TOP STORIES:

FOLLOW US

ಕಾಸರಗೋಡು ಜಿಲ್ಲಾ ಕನ್ನಡ ಪತ್ರಕರ್ತರ ಕ್ಷೇಮಭಿವೃದ್ಧಿ ಸಂಘದ ದತ್ತಿನಿಧಿ ಪ್ರಶಸ್ತಿಗೆ ಮುಂಬೈಯ ನಿಷ್ಠಾವಂತ ಪತ್ರಕರ್ತ ನವೀನ್ ಕೆ ಇನ್ನ ಆಯ್ಕೆ


ಕಾಸರಗೋಡು ಜಿಲ್ಲಾ ಕನ್ನಡ ಪತ್ರಕರ್ತರ ಕ್ಷೇಮಾಭಿವೃದ್ಧಿ ಸಂಘವು, ಕಳೆದ ಎರಡು ದಶಕಗಳಿಂದ ಕನ್ನಡ ಭಾಷೆ, ಸಂಸ್ಕೃತಿ, ಕಲೆಗಳ ಉಳಿವಿಗಾಗಿ ಶ್ರಮಿಸುತ್ತಿದೆ.
ಸಂಘವು ಪ್ರತಿ ವರ್ಷ ದತ್ತಿನಿಧಿ ಪ್ರಶಸ್ತಿಯನ್ನು ಪ್ರಧಾನಿಸುತ್ತಿದ್ದು ಈ ಬಾರಿಯ ನ್ಯಾಯವಾದಿ ಮಹಮ್ಮದ್ ಇಬ್ರಾಹಿಂ ಪಾರ ಸ್ವರಣಾರ್ಥ, ನ್ಯಾಯವಾದಿ ಇಬ್ರಾಹಿಂ ಖಲೀಲ್ ಅರಿಮಲ ದುಬೈ ಅವರು ನೀಡುವ ದತ್ತಿನಿಧಿ ಪ್ರಶಸ್ತಿಗೆ ಮುಂಬಯಿಯ ಪ್ರಾಮಾಣಿಕ, ನಿಷ್ಠಾವಂತ ಪತ್ರಕರ್ತ ನವೀನ್ ಕೆ ಇನ್ನ ಆಯ್ಕೆಯಾಗಿದ್ದಾರೆ.
ಪ್ರಶಸ್ತಿ ಪ್ರಧಾನ ಸಮಾರಂಭ ಜುಲೈ 13ರಂದು ಬೆಳ್ಳಿಗ್ಗೆ, ಕಾಸರಗೋಡು ಜಿಲ್ಲೆಯ ಸೀತಾಂಗೋಳಿ ಲಯನ್ಸ್ ಸಭಾಂಗಣದಲ್ಲಿ ನಡೆಯಲಿದೆ. ಕರ್ನಾಟಕ ವಿಧಾನ ಸಭೆಯ ಸಭಾಧ್ಯಕ್ಷ ಯು. ಟಿ. ಖಾದರ್, ಕರ್ನಾಟಕ ಅರಣ್ಯ ಸಚಿವ ಈಶ್ವರ ಬಿ ಖಂಡ್ರೆ, ಉಪ ಸಭಾಪತಿ ಎಂ. ಕೆ. ಪ್ರಾಣೇಶ್, ಕರ್ನಾಟಕ ಮುಖ್ಯಮಂತ್ರಿಗಳ ಸಲಹೆಗಾರ ಕೆ ವಿ ಪ್ರಭಾಕರ, ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಸೋಮಣ್ಣ ಬೇವಿನಮರದ, ಕಾಸರಗೋಡು ಸಂಸದರಾದ ಮೋಹನ್ ಉಣ್ಣಿತ್ತಾನ್,ಕೇರಳ ಶಾಸಕ ಎನ್ ಎ ನೆಲ್ಲಿಕುನ್ನು ಮೊದಲಾದ ಗಣ್ಯರು ಪ್ರಶಸ್ತಿ ಪ್ರಧಾನಿಸಲಿರುವರು.
ಪ್ರಶಸ್ತಿಯು ನಗದು, ಪ್ರಶಸ್ತಿ ಪತ್ರ, ಸ್ಮರಣಿಕೆ ಹೊಂದಿರುತ್ತದೆ.

ನವೀನ್ ಕೆ. ಇನ್ನ, ಪರಿಚಯ ಮತ್ತು ಸಾಧನೆ.

ಕಳೆದ 33 ವರ್ಷಗಳಿಂದ ಮುಂಬಯಿ ಮಹಾನಗರದ ದೈನಿಕ ಕರ್ನಾಟಕ ಮಲ್ಲ ದಲ್ಲಿ ವರದಿಗಾರನಾಗಿ, ಛಾಯಾಚಿತ್ರಗ್ರಾಹಕನಾಗಿ, ಜಾಹಿರಾತು ಪ್ರತಿನಿಧಿಯಾಗಿ, ಕ್ರೀಡಾ ಅಂಕಣ ಕಾರನಾಗಿ ಕಾರ್ಯನಿರ್ವಹಿಸುತ್ತಿರುವ ನವೀನ್ ಕೆ.ಇನ್ನ ಅವರು
ಸಮಾಜಮುಖಿ ಸೇವೆಯಲ್ಲಿ ಹೆಚ್ಚಿನ ಆಸಕ್ತಿ ವಹಿಸುವವರು. ಮುಂಬಯಿಯಲ್ಲಿ ಕನ್ನಡವನ್ನು ಗಟ್ಟಿಗೊಳಿಸುವಲ್ಲಿ ಶ್ರಮಿಸುತ್ತಾ ಬಂದವರಲ್ಲಿ ಪ್ರಮುಖ ಸಾಲಲ್ಲಿ ನಿಲ್ಲುವ ಅರ್ಹತೆ ಪಡೆದವರು ನವೀನ್ ಕೆ.ಇನ್ನ. ಪತ್ರಿಕೆ ಮುಖೇನ
ಸಾಮಾಜಿಕ ,ಶೈಕ್ಷಣಿಕ, ವೈದ್ಯಕೀಯ ಸೇವೆ, ಮುಂಬಯಿ ಮಹಾನಗರದ ಹೆಚ್ಚಿನ ವಿವಿಧ ಜಾತೀಯ, ಸಂಘಟನೆ, ಸಾಮಾಜಿಕ ಧಾರ್ಮಿಕ, ಶೈಕ್ಷಣಿಕ,ಕಲಾ ಸಂಸ್ಥೆಗಳೊಂದಿಗೆ ನಿಕಟ ಸಂಬಂಧವನ್ನು ಹೊಂದಿರುವವರು.

ತುಳುನಾಡ ಸಂಸ್ಕೃತಿಯನ್ನು ಪ್ರತಿಬಿಂಬಿಸುವಂತಹ ಲೇಖನಗಳು ಅಲ್ಲದೆ ಮುಂಬಯಿ ಮಹಾನಗರದ ಹಾಗೂ ತುಳುನಾಡಿನ ನೂರಾರು ಧಾರ್ಮಿಕ ಕ್ಷೇತ್ರಗಳ ಪರಿಚಯ ಲೇಖನಗಳು ಕರ್ನಾಟಕ ಮಲ್ಲದಲ್ಲಿ ಪ್ರಸಾರಮಾಡಿದವರು. ‘

ಪತ್ರಕರ್ತನಾಗಿ ಸಾಧನೆಗಳು:


‘ಬೀದಿಯಲ್ಲಿ ಅಣಕು ನಾಟಕವಾಗುತ್ತಿರುವ ಭೂತಾರಾಧನೆ’ ಎಂಬ ಲೇಖನಕ್ಕೆ ಓದುಗರಿಂದ ಪ್ರಶಂಸೆ ಹಾಗೂ ಬೆಂಬಲ ವ್ಯಕ್ತ. ಈ ಲೇಖನದ ಬಗ್ಗೆ ನೂರಕ್ಕೂ ಹೆಚ್ಚು ಮಿಕ್ಕಿ ಪತ್ರಗಳು ಬಂದಿದ್ದು ತುಂಬಾ ಚರ್ಚೆಗೆ ಕಾರಣವಾಯಿತು. ದೈವ ದೇವರುಗಳ ಬಗ್ಗೆ ಅನನ್ಯ ನಂಬಿಕೆ, ಭಕ್ತಿ ವಿಶ್ವಾಸ. ಮುಂಬಯಿ ಮಹಾನಗರದಲ್ಲಿದ್ದು ಮನೆಯಿಂದ ತಪ್ಪಿಸಿಕೊಂಡಿದ್ದ ಮೂವರು ಎಳೆ ಪ್ರಾಯದ ಮಕ್ಕಳನ್ನು ಅವರವರ ಊರಿನ ಮನೆಗೆ ತಲುಪಿಸಿದ ತೃಪ್ತಿ.
ಸನ್ಮಾನ -ಪ್ರಶಸ್ತಿಗಳು- ಪತ್ರಕರ್ತರ ವೇದಿಕೆ(ರಿ) ಬೆಂಗಳೂರು ಉಡುಪಿ ಜಿಲ್ಲಾ ಘಟಕ ನೀಡುವ ರಾಜೇಶ ಶಿಬಾಜೆ ಗೌರವ.
ಇನ್ನ ಘಟಕದ ಉದ್ಘಾಟನಾ ಸಮಾರಂಭದಲ್ಲಿ ಆಳ್ವಾಸ್ ನುಡಿಸಿರಿ ವಿರಾಸತ್ ಸನ್ಮಾನ.
ಅಜೆಕಾರು ಕಲಾಭಿಮಾನಿ ಬಳಗ ಮುಂಬಯಿ ಇವರಿಂದ ಯಕ್ಷ ರಕ್ಷಾ ಕಲಾ ಪ್ರಶಸ್ತಿ,
ಕಲಾಜಗತ್ತು ಮುಂಬಯಿ ಇವರಿಂದ ತೌಳವ ಶ್ರೀ ಪ್ರಶಸ್ತಿ
ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಕಾರ್ಕಳ ತಾಲೂಕು ಘಟಕ 12ನೇಯ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಸನ್ಮಾನ
ರಾಷ್ಟ್ರೀಯ ಬಿಲ್ಲವರ ಮಹಾಮಂಡಲ ಮೂಲ್ಕಿ ಇವರಿಂದ ಸನ್ಮಾನ
ಮುಂಬಯಿ ಮಹಾನಗರದ ಹಾಗೂ ನಾಡಿನ ಅನೇಕ ಧಾರ್ಮಿಕ ಸಾಮಾಜಿಕ ಸಂಸ್ಥೆಗಳಲ್ಲಿ‌ ಹಲವಾರು ಸನ್ಮಾನ, ಪ್ರಶಸ್ತಿಗಳು ಇವರ ಸಾಧನೆಗೆ ದೊರೆತಿವೆ.


Share:

More Posts

Category

Send Us A Message

Related Posts

ಬಹರೈನ್ ನಲ್ಲಿ ನಡೆದ ಅನಿವಾಸಿ ಭಾರತೀಯ ಸಮಿತಿ ಕರ್ನಾಟಕ ಬಹರೈನ್ ಇದರ ನೂತನ ಅಧ್ಯಕ್ಷರಾಗಿ ರಾಜ್ ಕುಮಾರ್ ಆಯ್ಕೆ


Share       ಮುಂಬಯಿ, (ಆರ್‌ಬಿಐ) ಜ.೧೧ : ಅನಿವಾಸಿ ಭಾರತೀಯ ಸಮಿತಿ ಕರ್ನಾಟಕ ಬಹರೈನ್ ಇದರ ನೂತನ ಸಮಿತಿಯ ಪದಗ್ರಹನ ಹಾಗೂ ಕರ್ನಾಟಕ ಸಂಗಮ ಸಾಂಸ್ಕೃತಿಕ ಕಾರ್ಯಕ್ರಮ ಬಹರೈನ್ ನ ದಿ ಇಂಡಿಯಾನ್ ಕ್ಲಬ್ ಸಭಾಂಗಣದಲ್ಲಿ


Read More »

ಯುವವಾಹಿನಿ(ರಿ) ಕೂಳೂರು ಘಟಕ ಪದಗ್ರಹಣ ಸಮಾರಂಭದಲ್ಲಿ ಗೆಜ್ಜೆಗಿರಿ ಜಾತ್ರಾ ಮಹೋತ್ಸವದ ಆಮಂತ್ರಣ ಬಿಡುಗಡೆ


Share       ಯುವವಾಹಿನಿ(ರಿ) ಕೂಳೂರು ಘಟಕ ಪದಗ್ರಹಣ ಸಮಾರಂಭದಲ್ಲಿ ಗೆಜ್ಜೆಗಿರಿ ಜಾತ್ರಾ ಮಹೋತ್ಸವದ  ಆಮಂತ್ರಣ ಬಿಡುಗಡೆ ಗೆಜ್ಜೆಗಿರಿಯ ಜಾತ್ರಾ ಮಹೋತ್ಸವದ ಆಮಂತ್ರಣ ಪತ್ರಿಕೆ ಯುವವಾಹಿನಿ ಪದಗ್ರಹಣ ಕಾರ್ಯಕ್ರಮದಲ್ಲಿ ಯುವ ವಾಹಿನಿ ಕೇಂದ್ರ ಸಮಿತಿ ಅಧ್ಯಕ್ಷರಾದ ಲೋಕೇಶ್


Read More »

26ರಂದು ದೆಹಲಿಯಲ್ಲಿ ನಡೆಯುವ ಗಣರಾಜ್ಯೋತ್ಸವಕ್ಕೆ ಪಾಲ್ಗೊಳ್ಳಲು ಕೇಂದ್ರ ಸರಕಾರದಿಂದ ಕೇಶವ ಕೋಟ್ಯಾನ್ ಅವರಿಗೆ ಆಹ್ವಾನ


Share       ಎಲ್ಲರ ಸಹಕಾರದಿಂದ ಸಾಧ್ಯವಾದ ಸಾಧನೆ. 80ನೇ ಬಡಗಬೆಟ್ಟು ವ್ಯಾಪ್ತಿಯಲ್ಲಿ ಮನೆ ಮನೆಗೆ ಕುಡಿಯುವ ನೀರು ಪೊರೈಸುವ ಕೇಂದ್ರ ಸರಕಾರದ ಮಹತ್ವಕಾಂಕ್ಷಿ ಯೋಜನೆಯನ್ನು ಸಮರ್ಥವಾಗಿ ಅನುಷ್ಠಾನ ಮಾಡುವಲ್ಲಿ ಉಡುಪಿ ಜಿಲ್ಲಾ ಪಂಚಾಯತಿ ಅಧಿಕಾರಿಗಳು, ನಮ್ಮಗ್ರಾಮ


Read More »

ಭರತನಾಟ್ಯದಲ್ಲಿ ವಿಧುಷಿ ಎಂಬ ಗೌರವ ಪಡೆದ ವಿಧುಷಿ ಅದಿತಿ ಪೂಜಾರಿ ಅವರಿಗೆ ಅಭಿನಂದನೆಗಳು


Share       ವಿಧುಷಿ ಅದಿತಿ ಪೂಜಾರಿ ಅವರಿಗೆ ಅಭಿನಂದನೆಗಳು  ನಿತ್ಯಾನಂದ ಮತ್ತು ತುಳಸಿಯವರ ಪುತ್ರಿ ಗುರು ವಿಧುಷಿ ಪ್ರತಿಮಾ ಶ್ರೀಧರ್ ಮತ್ತು ಶ್ರೀಧರ ಹೊಳ್ಳ ಅವರ ಮಾರ್ಗದರ್ಶನದಲ್ಲಿ ಭರತಾಂಜಲಿ (ಆರ್) ಕೊಟ್ಟಾರದಲ್ಲಿ ಕಲಿಕೆ ಅದಿತಿ ಅವರು


Read More »

ಅನಿತಾ ಪಿ.ತಾಕೊಡೆಯವರ ಸುವರ್ಣಯುಗ ಕೃತಿಗೆ ಡಾ. ವಿಶ್ವನಾಥ ಕಾರ್ನಾಡ್ ಪ್ರತಿಷ್ಠಾನ ಮುಂಬಯಿ ವತಿಯಿಂದ “ವಿಕಾಸ ಪುಸ್ತಕ ಬಹುಮಾನ”


Share       ಮುಂಬಯಿ:- ಹಿರಿಯ ಸಾಹಿತಿ, ಲೇಖಕ, ಪ್ರಾಧ್ಯಾಪಕ ಡಾ.ವಿಶ್ವನಾಥ ಕಾರ್ನಾಡ್ ಪ್ರತಿಷ್ಠಾನವು ಮುಂಬಯಿ ಕನ್ನಡ ಪುಸ್ತಕ ಸಂಸ್ಕೃತಿಯನ್ನು ಪ್ರೋತ್ಸಾಹಿಸುವ ದೃಷ್ಟಿಯಿಂದ ಕೊಡಮಾಡುತ್ತಾ ಬಂದ ಪುಸ್ತಕ ಬಹುಮಾನ ಯೋಜನೆಯಂತೆ 2023-24ರ ಸಾಲಿನ ವಿಕಾಸ’ ಪುಸ್ತಕ ಬಹುಮಾನಕ್ಕೆ,


Read More »

ಒಮಾನ್ ಬಿಲ್ಲವಾಸ್ ಕೂಟದ ನೂತನ ಅಧ್ಯಕ್ಷರಾಗಿ ಶ್ರೀಯುತ ಉಮೇಶ್ ಬಂಟ್ವಾಳ್ ಆಯ್ಕೆ


Share       ಬಂಟ್ವಾಳದವರಾಗಿರುವ ಉಮೇಶ್ ಬಂಟ್ವಾಳ್ ಅವರು ಮಂಗಳೂರು ವಿಶ್ವವಿದ್ಯಾಲಯ ವಾಣಿಜ್ಯ ಪದವಿಯನ್ನು ಪಡೆದಿದ್ದಾರೆ.   ಮಸ್ಕತ್ ನ ಒಮಾನ್ ದೇಶದಲ್ಲಿ ಸುಮಾರು 36 ವರ್ಷದಿಂದ ಅಲ್ ರ‌‌ವಾಸ್ ಹೋಲ್ಡಿಂಗ್ ಬಿಸಿನೆಸ್ ಕಂಪನಿಯಲ್ಲಿ ಮ್ಯಾನೇಜರ್ ಆಗಿ


Read More »