TOP STORIES:

FOLLOW US

ಪಟ್ಟಕ್ಕೆ ಪಟ್ಟದ ಹೆಸರೇ ಹೇಗೆ ಆಗಬೇಕೋ ಹಾಗೆಯೇ ಸಾಧನೆಗೆ ಸಾಧಕದ ಹೆಸರೇ ಆಗಬೇಕು ಇದೇ ಧಾರ್ಮಿಕ ನಡೆ…..


ಮಾತೆತ್ತಿದರೆ ಜೈ ಕೋಟಿ ಚೆನ್ನಯ ಅನ್ನುವ, ಕಂಡ ಕಂಡ ಬಸ್‌ಸ್ಟ್ಯಾಂಡ್- ಏರ್‌ಪೋರ್ಟ್ -ವೃತ್ತಗಳಿಗೆಲ್ಲ ಕೋಟಿಚೆನ್ನಯರ ಹೆಸರಿಡಬೇಕೆಂದು ಒತ್ತಾಯಿಸುವ ಕೋಟಿ ಚೆನ್ನಯರ ಅಭಿಮಾನಿಗಳಿಗೆ (ಭಕ್ತರಿಗಲ್ಲ), ಅವರ ಆದರ್ಶಪುರುಷರೇ ಸರಿಯಾದ ಉತ್ತರ ನೀಡಿದ್ದಾರೆ. ನಾವು ಹಲವು ವರ್ಷಗಳಿಂದ ಈ ಬಗ್ಗೆ ಮನವಿ ಮಾಡಿಕೊಳ್ಳುತ್ತಿದ್ದರೂ ಯಾರೂ ತಲೆಕೆಡಿಸಿಕೊಂಡಿರಲಿಲ್ಲ. ಈಗ ಸ್ವತಃ ಬ್ರಹ್ಮಬೈದರ್ಕಳೇ ಈ ಬಗ್ಗೆ ಸ್ಪಷ್ಟನೆ ನೀಡಿದ್ದಾರೆ.

ಬಹುಶಃ ಕೆಲವರಿಗೆ ಇನ್ನೂ ವಿಷಯವೇನೆಂದು ಹೊಳೆದಿರಲಿಕ್ಕಿಲ್ಲ. ತಮಗೆಲ್ಲಾ ತಿಳಿದಿರುವಂತೆ ಎಣ್ಮೂರ ಬೈದೆರುಗಳು ಅಥವಾ ಬ್ರಹ್ಮಬೈದರ್ಕಳು  ಬ್ರಹ್ಮರ ಅಥವಾ ಬೆಮ್ಮೆರ್‌ರ ಜೊತೆಗೆ ಅವರಿಗೆ ಸಮಾನವಾದ ಸ್ಥಾನ ಪಡೆದ ಈ ಮಣ್ಣಿನ ಅತ್ಯುನ್ನತ ಶಕ್ತಿಗಳು‌. ಅವರ ಆರಾಧನೆ ಬೈದೆರ್ಲು/ ಬೈದರ್ಕಳು ಎಂಬ ಹೆಸರಿಂದ ನಡೆಯುವುದೇ ಹೊರತು ಕೋಟಿ ಚೆನ್ನಯ ಎಂಬ ಅವರ ಲೌಕಿಕ ಹೆಸರಿನಿಂದಲ್ಲ. ಮೂಲ ಆರಾಧ್ಯ ಶಕ್ತಿಗಳನ್ನು ಬಿಡಿ, ಅವರ ದರ್ಶನ ಪಾತ್ರಿಗಳು/ ನೇಮ ಕಟ್ಟುವವರನ್ನೂ ಜನ ಹೆಸರಿಂದ ಕರೆಯದೆ ಎಡ-ಬಲ/ ದತ್ತ್- ಬಲತ್‌ಗ್ ಉಂತುನಾರ್/ ಕಟ್ಟುನಾರ್ ಎಂದೇ ಗುರುತಿಸುವುದು ವಾಡಿಕೆ‌. ಭಕ್ತರು ಯಾವತ್ತೂ ಅವರನ್ನು ಕೋಟಿ ಚೆನ್ನಯ ಎಂದು ಕರೆಯುವ ವಾಡಿಕೆ ಹಿಂದಿನಿಂದಲೂ ಇಲ್ಲ‌. ಆದರೆ ಈವಾಗ ಸ್ವಲ್ಪ ಸಮಯದಿಂದ, ಅದೂ ಮುಖ್ಯವಾಗಿ ಎಲ್ಲದರಲ್ಲೂ  ವರ್ಗ ಸಂಘರ್ಷವನ್ನು ಕಾಣಲು ಕಾತರಿಸುವ ತಥಾಕಥಿತ ಬುದ್ದಿಜೀವಿಗಳು, ಲೇಖಕರು ಮತ್ತು ಸಂಶೋಧಕರುಗಳ ಕೃಪೆಯಿಂದಾಗಿ, ಜನ ಹೋದಲ್ಲಿ ಬಂದಲ್ಲಿ ಕೋಟಿ ಚೆನ್ನಯ ಎಂದು ಕರೆಯುವುದು ಆರಂಭವಾಯಿತು. ಸಿಕ್ಕಸಿಕ್ಕ ಸಾರ್ವಜನಿಕ ಸ್ಥಳಗಳಿಗೆ ನಮ್ಮ ಆರಾಧ್ಯಶಕ್ತಿಗಳ, ಅದರಲ್ಲೂ ಅವರ ಲೌಕಿಕ ಹೆಸರನ್ನು ಇಡಬೇಕೆಂದು ಒತ್ತಾಯಿಸುವುದು, ವಾಟ್ಸಾಪ್/ ಫ಼ೇಸ್‌ಬುಕ್ ಕೂಟಗಳಲ್ಲಿ ಜೈ ಕೋಟಿ-ಚೆನ್ನಯ ಎಂದು ಕಮೆಂಟ್ ಮಾಡುವುದು ಇವೆಲ್ಲಾ ಆರಂಭವಾಯಿತು. ನಮಗಂತೂ ಇಂತಹವರಿಗೆ ತಿಳಿಹೇಳಿ ಸಾಕಾಗಿಹೋಗಿತ್ತು. ಅಷ್ಟರಲ್ಲಿ ಇಂತವರಿಗೆ ಸಾಕ್ಷಾತ್ ಬ್ರಹ್ಮ ಬೈದರ್ಕಳೇ ಈ ಬಗ್ಗೆ ಬುದ್ದಿ ಹೇಳಿದ ಘಟನೆ ಇತ್ತೀಚೆಗೆ ಗರೊಡಿಯೊಂದರಲ್ಲಿ ನಡೆಯಿತು.

ಇತ್ತೀಚೆಗೆ ಗರೊಡಿಯೊಂದರಲ್ಲಿ ಬೈದರ್ಕಳು ಮತ್ತು ಕೊಡಮಂದಾಯ ದೈವದ ದರ್ಶನ ಸೇವೆ ನಡೆಯುತ್ತಿತ್ತು. ಬೈದರ್ಕಳ ನುಡಿ ಆಗುತ್ತಿರುವ ಹೊತ್ತಿಗೆ ಗರೊಡಿಯ ಅಸ್ರಣ್ಣ/ ತಂತ್ರಿಯೂ ಆಗಿರುವ ಗ್ರಾಮದೇವರ ಅರ್ಚಕರು ಮಾತಿನ ನಡುವೆ ಬೈದರುಗಳನ್ನು ಕೋಟಿಬೈದ್ಯ ಚೆನ್ನಯ ಬೈದ್ಯ ಎಂದು ಸಂಬೋಧಿಸಿದರು. ಆಗ ಬೈದೆರುಗಳು ಸಮಾಧಾನ ಚಿತ್ತದಿಂದಲೇ ಅಸ್ರಣ್ಣರ ಮಾತಲ್ಲಿ ಆಗುತ್ತಿರುವ ತಪ್ಪನ್ನು ಎತ್ತಿ ತೋರಿಸಿದರು. ಕೊಡಮಂದಾಯ ದೈವದ ಜೊತೆಗೆ ದರ್ಶನದಲ್ಲಿದ್ದ ಬೈದರುಗಳು, “ಅಸ್ರಣ್ಣರೇ, ನಿಮ್ಮ ಮಾತಲ್ಲೊಂದು ಲೋಪವಿದೆ. ಇದನ್ನು ಇನ್ನು ಮುಂದಕ್ಕೆ ಸರಿಪಡಿಸಿಕೊಳ್ಳಿ. ನಾವು ಜನ್ಮಕ್ಕೆ ಬಂದಾಗ ನಮಗೆ ನಮ್ಮ ಬಲ್ಲಾಳರು ಇಟ್ಟ ಹೆಸರು ಕೋಟಿ -ಚೆನ್ನಯ ಎನ್ನುವುದರಲ್ಲಿ ಸಂದೇಹವಿಲ್ಲ‌. ಆದರೆ ಒಮ್ಮೆ ನಾವು ಕಾಯವನ್ನು ತ್ಯಜಿಸಿ ಬೆಮ್ಮೆರ್‌ರನ್ನು ಸೇರಿದ  ಬಳಿಕ ನಮ್ಮನ್ನು ಕೋಟಿ ಚೆನ್ನಯ ಎಂದು ಕರೆಯುವ ರೂಢಿ ಇಲ್ಲ. ಕಾಯದಲ್ಲಿ ಕೋಟಿ ಚೆನ್ನಯರಾಗಿದ್ದ ನಾವು ಮಾಯದಲ್ಲಿ ಬೆಮ್ಮೆರ್ ಬೈದೆರುಗಳಾಗಿ ನಂಬಿದವರನ್ನು ಕಾಯುತ್ತಾ ಬಂದಿದ್ದೇವೆ. ಅಲ್ಲದೆ ನಮ್ಮನ್ನು ಬೆಮ್ಮೆರ್ ಬೈದೆರುಗಳೆಂದು ಆರಾಧಿಸುವುದೇ ಹೊರತು ಕೋಟಿ-ಚೆನ್ನಯರೆಂದಲ್ಲ. ಹಾಗಾಗಿ ನೀವು ನಮ್ಮನ್ನು ಕೋಟಿ- ಚೆನ್ನಯ ಎಂದಾಗಲೀ ಕೋಟಿಬೈದ್ಯ- ಚೆನ್ನಯಬೈದ್ಯ ಎಂದಾಗಲೀ ಕರೆಯುವುದು ಸೂಕ್ತವಲ್ಲ. ಮುಂದಕ್ಕೆ ಈ ರೀತಿಯ ಮಾತು‌ ನಿಮ್ಮಿಂದ ಬಾರದಂತೆ ನೋಡಿಕೊಳ್ಳಿ” ಎಂದು ತಾಕೀತು ಮಾಡಿದರು.  ಅಸ್ರಣ್ಣರು ಮರುಮಾತಾಡದೆ ಬೈದರ್ಕಳ ನುಡಿಗೆ ತಲೆಬಾಗಿ ಅಂದಿನಿಂದ ಅವರನ್ನು ಬೆಮ್ಮೆರ್ ಬೈದೆರುಗಳೆಂದೇ ಕರೆಯತೊಡಗಿದ್ದಾರೆ. ಅಸ್ರಣ್ಣರೇ ಬೈದರ್ಕಳ ಮಾತಿಗೆ ತಲೆಬಾಗಿ ತಮ್ಮ ಹಿರಿತನವನ್ನು ಮೆರೆಯುತ್ತಿರುವಾಗ ನಮ್ಮನಿಮ್ಮಂತಹ ಸಾಮಾನ್ಯರಿಗೆ ಬೈದರ್ಕಳ ನುಡಿಯನ್ನು ಪಾಲಿಸುವುದು ಕಷ್ಟವಾದೀತೇ? ಬೈದರ್ಕಳ ನುಡಿಯನ್ನು ನಿಮಗೆ ತಲುಪಿಸುವ ಕೆಲಸವನ್ನು ನಾವು ಮಾಡಿದ್ದೇವೆ. ಇನ್ನು ಮುಂದಕ್ಕಾದರೂ ಹೇಗೆ ನಡೆದುಕೊಳ್ಳುವಿರೋ ನಿಮಗೆ ಬಿಟ್ಟಿದ್ದು.


Share:

More Posts

Category

Send Us A Message

Related Posts

ಮೊಂಟೆಪದವು ಕೋಡಿಯಲ್ಲಿ ಗುಡ್ಡ ಕುಸಿತ; ಪದ್ಮರಾಜ್ ಆರ್.ಪೂಜಾರಿ ಭೇಟಿ ಮಾಡಿ ಸಾಂತ್ವನ


Share       ಮಂಗಳೂರು: ಕರ್ನಾಟಕದ ಕರಾವಳಿ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಭಾರೀ ಮಳೆಯಾಗುತ್ತಿದ್ದು, ಭೂಕುಸಿತ ಸಂಭವಿಸಿ ಮೂವರು ಸಾವನ್ನಪ್ಪಿದ್ದಾರೆ. ಒಬ್ಬ ಮಹಿಳೆ ಮತ್ತು ಆಕೆಯ ಮಗುವನ್ನು ಅವಶೇಷಗಳಿಂದ ರಕ್ಷಿಸಿ, ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅವರ ಸ್ಥಿತಿ ಗಂಭೀರವಾಗಿದೆ


Read More »

ಶಾಸಕ ಸುನಿಲ್ ಕುಮಾರ್ ಸಹೋದರ ಸುಜಿತ್‌ ಕುಮಾರ್‌ ನಿಧನ


Share       ಕಾರ್ಕಳ: ಕಾರ್ಕಳ ಶಾಸಕ ವಿ.ಸುನಿಲ್ ಕುಮಾರ್ ಸಹೋದರ ಸುಜಿತ್ ಕುಮಾರ್ (53) ಶುಕ್ರವಾರ (ಮೇ 23) ಅನಾರೋಗ್ಯದಿಂದ ನಿಧನರಾಗಿದ್ದಾರೆ.   ಅಂತಿಮ ವಿಧಿ ವಿಧಾನವು ಇಂದು ಶುಕ್ರವಾರ ನೆಕ್ಲಾಜೆ ಮನೆಯಲ್ಲಿ ಸಂಜೆ 6


Read More »

ಅಂತಾರಾಷ್ಟ್ರೀಯ ಆರ್ಯಭಟ ಪ್ರಶಸ್ತಿಗೆ ಪುಣೆಯ ಸಮಾಜಸೇವಕ   “ವಿಶ್ವನಾಥ ಪೂಜಾರಿ ಕಡ್ತಲ’ ಆಯ್ಕೆ


Share       ಪುಣೆ :ಪುಣೆ ಬಿಲ್ಲವ ಸಮಾಜ ಸೇವಾ ಸಂಘ ಇದರ ಅಧ್ಯಕ್ಷ ,ಸಾಮಾಜಿಕ ಚಟುವಟಿಕೆಗಳಲ್ಲಿ ಸದಾ ಗುರುತಿಸಿಕೊಂಡಿರುವ ವಿಶ್ವನಾಥ ಪೂಜಾರಿ ಕಡ್ತಲ ಇವರು ಪ್ರತಿಷ್ಠಿತ ಅಂತಾರಾಷ್ಟ್ರೀಯ ಆರ್ಯಭಟ ಪ್ರಶಸ್ತಿ -2025  ಗೆ ಆಯ್ಕೆಯಾಗಿರುತ್ತಾರೆ .


Read More »

ಅಯೋಧ್ಯೆಯಲ್ಲಿ ಮಹಾಮಂಡಲೇಶ್ಚರ 1008 ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ ಮುಂದಾಳತ್ವದಲ್ಲಿ 4 ಅಂತಸ್ತಿನ ಶಾಖಾ ಮಠಕ್ಕೆ ಭೂಮಿ ಪೂಜೆ,ಶಿಲಾನ್ಯಾಸ


Share       ಅಯೋಧ್ಯೆಯಲ್ಲಿ ಮಹಾಮಂಡಲೇಶ್ಚರ  1008 ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ ಮುಂದಾಳತ್ವದಲ್ಲಿ 4 ಅಂತಸ್ತಿನ ಶಾಖಾ ಮಠಕ್ಕೆ ಭೂಮಿ ಪೂಜೆ,ಶಿಲಾನ್ಯಾಸ ಯತೀವರ್ಯರು, ಸಚಿವ ಮಾಂಕಳ್ ವೈದ್ಯ, ಶಾಸಕ ಹರೀಶ್ ಪೂಂಜ, ಸೇರಿದಂತೆ ಬೆಳ್ತಂಗಡಿಯಿಂದ ಸುಮಾರು 200


Read More »

ಬೈದ್ಯೆರುಗಳಲ್ಲಿ ಲೀನವಾದ ದರ್ಶನ ಪಾತ್ರಿ ಶ್ರೀ ಸುರೇಶ್ ಪೂಜಾರಿ


Share         ಪ್ರಸಿದ್ದ ಬೈದ್ಯೇರುಗಳ ಪಾತ್ರಿಯಾದ  ಶ್ರೀ ಸುರೇಶ್ ಪೂಜಾರಿಯವರು ಅಲ್ಪಕಾಲದ  ಅಸೌಖ್ಯದ ಕಾರಣ ಇಂದು ಭಗವಂತನ ಪಾದ ಸೇರಿದರು. ಕಳತ್ತೂರು ಹಿರಿಯಣ್ಣ ಪೂಜಾರಿ ಹಾಗೂ ಶ್ರೀಮತಿ ಲೀಲಾವತಿ ಪೂಜಾರಿಯವರ ಮಗನಾದ ಶ್ರೀ ಸುರೇಶ್


Read More »

ಭಾರತ್ ಬ್ಯಾಂಕ್‌ನ ಕಾರ್ಯಾಧ್ಯಕ್ಷರಾದ ಸೂರ್ಯಕಾಂತ್ ಜಯ ಸುವರ್ಣರಿಗೆ ಐವತ್ತರ ಸಂಭ್ರಮ


Share       ಸಮಾಜದಲ್ಲಿ ಮಹತ್ವದ ಜವಾಬ್ದಾರಿಯನ್ನು ವಹಿಸಿಕೊಂಡಿರುವ ವ್ಯಕ್ತಿ ಸಾಮಾಜಿಕವಾಗಿ ಮತ್ತು ಭಾವನಾತ್ಮಕವಾಗಿ ಸಮತೋಲನವನ್ನು ಸಾಧಿಸಿದರೆ ಮಾತ್ರ ಅವನು ಯಶಸ್ಸಿನ ಮೆಟ್ಟಿಲೇರಲು ಸಾಧ್ಯ. ‘ಸುಖ-ದುಃಖ, ಲಾಭ -ನಷ್ಟ ಸೋಲು-ಗೆಲುವನ್ನು ಸಮಾನವಾಗಿ ತೆಗೆದುಕೊಳ್ಳುವವನೇ ನಿಜವಾದ ಸುಖಿ’ ಎಂಬ


Read More »