TOP STORIES:

ಬಿಲ್ಲವ ಸಮಾಜದ ಭರವಸೆಯ ಸೂರ್ಯ ಜನ್ಮದಿನದ ಸಲುವಾಗಿ ನುಡಿ ಬರಹ


ಎರಡು ವರ್ಷಗಳ ಹಿಂದೆ ಜಯ ಸುವರ್ಣರ ಕುರಿತು ಮಾಹಿತಿಯನ್ನು ಸಂಗ್ರಹಿಸುವ ಸಲುವಾಗಿ ಅವರ ಮಗ ಸೂರ್ಯಕಾಂತ್ ಸುವರ್ಣರನ್ನು ಸಂದರ್ಶನ ಮಾಡಲು ಗೊರೆಗಾವ್‍ನಲ್ಲಿರುವ ಜಯ ಸುವರ್ಣರ ಕಚೇರಿಗೆ ಮೊದಲ ಬಾರಿ ಭೇಟಿ ನೀಡಿದ್ದೆ. ಜಯ ಸುವರ್ಣರನ್ನೇ ಹೋಲುತ್ತಿದ್ದ ಸೂರ್ಯಕಾಂತ್ ಮಿತಭಾಷಿಯೆಂದು ತಿಳಿದಾಗ ನಾನು ಕೇಳುವ ಪ್ರಶ್ನೆಗಳಿಗೆ ಸರಿಯಾದ ಉತ್ತರ ಸಿಗುತ್ತೋ ಇಲ್ಲವೋ ಎನ್ನುವ ಸಂದೇಹ ಮೂಡಿತ್ತು. ಗಂಭೀರವಾದ ಮುಖದಲ್ಲಿ ಸ್ಥಾಯಿಯಾಗಿರುವ  ಶಾಂತಭಾವ ಮತ್ತು ಪರಿಶುದ್ಧವಾದ ಮನಸ್ಸನ್ನು ಸಾಕ್ಷೀಕರಿಸುವ ಮೃದು ಮಂದಹಾಸದಿಂದಲೇ ಅಂದು ನನ್ನನ್ನು ಸ್ವಾಗತಿಸಿದರು. ನಾನು ಕೇಳಿದ ಎಲ್ಲಾ ಪ್ರಶ್ನೆಗಳಿಗೂ ಅವರು ನೀಡಿದ ಸ್ಫೂಟವಾದ ಉತ್ತರಗಳಿಂದಲೇ  ಅವರ ವ್ಯಕ್ತಿತ್ವದ ಅರಿವು ನನಗಾಗಿತ್ತು.

ಸಮಾಜ ಸೇವೆಯ ಕುರಿತು ಸೂರ್ಯಕಾಂತ್ ಅವರಲ್ಲಿ ಪ್ರಶ್ನಿಸಿದಾಗ, *“ನನ್ನ ಅಪ್ಪನ ಸಾಮಾಜಿಕ ಕಾರ್ಯಗಳನ್ನು ಬಹಳ ಹತ್ತಿರದಿಂದ ಕಂಡವನಿದ್ದೇನೆ. ಸಮಾಜ ಸೇವೆ ಮಾಡುವುದೆಂದರೆ ಅದೊಂದು ತಪಸ್ಸು. ಸಾಮಾಜಿಕ ವಿಷಯದಲ್ಲಿ ನಾನಿನ್ನೂ ಬಹಳಷ್ಟು ತಿಳಿಯಬೇಕಾಗಿದೆ. ಸಮಾಜದ ಜೊತೆಗೆ ಒಡನಾಟದಲ್ಲಿಟ್ಟುಕೊಂಡೇ ಜನಸೇವೆಯ ಅನುಭವವನ್ನು ಪಡೆಯಬೇಕು. ಅಪ್ಪ ಮಾಡಿದ ಸಮಾಜ ಸೇವೆಯ ಒಂದಿಷ್ಟಾದರೂ ಮಾಡಲು ಸಾಧ್ಯವಾದರೆ ನನ್ನ ಜೀವನ ಸಾರ್ಥಕ”* ಎಂದು ಪ್ರಬುದ್ಧತೆಯ ನುಡಿಗಳನ್ನಾಡಿದ್ದರು. ವ್ಯಕ್ತಿ ಹಣದಲ್ಲಿ ಶ್ರೀಮಂತನಾಗುವುದಕ್ಕಿಂತ ಗುಣದಲ್ಲಿ ಶ್ರೇಷ್ಠನಾಗಿರಬೇಕು. ಅಹಂಕಾರವನ್ನು ತೊರೆದು ಎಲ್ಲರ ಜೊತೆ ಬೆರೆಯುವ ಮನೋವೈಶಾಲ್ಯತೆಯಿರಬೇಕು. ಇಂಥ ಮೇರು ಮಟ್ಟದ ವ್ಯಕ್ತಿತ್ವ ಸೂರ್ಯಕಾಂತ್ ಅವರದ್ದು. ಸುಮಾರು ಹತ್ತು ವರ್ಷಗಳ ಕಾಲ ಭಾರತ್ ಬ್ಯಾಂಕಿನಲ್ಲಿ ನಿರ್ದೇಶಕರಾಗಿ ಸೇವೆ ಸಲ್ಲಿಸಿದ ಇವರು ಇದೀಗ ಕಾರ್ಯಾಧ್ಯಕ್ಷರಾಗಿ ಬಹುದೊಡ್ಡ ಜವಾಬ್ದಾರಿಯನ್ನು ಹೆಗಲಿಗೇರಿಸಿಕೊಂಡಿದ್ದಾರೆ.  ಇವರು ಕಾರ್ಯಾಧ್ಯಕ್ಷರಾದ ಮೇಲೆ  ಭಾರತ್ ಬ್ಯಾಂಕ್ ನಾಲ್ಕು ಪ್ರಶಸ್ತಿಗಳನ್ನು ಮುಡಿಗೇರಿಸಿಕೊಂಡಿದೆ. 2011ರಿಂದ 2019ರವರೆಗೆ ಬಿಲ್ಲವರ ಎಸೋಸಿಯೇಶನ್ ಮುಂಬಯಿ ಇದರ ಯುವ ಅಭ್ಯುದಯ ಸಮಿತಿಯಲ್ಲಿ ಕಾರ್ಯ ನಿರ್ವಹಿಸಿದ ಅನುಭವವುಳ್ಳ ಇವರು ರಾಷ್ಟ್ರೀಯ ಬಿಲ್ಲವ ಮಹಾಮಂಡಲದ ಉಪಾಧ್ಯಕ್ಷರೂ ಆಗಿದ್ದಾರೆ. ಜೊತೆಗೆ ಹಲವಾರು ಧಾರ್ಮಿಕ ಸಂಸ್ಥೆಗಳ ಸಮಿತಿಯಲ್ಲಿದ್ದು ತಮ್ಮ ಕರ್ತವ್ಯವನ್ನು ನಿಭಾಯಿಸುತ್ತಿದ್ದಾರೆ. ಜಯ ಸುವರ್ಣರಲ್ಲಿದ್ದ ನಾಯಕತ್ವದ ಗುಣ ಸೂರ್ಯಕಾಂತ್ ಅವರೊಳಗೂ ಪಡಿಮೂಡಿದೆಯೆಂದು ಅವರ ಕಾರ್ಯಚಟುವಟಿಕೆಗಳಿಂದ ತಿಳಿದುಬರುತ್ತದೆ.

ಜಯ ಸುವರ್ಣರ ನಂತರ ಸಮಾಜಸೇವೆ ಮಾಡುವ ದೀಕ್ಷೆಯನ್ನು ಸೂರ್ಯಕಾಂತ್ ಕೈಗೊಂಡರು. ಕೆಲವೊಂದು ಸಂದರ್ಭದಲ್ಲಿ ಇಲ್ಲ ಸಲ್ಲದ ಅಪವಾದಗಳು ಅವರನ್ನು ಮುತ್ತಿಕೊಂಡವು. ಆದರೆ ಅದ್ಯಾವುದಕ್ಕೂ ಅವರು ವಿಚಲಿತರಾಗಲಿಲ್ಲ. “ಯಾರೇನೇ ಹೇಳಲಿ, ಏನೇ ಮಾಡಲಿ. ನಾರಾಯಣ ಗುರುಗಳು ಎಲ್ಲವನ್ನೂ ಗಮನಿಸುತ್ತಾರೆ. ಅವರೇ ನಮ್ಮನ್ನು ರಕ್ಷಿಸುತ್ತಾರೆ. ಅವರಿಚ್ಛೆಯಂತೆಯೇ ಎಲ್ಲವೂ ನಡೆಯುತ್ತದೆ.”ಎನ್ನುತ್ತ ತಮಗೆ ಬಂದ ಅಪವಾದಗಳಿಗೆ ಮರುಗದೆ ಸಹನೆಯಿಂದ ಹಿತೈಷಿಗಳಿಗೆ ಸಾಂತ್ವನ ನೀಡುವ  ಅವರು ಬಲು ಎತ್ತರದ ಸ್ಥಾನದಲ್ಲಿ ಕಂಡುಬರುತ್ತಾರೆ. “ನಮ್ಮ ನಡೆ ಸತ್ಯದ ಹಾದಿಯಲ್ಲಿರಬೇಕು. ಆ ಹಾದಿಯಲ್ಲಿ ನಡೆಯುವುದು ಸ್ವಲ್ಪ ಕಷ್ಟವೇ. ಆದರೆ ಗೆಲ್ಲುವುದು ಸತ್ಯವೇ.”ಎನ್ನುವ ಧ್ಯೇಯ ವಾಕ್ಯವನ್ನು ಅಕ್ಷರಶಃ ಪಾಲಿಸಿಕೊಂಡು ಮುನ್ನಡೆಯುತ್ತಿರುವ ಸೂರ್ಯಕಾಂತ್ ಬಿಲ್ಲವ ಸಮಾಜದ ಶ್ರೇಷ್ಠ ನಾಯಕನಾಗಿ ಬೆಳೆಯಬಲ್ಲರು ಎನ್ನುವ ಭರವಸೆ ಗಟ್ಟಿಯಾಗುತ್ತದೆ.

‘ಸೂರ್ಯಕಾಂತ್ ತುಂಬಾ ಕಡಿಮೆ ಮಾತನಾಡ್ತಾರೆ. ನಮ್ಮ ಮಾತಿಗೆ ಪ್ರತಿಕ್ರಿಯಿಸುವುದೇ ಇಲ್ಲ’ ಎಂದು ಕೆಲವರ ಆರೋಪವಿದೆ. ಹೌದು ಸೂರ್ಯಕಾಂತ್ ಯಾರನ್ನೂ ಮಾತಿನಲ್ಲಿ ರಮಿಸುವುದಿಲ್ಲ. ಅವರ ಮಾತೆಂದರೆ ಪುಟಕ್ಕಿಟ್ಟ ಚಿನ್ನದಂತೆ. ಆಡುವ ಮಾತು ಹೇಗಿರಬೇಕು ಎಂಬುದನ್ನು ಸರಿಯಾಗಿ ಅರಿತವರು. ನಮ್ಮ ಮಾತು ಅನ್ಯರ ನೋವಾಗದೆ, ಸೋತವರನ್ನು ಅರಳಿಸುವ ಹೂವಾಗಬೇಕು ಎಂಬ ನಿಲುವನ್ನು ಹೊಂದಿರುವ ಇವರು ತಮ್ಮ ಬಳಿ ಬಂದವರೆಲ್ಲರ ಮಾತನ್ನು ತಾಳ್ಮೆಯಿಂದ ಆಲಿಸುತ್ತಾರೆ. “ಮುಂದೆ ಪಶ್ಚಾತಾಪ ಪಡುವಂತಹ ಯಾವುದೇ ತಪ್ಪುಗಳು ನಮ್ಮಿಂದ ಆಗಬಾರದು”ಎನ್ನುವ ಇವರು ಯುವ ಜನಾಂಗಕ್ಕೆ ಮಾದರಿಯಾಗಿದ್ದಾರೆ.

ಸೂರ್ಯಕಾಂತ್ ಅವರೇ ನೀವು ಇನ್ನಷ್ಟು ಸಮಾಜದ ಏಳಿಗೆಗಾಗಿ ಶ್ರಮಿಸುತ್ತ ಜನ ಮೆಚ್ಚುವ ನಾಯಕನಾಗಿ ಬೆಳೆಯಿರಿ. ನೂರು ಕಾಲ ಸುಖವಾಗಿ ಬಾಳಿರಿ’ ಎಂಬ ಮನಪೂರ್ವಕ ಹಾರೈಕೆಗಳೊಂದಿಗೆ ನಿಮಗೆ ಜನ್ಮದಿನದ ಪ್ರೀತಿಯ ಶುಭಾಶಯಗಳು.

✍🏻 ಅನಿತಾ ಪೂಜಾರಿ ತಾಕೊಡೆ


Related Posts

ಸ್ವಾಮಿಗಳ ಚಿತ್ರ ಮತ್ತು ಪ್ರತಿಮೆಯ ಮುಂದೆ ರಾಜ್ಯಪಾಲರೊಂದಿಗೆ ಇರುವ ಚಿತ್ರ


Share         ಶಿವಗಿರಿ: ರಾಜ್ಯಪಾಲ ಆರ್.ವಿ. ಅರ್ಲೆಕ್ಕರ್ ಅವರು ರಾಜಭವನದ ಅತಿಥಿ ಕೊಠಡಿಯಲ್ಲಿ ಶ್ರೀ ನಾರಾಯಣ ಗುರುಗಳ ಚಿತ್ರ ಮತ್ತು ಕಂಚಿನ ಪ್ರತಿಮೆಯನ್ನು ಸ್ವಾಮಿಗಳಿಗೆ ತೋರಿಸಿದರು. ಅತಿಥಿ ಕೊಠಡಿಯನ್ನು ಪ್ರವೇಶಿಸುವಾಗ ಮೊದಲು ನೋಡುವುದು ಗುರುಗಳ ಚಿತ್ರ.


Read More »

ಕವಿ ಗವಿಸಿದ್ದ ಎನ್. ಬಳ್ಳಾರಿ ಸಾಹಿತ್ಯೋತ್ಸವದಲ್ಲಿ ಅನಿತಾ ಪಿ. ತಾಕೊಡೆಯವರ “ಮೇಣಕ್ಕಂಟಿದ ಬತ್ತಿ” ಕವನ ಸಂಕಲನ ಬಿಡುಗಡೆ


Share         ಅ.26: ಕವಿ ಗವಿಸಿದ್ಧ ಎನ್. ಬಳ್ಳಾರಿ ಸಾಹಿತ್ಯೋತ್ಸವದಲ್ಲಿ ಅನಿತಾ ಪಿ. ತಾಕೊಡೆಯವರ ‘ಮೇಣಕ್ಕಂಟಿದ ಬತ್ತಿ’ಕವನ ಸಂಕಲನ ಬಿಡುಗಡೆ, ಪ್ರಶಸ್ತಿ ಪ್ರದಾನ,ಸಾಹಿತ್ಯ ಚರ್ಚೆ ಮುಂಬಯಿ, ಅ.23-  ಖ್ಯಾತ ಬಂಡಾಯ ಕವಿ ಗವಿಸಿದ್ದ ಎನ್. ಬಳ್ಳಾರಿ


Read More »

ಮಂಗಳೂರು: ಅಳದಂಗಡಿಯ ಶ್ರೀಮತಿ ಅನುಷಾ ಪ್ರಸಾದ್ ಪೂಜಾರಿ ಅವರಿಗೆ ಗಣಿತಶಾಸ್ತ್ರ ವಿಷಯದಲ್ಲಿ ಪಿ.ಎಚ್.ಡಿ ಪದವಿ


Share         ಮಣಿಪಾಲ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ, ಮಣಿಪಾಲ (Manipal Institute of Technology, Manipal) ನ ಗಣಿತಶಾಸ್ತ್ರ ವಿಭಾಗದ ಸಂಶೋಧನಾ ವಿದ್ಯಾರ್ಥಿನಿ ಶ್ರೀಮತಿ ಅನುಷಾ ಎಲ್ ಅವರು ಮಂಡಿಸಿದ “A study on N-Covering


Read More »

ಬ್ರಿಟನ್ ಬಿಲ್ಲವ ಬಳಗ ಯುಕೆ ದೇಶದಲ್ಲಿ ಉತ್ಸಾಹದಿಂದ ಉದ್ಘಾಟನಾ ಸಮಾರಂಭವನ್ನು ಆಯೋಜಿಸಿದೆ.


Share         ಬ್ರಿಟನ್ ಬಿಲ್ಲವ ಬಳಗ ಯುಕೆಯ ಉದ್ಘಾಟನಾ ಸಮಾರಂಭವು ಸೆಪ್ಟೆಂಬರ್ 13 ರ ಶನಿವಾರದಂದು ಕೋವೆಂಟ್ರಿ ಹಾಲಿಡೇ ಇನ್ ಎಕ್ಸ್‌ಪ್ರೆಸ್ ಹೋಟೆಲ್‌ನಲ್ಲಿ ಸಂಘದ ಆಯ್ಕೆಯಾದ ಅಧ್ಯಕ್ಷ ಡಾ. ಪಿ.ಕೆ. ಮನೋಜ್ ಪೂಜಾರಿ ಅವರ ನೇತೃತ್ವದಲ್ಲಿ


Read More »

ಬಾರ್ಕೂರು ನಾಗರ ಮಠದ ಕ್ರೀಡಾ ಬಹು ಮುಖ ಪ್ರತಿಭೆಯ ಧನ್ವಿತಪೂಜಾರಿ ಧನ್ವಿತಪೂಜಾರಿ ಅವರಿಗೆ ಮೂರು ಪ್ರಶಸ್ತಿಗಳ ಗರಿ


Share         ಜನತಾ ಪದವಿ ಪೂರ್ವ ಕಾಲೇಜು ಹೆಮ್ಮಾಡಿ ಕಿರಿಮಂಜೇಶ್ವರ ಜನತಾ ನ್ಯೂ ಇಂಗ್ಲಿಷ್ ಮೀಡಿಯಂ ಕಿರಿ, ಮಂಜೇಶ್ವರ ಶಾಲಾ ಶಿಕ್ಷಣ ಇಲಾಖೆ ಪದವಿ ಪೂರ್ವ ಉಡುಪಿ ಜಿಲ್ಲೆ ಇವರ ಆಶ್ರಯದಲ್ಲಿ  ದಿನಾಂಕ 30-08-2025 ರಂದು


Read More »

ಸತತ 216 ಗಂಟೆಗಳ ಭರತನಾಟ್ಯ ಮಾಡುವುದರ ಮೂಲಕ ಗೋಲ್ಡನ್ ಬುಕ್ ವಲ್ಡ್ ರೆಕಾರ್ಡ್ ನಲ್ಲಿ ತನ್ನ ಹೆಸರನ್ನು ಬರೆಸಿಕೊಂಡ ನವರಸಧಾರ ದೀಕ್ಷಾ. ವಿ


Share         ದೀಕ್ಷಾ ವಿ. ಅವರ ಜೀವನವು ಕಲೆಯ ತಪಸ್ಸಿನ ಜೀವಂತ ಪ್ರತೀಕವಾಗಿದೆ. ತಂದೆ ಶ್ರೀ ವಿಠಲ್ ಪೂಜಾರಿ ಮತ್ತು ತಾಯಿ ಶುಭಾ ವಿಠಲ್ ಅವರ ಮಗಳಾದ ಅವರು, ಬಾಲ್ಯದಿಂದಲೇ ಕಲೆಯ ಕಡೆ ಮನಸ್ಸು ತಿರುಗಿಸಿಕೊಂಡಿದ್ದರು.


Read More »