TOP STORIES:

FOLLOW US

ಆಷಾಢ ಮಾಸಕ್ಕೆ ಗಂಡ ಹೆಂಡತಿ ಒಟ್ಟಿಗೆ ಇರುವಂತಿಲ್ಲ ಯಾಕೆ?


ಆಷಾಢ ಮಾಸವನ್ನು ಅಶುಭವೆಂದೇ ಪರಿಗಣಿಸಲಾಗುತ್ತದೆ. ಹೀಗಾಗಿ ಈ ಮಾಸದಲ್ಲಿ ಶುಭ ಕಾರ್ಯಗಳು ನಡೆಯುವುದಿಲ್ಲ. ಅದಲ್ಲದೇ, ಹೊಸದಾಗಿ ಮದುವೆಯಾದ ದಂಪತಿಗಳಿಬ್ಬರೂ ಪರಸ್ಪರ ದೂರವಿರಬೇಕಾದ ಕಾರಣ ಹೆಣ್ಣು ಮಕ್ಕಳು ಗಂಡನ ಮನೆಯಿಂದ ತವರು ಮನೆಗೆ ತೆರಳುತ್ತಾರೆ. ಹಾಗಾದ್ರೆ ಈ ಆಚರಣೆಯ ಹಿಂದಿರುವ ಕಾರಣವೇನು ಎನ್ನುವ ಸಂಪೂರ್ಣ ಮಾಹಿತಿ ಇಲ್ಲಿದೆ.

ಹಿಂದೂ ಧರ್ಮದ ಚಾಂದ್ರಮಾನ ಪಂಚಾಂಗದ ನಾಲ್ಕನೇ ಮಾಸ ಈ ‘ಆಷಾಢ’. ದಕ್ಷಿಣಾಯಣದ ಪರ್ವ ಕಾಲದಲ್ಲಿ ಜೇಷ್ಠ ಮಾಸದ ಅಮವಾಸ್ಯೆಯ ಮರುದಿನವಾದ ಪಾಡ್ಯ ತಿಥಿಯಿಂದ ಆಷಾಢ ಮಾಸ ಆರಂಭವಾಗುತ್ತದೆ. ಈ ವರ್ಷ ಆಷಾಢ ಮಾಸವು ಜುಲೈ 6 ರಂದು ಪ್ರಾರಂಭವಾಗಿ ಆಗಸ್ಟ್ 4 ರಂದು ಕೊನೆಗೊಳ್ಳುತ್ತದೆ. ಈ ಮಾಸದಲ್ಲಿ ಹೊಸದಾಗಿ ಮದುವೆಯಾದ ಹೆಣ್ಣು ಮಕ್ಕಳು ತವರಿಗೆ ಬರುವ ಸಂಪ್ರದಾಯವಿದೆ. ಆಂಧ್ರ ಪ್ರದೇಶದಲ್ಲಿ ಆಷಾಢ ಮಾಸದಲ್ಲಿ ಅತ್ತೆ-ಸೊಸೆ ಕೂಡ ಜೊತೆಯಾಗಿರಬಾರದು ಎನ್ನಲಾಗುತ್ತದೆ

ಆಷಾಢ ಮಾಸದಲ್ಲಿ ನವವಿವಾಹಿತರು ದೂರವಿರಬೇಕು ಎನ್ನುವ ಕಾರಣ ಹೆಣ್ಣು ಮಕ್ಕಳು ತವರಿಗೆ ಬರುವ ಸಂಪ್ರದಾಯವಿದೆ. ಈ ಸಮಯದಲ್ಲಿ ಗಂಡ ಹೆಂಡತಿ ಸೇರಿ ಹೆಣ್ಣು ಗರ್ಭವತಿಯಾದರೆ, ಚೈತ್ರ ಮಾಸದಲ್ಲಿ ಮಗುವಿಗೆ ಜನ್ಮ ನೀಡಬಹುದು. ಈ ಏಪ್ರಿಲ್ ತಿಂಗಳಿನಲ್ಲಿ ಉಷ್ಣಾಂಶ ಹೆಚ್ಚಾಗಿರುತ್ತದೆ. ಇದರಿಂದ ತಾಯಿ ಹಾಗೂ ಮಗುವಿಗೆ ಆರೋಗ್ಯ ಸಮಸ್ಯೆಗಳು ಕಾಡಬಹುದು ಎನ್ನುವ ವೈಜ್ಞಾನಿಕ ಕಾರಣವು ಇದೆ.

ಅಷ್ಟೇ ಅಲ್ಲದೇ ಈ ಆಷಾಢ ತಿಂಗಳಿನಲ್ಲಿ ರೈತಾಪಿ ವರ್ಗಕ್ಕೆ ಕೆಲಸಗಳು ಸ್ವಲ್ಪ ಹೆಚ್ಚಾಗಿರುತ್ತದೆ. ಈ ಸಮಯದಲ್ಲಿ ಹೊಸದಾಗಿ ಮದುವೆಯಾದ ಜೋಡಿಗಳು ಜೊತೆಗಿದ್ದರೆ, ಪತಿಯು ಪತ್ನಿಯ ಜೊತೆಗೆ ಸಮಯ ಕಳೆಯಬಹುದು. ಹೀಗಾದಾಗ ಕೃಷಿ ಕೆಲಸಗಳು ಪೂರ್ಣಗೊಳ್ಳದೇ ಇರಬಹುದು. ಆತನು ಸಂಪೂರ್ಣವಾಗಿ ಕೆಲಸದಲ್ಲಿ ತೊಡಗಿಕೊಳ್ಳಲಿ ಎನ್ನುವ ಕಾರಣಕ್ಕೆ ಆಷಾಢದಲ್ಲಿ ತವರಿಗೆ ಹೆಣ್ಣು ಮಕ್ಕಳನ್ನು ಕಳುಹಿಸಿಕೊಡುತ್ತಾರೆ.

ದೂರವಿರುವ ಅತ್ತೆ ಸೊಸೆ ನಡುವೆ ಪ್ರೀತಿ ಹೆಚ್ಚುತ್ತೆ

ಇನ್ನೊಂದು ನಂಬಿಕೆಯ ಪ್ರಕಾರ ಆಷಾಢ ಮಾಸದಲ್ಲಿ ಹೊಸದಾಗಿ ಮದುವೆಯಾದ ಹೆಣ್ಣು ತನ್ನ ಅತ್ತೆಯೊಂದಿಗಿದ್ದರೆ ಜಗಳಗಳು ಉಂಟಾಗುತ್ತದೆ. ಹೀಗಾಗಿ ಸೊಸೆಯನ್ನು ಒಂದು ತಿಂಗಳ ಕಾಲ ತವರು ಮನೆಗೆ ಕಳುಹಿಸಲಾಗುತ್ತದೆ. ಇಬ್ಬರೂ ದೂರವಿದ್ದರೆ ಅತ್ತೆ ಸೊಸೆಯ ನಡುವೆ ಪ್ರೀತಿ ಕಾಳಜಿಯು ಹೆಚ್ಚುತ್ತದೆ. ಅದಲ್ಲದೇ ತಾಯಿ ಮಗಳು ಸಂಬಂಧವು ಗಟ್ಟಿಯಾಗುತ್ತದೆ ಎನ್ನಲಾಗಿದೆ.


Share:

More Posts

Category

Send Us A Message

Related Posts

ಮೊಂಟೆಪದವು ಕೋಡಿಯಲ್ಲಿ ಗುಡ್ಡ ಕುಸಿತ; ಪದ್ಮರಾಜ್ ಆರ್.ಪೂಜಾರಿ ಭೇಟಿ ಮಾಡಿ ಸಾಂತ್ವನ


Share       ಮಂಗಳೂರು: ಕರ್ನಾಟಕದ ಕರಾವಳಿ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಭಾರೀ ಮಳೆಯಾಗುತ್ತಿದ್ದು, ಭೂಕುಸಿತ ಸಂಭವಿಸಿ ಮೂವರು ಸಾವನ್ನಪ್ಪಿದ್ದಾರೆ. ಒಬ್ಬ ಮಹಿಳೆ ಮತ್ತು ಆಕೆಯ ಮಗುವನ್ನು ಅವಶೇಷಗಳಿಂದ ರಕ್ಷಿಸಿ, ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅವರ ಸ್ಥಿತಿ ಗಂಭೀರವಾಗಿದೆ


Read More »

ಶಾಸಕ ಸುನಿಲ್ ಕುಮಾರ್ ಸಹೋದರ ಸುಜಿತ್‌ ಕುಮಾರ್‌ ನಿಧನ


Share       ಕಾರ್ಕಳ: ಕಾರ್ಕಳ ಶಾಸಕ ವಿ.ಸುನಿಲ್ ಕುಮಾರ್ ಸಹೋದರ ಸುಜಿತ್ ಕುಮಾರ್ (53) ಶುಕ್ರವಾರ (ಮೇ 23) ಅನಾರೋಗ್ಯದಿಂದ ನಿಧನರಾಗಿದ್ದಾರೆ.   ಅಂತಿಮ ವಿಧಿ ವಿಧಾನವು ಇಂದು ಶುಕ್ರವಾರ ನೆಕ್ಲಾಜೆ ಮನೆಯಲ್ಲಿ ಸಂಜೆ 6


Read More »

ಅಂತಾರಾಷ್ಟ್ರೀಯ ಆರ್ಯಭಟ ಪ್ರಶಸ್ತಿಗೆ ಪುಣೆಯ ಸಮಾಜಸೇವಕ   “ವಿಶ್ವನಾಥ ಪೂಜಾರಿ ಕಡ್ತಲ’ ಆಯ್ಕೆ


Share       ಪುಣೆ :ಪುಣೆ ಬಿಲ್ಲವ ಸಮಾಜ ಸೇವಾ ಸಂಘ ಇದರ ಅಧ್ಯಕ್ಷ ,ಸಾಮಾಜಿಕ ಚಟುವಟಿಕೆಗಳಲ್ಲಿ ಸದಾ ಗುರುತಿಸಿಕೊಂಡಿರುವ ವಿಶ್ವನಾಥ ಪೂಜಾರಿ ಕಡ್ತಲ ಇವರು ಪ್ರತಿಷ್ಠಿತ ಅಂತಾರಾಷ್ಟ್ರೀಯ ಆರ್ಯಭಟ ಪ್ರಶಸ್ತಿ -2025  ಗೆ ಆಯ್ಕೆಯಾಗಿರುತ್ತಾರೆ .


Read More »

ಅಯೋಧ್ಯೆಯಲ್ಲಿ ಮಹಾಮಂಡಲೇಶ್ಚರ 1008 ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ ಮುಂದಾಳತ್ವದಲ್ಲಿ 4 ಅಂತಸ್ತಿನ ಶಾಖಾ ಮಠಕ್ಕೆ ಭೂಮಿ ಪೂಜೆ,ಶಿಲಾನ್ಯಾಸ


Share       ಅಯೋಧ್ಯೆಯಲ್ಲಿ ಮಹಾಮಂಡಲೇಶ್ಚರ  1008 ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ ಮುಂದಾಳತ್ವದಲ್ಲಿ 4 ಅಂತಸ್ತಿನ ಶಾಖಾ ಮಠಕ್ಕೆ ಭೂಮಿ ಪೂಜೆ,ಶಿಲಾನ್ಯಾಸ ಯತೀವರ್ಯರು, ಸಚಿವ ಮಾಂಕಳ್ ವೈದ್ಯ, ಶಾಸಕ ಹರೀಶ್ ಪೂಂಜ, ಸೇರಿದಂತೆ ಬೆಳ್ತಂಗಡಿಯಿಂದ ಸುಮಾರು 200


Read More »

ಬೈದ್ಯೆರುಗಳಲ್ಲಿ ಲೀನವಾದ ದರ್ಶನ ಪಾತ್ರಿ ಶ್ರೀ ಸುರೇಶ್ ಪೂಜಾರಿ


Share         ಪ್ರಸಿದ್ದ ಬೈದ್ಯೇರುಗಳ ಪಾತ್ರಿಯಾದ  ಶ್ರೀ ಸುರೇಶ್ ಪೂಜಾರಿಯವರು ಅಲ್ಪಕಾಲದ  ಅಸೌಖ್ಯದ ಕಾರಣ ಇಂದು ಭಗವಂತನ ಪಾದ ಸೇರಿದರು. ಕಳತ್ತೂರು ಹಿರಿಯಣ್ಣ ಪೂಜಾರಿ ಹಾಗೂ ಶ್ರೀಮತಿ ಲೀಲಾವತಿ ಪೂಜಾರಿಯವರ ಮಗನಾದ ಶ್ರೀ ಸುರೇಶ್


Read More »

ಭಾರತ್ ಬ್ಯಾಂಕ್‌ನ ಕಾರ್ಯಾಧ್ಯಕ್ಷರಾದ ಸೂರ್ಯಕಾಂತ್ ಜಯ ಸುವರ್ಣರಿಗೆ ಐವತ್ತರ ಸಂಭ್ರಮ


Share       ಸಮಾಜದಲ್ಲಿ ಮಹತ್ವದ ಜವಾಬ್ದಾರಿಯನ್ನು ವಹಿಸಿಕೊಂಡಿರುವ ವ್ಯಕ್ತಿ ಸಾಮಾಜಿಕವಾಗಿ ಮತ್ತು ಭಾವನಾತ್ಮಕವಾಗಿ ಸಮತೋಲನವನ್ನು ಸಾಧಿಸಿದರೆ ಮಾತ್ರ ಅವನು ಯಶಸ್ಸಿನ ಮೆಟ್ಟಿಲೇರಲು ಸಾಧ್ಯ. ‘ಸುಖ-ದುಃಖ, ಲಾಭ -ನಷ್ಟ ಸೋಲು-ಗೆಲುವನ್ನು ಸಮಾನವಾಗಿ ತೆಗೆದುಕೊಳ್ಳುವವನೇ ನಿಜವಾದ ಸುಖಿ’ ಎಂಬ


Read More »