TOP STORIES:

ಕಾಸರಗೋಡು ಜಿಲ್ಲಾ ಕನ್ನಡ ಪತ್ರಕರ್ತರ ಕ್ಷೇಮಭಿವೃದ್ಧಿ ಸಂಘದ ದತ್ತಿನಿಧಿ ಪ್ರಶಸ್ತಿಗೆ ಮುಂಬೈಯ ನಿಷ್ಠಾವಂತ ಪತ್ರಕರ್ತ ನವೀನ್ ಕೆ ಇನ್ನ ಆಯ್ಕೆ


ಕಾಸರಗೋಡು ಜಿಲ್ಲಾ ಕನ್ನಡ ಪತ್ರಕರ್ತರ ಕ್ಷೇಮಾಭಿವೃದ್ಧಿ ಸಂಘವು, ಕಳೆದ ಎರಡು ದಶಕಗಳಿಂದ ಕನ್ನಡ ಭಾಷೆ, ಸಂಸ್ಕೃತಿ, ಕಲೆಗಳ ಉಳಿವಿಗಾಗಿ ಶ್ರಮಿಸುತ್ತಿದೆ.
ಸಂಘವು ಪ್ರತಿ ವರ್ಷ ದತ್ತಿನಿಧಿ ಪ್ರಶಸ್ತಿಯನ್ನು ಪ್ರಧಾನಿಸುತ್ತಿದ್ದು ಈ ಬಾರಿಯ ನ್ಯಾಯವಾದಿ ಮಹಮ್ಮದ್ ಇಬ್ರಾಹಿಂ ಪಾರ ಸ್ವರಣಾರ್ಥ, ನ್ಯಾಯವಾದಿ ಇಬ್ರಾಹಿಂ ಖಲೀಲ್ ಅರಿಮಲ ದುಬೈ ಅವರು ನೀಡುವ ದತ್ತಿನಿಧಿ ಪ್ರಶಸ್ತಿಗೆ ಮುಂಬಯಿಯ ಪ್ರಾಮಾಣಿಕ, ನಿಷ್ಠಾವಂತ ಪತ್ರಕರ್ತ ನವೀನ್ ಕೆ ಇನ್ನ ಆಯ್ಕೆಯಾಗಿದ್ದಾರೆ.
ಪ್ರಶಸ್ತಿ ಪ್ರಧಾನ ಸಮಾರಂಭ ಜುಲೈ 13ರಂದು ಬೆಳ್ಳಿಗ್ಗೆ, ಕಾಸರಗೋಡು ಜಿಲ್ಲೆಯ ಸೀತಾಂಗೋಳಿ ಲಯನ್ಸ್ ಸಭಾಂಗಣದಲ್ಲಿ ನಡೆಯಲಿದೆ. ಕರ್ನಾಟಕ ವಿಧಾನ ಸಭೆಯ ಸಭಾಧ್ಯಕ್ಷ ಯು. ಟಿ. ಖಾದರ್, ಕರ್ನಾಟಕ ಅರಣ್ಯ ಸಚಿವ ಈಶ್ವರ ಬಿ ಖಂಡ್ರೆ, ಉಪ ಸಭಾಪತಿ ಎಂ. ಕೆ. ಪ್ರಾಣೇಶ್, ಕರ್ನಾಟಕ ಮುಖ್ಯಮಂತ್ರಿಗಳ ಸಲಹೆಗಾರ ಕೆ ವಿ ಪ್ರಭಾಕರ, ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಸೋಮಣ್ಣ ಬೇವಿನಮರದ, ಕಾಸರಗೋಡು ಸಂಸದರಾದ ಮೋಹನ್ ಉಣ್ಣಿತ್ತಾನ್,ಕೇರಳ ಶಾಸಕ ಎನ್ ಎ ನೆಲ್ಲಿಕುನ್ನು ಮೊದಲಾದ ಗಣ್ಯರು ಪ್ರಶಸ್ತಿ ಪ್ರಧಾನಿಸಲಿರುವರು.
ಪ್ರಶಸ್ತಿಯು ನಗದು, ಪ್ರಶಸ್ತಿ ಪತ್ರ, ಸ್ಮರಣಿಕೆ ಹೊಂದಿರುತ್ತದೆ.

ನವೀನ್ ಕೆ. ಇನ್ನ, ಪರಿಚಯ ಮತ್ತು ಸಾಧನೆ.

ಕಳೆದ 33 ವರ್ಷಗಳಿಂದ ಮುಂಬಯಿ ಮಹಾನಗರದ ದೈನಿಕ ಕರ್ನಾಟಕ ಮಲ್ಲ ದಲ್ಲಿ ವರದಿಗಾರನಾಗಿ, ಛಾಯಾಚಿತ್ರಗ್ರಾಹಕನಾಗಿ, ಜಾಹಿರಾತು ಪ್ರತಿನಿಧಿಯಾಗಿ, ಕ್ರೀಡಾ ಅಂಕಣ ಕಾರನಾಗಿ ಕಾರ್ಯನಿರ್ವಹಿಸುತ್ತಿರುವ ನವೀನ್ ಕೆ.ಇನ್ನ ಅವರು
ಸಮಾಜಮುಖಿ ಸೇವೆಯಲ್ಲಿ ಹೆಚ್ಚಿನ ಆಸಕ್ತಿ ವಹಿಸುವವರು. ಮುಂಬಯಿಯಲ್ಲಿ ಕನ್ನಡವನ್ನು ಗಟ್ಟಿಗೊಳಿಸುವಲ್ಲಿ ಶ್ರಮಿಸುತ್ತಾ ಬಂದವರಲ್ಲಿ ಪ್ರಮುಖ ಸಾಲಲ್ಲಿ ನಿಲ್ಲುವ ಅರ್ಹತೆ ಪಡೆದವರು ನವೀನ್ ಕೆ.ಇನ್ನ. ಪತ್ರಿಕೆ ಮುಖೇನ
ಸಾಮಾಜಿಕ ,ಶೈಕ್ಷಣಿಕ, ವೈದ್ಯಕೀಯ ಸೇವೆ, ಮುಂಬಯಿ ಮಹಾನಗರದ ಹೆಚ್ಚಿನ ವಿವಿಧ ಜಾತೀಯ, ಸಂಘಟನೆ, ಸಾಮಾಜಿಕ ಧಾರ್ಮಿಕ, ಶೈಕ್ಷಣಿಕ,ಕಲಾ ಸಂಸ್ಥೆಗಳೊಂದಿಗೆ ನಿಕಟ ಸಂಬಂಧವನ್ನು ಹೊಂದಿರುವವರು.

ತುಳುನಾಡ ಸಂಸ್ಕೃತಿಯನ್ನು ಪ್ರತಿಬಿಂಬಿಸುವಂತಹ ಲೇಖನಗಳು ಅಲ್ಲದೆ ಮುಂಬಯಿ ಮಹಾನಗರದ ಹಾಗೂ ತುಳುನಾಡಿನ ನೂರಾರು ಧಾರ್ಮಿಕ ಕ್ಷೇತ್ರಗಳ ಪರಿಚಯ ಲೇಖನಗಳು ಕರ್ನಾಟಕ ಮಲ್ಲದಲ್ಲಿ ಪ್ರಸಾರಮಾಡಿದವರು. ‘

ಪತ್ರಕರ್ತನಾಗಿ ಸಾಧನೆಗಳು:


‘ಬೀದಿಯಲ್ಲಿ ಅಣಕು ನಾಟಕವಾಗುತ್ತಿರುವ ಭೂತಾರಾಧನೆ’ ಎಂಬ ಲೇಖನಕ್ಕೆ ಓದುಗರಿಂದ ಪ್ರಶಂಸೆ ಹಾಗೂ ಬೆಂಬಲ ವ್ಯಕ್ತ. ಈ ಲೇಖನದ ಬಗ್ಗೆ ನೂರಕ್ಕೂ ಹೆಚ್ಚು ಮಿಕ್ಕಿ ಪತ್ರಗಳು ಬಂದಿದ್ದು ತುಂಬಾ ಚರ್ಚೆಗೆ ಕಾರಣವಾಯಿತು. ದೈವ ದೇವರುಗಳ ಬಗ್ಗೆ ಅನನ್ಯ ನಂಬಿಕೆ, ಭಕ್ತಿ ವಿಶ್ವಾಸ. ಮುಂಬಯಿ ಮಹಾನಗರದಲ್ಲಿದ್ದು ಮನೆಯಿಂದ ತಪ್ಪಿಸಿಕೊಂಡಿದ್ದ ಮೂವರು ಎಳೆ ಪ್ರಾಯದ ಮಕ್ಕಳನ್ನು ಅವರವರ ಊರಿನ ಮನೆಗೆ ತಲುಪಿಸಿದ ತೃಪ್ತಿ.
ಸನ್ಮಾನ -ಪ್ರಶಸ್ತಿಗಳು- ಪತ್ರಕರ್ತರ ವೇದಿಕೆ(ರಿ) ಬೆಂಗಳೂರು ಉಡುಪಿ ಜಿಲ್ಲಾ ಘಟಕ ನೀಡುವ ರಾಜೇಶ ಶಿಬಾಜೆ ಗೌರವ.
ಇನ್ನ ಘಟಕದ ಉದ್ಘಾಟನಾ ಸಮಾರಂಭದಲ್ಲಿ ಆಳ್ವಾಸ್ ನುಡಿಸಿರಿ ವಿರಾಸತ್ ಸನ್ಮಾನ.
ಅಜೆಕಾರು ಕಲಾಭಿಮಾನಿ ಬಳಗ ಮುಂಬಯಿ ಇವರಿಂದ ಯಕ್ಷ ರಕ್ಷಾ ಕಲಾ ಪ್ರಶಸ್ತಿ,
ಕಲಾಜಗತ್ತು ಮುಂಬಯಿ ಇವರಿಂದ ತೌಳವ ಶ್ರೀ ಪ್ರಶಸ್ತಿ
ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಕಾರ್ಕಳ ತಾಲೂಕು ಘಟಕ 12ನೇಯ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಸನ್ಮಾನ
ರಾಷ್ಟ್ರೀಯ ಬಿಲ್ಲವರ ಮಹಾಮಂಡಲ ಮೂಲ್ಕಿ ಇವರಿಂದ ಸನ್ಮಾನ
ಮುಂಬಯಿ ಮಹಾನಗರದ ಹಾಗೂ ನಾಡಿನ ಅನೇಕ ಧಾರ್ಮಿಕ ಸಾಮಾಜಿಕ ಸಂಸ್ಥೆಗಳಲ್ಲಿ‌ ಹಲವಾರು ಸನ್ಮಾನ, ಪ್ರಶಸ್ತಿಗಳು ಇವರ ಸಾಧನೆಗೆ ದೊರೆತಿವೆ.


Related Posts

ರಾಜ್ಯದಲ್ಲಿ ರಚನೆಯಾಗಲಿರುವ ನೂತನ ಸಚಿವ ಸಂಪುಟ ಸಚಿವ ಸಂಪುಟದಲ್ಲಿ ಬಿಲ್ಲವ ಸಮಾಜಕ್ಕೆ ಸೂಕ್ತ ಪ್ರಾತಿನಿಧ್ಯ ನೀಡಬೇಕು


Share         ಹಿರಿಯ ಕಾಂಗ್ರೆಸ್ ನಾಯಕ ಬಿ.ಕೆ. ಹರಿಪ್ರಸಾದ್ ಅವರಿಗೆ ಸಚಿವ ಸ್ಥಾನ ನೀಡಬೇಕು ಬಿಲ್ಲವ ಸಮಾಜಕ್ಕೆ ನ್ಯಾಯಯುತ ಪ್ರಾತಿನಿಧ್ಯ ಒದಗಿಸಬೇಕು ಸೋಲೂರು ಮಠದ ಪೀಠಾಧಿಪತಿಗಳಾದ ಶ್ರೀ ಶ್ರೀ ವಿಖ್ಯಾತಾನಂದ ಸ್ವಾಮೀಜಿ ಆಗ್ರಹ ರಾಜ್ಯದಲ್ಲಿ ರಚನೆಯಾಗಲಿರುವ


Read More »

ಕುಂದಾಪುರ ಬಿಲ್ಲವ ಸಮಾಜ ಸೇವಾ ಸಂಘದ ಅಧ್ಯಕ್ಷರಾಗಿ ಅಶೋಕ್ ಪೂಜಾರಿ ಪುನಾರಾಯ್ಕೆ


Share         ಕುಂದಾಪುರ, ಮೇ 24: ಬಿಲ್ಲವ ಸಮಾಜ ಸೇವಾ ಸಂಘ ಕುಂದಾಪುರ ಇದರ 2025-26ನೇ ಸಾಲಿನ ವಾರ್ಷಿಕ ಮಹಾಸಭೆಯು ರವಿವಾರ ಶ್ರೀ ನಾರಾಯಣ ಗುರು ಕಲ್ಯಾಣ ಮಂಟಪದಲ್ಲಿ ಜರಗಿತು. ಕುಂದಾಪುರ ಬಿಲ್ಲವ ಸಮಾಜ ಸೇವಾ


Read More »

ನಿಸ್ವಾರ್ಥ ಸೇವೆ ಸಲ್ಲಿಸಿ “ಜನಸ್ನೇಹಿ ಪೊಲೀಸ್” ಎಂಬ ಹೆಗ್ಗಳಿಕೆಗೆ ಪಾತ್ರರಾಗಿರುವ ನಮ್ಮ ಸಮಾಜದ ಹೆಮ್ಮೆ ಎಸಿಪಿ ಶ್ರೀ ಎಸ್. ಮಹೇಶ್ ಕುಮಾರ್


Share         ಶ್ರೀ ಎಸ್. ಮಹೇಶ್ ಕುಮಾರ್ ಅವರು ಕಳೆದ 25 ವರ್ಷಗಳಿಂದ ಪೊಲೀಸ್ ಇಲಾಖೆಯಲ್ಲಿ ನಿಸ್ವಾರ್ಥ ಸೇವೆ ಸಲ್ಲಿಸಿ “ಜನಸ್ನೇಹಿ ಪೊಲೀಸ್” ಎಂಬ ಹೆಗ್ಗಳಿಕೆಗೆ ಪಾತ್ರರಾಗಿರುವುದು ಅವರ ಕರ್ತವ್ಯನಿಷ್ಠೆ ಮತ್ತು ಮಾನವೀಯತೆಯ ಪ್ರತೀಕವಾಗಿದೆ. 2012ರಲ್ಲಿ


Read More »

10ನೇ ಅಖಿಲ ಭಾರತ ಅರ್ಬನ್ ಕೋ-ಆಪರೇಟಿವ್ ಬ್ಯಾಂಕಿಂಗ್ ಶೃಂಗಸಭೆಯಲ್ಲಿ ಭಾರತ್ ಬ್ಯಾಂಕಿಗೆ ಪ್ರತಿಷ್ಠಿತ ಲೀಡಿಂಗ್ ಬ್ಯಾಂಕ್ ಅವಾರ್ಡ್.


Share         ಪುಣೆಯ ಕೊರೆಗಾಂವ್ ಪಾರ್ಕ್‌ನ ಹೋಟೆಲ್ ವೆಸ್ಟಿನ್‌ನಲ್ಲಿ ನಡೆದ 10ನೇ ಅಖಿಲ ಭಾರತ ಅರ್ಬನ್ ಕೋ-ಆಪರೇಟಿವ್ ಬ್ಯಾಂಕಿಂಗ್ ಶೃಂಗಸಭೆಯಲ್ಲಿ ಭಾರತ್ ಬ್ಯಾಂಕಿಗೆ ಪ್ರತಿಷ್ಠಿತ “ಲೀಡಿಂಗ್ ಬ್ಯಾಂಕ್ ಅವಾರ್ಡ್” (Leading Bank Award) ನೀಡಿ ಗೌರವಿಸಲಾಯಿತು.


Read More »

ಕುದ್ರೋಳಿ ಗೋಕರ್ಣ ಕ್ಷೇತ್ರ ಅಭಿವೃದ್ಧಿ ರೂವಾರಿ ಬಿ. ಜನಾರ್ದನ ಪೂಜಾರಿ ಅವರ ಉಪಸ್ಥಿತಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಪದ್ಮರಾಜ್ ಆರ್. ಸ್ಪಷ್ಟನೆ


Share         ಮಂಗಳೂರು: ಕುದ್ರೋಳಿ ಗೋಕರ್ಣನಾಥ ಕ್ಷೇತ್ರದ ಆಡಳಿತ ನಿರ್ವಹಣೆಗೆ ಪ್ರಸ್ತುತ ಇರುವ ಸಮಿತಿಯ ಹೊರತಾಗಿ ಯಾವುದೇ ಹೊಸ ಸಮಿತಿ ರಚನೆಯಾಗಿಲ್ಲ ಎಂದು ಸಮಿತಿಯ ಕೋಶಾಧಿಕಾರಿ ಪದ್ಮರಾಜ್ ಆರ್. ಶನಿವಾರ ಇಲ್ಲಿ ತಿಳಿಸಿದರು. ಕ್ಷೇತ್ರದ ಅಭಿವೃದ್ಧಿ


Read More »

ಶೈಕ್ಷಣಿಕ ಸಾಧನೆಯಲ್ಲೂ ‘ಸೇಮ್ ಟು ಸೇಮ್’: ಕುಂದಾಪುರದ ಅವಳಿ ಸಹೋದರಿಯರ SSLC ಪವಾಡ!


Share         ​ಕುಂದಾಪುರ: ಅವಳಿ ಜವಳಿ ಮಕ್ಕಳು ಅಂದಮೇಲೆ ಅವರ ರೂಪ, ಬಣ್ಣ, ನಡವಳಿಕೆ ಹಾಗೂ ಆಲೋಚನೆಗಳಲ್ಲಿ ಸಾಮ್ಯತೆ ಇರುವುದು ಸಹಜ ಸಂಗತಿ. ಆದರೆ, ಕುಂದಾಪುರದ ಈ ಇಬ್ಬರು ಸಹೋದರಿಯರು ಶೈಕ್ಷಣಿಕ ಸಾಧನೆಯಲ್ಲೂ ತಾವು ಸಂಪೂರ್ಣವಾಗಿ


Read More »