TOP STORIES:

FOLLOW US

ಕಿನ್ನಿಗೋಳಿ: ಬುಡಸಹಿತ ಧರೆಗುರುಳಿದ ಅವಳಿ ವೀರರನ್ನು ತೊಟ್ಟಿಲು ಕಟ್ಟಿ ತೂಗಿದ್ದ ತಾಕೊಡೆ ಮರ ಇನ್ನು ನೆನಪು ಮಾತ್ರ


ಕಾಂತಬಾರೆ – ಬೂದಬಾರೆ ಆಡಿ ಬೆಳೆದುದಕ್ಕೆ ಸಾಕ್ಷಿಯಾಗಿದ್ದ ಮರ ಇನ್ನು ನೆನಪು ಮಾತ್ರ

ಮೂಲ್ಕಿ ತಾಲೂಕು ಕೊಲ್ಲೂರಿನ ಶ್ರೀ ಕಾಂತಬಾರೆ- ಬೂದ ಬಾರೆ ಜನ್ಮಕ್ಷೇತ್ರ

ಕಾಂತಬಾರೆ – ಬೂದಬಾರೆ ಆಡಿ ಬೆಳೆದುದಕ್ಕೆ ಸಾಕ್ಷಿಯಾಗಿದ್ದ ಮರ ಇನ್ನು ನೆನಪು ಮಾತ್ರ

ಮೂಲ್ಕಿ ತಾಲೂಕು ಕೊಲ್ಲೂರಿನ ಶ್ರೀ ಕಾಂತಬಾರೆ- ಬೂದ ಬಾರೆ ಜನ್ಮಕ್ಷೇತ್ರ

ಕಿನ್ನಿಗೋಳಿ: ಸಹಸ್ರಮಾನದ ಇತಿಹಾಸದ, ಲಕ್ಷಾಂತರ ಮಂದಿ ನಂಬುವ ಧಾರ್ಮಿಕ ಕ್ಷೇತ್ರದ ಪವಿತ್ರ ಮರ ಬುಡಸಹಿತ ಧರೆಗುರುಳಿದ್ದು ಭಕ್ತ ಮನಸ್ಸಿನ ನೋವುಂಟು ಮಾಡಿದೆ. ಜೀವಂತ ಸಾಕ್ಷಿಯಾಗಿ ಬೃಹತ್ತಾಗಿ ಬೆಳೆದು ನಿಂತಿದ್ದ ಮೂಲ್ಕಿ ತಾಲೂಕು ಕೊಲ್ಲೂರಿನ ಶ್ರೀ ಕಾಂತಬಾರೆ- ಬೂದ ಬಾರೆ ಜನ್ಮಕ್ಷೇತ್ರದ ತಾಕೊಡೆ ಮರ ಶುಕ್ರವಾರ ಬುಡಸಹಿತ ಧರೆಗುರುಳುವುದರೊಂದಿಗೆ ಇತಿಹಾಸದ ಜೀವಂತ ಸಾಕ್ಷಿಯೊಂದು ಅಂತ್ಯ ಕಂಡ0ತಾಗಿದೆ. ಸುಮಾರು 800ರಿಂದ 1,000 ವರ್ಷಗಳ ಹಿನ್ನೆಲೆ ಈ ತಾಕೊಡೆ ಮರಕ್ಕೆ ಇತ್ತು ಅನ್ನುವುದು ಅಧ್ಯಯನಗಳಿಂದಲೂ ದೃಢಪಟ್ಟಿತ್ತು.

ಮೂಲ್ಕಿ ಸಾವಂತ ಅರಸರ ದಳವಾಯಿಗಳಾಗಿ ಕಾಂತಬಾರೆ- ಬೂದಬಾರೆಯರು ಇದ್ದರು ಅನ್ನುವುದು ಐತಿಹಾಸಿಕ ಸಾಕ್ಷಿಯಾದರೆ ಈ ಅವಳಿ ವೀರರು ಹುಟ್ಟಿದ್ದು ಇದೇ ತಾಕೊಡೆ ಮರದಡಿಯಲ್ಲಿ. ಮತ್ತು ಆಗ ತಾನೆ ಹುಟ್ಟಿದ ಅವಳಿ ಮಕ್ಕಳನ್ನು ನೇಲೆ (ಬಟ್ಟೆಯ ತೊಟ್ಟಿಲು)ಯಲ್ಲಿ ಹಾಕಿ ತೂಗಿದ್ದು ಇದೇ ತಾಕೊಡೆ ಮರದ ಪಡ್ಡಾಯಿ (ಪಡುವಣ-ಪಶ್ಚಿಮ) ಗೆಲ್ಲಿಗೆ ಎನ್ನುತ್ತದೆ ಇತಿಹಾಸ. ಈಗ ಕಾಂತಬಾರೆ- ಬೂದಬಾರೆಯರು ಆಡಿ ಬೆಳೆದುದಕ್ಕೆ ಸಾಕ್ಷಿಯಾಗಿದ್ದ ಮರವೇ ಬುಡ ಸಮೇತ ಉರುಳಿದೆ. ಕ್ಷೇತ್ರಕ್ಕೆ ಬರುವ ಲಕ್ಷಾಂತರ ಮಂದಿಯನ್ನು ಭಕ್ತಿ ಪರವಶರನ್ನಾಗಿ ಮಾಡಿದ್ದ ಮರ ಇನ್ನು ನೆನಪು ಮಾತ್ರವಾಗಿದೆ. ಈ ವಿದ್ಯಾಮಾನ ಭಕ್ತಗಣಕ್ಕೆ ಬೇಸರ ತರಿಸಿರುವುದು ದುರದೃಷ್ಟಕರ. 


Share:

More Posts

Category

Send Us A Message

Related Posts

ಬಹರೈನ್ ನಲ್ಲಿ ನಡೆದ ಅನಿವಾಸಿ ಭಾರತೀಯ ಸಮಿತಿ ಕರ್ನಾಟಕ ಬಹರೈನ್ ಇದರ ನೂತನ ಅಧ್ಯಕ್ಷರಾಗಿ ರಾಜ್ ಕುಮಾರ್ ಆಯ್ಕೆ


Share       ಮುಂಬಯಿ, (ಆರ್‌ಬಿಐ) ಜ.೧೧ : ಅನಿವಾಸಿ ಭಾರತೀಯ ಸಮಿತಿ ಕರ್ನಾಟಕ ಬಹರೈನ್ ಇದರ ನೂತನ ಸಮಿತಿಯ ಪದಗ್ರಹನ ಹಾಗೂ ಕರ್ನಾಟಕ ಸಂಗಮ ಸಾಂಸ್ಕೃತಿಕ ಕಾರ್ಯಕ್ರಮ ಬಹರೈನ್ ನ ದಿ ಇಂಡಿಯಾನ್ ಕ್ಲಬ್ ಸಭಾಂಗಣದಲ್ಲಿ


Read More »

ಯುವವಾಹಿನಿ(ರಿ) ಕೂಳೂರು ಘಟಕ ಪದಗ್ರಹಣ ಸಮಾರಂಭದಲ್ಲಿ ಗೆಜ್ಜೆಗಿರಿ ಜಾತ್ರಾ ಮಹೋತ್ಸವದ ಆಮಂತ್ರಣ ಬಿಡುಗಡೆ


Share       ಯುವವಾಹಿನಿ(ರಿ) ಕೂಳೂರು ಘಟಕ ಪದಗ್ರಹಣ ಸಮಾರಂಭದಲ್ಲಿ ಗೆಜ್ಜೆಗಿರಿ ಜಾತ್ರಾ ಮಹೋತ್ಸವದ  ಆಮಂತ್ರಣ ಬಿಡುಗಡೆ ಗೆಜ್ಜೆಗಿರಿಯ ಜಾತ್ರಾ ಮಹೋತ್ಸವದ ಆಮಂತ್ರಣ ಪತ್ರಿಕೆ ಯುವವಾಹಿನಿ ಪದಗ್ರಹಣ ಕಾರ್ಯಕ್ರಮದಲ್ಲಿ ಯುವ ವಾಹಿನಿ ಕೇಂದ್ರ ಸಮಿತಿ ಅಧ್ಯಕ್ಷರಾದ ಲೋಕೇಶ್


Read More »

26ರಂದು ದೆಹಲಿಯಲ್ಲಿ ನಡೆಯುವ ಗಣರಾಜ್ಯೋತ್ಸವಕ್ಕೆ ಪಾಲ್ಗೊಳ್ಳಲು ಕೇಂದ್ರ ಸರಕಾರದಿಂದ ಕೇಶವ ಕೋಟ್ಯಾನ್ ಅವರಿಗೆ ಆಹ್ವಾನ


Share       ಎಲ್ಲರ ಸಹಕಾರದಿಂದ ಸಾಧ್ಯವಾದ ಸಾಧನೆ. 80ನೇ ಬಡಗಬೆಟ್ಟು ವ್ಯಾಪ್ತಿಯಲ್ಲಿ ಮನೆ ಮನೆಗೆ ಕುಡಿಯುವ ನೀರು ಪೊರೈಸುವ ಕೇಂದ್ರ ಸರಕಾರದ ಮಹತ್ವಕಾಂಕ್ಷಿ ಯೋಜನೆಯನ್ನು ಸಮರ್ಥವಾಗಿ ಅನುಷ್ಠಾನ ಮಾಡುವಲ್ಲಿ ಉಡುಪಿ ಜಿಲ್ಲಾ ಪಂಚಾಯತಿ ಅಧಿಕಾರಿಗಳು, ನಮ್ಮಗ್ರಾಮ


Read More »

ಭರತನಾಟ್ಯದಲ್ಲಿ ವಿಧುಷಿ ಎಂಬ ಗೌರವ ಪಡೆದ ವಿಧುಷಿ ಅದಿತಿ ಪೂಜಾರಿ ಅವರಿಗೆ ಅಭಿನಂದನೆಗಳು


Share       ವಿಧುಷಿ ಅದಿತಿ ಪೂಜಾರಿ ಅವರಿಗೆ ಅಭಿನಂದನೆಗಳು  ನಿತ್ಯಾನಂದ ಮತ್ತು ತುಳಸಿಯವರ ಪುತ್ರಿ ಗುರು ವಿಧುಷಿ ಪ್ರತಿಮಾ ಶ್ರೀಧರ್ ಮತ್ತು ಶ್ರೀಧರ ಹೊಳ್ಳ ಅವರ ಮಾರ್ಗದರ್ಶನದಲ್ಲಿ ಭರತಾಂಜಲಿ (ಆರ್) ಕೊಟ್ಟಾರದಲ್ಲಿ ಕಲಿಕೆ ಅದಿತಿ ಅವರು


Read More »

ಅನಿತಾ ಪಿ.ತಾಕೊಡೆಯವರ ಸುವರ್ಣಯುಗ ಕೃತಿಗೆ ಡಾ. ವಿಶ್ವನಾಥ ಕಾರ್ನಾಡ್ ಪ್ರತಿಷ್ಠಾನ ಮುಂಬಯಿ ವತಿಯಿಂದ “ವಿಕಾಸ ಪುಸ್ತಕ ಬಹುಮಾನ”


Share       ಮುಂಬಯಿ:- ಹಿರಿಯ ಸಾಹಿತಿ, ಲೇಖಕ, ಪ್ರಾಧ್ಯಾಪಕ ಡಾ.ವಿಶ್ವನಾಥ ಕಾರ್ನಾಡ್ ಪ್ರತಿಷ್ಠಾನವು ಮುಂಬಯಿ ಕನ್ನಡ ಪುಸ್ತಕ ಸಂಸ್ಕೃತಿಯನ್ನು ಪ್ರೋತ್ಸಾಹಿಸುವ ದೃಷ್ಟಿಯಿಂದ ಕೊಡಮಾಡುತ್ತಾ ಬಂದ ಪುಸ್ತಕ ಬಹುಮಾನ ಯೋಜನೆಯಂತೆ 2023-24ರ ಸಾಲಿನ ವಿಕಾಸ’ ಪುಸ್ತಕ ಬಹುಮಾನಕ್ಕೆ,


Read More »

ಒಮಾನ್ ಬಿಲ್ಲವಾಸ್ ಕೂಟದ ನೂತನ ಅಧ್ಯಕ್ಷರಾಗಿ ಶ್ರೀಯುತ ಉಮೇಶ್ ಬಂಟ್ವಾಳ್ ಆಯ್ಕೆ


Share       ಬಂಟ್ವಾಳದವರಾಗಿರುವ ಉಮೇಶ್ ಬಂಟ್ವಾಳ್ ಅವರು ಮಂಗಳೂರು ವಿಶ್ವವಿದ್ಯಾಲಯ ವಾಣಿಜ್ಯ ಪದವಿಯನ್ನು ಪಡೆದಿದ್ದಾರೆ.   ಮಸ್ಕತ್ ನ ಒಮಾನ್ ದೇಶದಲ್ಲಿ ಸುಮಾರು 36 ವರ್ಷದಿಂದ ಅಲ್ ರ‌‌ವಾಸ್ ಹೋಲ್ಡಿಂಗ್ ಬಿಸಿನೆಸ್ ಕಂಪನಿಯಲ್ಲಿ ಮ್ಯಾನೇಜರ್ ಆಗಿ


Read More »