TOP STORIES:

ಪಟ್ಟಕ್ಕೆ ಪಟ್ಟದ ಹೆಸರೇ ಹೇಗೆ ಆಗಬೇಕೋ ಹಾಗೆಯೇ ಸಾಧನೆಗೆ ಸಾಧಕದ ಹೆಸರೇ ಆಗಬೇಕು ಇದೇ ಧಾರ್ಮಿಕ ನಡೆ…..


ಮಾತೆತ್ತಿದರೆ ಜೈ ಕೋಟಿ ಚೆನ್ನಯ ಅನ್ನುವ, ಕಂಡ ಕಂಡ ಬಸ್‌ಸ್ಟ್ಯಾಂಡ್- ಏರ್‌ಪೋರ್ಟ್ -ವೃತ್ತಗಳಿಗೆಲ್ಲ ಕೋಟಿಚೆನ್ನಯರ ಹೆಸರಿಡಬೇಕೆಂದು ಒತ್ತಾಯಿಸುವ ಕೋಟಿ ಚೆನ್ನಯರ ಅಭಿಮಾನಿಗಳಿಗೆ (ಭಕ್ತರಿಗಲ್ಲ), ಅವರ ಆದರ್ಶಪುರುಷರೇ ಸರಿಯಾದ ಉತ್ತರ ನೀಡಿದ್ದಾರೆ. ನಾವು ಹಲವು ವರ್ಷಗಳಿಂದ ಈ ಬಗ್ಗೆ ಮನವಿ ಮಾಡಿಕೊಳ್ಳುತ್ತಿದ್ದರೂ ಯಾರೂ ತಲೆಕೆಡಿಸಿಕೊಂಡಿರಲಿಲ್ಲ. ಈಗ ಸ್ವತಃ ಬ್ರಹ್ಮಬೈದರ್ಕಳೇ ಈ ಬಗ್ಗೆ ಸ್ಪಷ್ಟನೆ ನೀಡಿದ್ದಾರೆ.

ಬಹುಶಃ ಕೆಲವರಿಗೆ ಇನ್ನೂ ವಿಷಯವೇನೆಂದು ಹೊಳೆದಿರಲಿಕ್ಕಿಲ್ಲ. ತಮಗೆಲ್ಲಾ ತಿಳಿದಿರುವಂತೆ ಎಣ್ಮೂರ ಬೈದೆರುಗಳು ಅಥವಾ ಬ್ರಹ್ಮಬೈದರ್ಕಳು  ಬ್ರಹ್ಮರ ಅಥವಾ ಬೆಮ್ಮೆರ್‌ರ ಜೊತೆಗೆ ಅವರಿಗೆ ಸಮಾನವಾದ ಸ್ಥಾನ ಪಡೆದ ಈ ಮಣ್ಣಿನ ಅತ್ಯುನ್ನತ ಶಕ್ತಿಗಳು‌. ಅವರ ಆರಾಧನೆ ಬೈದೆರ್ಲು/ ಬೈದರ್ಕಳು ಎಂಬ ಹೆಸರಿಂದ ನಡೆಯುವುದೇ ಹೊರತು ಕೋಟಿ ಚೆನ್ನಯ ಎಂಬ ಅವರ ಲೌಕಿಕ ಹೆಸರಿನಿಂದಲ್ಲ. ಮೂಲ ಆರಾಧ್ಯ ಶಕ್ತಿಗಳನ್ನು ಬಿಡಿ, ಅವರ ದರ್ಶನ ಪಾತ್ರಿಗಳು/ ನೇಮ ಕಟ್ಟುವವರನ್ನೂ ಜನ ಹೆಸರಿಂದ ಕರೆಯದೆ ಎಡ-ಬಲ/ ದತ್ತ್- ಬಲತ್‌ಗ್ ಉಂತುನಾರ್/ ಕಟ್ಟುನಾರ್ ಎಂದೇ ಗುರುತಿಸುವುದು ವಾಡಿಕೆ‌. ಭಕ್ತರು ಯಾವತ್ತೂ ಅವರನ್ನು ಕೋಟಿ ಚೆನ್ನಯ ಎಂದು ಕರೆಯುವ ವಾಡಿಕೆ ಹಿಂದಿನಿಂದಲೂ ಇಲ್ಲ‌. ಆದರೆ ಈವಾಗ ಸ್ವಲ್ಪ ಸಮಯದಿಂದ, ಅದೂ ಮುಖ್ಯವಾಗಿ ಎಲ್ಲದರಲ್ಲೂ  ವರ್ಗ ಸಂಘರ್ಷವನ್ನು ಕಾಣಲು ಕಾತರಿಸುವ ತಥಾಕಥಿತ ಬುದ್ದಿಜೀವಿಗಳು, ಲೇಖಕರು ಮತ್ತು ಸಂಶೋಧಕರುಗಳ ಕೃಪೆಯಿಂದಾಗಿ, ಜನ ಹೋದಲ್ಲಿ ಬಂದಲ್ಲಿ ಕೋಟಿ ಚೆನ್ನಯ ಎಂದು ಕರೆಯುವುದು ಆರಂಭವಾಯಿತು. ಸಿಕ್ಕಸಿಕ್ಕ ಸಾರ್ವಜನಿಕ ಸ್ಥಳಗಳಿಗೆ ನಮ್ಮ ಆರಾಧ್ಯಶಕ್ತಿಗಳ, ಅದರಲ್ಲೂ ಅವರ ಲೌಕಿಕ ಹೆಸರನ್ನು ಇಡಬೇಕೆಂದು ಒತ್ತಾಯಿಸುವುದು, ವಾಟ್ಸಾಪ್/ ಫ಼ೇಸ್‌ಬುಕ್ ಕೂಟಗಳಲ್ಲಿ ಜೈ ಕೋಟಿ-ಚೆನ್ನಯ ಎಂದು ಕಮೆಂಟ್ ಮಾಡುವುದು ಇವೆಲ್ಲಾ ಆರಂಭವಾಯಿತು. ನಮಗಂತೂ ಇಂತಹವರಿಗೆ ತಿಳಿಹೇಳಿ ಸಾಕಾಗಿಹೋಗಿತ್ತು. ಅಷ್ಟರಲ್ಲಿ ಇಂತವರಿಗೆ ಸಾಕ್ಷಾತ್ ಬ್ರಹ್ಮ ಬೈದರ್ಕಳೇ ಈ ಬಗ್ಗೆ ಬುದ್ದಿ ಹೇಳಿದ ಘಟನೆ ಇತ್ತೀಚೆಗೆ ಗರೊಡಿಯೊಂದರಲ್ಲಿ ನಡೆಯಿತು.

ಇತ್ತೀಚೆಗೆ ಗರೊಡಿಯೊಂದರಲ್ಲಿ ಬೈದರ್ಕಳು ಮತ್ತು ಕೊಡಮಂದಾಯ ದೈವದ ದರ್ಶನ ಸೇವೆ ನಡೆಯುತ್ತಿತ್ತು. ಬೈದರ್ಕಳ ನುಡಿ ಆಗುತ್ತಿರುವ ಹೊತ್ತಿಗೆ ಗರೊಡಿಯ ಅಸ್ರಣ್ಣ/ ತಂತ್ರಿಯೂ ಆಗಿರುವ ಗ್ರಾಮದೇವರ ಅರ್ಚಕರು ಮಾತಿನ ನಡುವೆ ಬೈದರುಗಳನ್ನು ಕೋಟಿಬೈದ್ಯ ಚೆನ್ನಯ ಬೈದ್ಯ ಎಂದು ಸಂಬೋಧಿಸಿದರು. ಆಗ ಬೈದೆರುಗಳು ಸಮಾಧಾನ ಚಿತ್ತದಿಂದಲೇ ಅಸ್ರಣ್ಣರ ಮಾತಲ್ಲಿ ಆಗುತ್ತಿರುವ ತಪ್ಪನ್ನು ಎತ್ತಿ ತೋರಿಸಿದರು. ಕೊಡಮಂದಾಯ ದೈವದ ಜೊತೆಗೆ ದರ್ಶನದಲ್ಲಿದ್ದ ಬೈದರುಗಳು, “ಅಸ್ರಣ್ಣರೇ, ನಿಮ್ಮ ಮಾತಲ್ಲೊಂದು ಲೋಪವಿದೆ. ಇದನ್ನು ಇನ್ನು ಮುಂದಕ್ಕೆ ಸರಿಪಡಿಸಿಕೊಳ್ಳಿ. ನಾವು ಜನ್ಮಕ್ಕೆ ಬಂದಾಗ ನಮಗೆ ನಮ್ಮ ಬಲ್ಲಾಳರು ಇಟ್ಟ ಹೆಸರು ಕೋಟಿ -ಚೆನ್ನಯ ಎನ್ನುವುದರಲ್ಲಿ ಸಂದೇಹವಿಲ್ಲ‌. ಆದರೆ ಒಮ್ಮೆ ನಾವು ಕಾಯವನ್ನು ತ್ಯಜಿಸಿ ಬೆಮ್ಮೆರ್‌ರನ್ನು ಸೇರಿದ  ಬಳಿಕ ನಮ್ಮನ್ನು ಕೋಟಿ ಚೆನ್ನಯ ಎಂದು ಕರೆಯುವ ರೂಢಿ ಇಲ್ಲ. ಕಾಯದಲ್ಲಿ ಕೋಟಿ ಚೆನ್ನಯರಾಗಿದ್ದ ನಾವು ಮಾಯದಲ್ಲಿ ಬೆಮ್ಮೆರ್ ಬೈದೆರುಗಳಾಗಿ ನಂಬಿದವರನ್ನು ಕಾಯುತ್ತಾ ಬಂದಿದ್ದೇವೆ. ಅಲ್ಲದೆ ನಮ್ಮನ್ನು ಬೆಮ್ಮೆರ್ ಬೈದೆರುಗಳೆಂದು ಆರಾಧಿಸುವುದೇ ಹೊರತು ಕೋಟಿ-ಚೆನ್ನಯರೆಂದಲ್ಲ. ಹಾಗಾಗಿ ನೀವು ನಮ್ಮನ್ನು ಕೋಟಿ- ಚೆನ್ನಯ ಎಂದಾಗಲೀ ಕೋಟಿಬೈದ್ಯ- ಚೆನ್ನಯಬೈದ್ಯ ಎಂದಾಗಲೀ ಕರೆಯುವುದು ಸೂಕ್ತವಲ್ಲ. ಮುಂದಕ್ಕೆ ಈ ರೀತಿಯ ಮಾತು‌ ನಿಮ್ಮಿಂದ ಬಾರದಂತೆ ನೋಡಿಕೊಳ್ಳಿ” ಎಂದು ತಾಕೀತು ಮಾಡಿದರು.  ಅಸ್ರಣ್ಣರು ಮರುಮಾತಾಡದೆ ಬೈದರ್ಕಳ ನುಡಿಗೆ ತಲೆಬಾಗಿ ಅಂದಿನಿಂದ ಅವರನ್ನು ಬೆಮ್ಮೆರ್ ಬೈದೆರುಗಳೆಂದೇ ಕರೆಯತೊಡಗಿದ್ದಾರೆ. ಅಸ್ರಣ್ಣರೇ ಬೈದರ್ಕಳ ಮಾತಿಗೆ ತಲೆಬಾಗಿ ತಮ್ಮ ಹಿರಿತನವನ್ನು ಮೆರೆಯುತ್ತಿರುವಾಗ ನಮ್ಮನಿಮ್ಮಂತಹ ಸಾಮಾನ್ಯರಿಗೆ ಬೈದರ್ಕಳ ನುಡಿಯನ್ನು ಪಾಲಿಸುವುದು ಕಷ್ಟವಾದೀತೇ? ಬೈದರ್ಕಳ ನುಡಿಯನ್ನು ನಿಮಗೆ ತಲುಪಿಸುವ ಕೆಲಸವನ್ನು ನಾವು ಮಾಡಿದ್ದೇವೆ. ಇನ್ನು ಮುಂದಕ್ಕಾದರೂ ಹೇಗೆ ನಡೆದುಕೊಳ್ಳುವಿರೋ ನಿಮಗೆ ಬಿಟ್ಟಿದ್ದು.


Related Posts

ಚಾರ್ಟರ್ಡ್ ಅಕೌಂಟೆಂಟ್ (CA) ಪರೀಕ್ಷೆಯಲ್ಲಿ ಅತ್ಯುತ್ತಮ ಅಂಕಗಳನ್ನು ಗಳಿಸಿ ನಿಶಾ ಪೂಜಾರಿ ಉತ್ತೀರ್ಣರಾಗಿದ್ದಾರೆ.


Share         ಮುಂಬಯಿ : ಕಾಂದಿವಲಿ ಪೂರ್ವದ ಠಾಕೂರ್ ಕಾಂಪ್ಲೆಕ್ಸ್ ನಿವಾಸಿ ನಿಶಾ ಪೂಜಾರಿ ಅವರು ಇತ್ತೀಚೆಗೆ ಸೆಪ್ಟೆಂಬರ್‌ನಲ್ಲಿ ನಡೆದ ಚಾರ್ಟರ್ಡ್ ಅಕೌಂಟೆಂಟ್ (CA) ಪರೀಕ್ಷೆಯಲ್ಲಿ ಅತ್ಯುತ್ತಮ ಅಂಕಗಳನ್ನು ಗಳಿಸಿ ಯಶಸ್ವಿಯಾಗಿ ಉತ್ತೀರ್ಣರಾಗಿದ್ದಾರೆ. ಅವರು ಕಾರ್ಕಳ


Read More »

ಬಹುಮುಖ ಪ್ರತಿಭಾವಂತೆ ಹರ್ಷಿಕಾ ಕಾಣಿಯೂರು ಅವರಿಗೆ ಅಭಿನಂದನೆಗಳು


Share         ಹರ್ಷಿಕಾ ಕಾಣಿಯೂರು ಅವರ ಬಾಲ್ಯದ ವಯಸ್ಸಿನಲ್ಲಿಯೇ ಕೃಷಿ ಕಾರ್ಯದ ಮೇಲಿನ ಆಸಕ್ತಿ ಹಾಗೂ ಶ್ರಮವನ್ನು ಗುರುತಿಸಿ ಸೈಟ್ ರೀಟಾ ವಿದ್ಯಾ ಸಂಸ್ಥೆ ಗೌರವಿಸಿದ ಕ್ಷಣ ನಿಜಕ್ಕೂ ಹೆಮ್ಮೆಯದು. 🌾🌱👏   ಅಷ್ಟೇ ಅಲ್ಲದೆ,


Read More »

ಅಕ್ಷತಾ ಪೂಜಾರಿಗೆ ಎಂಬ ಮುಗ್ದ ಯುವತಿಯ ಮೇಲೆ ಪೋಲಿಸರಿಂದ ಹಲ್ಲೆ- ವಕೀಲ‌ ಪ್ರವೀಣ್ ಪೂಜಾರಿ ಆಕ್ರೋಶ


Share         ಅಕ್ಷತಾ ಪೂಜಾರಿಗೆ ಎಂಬ ಮುಗ್ದ ಯುವತಿಯ ಮೇಲೆ ಪೋಲಿಸರಿಂದ ಹಲ್ಲೆ- ವಕೀಲ‌ ಪ್ರವೀಣ್ ಪೂಜಾರಿ ಆಕ್ರೋಶ ಉಡುಪಿ: ಪ್ರಕರಣವೊಂದಕ್ಕೆ ಸಂಬಂಧಿಸಿ ನ್ಯಾಯಾಲಯದ ಜಾರಿ ಆದೇಶವನ್ನು ಕಾರ್ಯಗತಗೊಳಿಸುವ ನೆಪದಲ್ಲಿ ಪೊಲೀಸರು ಮಹಿಳೆಯರಿದ್ದ ಮನೆಗೆ ಬೆಳ್ಳಂ


Read More »

ಯುವ ವೈಭವ 2025 -ಯುವವಾಹಿನಿ (ರಿ.)ಬೆಂಗಳೂರು ಘಟಕದ ಪತ್ರಿಕಾಗೋಷ್ಠಿ


Share         #ಯುವ ವೈಭವ 2025 05/12/25 ಇಂದು ಪ್ರೆಸ್ ಕ್ಲಬ್ ಆಫ್ ಬೆಂಗಳೂರು ಇಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಯುವವಾಹಿನಿ (ರಿ.)ಬೆಂಗಳೂರು ಘಟಕ ಅಧ್ಯಕ್ಷರಾದ ಶಶಿಧರ್ ಕೋಟ್ಯಾನ್ ಮತ್ತು ಕಾರ್ಯದರ್ಶಿ ಸಂತೋಷ್ ಪೂಜಾರಿ ಪಣಪಿಲ ಅವರು


Read More »

ಕೇರಳದ ಶಿವಗಿರಿಯ ಶಾಖಾ ಮಠವನ್ನು ಉಡುಪಿ ಅಥವಾ ಮಂಗಳೂರಿನಲ್ಲಿ ಸ್ಥಾಪಿಸಲು ಅಗತ್ಯ ಇರುವ ಐದು ಎಕರೆ ಜಮೀನನ್ನು ಒದಗಿಸಲಾಗುವುದು : ಮುಖ್ಯಮಂತ್ರಿ ಸಿದ್ದರಾಮಯ್ಯ


Share         ಕೇರಳದ ಶಿವಗಿರಿಯ ಶಾಖಾ ಮಠವನ್ನು ಉಡುಪಿ ಅಥವಾ ಮಂಗಳೂರಿನಲ್ಲಿ ಸ್ಥಾಪಿಸಲು ಅಗತ್ಯ ಇರುವ ಐದು ಎಕರೆ ಜಮೀನನ್ನು ಒದಗಿಸಲಾಗುವುದು : ಮುಖ್ಯಮಂತ್ರಿ ಸಿದ್ದರಾಮಯ್ಯ ಉಳ್ಳಾಲ: ಕೇರಳದ ಶಿವಗಿರಿಯ ಶಾಖಾ ಮಠವನ್ನು ಉಡುಪಿ ಅಥವಾ


Read More »

ವಿಶೇಷ ಮಕ್ಕಳ ಕಲೆಗಾರಿಕೆಯಿಂದ ರೂಪುಗೊಂಡ ಜನನಾಯಕ ಪದ್ಮರಾಜ್ ಆರ್. ಪೂಜಾರಿಯವರ ಭಾವಚಿತ್ರ


Share         ಕಲಾಸೇತು — ಬಂಟ್ವಾಳ ತಾಲೂಕಿನ ಕಾವಳಕಟ್ಟೆಯ ಗುರಿಮಜಲ್ ಹಿದಾಯ ವಿಶೇಷ ಮಕ್ಕಳ ವಸತಿ ಶಾಲೆ ದಶಮಾನೋತ್ಸವ ಕಾರ್ಯಕ್ರಮದಲ್ಲಿ, ವಿಶೇಷ ಮಕ್ಕಳ ಕಲೆಗಾರಿಕೆಯಿಂದ ರೂಪುಗೊಂಡ ಜನನಾಯಕ ಪದ್ಮರಾಜ್ ಆರ್. ಪೂಜಾರಿಯವರ ಭಾವಚಿತ್ರ ವನ್ನು ಶಾಲೆಯ


Read More »