TOP STORIES:

ಕಿನ್ನಿಗೋಳಿ: ಬುಡಸಹಿತ ಧರೆಗುರುಳಿದ ಅವಳಿ ವೀರರನ್ನು ತೊಟ್ಟಿಲು ಕಟ್ಟಿ ತೂಗಿದ್ದ ತಾಕೊಡೆ ಮರ ಇನ್ನು ನೆನಪು ಮಾತ್ರ


ಕಾಂತಬಾರೆ – ಬೂದಬಾರೆ ಆಡಿ ಬೆಳೆದುದಕ್ಕೆ ಸಾಕ್ಷಿಯಾಗಿದ್ದ ಮರ ಇನ್ನು ನೆನಪು ಮಾತ್ರ

ಮೂಲ್ಕಿ ತಾಲೂಕು ಕೊಲ್ಲೂರಿನ ಶ್ರೀ ಕಾಂತಬಾರೆ- ಬೂದ ಬಾರೆ ಜನ್ಮಕ್ಷೇತ್ರ

ಕಾಂತಬಾರೆ – ಬೂದಬಾರೆ ಆಡಿ ಬೆಳೆದುದಕ್ಕೆ ಸಾಕ್ಷಿಯಾಗಿದ್ದ ಮರ ಇನ್ನು ನೆನಪು ಮಾತ್ರ

ಮೂಲ್ಕಿ ತಾಲೂಕು ಕೊಲ್ಲೂರಿನ ಶ್ರೀ ಕಾಂತಬಾರೆ- ಬೂದ ಬಾರೆ ಜನ್ಮಕ್ಷೇತ್ರ

ಕಿನ್ನಿಗೋಳಿ: ಸಹಸ್ರಮಾನದ ಇತಿಹಾಸದ, ಲಕ್ಷಾಂತರ ಮಂದಿ ನಂಬುವ ಧಾರ್ಮಿಕ ಕ್ಷೇತ್ರದ ಪವಿತ್ರ ಮರ ಬುಡಸಹಿತ ಧರೆಗುರುಳಿದ್ದು ಭಕ್ತ ಮನಸ್ಸಿನ ನೋವುಂಟು ಮಾಡಿದೆ. ಜೀವಂತ ಸಾಕ್ಷಿಯಾಗಿ ಬೃಹತ್ತಾಗಿ ಬೆಳೆದು ನಿಂತಿದ್ದ ಮೂಲ್ಕಿ ತಾಲೂಕು ಕೊಲ್ಲೂರಿನ ಶ್ರೀ ಕಾಂತಬಾರೆ- ಬೂದ ಬಾರೆ ಜನ್ಮಕ್ಷೇತ್ರದ ತಾಕೊಡೆ ಮರ ಶುಕ್ರವಾರ ಬುಡಸಹಿತ ಧರೆಗುರುಳುವುದರೊಂದಿಗೆ ಇತಿಹಾಸದ ಜೀವಂತ ಸಾಕ್ಷಿಯೊಂದು ಅಂತ್ಯ ಕಂಡ0ತಾಗಿದೆ. ಸುಮಾರು 800ರಿಂದ 1,000 ವರ್ಷಗಳ ಹಿನ್ನೆಲೆ ಈ ತಾಕೊಡೆ ಮರಕ್ಕೆ ಇತ್ತು ಅನ್ನುವುದು ಅಧ್ಯಯನಗಳಿಂದಲೂ ದೃಢಪಟ್ಟಿತ್ತು.

ಮೂಲ್ಕಿ ಸಾವಂತ ಅರಸರ ದಳವಾಯಿಗಳಾಗಿ ಕಾಂತಬಾರೆ- ಬೂದಬಾರೆಯರು ಇದ್ದರು ಅನ್ನುವುದು ಐತಿಹಾಸಿಕ ಸಾಕ್ಷಿಯಾದರೆ ಈ ಅವಳಿ ವೀರರು ಹುಟ್ಟಿದ್ದು ಇದೇ ತಾಕೊಡೆ ಮರದಡಿಯಲ್ಲಿ. ಮತ್ತು ಆಗ ತಾನೆ ಹುಟ್ಟಿದ ಅವಳಿ ಮಕ್ಕಳನ್ನು ನೇಲೆ (ಬಟ್ಟೆಯ ತೊಟ್ಟಿಲು)ಯಲ್ಲಿ ಹಾಕಿ ತೂಗಿದ್ದು ಇದೇ ತಾಕೊಡೆ ಮರದ ಪಡ್ಡಾಯಿ (ಪಡುವಣ-ಪಶ್ಚಿಮ) ಗೆಲ್ಲಿಗೆ ಎನ್ನುತ್ತದೆ ಇತಿಹಾಸ. ಈಗ ಕಾಂತಬಾರೆ- ಬೂದಬಾರೆಯರು ಆಡಿ ಬೆಳೆದುದಕ್ಕೆ ಸಾಕ್ಷಿಯಾಗಿದ್ದ ಮರವೇ ಬುಡ ಸಮೇತ ಉರುಳಿದೆ. ಕ್ಷೇತ್ರಕ್ಕೆ ಬರುವ ಲಕ್ಷಾಂತರ ಮಂದಿಯನ್ನು ಭಕ್ತಿ ಪರವಶರನ್ನಾಗಿ ಮಾಡಿದ್ದ ಮರ ಇನ್ನು ನೆನಪು ಮಾತ್ರವಾಗಿದೆ. ಈ ವಿದ್ಯಾಮಾನ ಭಕ್ತಗಣಕ್ಕೆ ಬೇಸರ ತರಿಸಿರುವುದು ದುರದೃಷ್ಟಕರ. 


Related Posts

ಚಾರ್ಟರ್ಡ್ ಅಕೌಂಟೆಂಟ್ (CA) ಪರೀಕ್ಷೆಯಲ್ಲಿ ಅತ್ಯುತ್ತಮ ಅಂಕಗಳನ್ನು ಗಳಿಸಿ ನಿಶಾ ಪೂಜಾರಿ ಉತ್ತೀರ್ಣರಾಗಿದ್ದಾರೆ.


Share         ಮುಂಬಯಿ : ಕಾಂದಿವಲಿ ಪೂರ್ವದ ಠಾಕೂರ್ ಕಾಂಪ್ಲೆಕ್ಸ್ ನಿವಾಸಿ ನಿಶಾ ಪೂಜಾರಿ ಅವರು ಇತ್ತೀಚೆಗೆ ಸೆಪ್ಟೆಂಬರ್‌ನಲ್ಲಿ ನಡೆದ ಚಾರ್ಟರ್ಡ್ ಅಕೌಂಟೆಂಟ್ (CA) ಪರೀಕ್ಷೆಯಲ್ಲಿ ಅತ್ಯುತ್ತಮ ಅಂಕಗಳನ್ನು ಗಳಿಸಿ ಯಶಸ್ವಿಯಾಗಿ ಉತ್ತೀರ್ಣರಾಗಿದ್ದಾರೆ. ಅವರು ಕಾರ್ಕಳ


Read More »

ಬಹುಮುಖ ಪ್ರತಿಭಾವಂತೆ ಹರ್ಷಿಕಾ ಕಾಣಿಯೂರು ಅವರಿಗೆ ಅಭಿನಂದನೆಗಳು


Share         ಹರ್ಷಿಕಾ ಕಾಣಿಯೂರು ಅವರ ಬಾಲ್ಯದ ವಯಸ್ಸಿನಲ್ಲಿಯೇ ಕೃಷಿ ಕಾರ್ಯದ ಮೇಲಿನ ಆಸಕ್ತಿ ಹಾಗೂ ಶ್ರಮವನ್ನು ಗುರುತಿಸಿ ಸೈಟ್ ರೀಟಾ ವಿದ್ಯಾ ಸಂಸ್ಥೆ ಗೌರವಿಸಿದ ಕ್ಷಣ ನಿಜಕ್ಕೂ ಹೆಮ್ಮೆಯದು. 🌾🌱👏   ಅಷ್ಟೇ ಅಲ್ಲದೆ,


Read More »

ಅಕ್ಷತಾ ಪೂಜಾರಿಗೆ ಎಂಬ ಮುಗ್ದ ಯುವತಿಯ ಮೇಲೆ ಪೋಲಿಸರಿಂದ ಹಲ್ಲೆ- ವಕೀಲ‌ ಪ್ರವೀಣ್ ಪೂಜಾರಿ ಆಕ್ರೋಶ


Share         ಅಕ್ಷತಾ ಪೂಜಾರಿಗೆ ಎಂಬ ಮುಗ್ದ ಯುವತಿಯ ಮೇಲೆ ಪೋಲಿಸರಿಂದ ಹಲ್ಲೆ- ವಕೀಲ‌ ಪ್ರವೀಣ್ ಪೂಜಾರಿ ಆಕ್ರೋಶ ಉಡುಪಿ: ಪ್ರಕರಣವೊಂದಕ್ಕೆ ಸಂಬಂಧಿಸಿ ನ್ಯಾಯಾಲಯದ ಜಾರಿ ಆದೇಶವನ್ನು ಕಾರ್ಯಗತಗೊಳಿಸುವ ನೆಪದಲ್ಲಿ ಪೊಲೀಸರು ಮಹಿಳೆಯರಿದ್ದ ಮನೆಗೆ ಬೆಳ್ಳಂ


Read More »

ಯುವ ವೈಭವ 2025 -ಯುವವಾಹಿನಿ (ರಿ.)ಬೆಂಗಳೂರು ಘಟಕದ ಪತ್ರಿಕಾಗೋಷ್ಠಿ


Share         #ಯುವ ವೈಭವ 2025 05/12/25 ಇಂದು ಪ್ರೆಸ್ ಕ್ಲಬ್ ಆಫ್ ಬೆಂಗಳೂರು ಇಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಯುವವಾಹಿನಿ (ರಿ.)ಬೆಂಗಳೂರು ಘಟಕ ಅಧ್ಯಕ್ಷರಾದ ಶಶಿಧರ್ ಕೋಟ್ಯಾನ್ ಮತ್ತು ಕಾರ್ಯದರ್ಶಿ ಸಂತೋಷ್ ಪೂಜಾರಿ ಪಣಪಿಲ ಅವರು


Read More »

ಕೇರಳದ ಶಿವಗಿರಿಯ ಶಾಖಾ ಮಠವನ್ನು ಉಡುಪಿ ಅಥವಾ ಮಂಗಳೂರಿನಲ್ಲಿ ಸ್ಥಾಪಿಸಲು ಅಗತ್ಯ ಇರುವ ಐದು ಎಕರೆ ಜಮೀನನ್ನು ಒದಗಿಸಲಾಗುವುದು : ಮುಖ್ಯಮಂತ್ರಿ ಸಿದ್ದರಾಮಯ್ಯ


Share         ಕೇರಳದ ಶಿವಗಿರಿಯ ಶಾಖಾ ಮಠವನ್ನು ಉಡುಪಿ ಅಥವಾ ಮಂಗಳೂರಿನಲ್ಲಿ ಸ್ಥಾಪಿಸಲು ಅಗತ್ಯ ಇರುವ ಐದು ಎಕರೆ ಜಮೀನನ್ನು ಒದಗಿಸಲಾಗುವುದು : ಮುಖ್ಯಮಂತ್ರಿ ಸಿದ್ದರಾಮಯ್ಯ ಉಳ್ಳಾಲ: ಕೇರಳದ ಶಿವಗಿರಿಯ ಶಾಖಾ ಮಠವನ್ನು ಉಡುಪಿ ಅಥವಾ


Read More »

ವಿಶೇಷ ಮಕ್ಕಳ ಕಲೆಗಾರಿಕೆಯಿಂದ ರೂಪುಗೊಂಡ ಜನನಾಯಕ ಪದ್ಮರಾಜ್ ಆರ್. ಪೂಜಾರಿಯವರ ಭಾವಚಿತ್ರ


Share         ಕಲಾಸೇತು — ಬಂಟ್ವಾಳ ತಾಲೂಕಿನ ಕಾವಳಕಟ್ಟೆಯ ಗುರಿಮಜಲ್ ಹಿದಾಯ ವಿಶೇಷ ಮಕ್ಕಳ ವಸತಿ ಶಾಲೆ ದಶಮಾನೋತ್ಸವ ಕಾರ್ಯಕ್ರಮದಲ್ಲಿ, ವಿಶೇಷ ಮಕ್ಕಳ ಕಲೆಗಾರಿಕೆಯಿಂದ ರೂಪುಗೊಂಡ ಜನನಾಯಕ ಪದ್ಮರಾಜ್ ಆರ್. ಪೂಜಾರಿಯವರ ಭಾವಚಿತ್ರ ವನ್ನು ಶಾಲೆಯ


Read More »