TOP STORIES:

ಕಾಸರಗೋಡು ಜಿಲ್ಲಾ ಕನ್ನಡ ಪತ್ರಕರ್ತರ ಕ್ಷೇಮಭಿವೃದ್ಧಿ ಸಂಘದ ದತ್ತಿನಿಧಿ ಪ್ರಶಸ್ತಿಗೆ ಮುಂಬೈಯ ನಿಷ್ಠಾವಂತ ಪತ್ರಕರ್ತ ನವೀನ್ ಕೆ ಇನ್ನ ಆಯ್ಕೆ


ಕಾಸರಗೋಡು ಜಿಲ್ಲಾ ಕನ್ನಡ ಪತ್ರಕರ್ತರ ಕ್ಷೇಮಾಭಿವೃದ್ಧಿ ಸಂಘವು, ಕಳೆದ ಎರಡು ದಶಕಗಳಿಂದ ಕನ್ನಡ ಭಾಷೆ, ಸಂಸ್ಕೃತಿ, ಕಲೆಗಳ ಉಳಿವಿಗಾಗಿ ಶ್ರಮಿಸುತ್ತಿದೆ.
ಸಂಘವು ಪ್ರತಿ ವರ್ಷ ದತ್ತಿನಿಧಿ ಪ್ರಶಸ್ತಿಯನ್ನು ಪ್ರಧಾನಿಸುತ್ತಿದ್ದು ಈ ಬಾರಿಯ ನ್ಯಾಯವಾದಿ ಮಹಮ್ಮದ್ ಇಬ್ರಾಹಿಂ ಪಾರ ಸ್ವರಣಾರ್ಥ, ನ್ಯಾಯವಾದಿ ಇಬ್ರಾಹಿಂ ಖಲೀಲ್ ಅರಿಮಲ ದುಬೈ ಅವರು ನೀಡುವ ದತ್ತಿನಿಧಿ ಪ್ರಶಸ್ತಿಗೆ ಮುಂಬಯಿಯ ಪ್ರಾಮಾಣಿಕ, ನಿಷ್ಠಾವಂತ ಪತ್ರಕರ್ತ ನವೀನ್ ಕೆ ಇನ್ನ ಆಯ್ಕೆಯಾಗಿದ್ದಾರೆ.
ಪ್ರಶಸ್ತಿ ಪ್ರಧಾನ ಸಮಾರಂಭ ಜುಲೈ 13ರಂದು ಬೆಳ್ಳಿಗ್ಗೆ, ಕಾಸರಗೋಡು ಜಿಲ್ಲೆಯ ಸೀತಾಂಗೋಳಿ ಲಯನ್ಸ್ ಸಭಾಂಗಣದಲ್ಲಿ ನಡೆಯಲಿದೆ. ಕರ್ನಾಟಕ ವಿಧಾನ ಸಭೆಯ ಸಭಾಧ್ಯಕ್ಷ ಯು. ಟಿ. ಖಾದರ್, ಕರ್ನಾಟಕ ಅರಣ್ಯ ಸಚಿವ ಈಶ್ವರ ಬಿ ಖಂಡ್ರೆ, ಉಪ ಸಭಾಪತಿ ಎಂ. ಕೆ. ಪ್ರಾಣೇಶ್, ಕರ್ನಾಟಕ ಮುಖ್ಯಮಂತ್ರಿಗಳ ಸಲಹೆಗಾರ ಕೆ ವಿ ಪ್ರಭಾಕರ, ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಸೋಮಣ್ಣ ಬೇವಿನಮರದ, ಕಾಸರಗೋಡು ಸಂಸದರಾದ ಮೋಹನ್ ಉಣ್ಣಿತ್ತಾನ್,ಕೇರಳ ಶಾಸಕ ಎನ್ ಎ ನೆಲ್ಲಿಕುನ್ನು ಮೊದಲಾದ ಗಣ್ಯರು ಪ್ರಶಸ್ತಿ ಪ್ರಧಾನಿಸಲಿರುವರು.
ಪ್ರಶಸ್ತಿಯು ನಗದು, ಪ್ರಶಸ್ತಿ ಪತ್ರ, ಸ್ಮರಣಿಕೆ ಹೊಂದಿರುತ್ತದೆ.

ನವೀನ್ ಕೆ. ಇನ್ನ, ಪರಿಚಯ ಮತ್ತು ಸಾಧನೆ.

ಕಳೆದ 33 ವರ್ಷಗಳಿಂದ ಮುಂಬಯಿ ಮಹಾನಗರದ ದೈನಿಕ ಕರ್ನಾಟಕ ಮಲ್ಲ ದಲ್ಲಿ ವರದಿಗಾರನಾಗಿ, ಛಾಯಾಚಿತ್ರಗ್ರಾಹಕನಾಗಿ, ಜಾಹಿರಾತು ಪ್ರತಿನಿಧಿಯಾಗಿ, ಕ್ರೀಡಾ ಅಂಕಣ ಕಾರನಾಗಿ ಕಾರ್ಯನಿರ್ವಹಿಸುತ್ತಿರುವ ನವೀನ್ ಕೆ.ಇನ್ನ ಅವರು
ಸಮಾಜಮುಖಿ ಸೇವೆಯಲ್ಲಿ ಹೆಚ್ಚಿನ ಆಸಕ್ತಿ ವಹಿಸುವವರು. ಮುಂಬಯಿಯಲ್ಲಿ ಕನ್ನಡವನ್ನು ಗಟ್ಟಿಗೊಳಿಸುವಲ್ಲಿ ಶ್ರಮಿಸುತ್ತಾ ಬಂದವರಲ್ಲಿ ಪ್ರಮುಖ ಸಾಲಲ್ಲಿ ನಿಲ್ಲುವ ಅರ್ಹತೆ ಪಡೆದವರು ನವೀನ್ ಕೆ.ಇನ್ನ. ಪತ್ರಿಕೆ ಮುಖೇನ
ಸಾಮಾಜಿಕ ,ಶೈಕ್ಷಣಿಕ, ವೈದ್ಯಕೀಯ ಸೇವೆ, ಮುಂಬಯಿ ಮಹಾನಗರದ ಹೆಚ್ಚಿನ ವಿವಿಧ ಜಾತೀಯ, ಸಂಘಟನೆ, ಸಾಮಾಜಿಕ ಧಾರ್ಮಿಕ, ಶೈಕ್ಷಣಿಕ,ಕಲಾ ಸಂಸ್ಥೆಗಳೊಂದಿಗೆ ನಿಕಟ ಸಂಬಂಧವನ್ನು ಹೊಂದಿರುವವರು.

ತುಳುನಾಡ ಸಂಸ್ಕೃತಿಯನ್ನು ಪ್ರತಿಬಿಂಬಿಸುವಂತಹ ಲೇಖನಗಳು ಅಲ್ಲದೆ ಮುಂಬಯಿ ಮಹಾನಗರದ ಹಾಗೂ ತುಳುನಾಡಿನ ನೂರಾರು ಧಾರ್ಮಿಕ ಕ್ಷೇತ್ರಗಳ ಪರಿಚಯ ಲೇಖನಗಳು ಕರ್ನಾಟಕ ಮಲ್ಲದಲ್ಲಿ ಪ್ರಸಾರಮಾಡಿದವರು. ‘

ಪತ್ರಕರ್ತನಾಗಿ ಸಾಧನೆಗಳು:


‘ಬೀದಿಯಲ್ಲಿ ಅಣಕು ನಾಟಕವಾಗುತ್ತಿರುವ ಭೂತಾರಾಧನೆ’ ಎಂಬ ಲೇಖನಕ್ಕೆ ಓದುಗರಿಂದ ಪ್ರಶಂಸೆ ಹಾಗೂ ಬೆಂಬಲ ವ್ಯಕ್ತ. ಈ ಲೇಖನದ ಬಗ್ಗೆ ನೂರಕ್ಕೂ ಹೆಚ್ಚು ಮಿಕ್ಕಿ ಪತ್ರಗಳು ಬಂದಿದ್ದು ತುಂಬಾ ಚರ್ಚೆಗೆ ಕಾರಣವಾಯಿತು. ದೈವ ದೇವರುಗಳ ಬಗ್ಗೆ ಅನನ್ಯ ನಂಬಿಕೆ, ಭಕ್ತಿ ವಿಶ್ವಾಸ. ಮುಂಬಯಿ ಮಹಾನಗರದಲ್ಲಿದ್ದು ಮನೆಯಿಂದ ತಪ್ಪಿಸಿಕೊಂಡಿದ್ದ ಮೂವರು ಎಳೆ ಪ್ರಾಯದ ಮಕ್ಕಳನ್ನು ಅವರವರ ಊರಿನ ಮನೆಗೆ ತಲುಪಿಸಿದ ತೃಪ್ತಿ.
ಸನ್ಮಾನ -ಪ್ರಶಸ್ತಿಗಳು- ಪತ್ರಕರ್ತರ ವೇದಿಕೆ(ರಿ) ಬೆಂಗಳೂರು ಉಡುಪಿ ಜಿಲ್ಲಾ ಘಟಕ ನೀಡುವ ರಾಜೇಶ ಶಿಬಾಜೆ ಗೌರವ.
ಇನ್ನ ಘಟಕದ ಉದ್ಘಾಟನಾ ಸಮಾರಂಭದಲ್ಲಿ ಆಳ್ವಾಸ್ ನುಡಿಸಿರಿ ವಿರಾಸತ್ ಸನ್ಮಾನ.
ಅಜೆಕಾರು ಕಲಾಭಿಮಾನಿ ಬಳಗ ಮುಂಬಯಿ ಇವರಿಂದ ಯಕ್ಷ ರಕ್ಷಾ ಕಲಾ ಪ್ರಶಸ್ತಿ,
ಕಲಾಜಗತ್ತು ಮುಂಬಯಿ ಇವರಿಂದ ತೌಳವ ಶ್ರೀ ಪ್ರಶಸ್ತಿ
ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಕಾರ್ಕಳ ತಾಲೂಕು ಘಟಕ 12ನೇಯ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಸನ್ಮಾನ
ರಾಷ್ಟ್ರೀಯ ಬಿಲ್ಲವರ ಮಹಾಮಂಡಲ ಮೂಲ್ಕಿ ಇವರಿಂದ ಸನ್ಮಾನ
ಮುಂಬಯಿ ಮಹಾನಗರದ ಹಾಗೂ ನಾಡಿನ ಅನೇಕ ಧಾರ್ಮಿಕ ಸಾಮಾಜಿಕ ಸಂಸ್ಥೆಗಳಲ್ಲಿ‌ ಹಲವಾರು ಸನ್ಮಾನ, ಪ್ರಶಸ್ತಿಗಳು ಇವರ ಸಾಧನೆಗೆ ದೊರೆತಿವೆ.


Related Posts

ಶ್ರೀ ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನ ಆಡಳಿತ ಮತ್ತು ಅಭಿವೃದ್ಧಿ ಸಮಿತಿ ನೇತೃತ್ವದಲ್ಲಿ ಗುರುವಾರ ಬೆಳಗ್ಗೆ ಶತ ಸೀಯಾಳಾಭಿಷೇಕ


Share        ಕುದ್ರೋಳಿಯಲ್ಲಿ ವಿಶ್ವಶಾಂತಿಗಾಗಿ ಶತ ಸೀಯಾಳಾಭಿಷೇಕ ಮಂಗಳೂರು: ಜಗತ್ತಿನಾದ್ಯಂತ ಯುದ್ಧದ ಕಾರ್ಮೋಡ ಆವರಿಸಿರುವುದರಿಂದ ವಿಶ್ವ ಶಾಂತಿಗಾಗಿ ಶ್ರೀ ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನ ಆಡಳಿತ ಮತ್ತು ಅಭಿವೃದ್ಧಿ ಸಮಿತಿ ನೇತೃತ್ವದಲ್ಲಿ ಗುರುವಾರ ಬೆಳಗ್ಗೆ ಶತ


Read More »

ಹಿರಿಯ ವರದಿಗಾರ ನಮ್ಮ ಸಮಾಜದ ಹೆಮ್ಮೆಯ ವಿಜಯ ಕೋಟ್ಯಾನ್‌ಗೆ ಬ್ರಾಂಡ್ ಮಂಗಳೂರು ಪ್ರಶಸ್ತಿ ಪ್ರದಾನ


Share        ವಿಕ ಸುದ್ದಿಲೋಕ ಮಂಗಳೂರು ಸೌಹಾರ್ದತೆ ಬಿಂಬಿಸುವ ವರದಿಗೆ ದ.ಕ. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ನೀಡುವ ‘ಬ್ಯಾಂಡ್ ಮಂಗಳೂರು’ ಪ್ರಶಸ್ತಿಗೆ ವಿಜಯ ಕರ್ನಾಟಕ ಪತ್ರಿಕೆಯ ಹಿರಿಯ ವರದಿಗಾರ ನಮ್ಮ ಸಮಾಜದ ಹೆಮ್ಮೆಯ ವಿಜಯ


Read More »

ವಿಜಯ ಕರ್ನಾಟಕ ಹಿರಿಯ ವರದಿಗಾರ ವಿಜಯ ಕೋಟ್ಯಾನ್ ಬ್ರ್ಯಾಂಡ್ ಮಂಗಳೂರು ಪ್ರಶಸ್ತಿಗೆ ಆಯ್ಕೆ


Share        ಮಂಗಳೂರು: ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದಿಂದ ಸೌಹಾರ್ದ ಬಿಂಬಿಸುವ ವರದಿಗೆ ನೀಡಲಾಗುವ “ಬ್ರ‍್ಯಾಂಡ್ ಮಂಗಳೂರು” ಪ್ರಶಸ್ತಿಗೆ ವಿಜಯ ಕರ್ನಾಟಕ ಹಿರಿಯ ವರದಿಗಾರ ವಿಜಯಕೋಟ್ಯಾನ್ ಪಡು  ಆಯ್ಕೆಯಾಗಿದ್ದಾರೆ. ವಿಜಯ ಕರ್ನಾಟಕ ಪತ್ರಿಕೆಯಲ್ಲಿ 2024 ಅಕ್ಟೋಬರ್


Read More »

ದೇಯಿ ಬೈದ್ಯೆತಿ ಕೋಟಿ ಚೆನ್ನಯ ಮೂಲಸ್ಥಾನ ಅಭಿವೃದ್ಧಿ ಚಾರಿಟೇಬಲ್ ಟ್ರಸ್ಟ್( ರಿ) ಇದರ ನೂತನ ಅಧ್ಯಕ್ಷರಾಗಿ ಕೆ. ಸಂಜೀವ ಪೂಜಾರಿ ಆಯ್ಕೆ


Share        ಶ್ರೀ ಕ್ಷೇತ್ರ ಗೆಜ್ಜೆಗಿರಿಯ ದೇಯಿ ಬೈದ್ಯೆತಿ ಕೋಟಿ ಚೆನ್ನಯ ಮೂಲಸ್ಥಾನ ಅಭಿವೃದ್ಧಿ  ಚಾರಿಟೇಬಲ್ ಟ್ರಸ್ಟ್(ರಿ) ಇದರ ನೂತನ ಅಧ್ಯಕ್ಷರಾಗಿ ಬಿರ್ವ ಸೆಂಟರ್ ಇದರ ಮಾಲಕರಾದ  ಕೆ ಸಂಜೀವ ಪೂಜಾರಿ ಇವರನ್ನು ಕಂಕನಾಡಿ ಬ್ರಹ್ಮ


Read More »

8ನೇ ವಯಸ್ಸಿನಲ್ಲಿ ಕಪೋತಾಸನದ ಭಂಗಿಯಲ್ಲಿ ವಿಶ್ವ ದಾಖಲೆ ಮಾಡಿದ ಬಾಲಕಿ ಕುಮಾರಿ ಶರಣ್ಯ ಶರತ್!


Share        ಮಂಗಳೂರು, ಜೂ. 20 ಪನ್ನೀರಿನ ಸೈಂಟ್ ಮೇರೀಸ್ ವಿದ್ಯಾಸಂಸ್ಥೆಯಲ್ಲಿ ಎರಡನೇ ತರಗತಿಯಲ್ಲಿ ಕಲಿಯುತ್ತಿರುವ ಕುಮಾರಿ ಶರಣ್ಯ ಶರತ್ ಅವರು ತನ್ನ ಎಂಟನೆಯ ವಯಸ್ಸಿನಲ್ಲಿ ಯೋಗಾಸನದ ಕಪೋತಾಸನದ ಭಂಗಿಯಲ್ಲಿ ಇಂಡಿಯಾ ಬುಕ್ ಆಫ್ ರೆಕಾರ್ಡ್


Read More »

ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನದ ಕ್ಷೇತ್ರಾಡಳಿತ ಸಮಿತಿ ಅಧ್ಯಕ್ಷರಾಗಿ ಎಚ್.ಎಸ್.ಜಯರಾಜ್ ಆಯ್ಕೆ


Share        ಮಂಗಳೂರು: ಬ್ರಹ್ಮಶ್ರೀ ನಾರಾಯಣಗುರುಗಳು ಪ್ರತಿಷ್ಠಾಪಿಸಿದ ಕರ್ನಾಟಕದ ಏಕೈಕ ಕ್ಷೇತ್ರ ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನದ ಸಮಗ್ರ ಅಭಿವೃದ್ಧಿ ಹಿತದೃಷ್ಟಿಯಿಂದ ಆಡಳಿತ ಸಮಿತಿ ಮತ್ತು ಅಭಿವೃದ್ಧಿ ಸಮಿತಿ ಜಂಟಿ ಸಭೆ ಕೇಂದ್ರದ ಮಾಜಿ ಸಚಿವ


Read More »