TOP STORIES:

FOLLOW US

ಕಾಸರಗೋಡು ಜಿಲ್ಲಾ ಕನ್ನಡ ಪತ್ರಕರ್ತರ ಕ್ಷೇಮಭಿವೃದ್ಧಿ ಸಂಘದ ದತ್ತಿನಿಧಿ ಪ್ರಶಸ್ತಿಗೆ ಮುಂಬೈಯ ನಿಷ್ಠಾವಂತ ಪತ್ರಕರ್ತ ನವೀನ್ ಕೆ ಇನ್ನ ಆಯ್ಕೆ


ಕಾಸರಗೋಡು ಜಿಲ್ಲಾ ಕನ್ನಡ ಪತ್ರಕರ್ತರ ಕ್ಷೇಮಾಭಿವೃದ್ಧಿ ಸಂಘವು, ಕಳೆದ ಎರಡು ದಶಕಗಳಿಂದ ಕನ್ನಡ ಭಾಷೆ, ಸಂಸ್ಕೃತಿ, ಕಲೆಗಳ ಉಳಿವಿಗಾಗಿ ಶ್ರಮಿಸುತ್ತಿದೆ.
ಸಂಘವು ಪ್ರತಿ ವರ್ಷ ದತ್ತಿನಿಧಿ ಪ್ರಶಸ್ತಿಯನ್ನು ಪ್ರಧಾನಿಸುತ್ತಿದ್ದು ಈ ಬಾರಿಯ ನ್ಯಾಯವಾದಿ ಮಹಮ್ಮದ್ ಇಬ್ರಾಹಿಂ ಪಾರ ಸ್ವರಣಾರ್ಥ, ನ್ಯಾಯವಾದಿ ಇಬ್ರಾಹಿಂ ಖಲೀಲ್ ಅರಿಮಲ ದುಬೈ ಅವರು ನೀಡುವ ದತ್ತಿನಿಧಿ ಪ್ರಶಸ್ತಿಗೆ ಮುಂಬಯಿಯ ಪ್ರಾಮಾಣಿಕ, ನಿಷ್ಠಾವಂತ ಪತ್ರಕರ್ತ ನವೀನ್ ಕೆ ಇನ್ನ ಆಯ್ಕೆಯಾಗಿದ್ದಾರೆ.
ಪ್ರಶಸ್ತಿ ಪ್ರಧಾನ ಸಮಾರಂಭ ಜುಲೈ 13ರಂದು ಬೆಳ್ಳಿಗ್ಗೆ, ಕಾಸರಗೋಡು ಜಿಲ್ಲೆಯ ಸೀತಾಂಗೋಳಿ ಲಯನ್ಸ್ ಸಭಾಂಗಣದಲ್ಲಿ ನಡೆಯಲಿದೆ. ಕರ್ನಾಟಕ ವಿಧಾನ ಸಭೆಯ ಸಭಾಧ್ಯಕ್ಷ ಯು. ಟಿ. ಖಾದರ್, ಕರ್ನಾಟಕ ಅರಣ್ಯ ಸಚಿವ ಈಶ್ವರ ಬಿ ಖಂಡ್ರೆ, ಉಪ ಸಭಾಪತಿ ಎಂ. ಕೆ. ಪ್ರಾಣೇಶ್, ಕರ್ನಾಟಕ ಮುಖ್ಯಮಂತ್ರಿಗಳ ಸಲಹೆಗಾರ ಕೆ ವಿ ಪ್ರಭಾಕರ, ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಸೋಮಣ್ಣ ಬೇವಿನಮರದ, ಕಾಸರಗೋಡು ಸಂಸದರಾದ ಮೋಹನ್ ಉಣ್ಣಿತ್ತಾನ್,ಕೇರಳ ಶಾಸಕ ಎನ್ ಎ ನೆಲ್ಲಿಕುನ್ನು ಮೊದಲಾದ ಗಣ್ಯರು ಪ್ರಶಸ್ತಿ ಪ್ರಧಾನಿಸಲಿರುವರು.
ಪ್ರಶಸ್ತಿಯು ನಗದು, ಪ್ರಶಸ್ತಿ ಪತ್ರ, ಸ್ಮರಣಿಕೆ ಹೊಂದಿರುತ್ತದೆ.

ನವೀನ್ ಕೆ. ಇನ್ನ, ಪರಿಚಯ ಮತ್ತು ಸಾಧನೆ.

ಕಳೆದ 33 ವರ್ಷಗಳಿಂದ ಮುಂಬಯಿ ಮಹಾನಗರದ ದೈನಿಕ ಕರ್ನಾಟಕ ಮಲ್ಲ ದಲ್ಲಿ ವರದಿಗಾರನಾಗಿ, ಛಾಯಾಚಿತ್ರಗ್ರಾಹಕನಾಗಿ, ಜಾಹಿರಾತು ಪ್ರತಿನಿಧಿಯಾಗಿ, ಕ್ರೀಡಾ ಅಂಕಣ ಕಾರನಾಗಿ ಕಾರ್ಯನಿರ್ವಹಿಸುತ್ತಿರುವ ನವೀನ್ ಕೆ.ಇನ್ನ ಅವರು
ಸಮಾಜಮುಖಿ ಸೇವೆಯಲ್ಲಿ ಹೆಚ್ಚಿನ ಆಸಕ್ತಿ ವಹಿಸುವವರು. ಮುಂಬಯಿಯಲ್ಲಿ ಕನ್ನಡವನ್ನು ಗಟ್ಟಿಗೊಳಿಸುವಲ್ಲಿ ಶ್ರಮಿಸುತ್ತಾ ಬಂದವರಲ್ಲಿ ಪ್ರಮುಖ ಸಾಲಲ್ಲಿ ನಿಲ್ಲುವ ಅರ್ಹತೆ ಪಡೆದವರು ನವೀನ್ ಕೆ.ಇನ್ನ. ಪತ್ರಿಕೆ ಮುಖೇನ
ಸಾಮಾಜಿಕ ,ಶೈಕ್ಷಣಿಕ, ವೈದ್ಯಕೀಯ ಸೇವೆ, ಮುಂಬಯಿ ಮಹಾನಗರದ ಹೆಚ್ಚಿನ ವಿವಿಧ ಜಾತೀಯ, ಸಂಘಟನೆ, ಸಾಮಾಜಿಕ ಧಾರ್ಮಿಕ, ಶೈಕ್ಷಣಿಕ,ಕಲಾ ಸಂಸ್ಥೆಗಳೊಂದಿಗೆ ನಿಕಟ ಸಂಬಂಧವನ್ನು ಹೊಂದಿರುವವರು.

ತುಳುನಾಡ ಸಂಸ್ಕೃತಿಯನ್ನು ಪ್ರತಿಬಿಂಬಿಸುವಂತಹ ಲೇಖನಗಳು ಅಲ್ಲದೆ ಮುಂಬಯಿ ಮಹಾನಗರದ ಹಾಗೂ ತುಳುನಾಡಿನ ನೂರಾರು ಧಾರ್ಮಿಕ ಕ್ಷೇತ್ರಗಳ ಪರಿಚಯ ಲೇಖನಗಳು ಕರ್ನಾಟಕ ಮಲ್ಲದಲ್ಲಿ ಪ್ರಸಾರಮಾಡಿದವರು. ‘

ಪತ್ರಕರ್ತನಾಗಿ ಸಾಧನೆಗಳು:


‘ಬೀದಿಯಲ್ಲಿ ಅಣಕು ನಾಟಕವಾಗುತ್ತಿರುವ ಭೂತಾರಾಧನೆ’ ಎಂಬ ಲೇಖನಕ್ಕೆ ಓದುಗರಿಂದ ಪ್ರಶಂಸೆ ಹಾಗೂ ಬೆಂಬಲ ವ್ಯಕ್ತ. ಈ ಲೇಖನದ ಬಗ್ಗೆ ನೂರಕ್ಕೂ ಹೆಚ್ಚು ಮಿಕ್ಕಿ ಪತ್ರಗಳು ಬಂದಿದ್ದು ತುಂಬಾ ಚರ್ಚೆಗೆ ಕಾರಣವಾಯಿತು. ದೈವ ದೇವರುಗಳ ಬಗ್ಗೆ ಅನನ್ಯ ನಂಬಿಕೆ, ಭಕ್ತಿ ವಿಶ್ವಾಸ. ಮುಂಬಯಿ ಮಹಾನಗರದಲ್ಲಿದ್ದು ಮನೆಯಿಂದ ತಪ್ಪಿಸಿಕೊಂಡಿದ್ದ ಮೂವರು ಎಳೆ ಪ್ರಾಯದ ಮಕ್ಕಳನ್ನು ಅವರವರ ಊರಿನ ಮನೆಗೆ ತಲುಪಿಸಿದ ತೃಪ್ತಿ.
ಸನ್ಮಾನ -ಪ್ರಶಸ್ತಿಗಳು- ಪತ್ರಕರ್ತರ ವೇದಿಕೆ(ರಿ) ಬೆಂಗಳೂರು ಉಡುಪಿ ಜಿಲ್ಲಾ ಘಟಕ ನೀಡುವ ರಾಜೇಶ ಶಿಬಾಜೆ ಗೌರವ.
ಇನ್ನ ಘಟಕದ ಉದ್ಘಾಟನಾ ಸಮಾರಂಭದಲ್ಲಿ ಆಳ್ವಾಸ್ ನುಡಿಸಿರಿ ವಿರಾಸತ್ ಸನ್ಮಾನ.
ಅಜೆಕಾರು ಕಲಾಭಿಮಾನಿ ಬಳಗ ಮುಂಬಯಿ ಇವರಿಂದ ಯಕ್ಷ ರಕ್ಷಾ ಕಲಾ ಪ್ರಶಸ್ತಿ,
ಕಲಾಜಗತ್ತು ಮುಂಬಯಿ ಇವರಿಂದ ತೌಳವ ಶ್ರೀ ಪ್ರಶಸ್ತಿ
ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಕಾರ್ಕಳ ತಾಲೂಕು ಘಟಕ 12ನೇಯ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಸನ್ಮಾನ
ರಾಷ್ಟ್ರೀಯ ಬಿಲ್ಲವರ ಮಹಾಮಂಡಲ ಮೂಲ್ಕಿ ಇವರಿಂದ ಸನ್ಮಾನ
ಮುಂಬಯಿ ಮಹಾನಗರದ ಹಾಗೂ ನಾಡಿನ ಅನೇಕ ಧಾರ್ಮಿಕ ಸಾಮಾಜಿಕ ಸಂಸ್ಥೆಗಳಲ್ಲಿ‌ ಹಲವಾರು ಸನ್ಮಾನ, ಪ್ರಶಸ್ತಿಗಳು ಇವರ ಸಾಧನೆಗೆ ದೊರೆತಿವೆ.


Share:

More Posts

Category

Send Us A Message

Related Posts

ಶಾಸಕ ಸುನಿಲ್ ಕುಮಾರ್ ಸಹೋದರ ಸುಜಿತ್‌ ಕುಮಾರ್‌ ನಿಧನ


Share       ಕಾರ್ಕಳ: ಕಾರ್ಕಳ ಶಾಸಕ ವಿ.ಸುನಿಲ್ ಕುಮಾರ್ ಸಹೋದರ ಸುಜಿತ್ ಕುಮಾರ್ (53) ಶುಕ್ರವಾರ (ಮೇ 23) ಅನಾರೋಗ್ಯದಿಂದ ನಿಧನರಾಗಿದ್ದಾರೆ.   ಅಂತಿಮ ವಿಧಿ ವಿಧಾನವು ಇಂದು ಶುಕ್ರವಾರ ನೆಕ್ಲಾಜೆ ಮನೆಯಲ್ಲಿ ಸಂಜೆ 6


Read More »

ಅಂತಾರಾಷ್ಟ್ರೀಯ ಆರ್ಯಭಟ ಪ್ರಶಸ್ತಿಗೆ ಪುಣೆಯ ಸಮಾಜಸೇವಕ   “ವಿಶ್ವನಾಥ ಪೂಜಾರಿ ಕಡ್ತಲ’ ಆಯ್ಕೆ


Share       ಪುಣೆ :ಪುಣೆ ಬಿಲ್ಲವ ಸಮಾಜ ಸೇವಾ ಸಂಘ ಇದರ ಅಧ್ಯಕ್ಷ ,ಸಾಮಾಜಿಕ ಚಟುವಟಿಕೆಗಳಲ್ಲಿ ಸದಾ ಗುರುತಿಸಿಕೊಂಡಿರುವ ವಿಶ್ವನಾಥ ಪೂಜಾರಿ ಕಡ್ತಲ ಇವರು ಪ್ರತಿಷ್ಠಿತ ಅಂತಾರಾಷ್ಟ್ರೀಯ ಆರ್ಯಭಟ ಪ್ರಶಸ್ತಿ -2025  ಗೆ ಆಯ್ಕೆಯಾಗಿರುತ್ತಾರೆ .


Read More »

ಅಯೋಧ್ಯೆಯಲ್ಲಿ ಮಹಾಮಂಡಲೇಶ್ಚರ 1008 ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ ಮುಂದಾಳತ್ವದಲ್ಲಿ 4 ಅಂತಸ್ತಿನ ಶಾಖಾ ಮಠಕ್ಕೆ ಭೂಮಿ ಪೂಜೆ,ಶಿಲಾನ್ಯಾಸ


Share       ಅಯೋಧ್ಯೆಯಲ್ಲಿ ಮಹಾಮಂಡಲೇಶ್ಚರ  1008 ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ ಮುಂದಾಳತ್ವದಲ್ಲಿ 4 ಅಂತಸ್ತಿನ ಶಾಖಾ ಮಠಕ್ಕೆ ಭೂಮಿ ಪೂಜೆ,ಶಿಲಾನ್ಯಾಸ ಯತೀವರ್ಯರು, ಸಚಿವ ಮಾಂಕಳ್ ವೈದ್ಯ, ಶಾಸಕ ಹರೀಶ್ ಪೂಂಜ, ಸೇರಿದಂತೆ ಬೆಳ್ತಂಗಡಿಯಿಂದ ಸುಮಾರು 200


Read More »

ಬೈದ್ಯೆರುಗಳಲ್ಲಿ ಲೀನವಾದ ದರ್ಶನ ಪಾತ್ರಿ ಶ್ರೀ ಸುರೇಶ್ ಪೂಜಾರಿ


Share         ಪ್ರಸಿದ್ದ ಬೈದ್ಯೇರುಗಳ ಪಾತ್ರಿಯಾದ  ಶ್ರೀ ಸುರೇಶ್ ಪೂಜಾರಿಯವರು ಅಲ್ಪಕಾಲದ  ಅಸೌಖ್ಯದ ಕಾರಣ ಇಂದು ಭಗವಂತನ ಪಾದ ಸೇರಿದರು. ಕಳತ್ತೂರು ಹಿರಿಯಣ್ಣ ಪೂಜಾರಿ ಹಾಗೂ ಶ್ರೀಮತಿ ಲೀಲಾವತಿ ಪೂಜಾರಿಯವರ ಮಗನಾದ ಶ್ರೀ ಸುರೇಶ್


Read More »

ಭಾರತ್ ಬ್ಯಾಂಕ್‌ನ ಕಾರ್ಯಾಧ್ಯಕ್ಷರಾದ ಸೂರ್ಯಕಾಂತ್ ಜಯ ಸುವರ್ಣರಿಗೆ ಐವತ್ತರ ಸಂಭ್ರಮ


Share       ಸಮಾಜದಲ್ಲಿ ಮಹತ್ವದ ಜವಾಬ್ದಾರಿಯನ್ನು ವಹಿಸಿಕೊಂಡಿರುವ ವ್ಯಕ್ತಿ ಸಾಮಾಜಿಕವಾಗಿ ಮತ್ತು ಭಾವನಾತ್ಮಕವಾಗಿ ಸಮತೋಲನವನ್ನು ಸಾಧಿಸಿದರೆ ಮಾತ್ರ ಅವನು ಯಶಸ್ಸಿನ ಮೆಟ್ಟಿಲೇರಲು ಸಾಧ್ಯ. ‘ಸುಖ-ದುಃಖ, ಲಾಭ -ನಷ್ಟ ಸೋಲು-ಗೆಲುವನ್ನು ಸಮಾನವಾಗಿ ತೆಗೆದುಕೊಳ್ಳುವವನೇ ನಿಜವಾದ ಸುಖಿ’ ಎಂಬ


Read More »

ಮೂಡಬಿದಿರಿಯಲ್ಲೊಂದು 75 ಸಂಭ್ರಮ ಕ್ಕೆ ಸ್ನೇಹ ಸೇತುವಾದ ಸಿಂಗಾಪೂರ ಬಿಲ್ಲವ ಅಸೋಸಿಯೇಷನ್


Share       ಮೂಡಬಿದಿರಿಯಿಂದ ಸಿಂಗಪೂರಿಗೆ 🇸🇬: ಜಾಗತಿಕ ಸಮುದಾಯ ಸಂಬಂಧಗಳ ಬಲವರ್ಧನೆ: ಜಾಗತಿಕ ಸಮುದಾಯ ಸಂಬಂಧಗಳನ್ನು ಬಲಪಡಿಸುವ ದಿಕ್ಕಿನಲ್ಲಿ ಮಹತ್ವಪೂರ್ಣ ಹೆಜ್ಜೆವಹಿಸಿ, ಬಿಲ್ಲವ ಅಸೋಸಿಯೇಷನ್ ಸಿಂಗಪೂರಿನ ಸ್ಥಾಪಕರಾದ ಅಶ್ವಿತ್ ಬಂಗೇರಾ ಅವರು, ಬಿಲ್ಲವ ಅಸೋಸಿಯೇಷನ್ ಮೂಡಬಿದಿರಿಯ


Read More »