TOP STORIES:

FOLLOW US

ಹೃದಯ ಹೃದಯಗಳಲ್ಲಿ ಬೆಸೆದ ಹೃದಯ ಶ್ರೀಮಂತ ಜಯ ಸುವರ್ಣರ ಜನ್ಮದಿನದ ನೆನಪಿನ ಸಲುವಾಗಿ ನುಡಿನಮನ


ಹೃದಯ ಹೃದಯಗಳಲ್ಲಿ ಬೆಸೆದ ಹೃದಯ ಶ್ರೀಮಂತ

ಜಯ ಸುವರ್ಣರ ಜನ್ಮದಿನದ ನೆನಪಿನ ಸಲುವಾಗಿ ನುಡಿನಮನ

ಮುಂಬೈ ವಿಶ್ವವಿದ್ಯಾಲಯದಲ್ಲಿ ಪಿ ಎಚ್. ಡಿ ಕೋರ್ಸ್ ವರ್ಕ್ ನ ಸಲುವಾಗಿ ಜಯ ಸುವರ್ಣರ ಕುರಿತು ಶೋಧ ಪ್ರಬಂಧವನ್ನು ರಚಿಸಲು ಡಾ ಜಿ ಎನ್. ಉಪಾಧ್ಯ ಅವರು ಹೇಳುವವರೆಗೆ ಸುವರ್ಣರನ್ನು ತಿಳಿಯುವ ಪ್ರಯತ್ನವನ್ನು ನಾನೆಂದೂ ಮಾಡಿರಲಿಲ್ಲ. ನನ್ನದು ಸಾಹಿತ್ಯ ಪ್ರಪಂಚ. ಅಪರೂಪಕ್ಕೆ ಸಾಹಿತ್ಯ ಕಾರ್ಯಕ್ರಮಗಳೇನಾದರೂ ಇದ್ದಲ್ಲಿ  ಮಾತ್ರ ಬಿಲ್ಲವ ಭವನಕ್ಕೆ ಭೇಟಿ ನೀಡುತ್ತಿದ್ದೆ. ಭವನದಲ್ಲಿ ಯಾವುದೇ ಕಾರ್ಯಕ್ರಮವಿರಲಿ ಜಯ ಸುವರ್ಣರ ಉಪಸ್ಥಿತಿಯಿರುತ್ತಿತ್ತು. ಪ್ರತಿಯೊಬ್ಬರೂ ಅವರಿಗೆ ತೋರುವ ಪ್ರೀತಿ ಗೌರವಗಳು ಮತ್ತು ಮಾಡುವ ಸನ್ಮಾನಗಳನ್ನು ದೂರದಿಂದಲೇ ಕುತೂಹಲದಿಂದ ನೋಡುತ್ತಿದ್ದೆ. ಎಲ್ಲ ಸಮಾಜ ಬಾಂಧವರೊಂದಿಗೆ ಅವರಿಗಿರುವ ಆಪ್ತತೆ ನನ್ನಲ್ಲಿ ಬೆರಗು ಮೂಡಿಸುತ್ತಿತ್ತು.

2013ರಲ್ಲಿ  ಬಿಲ್ಲವ ಭವನದಲ್ಲಿ ಆಟಿಡೊಂಜಿ ಕೂಟ  ಕಾರ್ಯಕ್ರಮಕ್ಕೆ ನನ್ನನ್ನು ಮುಖ್ಯ ಅತಿಥಿಯಾಗಿ  ಅಹ್ವಾನಿಸಿದ್ದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಜಯ ಸುವರ್ಣರು ವಹಿಸಿಕೊಂಡಿದ್ದರು. ಅಂದು 4:30ಕ್ಕೆ ಆರಂಭವಾಗಬೇಕಿದ್ದ ಕಾರ್ಯಕ್ರಮ ಸುವರ್ಣರ ಅನುಪಸ್ಥಿತಿಯಿಂದ ವಿಳಂಭವಾಗಿತ್ತು. ಜಯ ಸುವರ್ಣರು ಬಂದಾಗ ಅಲ್ಲಿ ನೆರೆದವರೆಲ್ಲ  ಕಿಂಚಿತ್ತೂ ಬೇಸರಿಸದೆ ಖುಷಿಯಿಂದ ಬರಮಾಡಿಕೊಂಡ ರೀತಿ … ಎಲ್ಲವನ್ನೂ ಎಲ್ಲರನ್ನೂ  ಕುತೂಹಲದಿಂದ ಗಮನಿಸುತ್ತಿದ್ದೆ. ಜನ ಸಾಮಾನ್ಯರೆಲ್ಲರಿಗೂ ಇವರ ಮೇಲೆ ಯಾಕಿಷ್ಟು ಅಪಾರ ಪ್ರೀತಿ ಭಕ್ತಿ…ಇವೆಲ್ಲವೂ ಕಾಣುತ್ತಿದ್ದ ನನಗೆ ಸೋಜಿಗವೆನಿಸುತ್ತಿತ್ತು.

ಜಯ ಸುವರ್ಣರ ಕುರಿತು ನನ್ನ ಮನಸಲ್ಲಿ  ಸುಪ್ತ ವಾಗಿದ್ದ ಪ್ರಶ್ನೆಗಳಿಗೆ ಉತ್ತರ ಸಿಕ್ಕಿದ್ದು ಅವರ  ಕುರಿತು ಆಳವಾದ ಅಧ್ಯಯನವನ್ನು ಕೈಗೊಂಡ ಮೇಲೆಯೇ. ಬಿಲ್ಲವ ಸಮಾಜಕ್ಕೆ ಆಧಾರ ಸ್ತಂಭವಾಗಿ ನಿಂತು, ಹಿರಿಯರು ಕಂಡ ಕನಸಿನ ಗಂಟನ್ನು ಹೆಗಲಲ್ಲಿ ಹೊತ್ತು,  ಸರ್ವ ಸಮಾಜದ ಬಾಂಧವರೊಡನೆ ಸಮಾನವಾಗಿ ಬೆರೆತು, ಸಮಾಜದ ಏಳಿಗೆಗೆ ಅನವರತ ದುಡಿದು  ಸಮಾಜವನ್ನು ಮೇರೆತ್ತರಕ್ಕೆ ಕೊಂಡೊಯ್ದ ಮಹಾನ್ ಚೇತನ ಜಯ ಸುವರ್ಣರು. ಇವರ ಜೀವನ ಸಾಧನೆಯ ಕುರಿತು ದಾಖಲಿಸುವ ಅವಕಾಶ ದೊರಕಿದ್ದು ನನ್ನ ಭಾಗ್ಯ. ಸುವರ್ಣರ ಜೀವಿತಾವಧಿಯವರೆಗೆ ಅವರ  ಜೊತೆಗೆ ಒಡನಾಟದ ಸೌಭಾಗ್ಯವನ್ನು ಪಡೆದ ನೂರಾರು  ಪುಣ್ಯವಂತರನ್ನು ಭೇಟಿ ಮಾಡಿ ಜಯ ಸುವರ್ಣರನ್ನು ಅವರು ಬದುಕಿದ ರೀತಿಯನ್ನು ಅರಿತು ಅರಗಿಸಿಕೊಂಡವಳು ನಾನು.

ಸುವರ್ಣರ ಕುರಿತು ಬರೆಯುವಾಗ ಅವರ ಮಹಾನ್ ವ್ಯಕ್ತಿತ್ವದ ಕತೆಯನ್ನು ಪ್ರತಿದಿನ ನನ್ನ ಮಗಳಿಗೆ ಹೇಳುತ್ತಿದ್ದೆ. ಎಲ್ಲವನ್ನೂ ಹೇಳಿ ಮುಗಿಸಿದ ಮೇಲೆ, ಅವಳು, “ಅಮ್ಮ ಅವರಿರುವಾಗಲೇ ನೀನು ಈ ಕೃತಿಯನ್ನು ಬರೆದಿದ್ದರೆ ಅವರ ತ್ಯಾಗಮಯ ಜೀವನಕ್ಕೆ ಎಷ್ಟು ಧನ್ಯತಾಭಾವ ಸಿಗುತ್ತಿತ್ತು. ಅವರಿಗೆ ಎಷ್ಟೊಂದು ಖುಷಿಯಾಗುತ್ತಿತ್ತು ಅಲ್ಲವೇ” ಎಂದು ಹೇಳಿದಾಗ ನಾನಂದು ಉತ್ತರಿಸಲಾಗದೆ ಭಾವುಕಳಾಗಿದ್ದೆ.

ನಿಜ ಅವರ ತ್ಯಾಗಮಯ ಜೀವನವನ್ನು ನಾವೆಷ್ಟು ಅರ್ಥಮಾಡಿಕೊಂಡಿದ್ದೇವೆ? ಅವರ ಆದರ್ಶಗಳನ್ನು ನಾವೆಷ್ಟು ಪಾಲಿಸುತ್ತಿದ್ದೇವೆ ಅನ್ನುವ ಪ್ರಶ್ನೆಗಳು ನನ್ನನ್ನು ಆಗಾಗ ಕಾಡುತ್ತಿರುತ್ತವೆ.

ಒಬ್ಬ ವ್ಯಕ್ತಿಗೆ ನಾವು ನಿಷ್ಠರಾಗಿದ್ದರೆ ಆ ವ್ಯಕ್ತಿ ಬದುಕಿದ್ದಾಗ ಮಾತ್ರವಲ್ಲ ಅವರು ಗತಿಸಿದ ಮೇಲೂ ಅವರನ್ನು ಗೌರವಿಸಬೇಕು ಅವರ ಸೇವೆಯನ್ನು ನೆನಪಿಟ್ಟುಕೊಂಡು ಮುನ್ನಡೆಯಬೇಕು. ಆಗ ಮಾತ್ರ ಮನುಷ್ಯತ್ವ ಎಂಬ ಪದಕ್ಕೆ ನಿಜವಾದ ಅರ್ಥ ಸಿಗಬಲ್ಲದು.

ಜಯ ಸುವರ್ಣರ ಕುರಿತು ಬರೆದ ಸುವರ್ಣಯುಗ ಕೃತಿಯನ್ನು ಈಗಾಗಲೇ ನೂರಾರು ಮಂದಿ ಹಿರಿಯ ಸಾಹಿತಿಗಳು ವಿಮರ್ಶಕರು ಸಹೃದಯ ಓದುಗರು ಓದಿ ಸಕಾರಾತ್ಮಕ ಪ್ರತಿಕ್ರಿಯೆಯನ್ನು ನೀಡಿದ್ದಾರೆ. ಈ ಗ್ರಂಥವನ್ನು ಇಂಗ್ಲಿಷ್ ಗೆ ಭಾಷಾಂತರಿಸುತ್ತಿರುವ ಅನುವಾದಕರು, *ಈ ಕೃತಿಯನ್ನು ಪರ್ಸನಾಲಿಟಿ ಡೆವಲಪ್ಮೆಂಟ್ ಟ್ರೈನಿಂಗ್ ಗೆ ಟೆಕ್ಸ್ಟ್ ಮಾಡಬಹುದು. ತುಂಬ  ಉನ್ನತ ಮಟ್ಟದ ಸಾಧನೆ ಅವರದ್ದು. ಅವರ ಸಾಧನೆಗಳು ಈ ಕೃತಿಯಲ್ಲಿ ಎಳೆಎಳೆಯಾಗಿ ಅನಾವರಣಗೊಂಡಿವೆ.  ಇದೊಂದು ಸೃಜನಶೀಲ ಬರವಣಿಗೆ. ಈ ರೀತಿ ಬರೆಯುವುದು ಸುಲಭವಿಲ್ಲವೆಂದು ತಮ್ಮ ಮೆಚ್ಚುಗೆಯನ್ನು ವ್ಯಕ್ತ ಪಡಿಸಿದ್ದಾರೆ. ಜಯ ಸುವರ್ಣರ ಮಹಾನ್ ವ್ಯಕ್ತಿತ್ವಕ್ಕೆ ನ್ಯಾಯ ಒದಗಿಸಬೇಕೆನ್ನುವ ನನ್ನ ಪ್ರಯತ್ನ  ಸುವರ್ಣಯುಗ ಕೃತಿಯ ಮೂಲಕ ಫಲನೀಡಿತೆಂಬ ಧನ್ಯತಾಭಾವ ನನಗಿದೆ. ಇಂದು ಅವರ 78ನೆಯ ಜನ್ಮದಿನ. ಮರುಜನ್ಮವೊಂದಿದ್ದರೆ ಅವರು ನಮ್ಮ ಸಮಾಜದಲ್ಲಿಯೇ ಹುಟ್ಟಿ ಬರಲಿ. ಅವರಂಥ ನಾಯಕತ್ವವಿದ್ದರೆ ಖಂಡಿತವಾಗಿಯೂ ಸಮಾಜದ ಸರ್ವತೋಮುಖ ಅಭಿವೃದ್ಧಿಯಾಗಲು ಸಾಧ್ಯ.

ಅನಿತಾ ಪೂಜಾರಿ ತಾಕೊಡೆ


Share:

More Posts

Category

Send Us A Message

Related Posts

ಮೊಂಟೆಪದವು ಕೋಡಿಯಲ್ಲಿ ಗುಡ್ಡ ಕುಸಿತ; ಪದ್ಮರಾಜ್ ಆರ್.ಪೂಜಾರಿ ಭೇಟಿ ಮಾಡಿ ಸಾಂತ್ವನ


Share       ಮಂಗಳೂರು: ಕರ್ನಾಟಕದ ಕರಾವಳಿ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಭಾರೀ ಮಳೆಯಾಗುತ್ತಿದ್ದು, ಭೂಕುಸಿತ ಸಂಭವಿಸಿ ಮೂವರು ಸಾವನ್ನಪ್ಪಿದ್ದಾರೆ. ಒಬ್ಬ ಮಹಿಳೆ ಮತ್ತು ಆಕೆಯ ಮಗುವನ್ನು ಅವಶೇಷಗಳಿಂದ ರಕ್ಷಿಸಿ, ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅವರ ಸ್ಥಿತಿ ಗಂಭೀರವಾಗಿದೆ


Read More »

ಶಾಸಕ ಸುನಿಲ್ ಕುಮಾರ್ ಸಹೋದರ ಸುಜಿತ್‌ ಕುಮಾರ್‌ ನಿಧನ


Share       ಕಾರ್ಕಳ: ಕಾರ್ಕಳ ಶಾಸಕ ವಿ.ಸುನಿಲ್ ಕುಮಾರ್ ಸಹೋದರ ಸುಜಿತ್ ಕುಮಾರ್ (53) ಶುಕ್ರವಾರ (ಮೇ 23) ಅನಾರೋಗ್ಯದಿಂದ ನಿಧನರಾಗಿದ್ದಾರೆ.   ಅಂತಿಮ ವಿಧಿ ವಿಧಾನವು ಇಂದು ಶುಕ್ರವಾರ ನೆಕ್ಲಾಜೆ ಮನೆಯಲ್ಲಿ ಸಂಜೆ 6


Read More »

ಅಂತಾರಾಷ್ಟ್ರೀಯ ಆರ್ಯಭಟ ಪ್ರಶಸ್ತಿಗೆ ಪುಣೆಯ ಸಮಾಜಸೇವಕ   “ವಿಶ್ವನಾಥ ಪೂಜಾರಿ ಕಡ್ತಲ’ ಆಯ್ಕೆ


Share       ಪುಣೆ :ಪುಣೆ ಬಿಲ್ಲವ ಸಮಾಜ ಸೇವಾ ಸಂಘ ಇದರ ಅಧ್ಯಕ್ಷ ,ಸಾಮಾಜಿಕ ಚಟುವಟಿಕೆಗಳಲ್ಲಿ ಸದಾ ಗುರುತಿಸಿಕೊಂಡಿರುವ ವಿಶ್ವನಾಥ ಪೂಜಾರಿ ಕಡ್ತಲ ಇವರು ಪ್ರತಿಷ್ಠಿತ ಅಂತಾರಾಷ್ಟ್ರೀಯ ಆರ್ಯಭಟ ಪ್ರಶಸ್ತಿ -2025  ಗೆ ಆಯ್ಕೆಯಾಗಿರುತ್ತಾರೆ .


Read More »

ಅಯೋಧ್ಯೆಯಲ್ಲಿ ಮಹಾಮಂಡಲೇಶ್ಚರ 1008 ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ ಮುಂದಾಳತ್ವದಲ್ಲಿ 4 ಅಂತಸ್ತಿನ ಶಾಖಾ ಮಠಕ್ಕೆ ಭೂಮಿ ಪೂಜೆ,ಶಿಲಾನ್ಯಾಸ


Share       ಅಯೋಧ್ಯೆಯಲ್ಲಿ ಮಹಾಮಂಡಲೇಶ್ಚರ  1008 ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ ಮುಂದಾಳತ್ವದಲ್ಲಿ 4 ಅಂತಸ್ತಿನ ಶಾಖಾ ಮಠಕ್ಕೆ ಭೂಮಿ ಪೂಜೆ,ಶಿಲಾನ್ಯಾಸ ಯತೀವರ್ಯರು, ಸಚಿವ ಮಾಂಕಳ್ ವೈದ್ಯ, ಶಾಸಕ ಹರೀಶ್ ಪೂಂಜ, ಸೇರಿದಂತೆ ಬೆಳ್ತಂಗಡಿಯಿಂದ ಸುಮಾರು 200


Read More »

ಬೈದ್ಯೆರುಗಳಲ್ಲಿ ಲೀನವಾದ ದರ್ಶನ ಪಾತ್ರಿ ಶ್ರೀ ಸುರೇಶ್ ಪೂಜಾರಿ


Share         ಪ್ರಸಿದ್ದ ಬೈದ್ಯೇರುಗಳ ಪಾತ್ರಿಯಾದ  ಶ್ರೀ ಸುರೇಶ್ ಪೂಜಾರಿಯವರು ಅಲ್ಪಕಾಲದ  ಅಸೌಖ್ಯದ ಕಾರಣ ಇಂದು ಭಗವಂತನ ಪಾದ ಸೇರಿದರು. ಕಳತ್ತೂರು ಹಿರಿಯಣ್ಣ ಪೂಜಾರಿ ಹಾಗೂ ಶ್ರೀಮತಿ ಲೀಲಾವತಿ ಪೂಜಾರಿಯವರ ಮಗನಾದ ಶ್ರೀ ಸುರೇಶ್


Read More »

ಭಾರತ್ ಬ್ಯಾಂಕ್‌ನ ಕಾರ್ಯಾಧ್ಯಕ್ಷರಾದ ಸೂರ್ಯಕಾಂತ್ ಜಯ ಸುವರ್ಣರಿಗೆ ಐವತ್ತರ ಸಂಭ್ರಮ


Share       ಸಮಾಜದಲ್ಲಿ ಮಹತ್ವದ ಜವಾಬ್ದಾರಿಯನ್ನು ವಹಿಸಿಕೊಂಡಿರುವ ವ್ಯಕ್ತಿ ಸಾಮಾಜಿಕವಾಗಿ ಮತ್ತು ಭಾವನಾತ್ಮಕವಾಗಿ ಸಮತೋಲನವನ್ನು ಸಾಧಿಸಿದರೆ ಮಾತ್ರ ಅವನು ಯಶಸ್ಸಿನ ಮೆಟ್ಟಿಲೇರಲು ಸಾಧ್ಯ. ‘ಸುಖ-ದುಃಖ, ಲಾಭ -ನಷ್ಟ ಸೋಲು-ಗೆಲುವನ್ನು ಸಮಾನವಾಗಿ ತೆಗೆದುಕೊಳ್ಳುವವನೇ ನಿಜವಾದ ಸುಖಿ’ ಎಂಬ


Read More »