವರೆಗೆ ಸುಮಾರು ಹದಿನೇಳು ಕೃತಿಗಳನ್ನು ಪ್ರಕಟಿಸಿದ್ದು ಇವರ  “ಪಾಡ್ದನ” ತುಳು ಕವನ ಸಂಕಲನಕ್ಕೆ ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಪ್ರಶಸ್ತಿ, “ರಕ್ತವೇ ಜೀವನದಿ “ವೈದ್ಯಕೀಯ ಕೃತಿಗೆ ವಿಶ್ವೇಶ್ವರಯ್ಯ ಇಂಜೀನೀಯರಿಂಗ್  ಪ್ರತಿಷ್ಠಾನದ  ವಿಶ್ವೇಶ್ವರಯ್ಯ ರಾಷ್ಟ್ರೀಯ ಸಾಹಿತ್ಯ ಪ್ರಶಸ್ತಿ,ಹಾಗೂ ಕನ್ನಡ ಸಾಹಿತ್ಯ ಪರಿಷತ್ತಿನ  ದಿ//ಡಾ.ಎಚ್.ನರಸಿಂಹಯ್ಯ ದತ್ತಿ ಪ್ರಶಸ್ತಿ ಹಾಗೆಯೇಇವರ ಇನ್ನೊಂದು   ವೈದ್ಯಕೀಯ ಕೃತಿ “ರಕ್ತಶುದ್ಧಿ- ಆರೋಗ್ಯವೃದ್ಧಿ” ಕೃತಿಗೆ ಕನ್ನಡ ಸಾಹಿತ್ಯ ಪರಿಷತ್ತಿನ  “ಬಿಸಲೇರಿ ಜಯಣ್ಣ ಮತ್ತು ಬಿಸಲೇರಿ ಬ್ರದರ್ಸ್ ದತ್ತಿ ಪ್ರಶಸ್ತಿ ” ಹಾಗೂ “ನಡೆ ನೀ ಮುಂದೆ” ಕವನ ಸಂಕಲನಕ್ಕೆ ಕರ್ನಾಟಕ ವಿದ್ಯಾವರ್ಧಕ ಸಂಘ ಕೊಡಮಾಡುವ “ಶ್ರೀ ಕ್ಷೇತ್ರ ಧರ್ಮಸ್ಥಳ ಮಾತೋಶ್ರೀ ರತ್ನಮ್ಮ ಹೆಗ್ಗಡೆ ಪ್ರಶಸ್ತಿ”  ಲಭ್ಯವಾಗಿದೆ.   

   ಡಾ.ಕೆ.ಶಿವರಾಮ ಕಾರಂತ  ಕಥಾ ಪುರಸ್ಕಾರ,PROF.H.S.K ಸಾಹಿತ್ಯ ಪ್ರಶಸ್ತಿ,ಚೈತನ್ಯಶ್ರೀ ಪ್ರಶಸ್ತಿ,ಕಾವ್ಯಸಿರಿ ಪ್ರಶಸ್ತಿ,ಬಸವ ಶ್ರೀ ಹಾಗೂ ಕಾವ್ಯಶ್ರೀ ಪ್ರಶಸ್ತಿ, ಕನ್ನಡ ಸಾಹಿತ್ಯ ಸಿರಿ ಪ್ರಶಸ್ತಿ,ಪ್ರೇಮಕವಿ ಪ್ರಶಸ್ತಿ,ಕರ್ನಾಟಕ ಯುವ ರತ್ನ ಪ್ರಶಸ್ತಿ,ತ್ಹೌಳವ  ಸಿರಿ ಪ್ರಶಸ್ತಿ, ಪಂಚಕಥಾ ಪ್ರಶಸ್ತಿ,ಹುಬ್ಬಳ್ಳಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ,ವೀರರಾಣಿ  ಕಿತ್ತೂರು ಚೆನ್ನಮ್ಮ ಸದ್ಭಾವನಾ ರಾಷ್ಟ್ರೀಯ ಪ್ರಶಸ್ತಿ,ದಸರಾ ಕಾವ್ಯ ಪುರಸ್ಕಾರ,ಗಡಿನಾಡ ಧ್ವನಿ ಕಾವ್ಯಭೂಷಣ ಪ್ರಶಸ್ತಿ.ಎಂ.ಬಿ. ಕುಕ್ಯಾನ್     ರೈಟರ್ ಆಫ್ ದಿ ಇಯರ್  ಪ್ರಶಸ್ತಿ ಹೀಗೆ ಹತ್ತು ಹಲವಾರು ಪ್ರಶಸ್ತಿಗಳನ್ನು ಪಡೆದುಕೊಂಡಿರುವ ಶಾರದಾ ಅಂಚನ್ ಇವರು ಔದ್ಯೋಗಿಕವಾಗಿ ರಕ್ತನಿಧಿಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದು ತನ್ನ ಕಾರ್ಯ ಕ್ಷೇತ್ರದಲ್ಲಿ  ಇದುವರೆಗೆ ಸುಮಾರು 1000ಕ್ಕೂ ಹೆಚ್ಚು ರಕ್ತದಾನ ಶಿಭಿರಗಲ್ಲಿ ಭಾಗವಹಿಸಿದ್ದಾರೆ.ಸಂಗೀತದಲ್ಲೂ ಆಸಕ್ತಿ ಇರುವ ಇವರು ಗಾಯಕಿಯಾಗಿಯೂ ಪರಿಚಿತರಾಗಿದ್ದಾರೆ.


Share:

More Posts

Category

Send Us A Message

Related Posts

ಶ್ರೀ ಗುರು ಸೇವಾ ಸಮಿತಿ ಬಹರೈನ್ ಬಿಲ್ಲವಾಸ್ ಕೂಟದ ವತಿಯಿಂದ ಗೆಜ್ಜೆಗಿರಿ ಜಾತ್ರಾ ಮಹೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ


Share       ಶ್ರೀ ಗುರು ಸೇವಾ ಸಮಿತಿ ಬಹರೈನ್ ಬಿಲ್ಲವಾಸ್ ಕೂಟದ ವತಿಯಿಂದ 14-02-2025 ರಂದು ಅಧ್ಯಕ್ಷರಾದ ಹರೀಶ್ ಪೂಜಾರಿ ಅವರ ಅಧ್ಯಕ್ಷತೆಯಲ್ಲಿಂದು ಶ್ರೀ ಕ್ಷೇತ್ರ ಗೆಜ್ಜೆಗಿರಿ ಜಾತ್ರೋತ್ಸವದ ಆಮಂತ್ರಣ ಪತ್ರಿಕೆಯನ್ನು ಬಹರೈನ್ ನಲ್ಲಿ ಬಿಡುಗಡೆ


Read More »

ಸರ್ಕಾರಿ ಆಸ್ಪತ್ರೆಗಳಲ್ಲಿದೆ ಗುಣಮಟ್ಟದ ಚಿಕಿತ್ಸೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಪದ್ಮರಾಜ್ ಆರ್. ಪೂಜಾರಿ ಶ್ಲಾಘನೆ


Share       ಮಂಗಳೂರು: ಸರ್ಕಾರಿ ಆಸ್ಪತ್ರೆಗಳಲ್ಲೂ ಗುಣಮಟ್ಟದ ಚಿಕಿತ್ಸೆ ಸಿಗುತ್ತದೆ ಎನ್ನುವುದಕ್ಕೆ ವೆನ್ಲಾಕ್ ಆಸ್ಪತ್ರೆ ಉತ್ತಮ ನಿದರ್ಶನ. ಸರ್ಕಾರಿ ಆಸ್ಪತ್ರೆಗಳ ಬಗ್ಗೆ ತಾತ್ಸಾರ ಬೇಡ ಎಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಪದ್ಮರಾಜ್ ಆರ್. ಪೂಜಾರಿ ಹೇಳಿದರು.


Read More »

ಗೆಜ್ಜೆಗಿರಿಯ ಮೂಲಕ ಬಿಲ್ಲವ ಸಮಾಜಕ್ಕೆ ಸಂಘಟಾನಾತ್ಮಕ ಬಲ ತುಂಬಲು ಹೊರಟ ಗೆಜ್ಜೆಗಿರಿ ಕ್ಷೇತ್ರಾಡಳಿತ ಸಮಿತಿಗೆ ಅಭಿನಂದನೆ


Share       ಬಿಲ್ಲವ ಸಮಾಜ ಸೇವಾ ಸಂಘ(ರಿ) ಕುಂದಾಪುರ ಇದರ ಅಧ್ಯಕ್ಷರಾದ ಅಶೋಕ್ ಪೂಜಾರಿ ಬಿಜಾಡಿ ಹಾಗೂ ಸಂಘದ ಪಧಾಧಿಕಾರಿಗಳು  ಬ್ರಹ್ಮ ಶ್ರೀ ನಾರಾಯಣ ಗುರುಗಳ ವಿದ್ಯೆಯಿಂದ ಸ್ವತಂತ್ರರಾಗಿರಿ ಸಂಘಟನೆಯಿಂದ  ಬಲಯುತರಾಗಿ ಎಂಬ ತತ್ವದಂತೆ  ಬಿಲ್ಲವ


Read More »

ರಕ್ತಹೀನತೆಯಿಂದ ಬಳಲುತ್ತಿರುವವರು ಹುರುಳಿ ಸೇವನೆ ಮಾಡಿ


Share       ಹುರುಳಿ ನಾಲಿಗೆಗೆ ರುಚಿ ನೀಡುವುದರ ಜೊತೆಗೆ ಆರೋಗ್ಯ ಪ್ರಯೋಜನಗಳನ್ನು ನೀಡುತ್ತದೆ. ಏಕೆಂದರೆ ಇದು ಪೌಷ್ಠಿಕಾಂಶಗಳಿಂದ ಸಮೃದ್ಧವಾಗಿದ್ದು, ಪ್ರೋಟೀನ್, ಫೈಬರ್, ಜೀವಸತ್ವಗಳು ಮತ್ತು ಖನಿಜಗಳ ಭಂಡಾರವಾಗಿದೆ. ಇದು ದೇಹಕ್ಕೆ ಅಗತ್ಯ ಪ್ರಯೋಜನಗಳನ್ನು ನೀಡುವ ಧಾನ್ಯವಾಗಿದೆ.


Read More »

ಬಂಟ್ವಾಳ ತಾಲೂಕು ಬಿಲ್ಲವ ಸಂಘದಲ್ಲಿ ಗೆಜ್ಜೆಗಿರಿ ಜಾತ್ರೋತ್ಸವ ಸಮಾಲೋಚನಾ ಸಭೆ


Share       ಬಂಟ್ವಾಳ : ಬಂಟ್ವಾಳ ತಾಲೂಕು ಬಿಲ್ಲವ ಸಮಾಜ ಸೇವಾ ಸಂಘದ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಶ್ರೀ ಕ್ಷೇತ್ರ ಗೆಜ್ಜೆಗಿರಿ ಆಡಳಿತ ಸಮಿತಿಯ ಪದಾಧಿಕಾರಿಗಳು ಕ್ಷೇತ್ರದ ವಾರ್ಷಿಕ ಜಾತ್ರಾ ಮಹೋತ್ಸಕ್ಕೆ ಆಮಂತ್ರಿಸಿದರು. ಗೆಜ್ಜೆಗಿರಿ ಕ್ಷೇತ್ರಾಡಳಿತ


Read More »

ಫುಡ್ ಫೆಸ್ಟ್ ನಿಂದ ಬಂದ ಹಣ ಬಡವರ್ಗಕ್ಜೆ ಮೀಸಲಿಡುತ್ತಿರುವ ಬಿರುವೆರ್ ಕುಡ್ಲ; 3 ಲಕ್ಷ ಮೌಲ್ಯದ ಕೃತಕ ಅಂಗಾಂಗ ಸಲಕರಣೆ ವಿತರಣೆ


Share       ಮಂಗಳೂರು: ಅವರೆಲ್ಲಾ ತಿಂಗಳ ಸಂಬಳಕ್ಕಾಗಿ ದುಡಿಯುವ ಯುವಕರು. ಆದ್ರೆ ದುಡಿದ ಹಣದಲ್ಲಿ ಸಮಾಜ ಸೇವೆಗಾಗಿ ಮೀಸಲಿಟ್ಟು ಸೇವಾ ಕಾರ್ಯ ನಡೆಸುತ್ತಿರುವ ಆ ತಂಡ ಮನೆಯಿಲ್ಲದವರಿಗೆ ಮನೆ,ಅನಾರೋಗ್ಯಕ್ಕೀಡಾದವರಿಗೆ ಚಿಕಿತ್ಸೆಗೆ ಹಣಕಾಸಿನ ನೆರವು,ದಿನಸಿ ಕಿಟ್ ,ಆಂಬುಲೆನ್ಸ್


Read More »