TOP STORIES:

ಎಪ್ರಿಲ್ ತಿಂಗಳ ಅಕ್ಷಯ ಮಾಸ ಪತ್ರಿಕೆಯಲ್ಲಿ ಪ್ರಕಟವಾದ ಕವಿತೆ : ರೈಲು


ರೈಲು

ಎಲ್ಲರಂತಲ್ಲ ನಾನು…

ಬಯಲ ಬೆಳಕಿನಲ್ಲಿ ಕತ್ತಲು ಕೊರೆಯುವಲ್ಲಿ

ಓಡಬೇಕು; ಓಡುತ್ತಲೇ ಇರಬೇಕು

ಅಬ್ಬರದಿ ಬಂದೆರಗುವ ಜನಸಾಗರಕೆ ತೀರವಾಗಬೇಕು

  ಶಾಂತವಾಗಿ ನಿರ್ವಾಹವಾಗಿ ಜೀವಜೀವಗಳ  ನಿಜಬಂಧುವಾಗಿ

ತುಂಬಿಕೊಂಡಂತೆ ಖಾಲಿಯಾಗುತ್ತಲೇ ಇರಬೇಕು

ಜೀವನದ ಇತಿಮಿತಿಯಲಿ ಗತಿ ತಿರುಗಿದಂತೆ

ಹಳಿಗಳೂ ಬದಲಾಗುತ್ತವೆ, ಎಲ್ಲೋ ಕವಲೊಡೆದು ಇನ್ನೆಲ್ಲೋ ಕೂಡುತ್ತವೆ

ಉದ್ವೇಗ ಉನ್ಮಾದಗಳ ಬದಿಗೊತ್ತಿ ನಯನಾಜೂಕಿನಲಿ ನಡೆಯಬೇಕು

ಕೆಂಪು ನಿಶಾನೆಯೆದುರು ಸಮಾಧಾನಿಯಾಗಿರಬೇಕು

ಎಲ್ಲರಂತಲ್ಲ ನಾನು

ಕನಸಿಗೆ ಕಚಗುಳಿಯಿಟ್ಟು ನೂಕುವ ರಾಯಭಾರಿಯಾಗಬೇಕು

ಚಿಣ್ಣರ ಕೇಕೆ, ಹರೆಯದ ಬಯಕೆ, ಇಳಿವಯಸ್ಸಿನ ಬೇಗೆಗೆ

ನಿತ್ಯವೂ ಹೊಸ ಆಹ್ಲಾದವನೀಯುತ ಭರವಸೆಯ ಬೆಳಕಾಗಬೇಕು

ಮುಗ್ಗರಿಸಿದವರ ನೋವಿಗೆ  ಸಾಂತ್ವನವಾಗಬೇಕು

ಅರಿವಿನ ಅರವಟಿಗೆಯಲಿ ಒಡಲು ಗಟ್ಟಿಯಾಗುತಿರಬೇಕು

ನವರಸ ಭಾವ ವಿಭಾವಗಳ ತಾಳಮೇಳದೊಳಗೆ

ಕೋಟಿ ಮನಸ್ಸುಗಳು ಹರಿಯುವುದು ನನ್ನೊಳಗೆ

ಸ್ವರ ವ್ಯಂಜನದೊಳು ಮೂಡಿದ ಬಿರುಕಿಗೆ ತೇಪೆ ಹಾಕಿ

ಸಮರಸ ಸಂಧಾನದ ಉಸಿರು ಚೆಲ್ಲಿ ಮುಂದಡಿಯಿಡಬೇಕು

ನನ್ನಾಂತರ್ಯದೊಳಿರುವ ಪ್ರೇಮ, ವಿರಹ ಗೀತೆಗಳೆಷ್ಟೋ…!

ಕಣ್ಣಂಜಿಕೆಗೆ ಮುಖ ಮರೆಸಿ ಕೂತ ಗುಟ್ಟುಗಳೆಷ್ಟೋ…!

ಯುಗಯುಗಾಂತರದಲಿ ಘಟಿಸಿ ಹೋದ ಕತೆಗಳಲೂ

ಮುಖ್ಯ ಪಾತ್ರಧಾರಿ, ಪರಮ ಸೂತ್ರಧಾರಿಯೂ ನಾನೇ

ಎಲ್ಲರಂತಲ್ಲ ನಾನು

ಸಾಗುತ್ತಲೇ ಇರಬೇಕು

ನಿಂತರೆ ಸ್ತಬ್ದವಾಗಬಹುದಲ್ಲವೇ ಯಾನ…!

ನಗರದ ನರನಾಡಿಗಳಲಿ ಪವಹಿಸಿ ಪಥಿಕರ ಗಮ್ಯವಾಗಬೇಕು

ನಿತ್ಯ ಪಥದ ಧ್ಯಾನಿಯಾಗಬೇಕು.

✍🏻 ಅನಿತಾ ಪಿ. ತಾಕೊಡೆ


Related Posts

ಚಾರ್ಟರ್ಡ್ ಅಕೌಂಟೆಂಟ್ (CA) ಪರೀಕ್ಷೆಯಲ್ಲಿ ಅತ್ಯುತ್ತಮ ಅಂಕಗಳನ್ನು ಗಳಿಸಿ ನಿಶಾ ಪೂಜಾರಿ ಉತ್ತೀರ್ಣರಾಗಿದ್ದಾರೆ.


Share         ಮುಂಬಯಿ : ಕಾಂದಿವಲಿ ಪೂರ್ವದ ಠಾಕೂರ್ ಕಾಂಪ್ಲೆಕ್ಸ್ ನಿವಾಸಿ ನಿಶಾ ಪೂಜಾರಿ ಅವರು ಇತ್ತೀಚೆಗೆ ಸೆಪ್ಟೆಂಬರ್‌ನಲ್ಲಿ ನಡೆದ ಚಾರ್ಟರ್ಡ್ ಅಕೌಂಟೆಂಟ್ (CA) ಪರೀಕ್ಷೆಯಲ್ಲಿ ಅತ್ಯುತ್ತಮ ಅಂಕಗಳನ್ನು ಗಳಿಸಿ ಯಶಸ್ವಿಯಾಗಿ ಉತ್ತೀರ್ಣರಾಗಿದ್ದಾರೆ. ಅವರು ಕಾರ್ಕಳ


Read More »

ಬಹುಮುಖ ಪ್ರತಿಭಾವಂತೆ ಹರ್ಷಿಕಾ ಕಾಣಿಯೂರು ಅವರಿಗೆ ಅಭಿನಂದನೆಗಳು


Share         ಹರ್ಷಿಕಾ ಕಾಣಿಯೂರು ಅವರ ಬಾಲ್ಯದ ವಯಸ್ಸಿನಲ್ಲಿಯೇ ಕೃಷಿ ಕಾರ್ಯದ ಮೇಲಿನ ಆಸಕ್ತಿ ಹಾಗೂ ಶ್ರಮವನ್ನು ಗುರುತಿಸಿ ಸೈಟ್ ರೀಟಾ ವಿದ್ಯಾ ಸಂಸ್ಥೆ ಗೌರವಿಸಿದ ಕ್ಷಣ ನಿಜಕ್ಕೂ ಹೆಮ್ಮೆಯದು. 🌾🌱👏   ಅಷ್ಟೇ ಅಲ್ಲದೆ,


Read More »

ಅಕ್ಷತಾ ಪೂಜಾರಿಗೆ ಎಂಬ ಮುಗ್ದ ಯುವತಿಯ ಮೇಲೆ ಪೋಲಿಸರಿಂದ ಹಲ್ಲೆ- ವಕೀಲ‌ ಪ್ರವೀಣ್ ಪೂಜಾರಿ ಆಕ್ರೋಶ


Share         ಅಕ್ಷತಾ ಪೂಜಾರಿಗೆ ಎಂಬ ಮುಗ್ದ ಯುವತಿಯ ಮೇಲೆ ಪೋಲಿಸರಿಂದ ಹಲ್ಲೆ- ವಕೀಲ‌ ಪ್ರವೀಣ್ ಪೂಜಾರಿ ಆಕ್ರೋಶ ಉಡುಪಿ: ಪ್ರಕರಣವೊಂದಕ್ಕೆ ಸಂಬಂಧಿಸಿ ನ್ಯಾಯಾಲಯದ ಜಾರಿ ಆದೇಶವನ್ನು ಕಾರ್ಯಗತಗೊಳಿಸುವ ನೆಪದಲ್ಲಿ ಪೊಲೀಸರು ಮಹಿಳೆಯರಿದ್ದ ಮನೆಗೆ ಬೆಳ್ಳಂ


Read More »

ಯುವ ವೈಭವ 2025 -ಯುವವಾಹಿನಿ (ರಿ.)ಬೆಂಗಳೂರು ಘಟಕದ ಪತ್ರಿಕಾಗೋಷ್ಠಿ


Share         #ಯುವ ವೈಭವ 2025 05/12/25 ಇಂದು ಪ್ರೆಸ್ ಕ್ಲಬ್ ಆಫ್ ಬೆಂಗಳೂರು ಇಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಯುವವಾಹಿನಿ (ರಿ.)ಬೆಂಗಳೂರು ಘಟಕ ಅಧ್ಯಕ್ಷರಾದ ಶಶಿಧರ್ ಕೋಟ್ಯಾನ್ ಮತ್ತು ಕಾರ್ಯದರ್ಶಿ ಸಂತೋಷ್ ಪೂಜಾರಿ ಪಣಪಿಲ ಅವರು


Read More »

ಕೇರಳದ ಶಿವಗಿರಿಯ ಶಾಖಾ ಮಠವನ್ನು ಉಡುಪಿ ಅಥವಾ ಮಂಗಳೂರಿನಲ್ಲಿ ಸ್ಥಾಪಿಸಲು ಅಗತ್ಯ ಇರುವ ಐದು ಎಕರೆ ಜಮೀನನ್ನು ಒದಗಿಸಲಾಗುವುದು : ಮುಖ್ಯಮಂತ್ರಿ ಸಿದ್ದರಾಮಯ್ಯ


Share         ಕೇರಳದ ಶಿವಗಿರಿಯ ಶಾಖಾ ಮಠವನ್ನು ಉಡುಪಿ ಅಥವಾ ಮಂಗಳೂರಿನಲ್ಲಿ ಸ್ಥಾಪಿಸಲು ಅಗತ್ಯ ಇರುವ ಐದು ಎಕರೆ ಜಮೀನನ್ನು ಒದಗಿಸಲಾಗುವುದು : ಮುಖ್ಯಮಂತ್ರಿ ಸಿದ್ದರಾಮಯ್ಯ ಉಳ್ಳಾಲ: ಕೇರಳದ ಶಿವಗಿರಿಯ ಶಾಖಾ ಮಠವನ್ನು ಉಡುಪಿ ಅಥವಾ


Read More »

ವಿಶೇಷ ಮಕ್ಕಳ ಕಲೆಗಾರಿಕೆಯಿಂದ ರೂಪುಗೊಂಡ ಜನನಾಯಕ ಪದ್ಮರಾಜ್ ಆರ್. ಪೂಜಾರಿಯವರ ಭಾವಚಿತ್ರ


Share         ಕಲಾಸೇತು — ಬಂಟ್ವಾಳ ತಾಲೂಕಿನ ಕಾವಳಕಟ್ಟೆಯ ಗುರಿಮಜಲ್ ಹಿದಾಯ ವಿಶೇಷ ಮಕ್ಕಳ ವಸತಿ ಶಾಲೆ ದಶಮಾನೋತ್ಸವ ಕಾರ್ಯಕ್ರಮದಲ್ಲಿ, ವಿಶೇಷ ಮಕ್ಕಳ ಕಲೆಗಾರಿಕೆಯಿಂದ ರೂಪುಗೊಂಡ ಜನನಾಯಕ ಪದ್ಮರಾಜ್ ಆರ್. ಪೂಜಾರಿಯವರ ಭಾವಚಿತ್ರ ವನ್ನು ಶಾಲೆಯ


Read More »