TOP STORIES:

ಎಪ್ರಿಲ್ ತಿಂಗಳ ಅಕ್ಷಯ ಮಾಸ ಪತ್ರಿಕೆಯಲ್ಲಿ ಪ್ರಕಟವಾದ ಕವಿತೆ : ರೈಲು


ರೈಲು

ಎಲ್ಲರಂತಲ್ಲ ನಾನು…

ಬಯಲ ಬೆಳಕಿನಲ್ಲಿ ಕತ್ತಲು ಕೊರೆಯುವಲ್ಲಿ

ಓಡಬೇಕು; ಓಡುತ್ತಲೇ ಇರಬೇಕು

ಅಬ್ಬರದಿ ಬಂದೆರಗುವ ಜನಸಾಗರಕೆ ತೀರವಾಗಬೇಕು

  ಶಾಂತವಾಗಿ ನಿರ್ವಾಹವಾಗಿ ಜೀವಜೀವಗಳ  ನಿಜಬಂಧುವಾಗಿ

ತುಂಬಿಕೊಂಡಂತೆ ಖಾಲಿಯಾಗುತ್ತಲೇ ಇರಬೇಕು

ಜೀವನದ ಇತಿಮಿತಿಯಲಿ ಗತಿ ತಿರುಗಿದಂತೆ

ಹಳಿಗಳೂ ಬದಲಾಗುತ್ತವೆ, ಎಲ್ಲೋ ಕವಲೊಡೆದು ಇನ್ನೆಲ್ಲೋ ಕೂಡುತ್ತವೆ

ಉದ್ವೇಗ ಉನ್ಮಾದಗಳ ಬದಿಗೊತ್ತಿ ನಯನಾಜೂಕಿನಲಿ ನಡೆಯಬೇಕು

ಕೆಂಪು ನಿಶಾನೆಯೆದುರು ಸಮಾಧಾನಿಯಾಗಿರಬೇಕು

ಎಲ್ಲರಂತಲ್ಲ ನಾನು

ಕನಸಿಗೆ ಕಚಗುಳಿಯಿಟ್ಟು ನೂಕುವ ರಾಯಭಾರಿಯಾಗಬೇಕು

ಚಿಣ್ಣರ ಕೇಕೆ, ಹರೆಯದ ಬಯಕೆ, ಇಳಿವಯಸ್ಸಿನ ಬೇಗೆಗೆ

ನಿತ್ಯವೂ ಹೊಸ ಆಹ್ಲಾದವನೀಯುತ ಭರವಸೆಯ ಬೆಳಕಾಗಬೇಕು

ಮುಗ್ಗರಿಸಿದವರ ನೋವಿಗೆ  ಸಾಂತ್ವನವಾಗಬೇಕು

ಅರಿವಿನ ಅರವಟಿಗೆಯಲಿ ಒಡಲು ಗಟ್ಟಿಯಾಗುತಿರಬೇಕು

ನವರಸ ಭಾವ ವಿಭಾವಗಳ ತಾಳಮೇಳದೊಳಗೆ

ಕೋಟಿ ಮನಸ್ಸುಗಳು ಹರಿಯುವುದು ನನ್ನೊಳಗೆ

ಸ್ವರ ವ್ಯಂಜನದೊಳು ಮೂಡಿದ ಬಿರುಕಿಗೆ ತೇಪೆ ಹಾಕಿ

ಸಮರಸ ಸಂಧಾನದ ಉಸಿರು ಚೆಲ್ಲಿ ಮುಂದಡಿಯಿಡಬೇಕು

ನನ್ನಾಂತರ್ಯದೊಳಿರುವ ಪ್ರೇಮ, ವಿರಹ ಗೀತೆಗಳೆಷ್ಟೋ…!

ಕಣ್ಣಂಜಿಕೆಗೆ ಮುಖ ಮರೆಸಿ ಕೂತ ಗುಟ್ಟುಗಳೆಷ್ಟೋ…!

ಯುಗಯುಗಾಂತರದಲಿ ಘಟಿಸಿ ಹೋದ ಕತೆಗಳಲೂ

ಮುಖ್ಯ ಪಾತ್ರಧಾರಿ, ಪರಮ ಸೂತ್ರಧಾರಿಯೂ ನಾನೇ

ಎಲ್ಲರಂತಲ್ಲ ನಾನು

ಸಾಗುತ್ತಲೇ ಇರಬೇಕು

ನಿಂತರೆ ಸ್ತಬ್ದವಾಗಬಹುದಲ್ಲವೇ ಯಾನ…!

ನಗರದ ನರನಾಡಿಗಳಲಿ ಪವಹಿಸಿ ಪಥಿಕರ ಗಮ್ಯವಾಗಬೇಕು

ನಿತ್ಯ ಪಥದ ಧ್ಯಾನಿಯಾಗಬೇಕು.

✍🏻 ಅನಿತಾ ಪಿ. ತಾಕೊಡೆ


Related Posts

ಶ್ರೀ ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನ ಆಡಳಿತ ಮತ್ತು ಅಭಿವೃದ್ಧಿ ಸಮಿತಿ ನೇತೃತ್ವದಲ್ಲಿ ಗುರುವಾರ ಬೆಳಗ್ಗೆ ಶತ ಸೀಯಾಳಾಭಿಷೇಕ


Share        ಕುದ್ರೋಳಿಯಲ್ಲಿ ವಿಶ್ವಶಾಂತಿಗಾಗಿ ಶತ ಸೀಯಾಳಾಭಿಷೇಕ ಮಂಗಳೂರು: ಜಗತ್ತಿನಾದ್ಯಂತ ಯುದ್ಧದ ಕಾರ್ಮೋಡ ಆವರಿಸಿರುವುದರಿಂದ ವಿಶ್ವ ಶಾಂತಿಗಾಗಿ ಶ್ರೀ ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನ ಆಡಳಿತ ಮತ್ತು ಅಭಿವೃದ್ಧಿ ಸಮಿತಿ ನೇತೃತ್ವದಲ್ಲಿ ಗುರುವಾರ ಬೆಳಗ್ಗೆ ಶತ


Read More »

ಹಿರಿಯ ವರದಿಗಾರ ನಮ್ಮ ಸಮಾಜದ ಹೆಮ್ಮೆಯ ವಿಜಯ ಕೋಟ್ಯಾನ್‌ಗೆ ಬ್ರಾಂಡ್ ಮಂಗಳೂರು ಪ್ರಶಸ್ತಿ ಪ್ರದಾನ


Share        ವಿಕ ಸುದ್ದಿಲೋಕ ಮಂಗಳೂರು ಸೌಹಾರ್ದತೆ ಬಿಂಬಿಸುವ ವರದಿಗೆ ದ.ಕ. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ನೀಡುವ ‘ಬ್ಯಾಂಡ್ ಮಂಗಳೂರು’ ಪ್ರಶಸ್ತಿಗೆ ವಿಜಯ ಕರ್ನಾಟಕ ಪತ್ರಿಕೆಯ ಹಿರಿಯ ವರದಿಗಾರ ನಮ್ಮ ಸಮಾಜದ ಹೆಮ್ಮೆಯ ವಿಜಯ


Read More »

ವಿಜಯ ಕರ್ನಾಟಕ ಹಿರಿಯ ವರದಿಗಾರ ವಿಜಯ ಕೋಟ್ಯಾನ್ ಬ್ರ್ಯಾಂಡ್ ಮಂಗಳೂರು ಪ್ರಶಸ್ತಿಗೆ ಆಯ್ಕೆ


Share        ಮಂಗಳೂರು: ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದಿಂದ ಸೌಹಾರ್ದ ಬಿಂಬಿಸುವ ವರದಿಗೆ ನೀಡಲಾಗುವ “ಬ್ರ‍್ಯಾಂಡ್ ಮಂಗಳೂರು” ಪ್ರಶಸ್ತಿಗೆ ವಿಜಯ ಕರ್ನಾಟಕ ಹಿರಿಯ ವರದಿಗಾರ ವಿಜಯಕೋಟ್ಯಾನ್ ಪಡು  ಆಯ್ಕೆಯಾಗಿದ್ದಾರೆ. ವಿಜಯ ಕರ್ನಾಟಕ ಪತ್ರಿಕೆಯಲ್ಲಿ 2024 ಅಕ್ಟೋಬರ್


Read More »

ದೇಯಿ ಬೈದ್ಯೆತಿ ಕೋಟಿ ಚೆನ್ನಯ ಮೂಲಸ್ಥಾನ ಅಭಿವೃದ್ಧಿ ಚಾರಿಟೇಬಲ್ ಟ್ರಸ್ಟ್( ರಿ) ಇದರ ನೂತನ ಅಧ್ಯಕ್ಷರಾಗಿ ಕೆ. ಸಂಜೀವ ಪೂಜಾರಿ ಆಯ್ಕೆ


Share        ಶ್ರೀ ಕ್ಷೇತ್ರ ಗೆಜ್ಜೆಗಿರಿಯ ದೇಯಿ ಬೈದ್ಯೆತಿ ಕೋಟಿ ಚೆನ್ನಯ ಮೂಲಸ್ಥಾನ ಅಭಿವೃದ್ಧಿ  ಚಾರಿಟೇಬಲ್ ಟ್ರಸ್ಟ್(ರಿ) ಇದರ ನೂತನ ಅಧ್ಯಕ್ಷರಾಗಿ ಬಿರ್ವ ಸೆಂಟರ್ ಇದರ ಮಾಲಕರಾದ  ಕೆ ಸಂಜೀವ ಪೂಜಾರಿ ಇವರನ್ನು ಕಂಕನಾಡಿ ಬ್ರಹ್ಮ


Read More »

8ನೇ ವಯಸ್ಸಿನಲ್ಲಿ ಕಪೋತಾಸನದ ಭಂಗಿಯಲ್ಲಿ ವಿಶ್ವ ದಾಖಲೆ ಮಾಡಿದ ಬಾಲಕಿ ಕುಮಾರಿ ಶರಣ್ಯ ಶರತ್!


Share        ಮಂಗಳೂರು, ಜೂ. 20 ಪನ್ನೀರಿನ ಸೈಂಟ್ ಮೇರೀಸ್ ವಿದ್ಯಾಸಂಸ್ಥೆಯಲ್ಲಿ ಎರಡನೇ ತರಗತಿಯಲ್ಲಿ ಕಲಿಯುತ್ತಿರುವ ಕುಮಾರಿ ಶರಣ್ಯ ಶರತ್ ಅವರು ತನ್ನ ಎಂಟನೆಯ ವಯಸ್ಸಿನಲ್ಲಿ ಯೋಗಾಸನದ ಕಪೋತಾಸನದ ಭಂಗಿಯಲ್ಲಿ ಇಂಡಿಯಾ ಬುಕ್ ಆಫ್ ರೆಕಾರ್ಡ್


Read More »

ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನದ ಕ್ಷೇತ್ರಾಡಳಿತ ಸಮಿತಿ ಅಧ್ಯಕ್ಷರಾಗಿ ಎಚ್.ಎಸ್.ಜಯರಾಜ್ ಆಯ್ಕೆ


Share        ಮಂಗಳೂರು: ಬ್ರಹ್ಮಶ್ರೀ ನಾರಾಯಣಗುರುಗಳು ಪ್ರತಿಷ್ಠಾಪಿಸಿದ ಕರ್ನಾಟಕದ ಏಕೈಕ ಕ್ಷೇತ್ರ ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನದ ಸಮಗ್ರ ಅಭಿವೃದ್ಧಿ ಹಿತದೃಷ್ಟಿಯಿಂದ ಆಡಳಿತ ಸಮಿತಿ ಮತ್ತು ಅಭಿವೃದ್ಧಿ ಸಮಿತಿ ಜಂಟಿ ಸಭೆ ಕೇಂದ್ರದ ಮಾಜಿ ಸಚಿವ


Read More »