TOP STORIES:

FOLLOW US

ಈ 4 ಅಭ್ಯಾಸಗಳನ್ನು ತಪ್ಪಿಸಿ.. ಚಿಕ್ಕ ವಯಸ್ಸಿನಲ್ಲಿ ಹೃದಯಾಘಾತದ ಅಪಾಯವನ್ನು ತಪ್ಪಿಸಿ


Heart Attack: ಚಿಕ್ಕ ವಯಸ್ಸಿನಲ್ಲೇ ಹೃದಯಾಘಾತದಿಂದ ಹೆಚ್ಚಿನ ಯುವಕರು ಪ್ರಾಣ ಕಳೆದುಕೊಳ್ಳುತ್ತಿದ್ದಾರೆ. ಇದನ್ನು ತಪ್ಪಿಸಲು ವಾರದಲ್ಲಿ 150 ನಿಮಿಷಗಳ ಕಾಲ ವೇಗವಾಗಿ ನಡೆಯಿರಿ. ಅಷ್ಟೇ ಅಲ್ಲ, ಜೀವನಶೈಲಿಯಲ್ಲಿ ಕೆಲವು ಬದಲಾವಣೆಗಳನ್ನು ಅಳವಡಿಸಿಕೊಂಡರೆ, ಈ ಅಪಾಯಕಾರಿ ಕಾಯಿಲೆಯನ್ನು ದೂರ ಮಾಡಬಹುದು.

ನಿಮ್ಮ ಹೃದಯವನ್ನು ಆರೋಗ್ಯವಾಗಿರಿಸಿಕೊಳ್ಳಬೇಕಾದರೆ.. ಸರಿಯಾದ ಜೀವನಶೈಲಿಯ ಜೊತೆಗೆ ಸಮತೋಲನ ಆಹಾರವನ್ನೂ ಹೊಂದಿರಬೇಕು. ಇತ್ತೀಚಿನ ವರ್ಷಗಳಲ್ಲಿ ವಯಸ್ಸನ್ನು ಲೆಕ್ಕಿಸದೆ ಹೃದಯಾಘಾತದ ಪ್ರಕರಣಗಳು ವೇಗವಾಗಿ ಹೆಚ್ಚುತ್ತಿವೆ. ಭಾರತದಲ್ಲಿಯೂ ಹೃದ್ರೋಗಿಗಳ ಸಂಖ್ಯೆ ನಿರಂತರವಾಗಿ ಹೆಚ್ಚುತ್ತಿದೆ. ದಿನದಿಂದ ದಿನಕ್ಕೆ ಹೃದಯಾಘಾತದ ಅಪಾಯವು ವಯಸ್ಸಾದವರಲ್ಲಿ ಮಾತ್ರವಲ್ಲದೆ ಯುವಕರಲ್ಲಿಯೂ ( Youth) ಹೆಚ್ಚುತ್ತಿದೆ. ಅಮೇರಿಕನ್ ಹಾರ್ಟ್ ಅಸೋಸಿಯೇಷನ್ ಪ್ರಕಾರ ನೀವು ಹೃದಯಾಘಾತವನ್ನು (Heart Attack) ತಡೆಗಟ್ಟಲು ಬಯಸಿದರೆ, ಆರೋಗ್ಯಕರ ಜೀವನಶೈಲಿಯನ್ನು (Lifestyle) ಅನುಸರಿಸುವುದು ಮುಖ್ಯ. ಹೃದ್ರೋಗ ತಜ್ಞರು ಹೇಳುವಂತೆ ಚಿಕ್ಕ ವಯಸ್ಸಿನಲ್ಲಿಯೇ ಹೃದಯಾಘಾತದಿಂದ ಹೆಚ್ಚಿನ ಯುವಕರು ಪ್ರಾಣ ಕಳೆದುಕೊಳ್ಳುತ್ತಿದ್ದಾರೆ. ಇದನ್ನು ತಪ್ಪಿಸಲು ವಾರದಲ್ಲಿ 150 ನಿಮಿಷಗಳ ಕಾಲ ವೇಗವಾಗಿ ನಡೆಯಿರಿ. ಅಷ್ಟೇ ಅಲ್ಲ, ಜೀವನಶೈಲಿಯಲ್ಲಿ ಕೆಲವು ಬದಲಾವಣೆಗಳನ್ನು ಅಳವಡಿಸಿಕೊಂಡರೆ, ಈ ಅಪಾಯಕಾರಿ ಕಾಯಿಲೆಯ ಪರಿಣಾಮವನ್ನು ಕಡಿಮೆ ಮಾಡಬಹುದು. ಮುಂಬೈನ ಕ್ರಿಟಿಕರ್, ಆಹಾರ ತಜ್ಞ ಮತ್ತು ಪೌಷ್ಟಿಕತಜ್ಞ ಯೋಗಿತಾ ಗೊರಾಡಿಯಾ, ಯುವಕರು ಕೆಲವು ಆಹಾರಗಳನ್ನು ತ್ಯಜಿಸಬೇಕು ಎಂದು ಹೇಳುತ್ತಾರೆ.

ಹೃದಯಾಘಾತದ ಅಪಾಯ – ಧೂಮಪಾನವನ್ನು ತಪ್ಪಿಸಿ

ಧೂಮಪಾನವು ಹೃದಯದ ಮೇಲೂ ಕೆಟ್ಟ ಪರಿಣಾಮ ಬೀರುತ್ತದೆ. ಬೀಡಿ, ಸಿಗರೇಟ್ ಮತ್ತು ಇತರ ಧೂಮಪಾನ ಪದಾರ್ಥಗಳ ಹೊಗೆ ಹೃದಯಕ್ಕೆ ಗಂಭೀರ ಅಪಾಯವನ್ನುಂಟುಮಾಡುತ್ತದೆ. ಹೆಚ್ಚು ಹೆಚ್ಚು ಧೂಮಪಾನ ಮಾಡುವವರಲ್ಲಿ ಹೃದಯಾಘಾತದ ಅಪಾಯವು ಹೆಚ್ಚಾಗುತ್ತದೆ. ಆದ್ದರಿಂದ ಧೂಮಪಾನದ ಅಭ್ಯಾಸವನ್ನು ತ್ಯಜಿಸಬೇಕು.

ಹೃದಯಾಘಾತದ ಅಪಾಯ – ತಂಪಾದ ಪಾನೀಯಗಳು

ಅತಿಯಾದ ಸಕ್ಕರೆ ಮತ್ತು ಜಂಕ್ ಫುಡ್ ಕೂಡ ಹೃದಯಕ್ಕೆ ಅಪಾಯಕಾರಿ. ಇವುಗಳಿಂದ ಕೊಲೆಸ್ಟ್ರಾಲ್, ರಕ್ತದೊತ್ತಡ ಮತ್ತು ರಕ್ತದ ಸಕ್ಕರೆಯ ಅಪಾಯವಿದೆ. ಹಾಗಾಗಿ ಕೂಲ್ ಡ್ರಿಂಕ್ಸ್ ನಿಂದ ದೂರವಿರಿ. ಅಲ್ಲದೆ, ನಿಮ್ಮ ಆರೋಗ್ಯವನ್ನು ನಿಯಮಿತವಾಗಿ ಪರೀಕ್ಷಿಸಿಕೊಳ್ಳಿ.

ಹೃದಯಾಘಾತದ ಅಪಾಯ – ಒತ್ತಡವನ್ನು ತಪ್ಪಿಸಿ

ಡಾ. ಬಿಜಯ್ ಮಾತನಾಡಿ, ಇಂದಿನ ದಿನಗಳಲ್ಲಿ ಅನೇಕರು ಒತ್ತಡ ಎದುರಿಸುತ್ತಿದ್ದಾರೆ. ಕ್ರಮೇಣ ಇದು ಆತಂಕ ಮತ್ತು ಖಿನ್ನತೆಗೆ ತಿರುಗುತ್ತದೆ. ಈ ಕಾರಣದಿಂದಾಗಿ ಹೃದಯಾಘಾತದ ಅಪಾಯವು ಹಲವು ಬಾರಿ ಹೆಚ್ಚಾಗುತ್ತದೆ. ಜನರು ತಮ್ಮ ಒತ್ತಡವನ್ನು ನಿಯಂತ್ರಣದಲ್ಲಿಟ್ಟುಕೊಳ್ಳಬೇಕು.

ಹೃದಯಾಘಾತದ ಅಪಾಯ – ನಿದ್ರೆ ಸಮಯ

ಹೃದಯಾಘಾತದ ಅಪಾಯವನ್ನು ಕಡಿಮೆ ಮಾಡಲು.. ಸಾಧ್ಯವಾದಷ್ಟು ದೈಹಿಕವಾಗಿ ಸಕ್ರಿಯರಾಗಿರಿ. ಗಂಟೆಗಳ ಕಾಲ ಒಂದೇ ಸ್ಥಳದಲ್ಲಿ ಕುಳಿತುಕೊಳ್ಳಬೇಡಿ. ಇದಲ್ಲದೆ, ನೀವು ಸಮಯಕ್ಕೆ ಸರಿಯಾಗಿ ಮಲಗಬೇಕು ಮತ್ತು ನಿದ್ದೆಯಿಂದ ಏಳಬೇಕು. ಆರೋಗ್ಯಕರ ಆಹಾರವನ್ನು ಸೇವಿಸುವುದು ಬಹಳ ಮುಖ್ಯ. ಅಲ್ಲದೆ ಪ್ರತಿದಿನ ಕನಿಷ್ಠ 7-8 ಗಂಟೆಗಳ ಕಾಲ ಸಾಕಷ್ಟು ನಿದ್ರೆ ಪಡೆಯಿರಿ.


Share:

More Posts

Category

Send Us A Message

Related Posts

ಫ್ರೆಂಡ್ಸ್ ಸುರತ್ಕಲ್ ತುಳುನಾಡ ಬಿರುವೆರ್ (ರಿ )ವತಿಯಿಂದ ಸಹಾಯ ಧನ ವಿತರಣೆ


Share       ಫ್ರೆಂಡ್ಸ್ ಸುರತ್ಕಲ್ ತುಳುನಾಡ ಬಿರುವೆರ್ ಸಂಘಟನೆಯ ಸಕ್ರಿಯ ಕಾರ್ಯಕರ್ತ ಹಾಗೂ ನಮ್ಮೆಲ್ಲರ ಅತ್ಮೀಯರಾದ ಯಶೋಧರ ಹೊಸಬೆಟ್ಟು ರುವರು ಹಲವು ದಿನಗಳ ಹಿಂದೆ ತೀವ್ರ ಅನಾರೋಗ್ಯಕ್ಕಿಡಾಗಿದ್ದು,  ಅವರ ಚಿಕಿತ್ಸೆಗಾಗಿ ಲಕ್ಷಾಂತರ ರೂಪಾಯಿಗಳ ಅಗತ್ಯವಿದ್ದು, ಅವರ


Read More »

ಡಾ . ರಶ್ಮಿ ಹರ್ಷ ಪೂಜಾರಿಯವರಿಗೆ ಡಾಕ್ಟರೇಟ್ ಪದವಿ


Share       ಡಾ . ರಶ್ಮಿ ಹರ್ಷ ಪೂಜಾರಿಯವರಿಗೆ ಡಾಕ್ಟರೇಟ್ ಪದವಿ ಡಾ. ಪವಿತ್ರ ಜಿ. ಪಿ. ಹಾಗೂ ಪ್ರವೀಣ್ ಬಿ.ಎಮ್  ರವರ ಮಾರ್ಗದರ್ಶನದಲ್ಲಿ  ಡಾ. ರಶ್ಮಿ ಹರ್ಷ ಪೂಜಾರಿ ಇವರು ರಸಾಯನ ಶಾಸ್ತ್ರ ವಿಭಾಗದಲ್ಲಿ


Read More »

ದುಬೈಯಲ್ಲಿ ಯಶಸ್ವಿ ಉದ್ಯಮಿಯಾಗಿ ಲೆಕ್ಕವಿಲ್ಲದಷ್ಟು ಸೇವೆಯನ್ನು ಸಮಾಜಕ್ಕೆ ಅರ್ಪಿಸುತ್ತಿರು ಸೇವಾ ಮಾಣಿಕ್ಯ ನಿಟ್ಟೆ ಸಂದೀಪ್ ಕೋಟ್ಯಾನ್ ಕಾರ್ಕಳ..!


Share       ಅನೇಕ ಜನ ಉದ್ಯಮ ಕ್ಷೇತ್ರದ ಯಶಸ್ವಿಯಾಗಿ ಮುಂದುವರೆದ ಉದ್ಯಮಿಗಳು ಪ್ರಸ್ತುತ ದಿನಗಳಲ್ಲಿ ಸಿಗುತ್ತಾರೆ, ಆದರೆ ತಾವು ಸಂಪಾದಿಸಿರುವ ಹಣವನ್ನು ಮಾತ್ರ ಸಮಾಜದಲ್ಲಿ ಕೇವಲ ಕಾರ್ಯಕ್ರಮ ಮನೊರಂಜನೆಗಳಿಗೆ ಬಳಸಿ ರಾಜಕೀಯ ನಾಯಕರು, ಉದ್ಯಮಿಗಳನ್ನು ಕರೆದು


Read More »

ಮಂಗಳೂರಿನ ಖ್ಯಾತ ಯುರೋಲಜಿಸ್ಟ್ ಡಾ. ಸದಾನಂದ ಪೂಜಾರಿಯವರಿಗೆ ಪ್ರೈಡ್ ಆಫ್ ನ್ಯಾಷನ್ ಅವಾರ್ಡ್.


Share       ಮಂಗಳೂರು : ಕಳೆದ ವರ್ಷ ಕರ್ನಾಟಕ ಸರಕಾರದಿಂದ ಡಾ. ಬಿ.ಸಿ.ರಾಯ್ ರಾಜ್ಯ ಪ್ರಶಸ್ತಿ ಪುರಸ್ಕೃತ ಡಾ. ಸದಾನಂದ ಪೂಜಾರಿಯವರಿಗೆ ಬೆಂಗಳೂರಿನ ಅಶೋಕ ಪಂಚತಾರ ಹೋಟೆಲ್ ನಲ್ಲಿ ನಡೆದ ಏಷ್ಯಾ ಟುಡೇ ಹಮ್ಮಿ ಕೊಂಡಿದ್ದ


Read More »

ಅಂತಾರಾಷ್ಟ್ರೀಯ ಮಟ್ಟದಲ್ಲಿ ಮಿನುಗುತ್ತಿರುವ ನಕ್ಷತ್ರ ಮೇರು ವ್ಯಕ್ತಿತ್ವದ ಬಿಲ್ಲವ ಸಮಾಜದ ಕಣ್ಮಣಿ ಡಾ ಅಂಚನ್ ಸಿ.ಕೆ


Share       ಅಂತಾರಾಷ್ಟ್ರೀಯ ಮಟ್ಟದಲ್ಲಿ ಮಿನುಗುತ್ತಿರುವ ನಕ್ಷತ್ರ ಮೇರು ವ್ಯಕ್ತಿತ್ವದ ಬಿಲ್ಲವ ಸಮಾಜದ ಕಣ್ಮಣಿ ಡಾ ಅಂಚನ್ ಸಿ.ಕೆ ಅವರಿಗೆ ಜನುಮದಿನದ ಶುಭಾಶಯಗಳು🎂 ಅವರ ಬಗ್ಗೆ ಮಾಹಿತಿ ಡಾ.ಅಂಚನ್ ಸಿ ಕೆ, ಅಂತರರಾಷ್ಟ್ರೀಯ ವ್ಯಾಪಾರ ಮತ್ತು


Read More »

ಕುಂದಾಪುರ ಮಾತ ಆಸ್ಪತ್ರೆಯ ಮಾಲಿಕ ಡಾ. ಸತೀಶ್ ಪೂಜಾರಿ ಹೃದಯಾಘಾತದಿಂದ ನಿಧನ


Share       ಕುಂದಾಪುರ ಮಾತ ಆಸ್ಪತ್ರೆಯ ಮಾಲಿಕ ಡಾ. ಸತೀಶ್ ಪೂಜಾರಿ ಹೃದಯಾಘಾತದಿಂದ ನಿಧನ ಕೋಟ: ಶ್ರೀಮಾತಾ ಅಸ್ಪತ್ರೆಯ ಮಾಲಿಕರಾದ ಡಾ.ಸತೀಶ ಪೂಜಾರಿ (54) ಅವರು ಗುರುವಾರ ಬೆಳಿಗ್ಗೆ ಅವರ ಕೋಟತಟ್ಟು ಮಣೂರು ಸ್ವಗೃಹದಲ್ಲಿ ಹೃದಯಾಘಾತದಿಂದ


Read More »