TOP STORIES:

FOLLOW US

ಆಷಾಢ ಮಾಸಕ್ಕೆ ಗಂಡ ಹೆಂಡತಿ ಒಟ್ಟಿಗೆ ಇರುವಂತಿಲ್ಲ ಯಾಕೆ?


ಆಷಾಢ ಮಾಸವನ್ನು ಅಶುಭವೆಂದೇ ಪರಿಗಣಿಸಲಾಗುತ್ತದೆ. ಹೀಗಾಗಿ ಈ ಮಾಸದಲ್ಲಿ ಶುಭ ಕಾರ್ಯಗಳು ನಡೆಯುವುದಿಲ್ಲ. ಅದಲ್ಲದೇ, ಹೊಸದಾಗಿ ಮದುವೆಯಾದ ದಂಪತಿಗಳಿಬ್ಬರೂ ಪರಸ್ಪರ ದೂರವಿರಬೇಕಾದ ಕಾರಣ ಹೆಣ್ಣು ಮಕ್ಕಳು ಗಂಡನ ಮನೆಯಿಂದ ತವರು ಮನೆಗೆ ತೆರಳುತ್ತಾರೆ. ಹಾಗಾದ್ರೆ ಈ ಆಚರಣೆಯ ಹಿಂದಿರುವ ಕಾರಣವೇನು ಎನ್ನುವ ಸಂಪೂರ್ಣ ಮಾಹಿತಿ ಇಲ್ಲಿದೆ.

ಹಿಂದೂ ಧರ್ಮದ ಚಾಂದ್ರಮಾನ ಪಂಚಾಂಗದ ನಾಲ್ಕನೇ ಮಾಸ ಈ ‘ಆಷಾಢ’. ದಕ್ಷಿಣಾಯಣದ ಪರ್ವ ಕಾಲದಲ್ಲಿ ಜೇಷ್ಠ ಮಾಸದ ಅಮವಾಸ್ಯೆಯ ಮರುದಿನವಾದ ಪಾಡ್ಯ ತಿಥಿಯಿಂದ ಆಷಾಢ ಮಾಸ ಆರಂಭವಾಗುತ್ತದೆ. ಈ ವರ್ಷ ಆಷಾಢ ಮಾಸವು ಜುಲೈ 6 ರಂದು ಪ್ರಾರಂಭವಾಗಿ ಆಗಸ್ಟ್ 4 ರಂದು ಕೊನೆಗೊಳ್ಳುತ್ತದೆ. ಈ ಮಾಸದಲ್ಲಿ ಹೊಸದಾಗಿ ಮದುವೆಯಾದ ಹೆಣ್ಣು ಮಕ್ಕಳು ತವರಿಗೆ ಬರುವ ಸಂಪ್ರದಾಯವಿದೆ. ಆಂಧ್ರ ಪ್ರದೇಶದಲ್ಲಿ ಆಷಾಢ ಮಾಸದಲ್ಲಿ ಅತ್ತೆ-ಸೊಸೆ ಕೂಡ ಜೊತೆಯಾಗಿರಬಾರದು ಎನ್ನಲಾಗುತ್ತದೆ

ಆಷಾಢ ಮಾಸದಲ್ಲಿ ನವವಿವಾಹಿತರು ದೂರವಿರಬೇಕು ಎನ್ನುವ ಕಾರಣ ಹೆಣ್ಣು ಮಕ್ಕಳು ತವರಿಗೆ ಬರುವ ಸಂಪ್ರದಾಯವಿದೆ. ಈ ಸಮಯದಲ್ಲಿ ಗಂಡ ಹೆಂಡತಿ ಸೇರಿ ಹೆಣ್ಣು ಗರ್ಭವತಿಯಾದರೆ, ಚೈತ್ರ ಮಾಸದಲ್ಲಿ ಮಗುವಿಗೆ ಜನ್ಮ ನೀಡಬಹುದು. ಈ ಏಪ್ರಿಲ್ ತಿಂಗಳಿನಲ್ಲಿ ಉಷ್ಣಾಂಶ ಹೆಚ್ಚಾಗಿರುತ್ತದೆ. ಇದರಿಂದ ತಾಯಿ ಹಾಗೂ ಮಗುವಿಗೆ ಆರೋಗ್ಯ ಸಮಸ್ಯೆಗಳು ಕಾಡಬಹುದು ಎನ್ನುವ ವೈಜ್ಞಾನಿಕ ಕಾರಣವು ಇದೆ.

ಅಷ್ಟೇ ಅಲ್ಲದೇ ಈ ಆಷಾಢ ತಿಂಗಳಿನಲ್ಲಿ ರೈತಾಪಿ ವರ್ಗಕ್ಕೆ ಕೆಲಸಗಳು ಸ್ವಲ್ಪ ಹೆಚ್ಚಾಗಿರುತ್ತದೆ. ಈ ಸಮಯದಲ್ಲಿ ಹೊಸದಾಗಿ ಮದುವೆಯಾದ ಜೋಡಿಗಳು ಜೊತೆಗಿದ್ದರೆ, ಪತಿಯು ಪತ್ನಿಯ ಜೊತೆಗೆ ಸಮಯ ಕಳೆಯಬಹುದು. ಹೀಗಾದಾಗ ಕೃಷಿ ಕೆಲಸಗಳು ಪೂರ್ಣಗೊಳ್ಳದೇ ಇರಬಹುದು. ಆತನು ಸಂಪೂರ್ಣವಾಗಿ ಕೆಲಸದಲ್ಲಿ ತೊಡಗಿಕೊಳ್ಳಲಿ ಎನ್ನುವ ಕಾರಣಕ್ಕೆ ಆಷಾಢದಲ್ಲಿ ತವರಿಗೆ ಹೆಣ್ಣು ಮಕ್ಕಳನ್ನು ಕಳುಹಿಸಿಕೊಡುತ್ತಾರೆ.

ದೂರವಿರುವ ಅತ್ತೆ ಸೊಸೆ ನಡುವೆ ಪ್ರೀತಿ ಹೆಚ್ಚುತ್ತೆ

ಇನ್ನೊಂದು ನಂಬಿಕೆಯ ಪ್ರಕಾರ ಆಷಾಢ ಮಾಸದಲ್ಲಿ ಹೊಸದಾಗಿ ಮದುವೆಯಾದ ಹೆಣ್ಣು ತನ್ನ ಅತ್ತೆಯೊಂದಿಗಿದ್ದರೆ ಜಗಳಗಳು ಉಂಟಾಗುತ್ತದೆ. ಹೀಗಾಗಿ ಸೊಸೆಯನ್ನು ಒಂದು ತಿಂಗಳ ಕಾಲ ತವರು ಮನೆಗೆ ಕಳುಹಿಸಲಾಗುತ್ತದೆ. ಇಬ್ಬರೂ ದೂರವಿದ್ದರೆ ಅತ್ತೆ ಸೊಸೆಯ ನಡುವೆ ಪ್ರೀತಿ ಕಾಳಜಿಯು ಹೆಚ್ಚುತ್ತದೆ. ಅದಲ್ಲದೇ ತಾಯಿ ಮಗಳು ಸಂಬಂಧವು ಗಟ್ಟಿಯಾಗುತ್ತದೆ ಎನ್ನಲಾಗಿದೆ.


Share:

More Posts

Category

Send Us A Message

Related Posts

ವಿಶ್ವ ಮಾನ್ಯ ಕನ್ನಡಿಗ. 2024 ಪ್ರಶಸ್ತಿಗೆ ಭಾಜನರಾದ ಸನ್ಮಾನ್ಯ ಶ್ರೀ ಕೆ.ಪಿ ಮಂಜುನಾಥ್ ಸಾಗರ್ 


Share       ಅಮೆರಿಕದ ರಿಚ್ಮಂಡ್ ನಗರ ದ ಗ್ರೇಟರ್ ರಿಚ್ಮಂಡ್ ಕನ್ವೆನ್ಷನ್ ಸೆಂಟರ್ ನಲ್ಲಿ ನಡೆದ 12 ನೇ ಅಕ್ಕ ವಿಶ್ವ ಮಾನ್ಯ ಕನ್ನಡ ಸಮ್ಮೇಳನವು ನಡೆಯಿತು. ಈ ಸಂದರ್ಭದಲ್ಲಿ ಕನ್ನಡ ಭಾಷೆ, ಸಂಸ್ಕೃತಿ, ಸಾಹಿತ್ಯ


Read More »

ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮದಲ್ಲಿ ಶಾಲೆಗೆ ಶಾಲಾ ವಾಹನ ಕೊಡುಗೆ ನೀಡಿದ ಉದ್ಯಮಿ…!! ಸುಭಾಷ್ ಪೂಜಾರಿ


Share       ಬೈಂದೂರು : ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ತಗ್ಗರ್ಸೆ – ಬೈಂದೂರು ಇಲ್ಲಿ 78 ನೇ ಸ್ವಾತಂತ್ರ್ಯೋತ್ಸವ ದಿನಾಚರಣೆಯನ್ನು  ಎಸ್.ಡಿ.ಎಮ್.ಸಿ ಅಧ್ಯಕ್ಷರಾದ ಸುರೇಶ್ ಪೂಜಾರಿ ಧ್ವಜಾರೋಹಣ ಕಾರ್ಯಕ್ರಮ ನೆರೆವೆರೆಸಿದರು. ಈ ಸಮಯದಲ್ಲಿ ಶಾಲೆಗೆ


Read More »

ಬಿರುವೆರ್ ಕುಡ್ಲದಿಂದ ಸ್ವಾತಂತ್ರ್ಯ ದಿನಾಚರಣೆ ಮೂರು ಕುಟುಂಬಗಳಿಗೆ 1 ಲಕ್ಷ ರೂ.ನೆರವು


Share       ಕುದ್ರೋಳಿ,ಆ.15: ಬಿರುವೆರ್ ಕುಡ್ಲ ದಿಂದ ಲೇಡಿಹಿಲ್ ಸರ್ಕಲ್ ನಲ್ಲಿ ಅದ್ದೂರಿಯ ಸ್ವಾತಂತ್ರ್ಯ ದಿನಾಚರಣೆ ಹಾಗೂ ಮೂರು ಕುಟುಂಬಗಳಿಗೆ ಒಂದು ಲಕ್ಷ ರೂ.ನೆರವು ಹಸ್ತಾಂತರ ಕಾರ್ಯಕ್ರಮವು ಬಿರುವೆರ್ ಕುಡ್ಲ ಸ್ಥಾಪಕಾಧ್ಯಕ್ಷ ಉದಯ ಪೂಜಾರಿ ಬಳ್ಳಾಲ್


Read More »

ಶ್ರೀ ರಾಮ್ ಫ್ರೆಂಡ್ಸ್ ಕಟೀಲ್ ಸಂಸ್ಥೆ : ಬಿರುವೆರ್ ಕುಡ್ಲ ಸಂಸ್ಥೆಯ ಸ್ಥಾಪಕ ಅಧ್ಯಕ್ಷ ಉದಯ ಪೂಜಾರಿಗೆ ಸಮ್ಮಾನ


Share       ಶ್ರೀ ರಾಮ್ ಫ್ರೆಂಡ್ಸ್ ಕಟೀಲ್ ಸಂಸ್ಥೆಯ 5 ನೇ ವಾರ್ಷಿಕೋತ್ಸವದ ಸಂಭ್ರಮ. ಕಾರ್ಯಕ್ರಮದಲ್ಲಿ ಫ್ರೆಂಡ್ಸ್ ಬಲ್ಲಾಳ್ ಭಾಗ್,ಬಿರುವೆರ್ ಕುಡ್ಲ ಸಂಸ್ಥೆಯ ಸ್ಥಾಪಕ ಅಧ್ಯಕ್ಷರಾದ ಶ್ರೀ ಉದಯ ಪೂಜಾರಿಯವರ ಸಮಾಜ ಸೇವೆಯನ್ನು ಗುರುತಿಸಿ ಸಮ್ಮಾನ


Read More »

ವಿಟ್ಲ ಕಸಬಾ ಗ್ರಾಮದ ನೆತ್ರೆಕೆರೆ ನಿವಾಸಿ ನಿವೃತ್ತ ಶಿಕ್ಷಕ ಗುಡ್ಡಪ್ಪ ಪೂಜಾರಿ ನಿಧನ


Share       ವಿಟ್ಲ; ವಿಟ್ಲ ಕಸಬಾ ಗ್ರಾಮದ ನೆತ್ರೆಕೆರೆ ನಿವಾಸಿ ನಿವೃತ್ತ ಶಿಕ್ಷಕ ಗುಡ್ಡಪ್ಪ ಪೂಜಾರಿ( 92 ವರ್ಷ) ಇತ್ತೀಚಿಗೆ ತನ್ನ ಸ್ವಗೃಹದಲ್ಲಿ ವಯೋ ಸಹಜವಾಗಿ ನಿಧನರಾದರು. ಇವರು ಸರಕಾರಿ ಪ್ರಾಥಮಿಕ ಶಾಲೆ ಅನಿಲಕಟ್ಟೆಯಲ್ಲಿ ಶಿಕ್ಷಕರಾಗಿ


Read More »

ಫ್ರೆಂಡ್ಸ್ ಸುರತ್ಕಲ್ ತುಳುನಾಡ ಬಿರುವೆರ್ (ರಿ )ವತಿಯಿಂದ ಸಹಾಯ ಧನ ವಿತರಣೆ


Share       ಫ್ರೆಂಡ್ಸ್ ಸುರತ್ಕಲ್ ತುಳುನಾಡ ಬಿರುವೆರ್ ಸಂಘಟನೆಯ ಸಕ್ರಿಯ ಕಾರ್ಯಕರ್ತ ಹಾಗೂ ನಮ್ಮೆಲ್ಲರ ಅತ್ಮೀಯರಾದ ಯಶೋಧರ ಹೊಸಬೆಟ್ಟು ರುವರು ಹಲವು ದಿನಗಳ ಹಿಂದೆ ತೀವ್ರ ಅನಾರೋಗ್ಯಕ್ಕಿಡಾಗಿದ್ದು,  ಅವರ ಚಿಕಿತ್ಸೆಗಾಗಿ ಲಕ್ಷಾಂತರ ರೂಪಾಯಿಗಳ ಅಗತ್ಯವಿದ್ದು, ಅವರ


Read More »