TOP STORIES:

ಎಪ್ರಿಲ್ ತಿಂಗಳ ಅಕ್ಷಯ ಮಾಸ ಪತ್ರಿಕೆಯಲ್ಲಿ ಪ್ರಕಟವಾದ ಕವಿತೆ : ರೈಲು


ರೈಲು

ಎಲ್ಲರಂತಲ್ಲ ನಾನು…

ಬಯಲ ಬೆಳಕಿನಲ್ಲಿ ಕತ್ತಲು ಕೊರೆಯುವಲ್ಲಿ

ಓಡಬೇಕು; ಓಡುತ್ತಲೇ ಇರಬೇಕು

ಅಬ್ಬರದಿ ಬಂದೆರಗುವ ಜನಸಾಗರಕೆ ತೀರವಾಗಬೇಕು

  ಶಾಂತವಾಗಿ ನಿರ್ವಾಹವಾಗಿ ಜೀವಜೀವಗಳ  ನಿಜಬಂಧುವಾಗಿ

ತುಂಬಿಕೊಂಡಂತೆ ಖಾಲಿಯಾಗುತ್ತಲೇ ಇರಬೇಕು

ಜೀವನದ ಇತಿಮಿತಿಯಲಿ ಗತಿ ತಿರುಗಿದಂತೆ

ಹಳಿಗಳೂ ಬದಲಾಗುತ್ತವೆ, ಎಲ್ಲೋ ಕವಲೊಡೆದು ಇನ್ನೆಲ್ಲೋ ಕೂಡುತ್ತವೆ

ಉದ್ವೇಗ ಉನ್ಮಾದಗಳ ಬದಿಗೊತ್ತಿ ನಯನಾಜೂಕಿನಲಿ ನಡೆಯಬೇಕು

ಕೆಂಪು ನಿಶಾನೆಯೆದುರು ಸಮಾಧಾನಿಯಾಗಿರಬೇಕು

ಎಲ್ಲರಂತಲ್ಲ ನಾನು

ಕನಸಿಗೆ ಕಚಗುಳಿಯಿಟ್ಟು ನೂಕುವ ರಾಯಭಾರಿಯಾಗಬೇಕು

ಚಿಣ್ಣರ ಕೇಕೆ, ಹರೆಯದ ಬಯಕೆ, ಇಳಿವಯಸ್ಸಿನ ಬೇಗೆಗೆ

ನಿತ್ಯವೂ ಹೊಸ ಆಹ್ಲಾದವನೀಯುತ ಭರವಸೆಯ ಬೆಳಕಾಗಬೇಕು

ಮುಗ್ಗರಿಸಿದವರ ನೋವಿಗೆ  ಸಾಂತ್ವನವಾಗಬೇಕು

ಅರಿವಿನ ಅರವಟಿಗೆಯಲಿ ಒಡಲು ಗಟ್ಟಿಯಾಗುತಿರಬೇಕು

ನವರಸ ಭಾವ ವಿಭಾವಗಳ ತಾಳಮೇಳದೊಳಗೆ

ಕೋಟಿ ಮನಸ್ಸುಗಳು ಹರಿಯುವುದು ನನ್ನೊಳಗೆ

ಸ್ವರ ವ್ಯಂಜನದೊಳು ಮೂಡಿದ ಬಿರುಕಿಗೆ ತೇಪೆ ಹಾಕಿ

ಸಮರಸ ಸಂಧಾನದ ಉಸಿರು ಚೆಲ್ಲಿ ಮುಂದಡಿಯಿಡಬೇಕು

ನನ್ನಾಂತರ್ಯದೊಳಿರುವ ಪ್ರೇಮ, ವಿರಹ ಗೀತೆಗಳೆಷ್ಟೋ…!

ಕಣ್ಣಂಜಿಕೆಗೆ ಮುಖ ಮರೆಸಿ ಕೂತ ಗುಟ್ಟುಗಳೆಷ್ಟೋ…!

ಯುಗಯುಗಾಂತರದಲಿ ಘಟಿಸಿ ಹೋದ ಕತೆಗಳಲೂ

ಮುಖ್ಯ ಪಾತ್ರಧಾರಿ, ಪರಮ ಸೂತ್ರಧಾರಿಯೂ ನಾನೇ

ಎಲ್ಲರಂತಲ್ಲ ನಾನು

ಸಾಗುತ್ತಲೇ ಇರಬೇಕು

ನಿಂತರೆ ಸ್ತಬ್ದವಾಗಬಹುದಲ್ಲವೇ ಯಾನ…!

ನಗರದ ನರನಾಡಿಗಳಲಿ ಪವಹಿಸಿ ಪಥಿಕರ ಗಮ್ಯವಾಗಬೇಕು

ನಿತ್ಯ ಪಥದ ಧ್ಯಾನಿಯಾಗಬೇಕು.

✍🏻 ಅನಿತಾ ಪಿ. ತಾಕೊಡೆ


Related Posts

ಉದಯೋನ್ಮುಖ ಪ್ರತಿಭಾ ಪುರಸ್ಕಾರಕ್ಕೆ ಅಕ್ಷತಾ ಸುಧೀರ್


Share         ಮಂಗಳೂರು/ಬೆಂಗಳೂರು: ಕರ್ನಾಟಕ ಆರ್ಯ ಈಡಿಗ ಮಹಿಳಾ ಸಂಘದ ವತಿಯಿಂದ ಆಯೋಜಿಸಲಾದ ರಾಷ್ಟ್ರೀಯ ಸಮ್ಮೇಳನದಲ್ಲಿ, ಯುವವಾಹಿನಿಯ ಬೆಂಗಳೂರು ಘಟಕದ ಹೆಮ್ಮೆಯ ಸದಸ್ಯೆಯೂ ಹಾಗೂ ಪ್ರಸಕ್ತ ಲೆಕ್ಕಪರಿಶೋಧಕರೂ ಆಗಿರುವ ಶ್ರೀಮತಿ ಅಕ್ಷತಾ ಸುಧೀರ್ ಅವರಿಗೆ ಉದಯೋನ್ಮುಖ


Read More »

ಕಲರ್ಸ್ ಕನ್ನಡ ಬಿಗ್ ಬಾಸ್ 12ರ ಸ್ಪರ್ಧಿ ಧ್ರುವಂತ್ (ಚರಿತ್ ಬಾಳಪ್ಪ ಪೂಜಾರಿ) ಜೀವನದ ಯಶೋಗಾಥೆ


Share         ಜೀವನದಲ್ಲಿ ಅದೆಷ್ಟೋ ಕಷ್ಟಗಳನ್ನು ಸಹಿಸಿಕೊಂಡು, ಅವಕಾಶಗಳಿಂದ ವಂಚಿತನಾದರೂ ಧೃತಿಗೆಡದೆ, ಸಾಧನೆಯ ಹಾದಿಯಲ್ಲಿ ಹಂತ ಹಂತವಾಗಿ ಮುನ್ನಡೆಯುತ್ತ ಇಂದು ಎಲ್ಲರ ಮನಗಳಲ್ಲಿ ಮನೆ ಮಾಡಿರುವಂತಹ ನಮ್ಮೆಲ್ಲರ ಹೆಮ್ಮೆಯ ಸಾಧಕ ಧ್ರುವಂತ್ ಇವರ ಯಶಸ್ಸಿನ ಹಿಂದಿನ


Read More »

🩸 ಓಮಾನ್ ಬಿಲ್ಲವಾಸ್ ವತಿಯಿಂದ ಆಯೋಜಿಸಲಾದ ಸಾಮೂಹಿಕ ರಕ್ತದಾನ ಶಿಬಿರ 🩸 ಬೌಶರ್ ಬ್ಲಡ್ ಬ್ಯಾಂಕ್, ಘಾಲಾ ಇಲ್ಲಿ ಯಶಸ್ವಿಯಾಗಿ ನಡೆಯಿತು.


Share          ಒಂದು ಕಾಲದಲ್ಲಿ ತುಳುನಾಡಿನ ಮೂಲದವರಾದ ಬಿಲ್ಲವರು ಕೃಷಿಕರಾಗಿ ಹಾಗೂ ಬೈದರಾಗಿ ತಮ್ಮ ಪರಿಶ್ರಮ, ಶ್ರಮಸಾಧನೆ ಮತ್ತು ಸಾಮಾಜಿಕ ಜವಾಬ್ದಾರಿಗಳ ಮೂಲಕ ಸಮಾಜದಲ್ಲಿ ಗೌರವಯುತ ಸ್ಥಾನವನ್ನು ಪಡೆದವರು. ಪ್ರಕೃತಿಯೊಂದಿಗೆ ಸಮನ್ವಯದಿಂದ ಬದುಕನ್ನು ಸಾಗಿಸುತ್ತಾ, ಪರಸ್ಪರ


Read More »

ನಾನು ಕಂಡ ಪ್ರವೀಣ್ ಪೂಜಾರಿ


Share         ನಾನು ಕಂಡ ಪ್ರವೀಣ್ ಪೂಜಾರಿ ಸಾಧಾರಣ 15 ವರ್ಷಗಳಿಂದ ನಮ್ಮ ಆತ್ಮೀಯತೆ ಬಿಲ್ಲವ ಸಮಾಜದ ಸಾಮಾನ್ಯ ಜನರಿಗೂ ಸಮಸ್ಯೆ ಬಂದಂತ ಸಂದರ್ಭದಲ್ಲಿ ವಕೀಲನಾಗಿ ಅಥವಾ ಸಾಮಾಜಿಕ ಕಾರ್ಯಕರ್ತನಾಗಿ ನ್ಯಾಯ ದೊರಕಿಸಿಕೊಟ್ಟಂತಹ ಒಬ್ಬ ನಮ್ಮ


Read More »

ಚಾರ್ಟರ್ಡ್ ಅಕೌಂಟೆಂಟ್ (CA) ಪರೀಕ್ಷೆಯಲ್ಲಿ ಅತ್ಯುತ್ತಮ ಅಂಕಗಳನ್ನು ಗಳಿಸಿ ನಿಶಾ ಪೂಜಾರಿ ಉತ್ತೀರ್ಣರಾಗಿದ್ದಾರೆ.


Share         ಮುಂಬಯಿ : ಕಾಂದಿವಲಿ ಪೂರ್ವದ ಠಾಕೂರ್ ಕಾಂಪ್ಲೆಕ್ಸ್ ನಿವಾಸಿ ನಿಶಾ ಪೂಜಾರಿ ಅವರು ಇತ್ತೀಚೆಗೆ ಸೆಪ್ಟೆಂಬರ್‌ನಲ್ಲಿ ನಡೆದ ಚಾರ್ಟರ್ಡ್ ಅಕೌಂಟೆಂಟ್ (CA) ಪರೀಕ್ಷೆಯಲ್ಲಿ ಅತ್ಯುತ್ತಮ ಅಂಕಗಳನ್ನು ಗಳಿಸಿ ಯಶಸ್ವಿಯಾಗಿ ಉತ್ತೀರ್ಣರಾಗಿದ್ದಾರೆ. ಅವರು ಕಾರ್ಕಳ


Read More »

ಬಹುಮುಖ ಪ್ರತಿಭಾವಂತೆ ಹರ್ಷಿಕಾ ಕಾಣಿಯೂರು ಅವರಿಗೆ ಅಭಿನಂದನೆಗಳು


Share         ಹರ್ಷಿಕಾ ಕಾಣಿಯೂರು ಅವರ ಬಾಲ್ಯದ ವಯಸ್ಸಿನಲ್ಲಿಯೇ ಕೃಷಿ ಕಾರ್ಯದ ಮೇಲಿನ ಆಸಕ್ತಿ ಹಾಗೂ ಶ್ರಮವನ್ನು ಗುರುತಿಸಿ ಸೈಟ್ ರೀಟಾ ವಿದ್ಯಾ ಸಂಸ್ಥೆ ಗೌರವಿಸಿದ ಕ್ಷಣ ನಿಜಕ್ಕೂ ಹೆಮ್ಮೆಯದು. 🌾🌱👏   ಅಷ್ಟೇ ಅಲ್ಲದೆ,


Read More »