TOP STORIES:

FOLLOW US

ಎಪ್ರಿಲ್ ತಿಂಗಳ ಅಕ್ಷಯ ಮಾಸ ಪತ್ರಿಕೆಯಲ್ಲಿ ಪ್ರಕಟವಾದ ಕವಿತೆ : ರೈಲು


ರೈಲು

ಎಲ್ಲರಂತಲ್ಲ ನಾನು…

ಬಯಲ ಬೆಳಕಿನಲ್ಲಿ ಕತ್ತಲು ಕೊರೆಯುವಲ್ಲಿ

ಓಡಬೇಕು; ಓಡುತ್ತಲೇ ಇರಬೇಕು

ಅಬ್ಬರದಿ ಬಂದೆರಗುವ ಜನಸಾಗರಕೆ ತೀರವಾಗಬೇಕು

  ಶಾಂತವಾಗಿ ನಿರ್ವಾಹವಾಗಿ ಜೀವಜೀವಗಳ  ನಿಜಬಂಧುವಾಗಿ

ತುಂಬಿಕೊಂಡಂತೆ ಖಾಲಿಯಾಗುತ್ತಲೇ ಇರಬೇಕು

ಜೀವನದ ಇತಿಮಿತಿಯಲಿ ಗತಿ ತಿರುಗಿದಂತೆ

ಹಳಿಗಳೂ ಬದಲಾಗುತ್ತವೆ, ಎಲ್ಲೋ ಕವಲೊಡೆದು ಇನ್ನೆಲ್ಲೋ ಕೂಡುತ್ತವೆ

ಉದ್ವೇಗ ಉನ್ಮಾದಗಳ ಬದಿಗೊತ್ತಿ ನಯನಾಜೂಕಿನಲಿ ನಡೆಯಬೇಕು

ಕೆಂಪು ನಿಶಾನೆಯೆದುರು ಸಮಾಧಾನಿಯಾಗಿರಬೇಕು

ಎಲ್ಲರಂತಲ್ಲ ನಾನು

ಕನಸಿಗೆ ಕಚಗುಳಿಯಿಟ್ಟು ನೂಕುವ ರಾಯಭಾರಿಯಾಗಬೇಕು

ಚಿಣ್ಣರ ಕೇಕೆ, ಹರೆಯದ ಬಯಕೆ, ಇಳಿವಯಸ್ಸಿನ ಬೇಗೆಗೆ

ನಿತ್ಯವೂ ಹೊಸ ಆಹ್ಲಾದವನೀಯುತ ಭರವಸೆಯ ಬೆಳಕಾಗಬೇಕು

ಮುಗ್ಗರಿಸಿದವರ ನೋವಿಗೆ  ಸಾಂತ್ವನವಾಗಬೇಕು

ಅರಿವಿನ ಅರವಟಿಗೆಯಲಿ ಒಡಲು ಗಟ್ಟಿಯಾಗುತಿರಬೇಕು

ನವರಸ ಭಾವ ವಿಭಾವಗಳ ತಾಳಮೇಳದೊಳಗೆ

ಕೋಟಿ ಮನಸ್ಸುಗಳು ಹರಿಯುವುದು ನನ್ನೊಳಗೆ

ಸ್ವರ ವ್ಯಂಜನದೊಳು ಮೂಡಿದ ಬಿರುಕಿಗೆ ತೇಪೆ ಹಾಕಿ

ಸಮರಸ ಸಂಧಾನದ ಉಸಿರು ಚೆಲ್ಲಿ ಮುಂದಡಿಯಿಡಬೇಕು

ನನ್ನಾಂತರ್ಯದೊಳಿರುವ ಪ್ರೇಮ, ವಿರಹ ಗೀತೆಗಳೆಷ್ಟೋ…!

ಕಣ್ಣಂಜಿಕೆಗೆ ಮುಖ ಮರೆಸಿ ಕೂತ ಗುಟ್ಟುಗಳೆಷ್ಟೋ…!

ಯುಗಯುಗಾಂತರದಲಿ ಘಟಿಸಿ ಹೋದ ಕತೆಗಳಲೂ

ಮುಖ್ಯ ಪಾತ್ರಧಾರಿ, ಪರಮ ಸೂತ್ರಧಾರಿಯೂ ನಾನೇ

ಎಲ್ಲರಂತಲ್ಲ ನಾನು

ಸಾಗುತ್ತಲೇ ಇರಬೇಕು

ನಿಂತರೆ ಸ್ತಬ್ದವಾಗಬಹುದಲ್ಲವೇ ಯಾನ…!

ನಗರದ ನರನಾಡಿಗಳಲಿ ಪವಹಿಸಿ ಪಥಿಕರ ಗಮ್ಯವಾಗಬೇಕು

ನಿತ್ಯ ಪಥದ ಧ್ಯಾನಿಯಾಗಬೇಕು.

✍🏻 ಅನಿತಾ ಪಿ. ತಾಕೊಡೆ


Share:

More Posts

Category

Send Us A Message

Related Posts

ಫ್ರೆಂಡ್ಸ್ ಸುರತ್ಕಲ್ ತುಳುನಾಡ ಬಿರುವೆರ್ (ರಿ )ವತಿಯಿಂದ ಸಹಾಯ ಧನ ವಿತರಣೆ


Share       ಫ್ರೆಂಡ್ಸ್ ಸುರತ್ಕಲ್ ತುಳುನಾಡ ಬಿರುವೆರ್ ಸಂಘಟನೆಯ ಸಕ್ರಿಯ ಕಾರ್ಯಕರ್ತ ಹಾಗೂ ನಮ್ಮೆಲ್ಲರ ಅತ್ಮೀಯರಾದ ಯಶೋಧರ ಹೊಸಬೆಟ್ಟು ರುವರು ಹಲವು ದಿನಗಳ ಹಿಂದೆ ತೀವ್ರ ಅನಾರೋಗ್ಯಕ್ಕಿಡಾಗಿದ್ದು,  ಅವರ ಚಿಕಿತ್ಸೆಗಾಗಿ ಲಕ್ಷಾಂತರ ರೂಪಾಯಿಗಳ ಅಗತ್ಯವಿದ್ದು, ಅವರ


Read More »

ಡಾ . ರಶ್ಮಿ ಹರ್ಷ ಪೂಜಾರಿಯವರಿಗೆ ಡಾಕ್ಟರೇಟ್ ಪದವಿ


Share       ಡಾ . ರಶ್ಮಿ ಹರ್ಷ ಪೂಜಾರಿಯವರಿಗೆ ಡಾಕ್ಟರೇಟ್ ಪದವಿ ಡಾ. ಪವಿತ್ರ ಜಿ. ಪಿ. ಹಾಗೂ ಪ್ರವೀಣ್ ಬಿ.ಎಮ್  ರವರ ಮಾರ್ಗದರ್ಶನದಲ್ಲಿ  ಡಾ. ರಶ್ಮಿ ಹರ್ಷ ಪೂಜಾರಿ ಇವರು ರಸಾಯನ ಶಾಸ್ತ್ರ ವಿಭಾಗದಲ್ಲಿ


Read More »

ದುಬೈಯಲ್ಲಿ ಯಶಸ್ವಿ ಉದ್ಯಮಿಯಾಗಿ ಲೆಕ್ಕವಿಲ್ಲದಷ್ಟು ಸೇವೆಯನ್ನು ಸಮಾಜಕ್ಕೆ ಅರ್ಪಿಸುತ್ತಿರು ಸೇವಾ ಮಾಣಿಕ್ಯ ನಿಟ್ಟೆ ಸಂದೀಪ್ ಕೋಟ್ಯಾನ್ ಕಾರ್ಕಳ..!


Share       ಅನೇಕ ಜನ ಉದ್ಯಮ ಕ್ಷೇತ್ರದ ಯಶಸ್ವಿಯಾಗಿ ಮುಂದುವರೆದ ಉದ್ಯಮಿಗಳು ಪ್ರಸ್ತುತ ದಿನಗಳಲ್ಲಿ ಸಿಗುತ್ತಾರೆ, ಆದರೆ ತಾವು ಸಂಪಾದಿಸಿರುವ ಹಣವನ್ನು ಮಾತ್ರ ಸಮಾಜದಲ್ಲಿ ಕೇವಲ ಕಾರ್ಯಕ್ರಮ ಮನೊರಂಜನೆಗಳಿಗೆ ಬಳಸಿ ರಾಜಕೀಯ ನಾಯಕರು, ಉದ್ಯಮಿಗಳನ್ನು ಕರೆದು


Read More »

ಮಂಗಳೂರಿನ ಖ್ಯಾತ ಯುರೋಲಜಿಸ್ಟ್ ಡಾ. ಸದಾನಂದ ಪೂಜಾರಿಯವರಿಗೆ ಪ್ರೈಡ್ ಆಫ್ ನ್ಯಾಷನ್ ಅವಾರ್ಡ್.


Share       ಮಂಗಳೂರು : ಕಳೆದ ವರ್ಷ ಕರ್ನಾಟಕ ಸರಕಾರದಿಂದ ಡಾ. ಬಿ.ಸಿ.ರಾಯ್ ರಾಜ್ಯ ಪ್ರಶಸ್ತಿ ಪುರಸ್ಕೃತ ಡಾ. ಸದಾನಂದ ಪೂಜಾರಿಯವರಿಗೆ ಬೆಂಗಳೂರಿನ ಅಶೋಕ ಪಂಚತಾರ ಹೋಟೆಲ್ ನಲ್ಲಿ ನಡೆದ ಏಷ್ಯಾ ಟುಡೇ ಹಮ್ಮಿ ಕೊಂಡಿದ್ದ


Read More »

ಅಂತಾರಾಷ್ಟ್ರೀಯ ಮಟ್ಟದಲ್ಲಿ ಮಿನುಗುತ್ತಿರುವ ನಕ್ಷತ್ರ ಮೇರು ವ್ಯಕ್ತಿತ್ವದ ಬಿಲ್ಲವ ಸಮಾಜದ ಕಣ್ಮಣಿ ಡಾ ಅಂಚನ್ ಸಿ.ಕೆ


Share       ಅಂತಾರಾಷ್ಟ್ರೀಯ ಮಟ್ಟದಲ್ಲಿ ಮಿನುಗುತ್ತಿರುವ ನಕ್ಷತ್ರ ಮೇರು ವ್ಯಕ್ತಿತ್ವದ ಬಿಲ್ಲವ ಸಮಾಜದ ಕಣ್ಮಣಿ ಡಾ ಅಂಚನ್ ಸಿ.ಕೆ ಅವರಿಗೆ ಜನುಮದಿನದ ಶುಭಾಶಯಗಳು🎂 ಅವರ ಬಗ್ಗೆ ಮಾಹಿತಿ ಡಾ.ಅಂಚನ್ ಸಿ ಕೆ, ಅಂತರರಾಷ್ಟ್ರೀಯ ವ್ಯಾಪಾರ ಮತ್ತು


Read More »

ಕುಂದಾಪುರ ಮಾತ ಆಸ್ಪತ್ರೆಯ ಮಾಲಿಕ ಡಾ. ಸತೀಶ್ ಪೂಜಾರಿ ಹೃದಯಾಘಾತದಿಂದ ನಿಧನ


Share       ಕುಂದಾಪುರ ಮಾತ ಆಸ್ಪತ್ರೆಯ ಮಾಲಿಕ ಡಾ. ಸತೀಶ್ ಪೂಜಾರಿ ಹೃದಯಾಘಾತದಿಂದ ನಿಧನ ಕೋಟ: ಶ್ರೀಮಾತಾ ಅಸ್ಪತ್ರೆಯ ಮಾಲಿಕರಾದ ಡಾ.ಸತೀಶ ಪೂಜಾರಿ (54) ಅವರು ಗುರುವಾರ ಬೆಳಿಗ್ಗೆ ಅವರ ಕೋಟತಟ್ಟು ಮಣೂರು ಸ್ವಗೃಹದಲ್ಲಿ ಹೃದಯಾಘಾತದಿಂದ


Read More »