TOP STORIES:

ಚಿರನಿದ್ರೆಗೆ ಜಾರಿದ ಮಾಜಿ ಶಾಸಕ ಕೆ. ವಸಂತ ಬಂಗೇರ ಮೇ9 ರಂದು (ನಾಳೆ) ಬೆಳಿಗ್ಗೆ ಹಳೆಕೋಟೆ ನಿವಾಸದಲ್ಲಿ ಸಾರ್ವಜನಿಕ ಅಂತಿಮ ದರ್ಶನ


ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿನಲ್ಲಿ ಐದು ಬಾರಿ ಶಾಸಕರಾಗಿ ತಾಲೂಕಿನ ಅಭಿವೃದ್ಧಿಗೆ ತನ್ನದೇ ಆದ ವಿಶೇಷ ಕೊಡುಗೆಯನ್ನು ನೀಡಿದ್ದ ನೇರ ನಡೆನುಡಿಯ, ದಿಟ್ಟ ಹೋರಾಟಗಾರ, ಭ್ರಷ್ಟಾಚಾರಿಗಳಿಗೆ ದುಃಸ್ವಪ್ನರಾಗಿದ್ದ ಮಾಜಿ ಶಾಸಕ ಕೆ. ವಸಂತ ಬಂಗೇರ ಅವರು ಇಂದು ಸಂಜೆ ಚಿರನಿದ್ರೆಗೆ ಜಾರಿದ್ದು, ಅವರ ಪ್ರಾರ್ಥಿವ ಶರೀರದ ಸಾರ್ವಜನಿಕ ಅಂತಿಮ ದರ್ಶನ ನಾಳೆ ಮೇ 9ರಂದು ಬೆಳಿಗ್ಗೆ ಹಳೆಕೋಟೆಯ ಅವರ ಮನೆಯಲ್ಲಿ ನಡೆಯಲಿದೆ.

ಬೆಳ್ತಂಗಡಿ ಕ್ಷೇತ್ರದ ಶಾಸಕರಾಗಿ ಐದು ಅವಧಿಗೆ ಸೇವೆ ಸಲ್ಲಿಸಿ, ತಾಲೂಕಿನ ಅಭಿವೃದ್ಧಿಗೆ ವಿಶೇಷ ಕೊಡುಗೆಯನ್ನು ಬಂಗೇರರು ನೀಡಿದ್ದರು, ಬಿಜೆಪಿ, ಜೆಡಿಎಸ್‌, ಕಾಂಗ್ರೆಸ್‌ ಮೂರು ಪಕ್ಷಗಳಿಂದ ಸ್ಪರ್ಧಿಸಿ ಚುನಾಯಿತರಾದ ಏಕೈಕ ಶಾಸಕ ಬಂಗೇರರು, ರಾಜಕೀಯ, ಧಾರ್ಮಿಕ, ಸಾಮಾಜಿಕ ಹಾಗೂ ಸಹಕಾರಿ ಕ್ಷೇತ್ರದಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದ ಬಂಗೇರರು, ಶ್ರೀ ಗುರುದೇವ ಪದವಿ ಪೂರ್ವ ಹಾಗೂ ಪದಪಿ ಕಾಲೇಜನ್ನು ಸ್ಥಾಪಿಸಿ ಸಾವಿರಾರು ವಿದ್ಯಾರ್ಥಿಗಳ ಬಾಳಿಗೆ ಬೆಳಕಾದವರು. ಆನೇಕ ಮಂದಿ ಬಡ ಕುಟುಂಬದ ವಿದ್ಯಾರ್ಥಿಗಳಿಗೆ ಉಚಿತವಾಗಿ ಶಿಕ್ಷಣ ನೀಡಿದ ಕೀರ್ತಿ ಬಂಗೇರರಿಗೆ ಸಲ್ಲುತ್ತದೆ. ಕಳೆದ ನಾಲೈದು ತಿಂಗಳ ಹಿಂದೆ ಅಸೌಖ್ಯಕ್ಕೆ ಒಳಗಾಗಿ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಬಂಗೇರರು ಇಂದು ಸಂಜೆ ಆಸ್ಪತ್ರೆಯಲ್ಲಿ ನಿಧನರಾದರೆಂದು ವರದಿಯಾಗಿದೆ. ಬಂಗೇರರ ಪಾರ್ಥಿವ ಶರೀರವನ್ನು ಇಂದು ರಾತ್ರಿ 3 ಗಂಟೆಗೆ ಬೆಳ್ತಂಗಡಿಯ ಹಳೆಕೋಟೆಯ ಮನೆಗೆ ತರುವ ಸಾಧ್ಯತೆಗಳಿದ್ದು, ನಾಳೆ ಬೆಳಿಗ್ಗೆ ಸಾರ್ವಜನಿಕ ಅಂತಿಮ ದರ್ಶನಕ್ಕೆ ಅವಕಾಶ ನೀಡಲಾಗುವುದು ಎಂದು ಕುಟುಂಬದ ಮೂಲಗಳಿಂದ ತಿಳಿದು ಬಂದಿದೆ.


Related Posts

ರಾಜ್ಯದಲ್ಲಿ ರಚನೆಯಾಗಲಿರುವ ನೂತನ ಸಚಿವ ಸಂಪುಟ ಸಚಿವ ಸಂಪುಟದಲ್ಲಿ ಬಿಲ್ಲವ ಸಮಾಜಕ್ಕೆ ಸೂಕ್ತ ಪ್ರಾತಿನಿಧ್ಯ ನೀಡಬೇಕು


Share         ಹಿರಿಯ ಕಾಂಗ್ರೆಸ್ ನಾಯಕ ಬಿ.ಕೆ. ಹರಿಪ್ರಸಾದ್ ಅವರಿಗೆ ಸಚಿವ ಸ್ಥಾನ ನೀಡಬೇಕು ಬಿಲ್ಲವ ಸಮಾಜಕ್ಕೆ ನ್ಯಾಯಯುತ ಪ್ರಾತಿನಿಧ್ಯ ಒದಗಿಸಬೇಕು ಸೋಲೂರು ಮಠದ ಪೀಠಾಧಿಪತಿಗಳಾದ ಶ್ರೀ ಶ್ರೀ ವಿಖ್ಯಾತಾನಂದ ಸ್ವಾಮೀಜಿ ಆಗ್ರಹ ರಾಜ್ಯದಲ್ಲಿ ರಚನೆಯಾಗಲಿರುವ


Read More »

ಕುಂದಾಪುರ ಬಿಲ್ಲವ ಸಮಾಜ ಸೇವಾ ಸಂಘದ ಅಧ್ಯಕ್ಷರಾಗಿ ಅಶೋಕ್ ಪೂಜಾರಿ ಪುನಾರಾಯ್ಕೆ


Share         ಕುಂದಾಪುರ, ಮೇ 24: ಬಿಲ್ಲವ ಸಮಾಜ ಸೇವಾ ಸಂಘ ಕುಂದಾಪುರ ಇದರ 2025-26ನೇ ಸಾಲಿನ ವಾರ್ಷಿಕ ಮಹಾಸಭೆಯು ರವಿವಾರ ಶ್ರೀ ನಾರಾಯಣ ಗುರು ಕಲ್ಯಾಣ ಮಂಟಪದಲ್ಲಿ ಜರಗಿತು. ಕುಂದಾಪುರ ಬಿಲ್ಲವ ಸಮಾಜ ಸೇವಾ


Read More »

ನಿಸ್ವಾರ್ಥ ಸೇವೆ ಸಲ್ಲಿಸಿ “ಜನಸ್ನೇಹಿ ಪೊಲೀಸ್” ಎಂಬ ಹೆಗ್ಗಳಿಕೆಗೆ ಪಾತ್ರರಾಗಿರುವ ನಮ್ಮ ಸಮಾಜದ ಹೆಮ್ಮೆ ಎಸಿಪಿ ಶ್ರೀ ಎಸ್. ಮಹೇಶ್ ಕುಮಾರ್


Share         ಶ್ರೀ ಎಸ್. ಮಹೇಶ್ ಕುಮಾರ್ ಅವರು ಕಳೆದ 25 ವರ್ಷಗಳಿಂದ ಪೊಲೀಸ್ ಇಲಾಖೆಯಲ್ಲಿ ನಿಸ್ವಾರ್ಥ ಸೇವೆ ಸಲ್ಲಿಸಿ “ಜನಸ್ನೇಹಿ ಪೊಲೀಸ್” ಎಂಬ ಹೆಗ್ಗಳಿಕೆಗೆ ಪಾತ್ರರಾಗಿರುವುದು ಅವರ ಕರ್ತವ್ಯನಿಷ್ಠೆ ಮತ್ತು ಮಾನವೀಯತೆಯ ಪ್ರತೀಕವಾಗಿದೆ. 2012ರಲ್ಲಿ


Read More »

10ನೇ ಅಖಿಲ ಭಾರತ ಅರ್ಬನ್ ಕೋ-ಆಪರೇಟಿವ್ ಬ್ಯಾಂಕಿಂಗ್ ಶೃಂಗಸಭೆಯಲ್ಲಿ ಭಾರತ್ ಬ್ಯಾಂಕಿಗೆ ಪ್ರತಿಷ್ಠಿತ ಲೀಡಿಂಗ್ ಬ್ಯಾಂಕ್ ಅವಾರ್ಡ್.


Share         ಪುಣೆಯ ಕೊರೆಗಾಂವ್ ಪಾರ್ಕ್‌ನ ಹೋಟೆಲ್ ವೆಸ್ಟಿನ್‌ನಲ್ಲಿ ನಡೆದ 10ನೇ ಅಖಿಲ ಭಾರತ ಅರ್ಬನ್ ಕೋ-ಆಪರೇಟಿವ್ ಬ್ಯಾಂಕಿಂಗ್ ಶೃಂಗಸಭೆಯಲ್ಲಿ ಭಾರತ್ ಬ್ಯಾಂಕಿಗೆ ಪ್ರತಿಷ್ಠಿತ “ಲೀಡಿಂಗ್ ಬ್ಯಾಂಕ್ ಅವಾರ್ಡ್” (Leading Bank Award) ನೀಡಿ ಗೌರವಿಸಲಾಯಿತು.


Read More »

ಕುದ್ರೋಳಿ ಗೋಕರ್ಣ ಕ್ಷೇತ್ರ ಅಭಿವೃದ್ಧಿ ರೂವಾರಿ ಬಿ. ಜನಾರ್ದನ ಪೂಜಾರಿ ಅವರ ಉಪಸ್ಥಿತಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಪದ್ಮರಾಜ್ ಆರ್. ಸ್ಪಷ್ಟನೆ


Share         ಮಂಗಳೂರು: ಕುದ್ರೋಳಿ ಗೋಕರ್ಣನಾಥ ಕ್ಷೇತ್ರದ ಆಡಳಿತ ನಿರ್ವಹಣೆಗೆ ಪ್ರಸ್ತುತ ಇರುವ ಸಮಿತಿಯ ಹೊರತಾಗಿ ಯಾವುದೇ ಹೊಸ ಸಮಿತಿ ರಚನೆಯಾಗಿಲ್ಲ ಎಂದು ಸಮಿತಿಯ ಕೋಶಾಧಿಕಾರಿ ಪದ್ಮರಾಜ್ ಆರ್. ಶನಿವಾರ ಇಲ್ಲಿ ತಿಳಿಸಿದರು. ಕ್ಷೇತ್ರದ ಅಭಿವೃದ್ಧಿ


Read More »

ಶೈಕ್ಷಣಿಕ ಸಾಧನೆಯಲ್ಲೂ ‘ಸೇಮ್ ಟು ಸೇಮ್’: ಕುಂದಾಪುರದ ಅವಳಿ ಸಹೋದರಿಯರ SSLC ಪವಾಡ!


Share         ​ಕುಂದಾಪುರ: ಅವಳಿ ಜವಳಿ ಮಕ್ಕಳು ಅಂದಮೇಲೆ ಅವರ ರೂಪ, ಬಣ್ಣ, ನಡವಳಿಕೆ ಹಾಗೂ ಆಲೋಚನೆಗಳಲ್ಲಿ ಸಾಮ್ಯತೆ ಇರುವುದು ಸಹಜ ಸಂಗತಿ. ಆದರೆ, ಕುಂದಾಪುರದ ಈ ಇಬ್ಬರು ಸಹೋದರಿಯರು ಶೈಕ್ಷಣಿಕ ಸಾಧನೆಯಲ್ಲೂ ತಾವು ಸಂಪೂರ್ಣವಾಗಿ


Read More »