TOP STORIES:

ಆಷಾಢ ಮಾಸಕ್ಕೆ ಗಂಡ ಹೆಂಡತಿ ಒಟ್ಟಿಗೆ ಇರುವಂತಿಲ್ಲ ಯಾಕೆ?


ಆಷಾಢ ಮಾಸವನ್ನು ಅಶುಭವೆಂದೇ ಪರಿಗಣಿಸಲಾಗುತ್ತದೆ. ಹೀಗಾಗಿ ಈ ಮಾಸದಲ್ಲಿ ಶುಭ ಕಾರ್ಯಗಳು ನಡೆಯುವುದಿಲ್ಲ. ಅದಲ್ಲದೇ, ಹೊಸದಾಗಿ ಮದುವೆಯಾದ ದಂಪತಿಗಳಿಬ್ಬರೂ ಪರಸ್ಪರ ದೂರವಿರಬೇಕಾದ ಕಾರಣ ಹೆಣ್ಣು ಮಕ್ಕಳು ಗಂಡನ ಮನೆಯಿಂದ ತವರು ಮನೆಗೆ ತೆರಳುತ್ತಾರೆ. ಹಾಗಾದ್ರೆ ಈ ಆಚರಣೆಯ ಹಿಂದಿರುವ ಕಾರಣವೇನು ಎನ್ನುವ ಸಂಪೂರ್ಣ ಮಾಹಿತಿ ಇಲ್ಲಿದೆ.

ಹಿಂದೂ ಧರ್ಮದ ಚಾಂದ್ರಮಾನ ಪಂಚಾಂಗದ ನಾಲ್ಕನೇ ಮಾಸ ಈ ‘ಆಷಾಢ’. ದಕ್ಷಿಣಾಯಣದ ಪರ್ವ ಕಾಲದಲ್ಲಿ ಜೇಷ್ಠ ಮಾಸದ ಅಮವಾಸ್ಯೆಯ ಮರುದಿನವಾದ ಪಾಡ್ಯ ತಿಥಿಯಿಂದ ಆಷಾಢ ಮಾಸ ಆರಂಭವಾಗುತ್ತದೆ. ಈ ವರ್ಷ ಆಷಾಢ ಮಾಸವು ಜುಲೈ 6 ರಂದು ಪ್ರಾರಂಭವಾಗಿ ಆಗಸ್ಟ್ 4 ರಂದು ಕೊನೆಗೊಳ್ಳುತ್ತದೆ. ಈ ಮಾಸದಲ್ಲಿ ಹೊಸದಾಗಿ ಮದುವೆಯಾದ ಹೆಣ್ಣು ಮಕ್ಕಳು ತವರಿಗೆ ಬರುವ ಸಂಪ್ರದಾಯವಿದೆ. ಆಂಧ್ರ ಪ್ರದೇಶದಲ್ಲಿ ಆಷಾಢ ಮಾಸದಲ್ಲಿ ಅತ್ತೆ-ಸೊಸೆ ಕೂಡ ಜೊತೆಯಾಗಿರಬಾರದು ಎನ್ನಲಾಗುತ್ತದೆ

ಆಷಾಢ ಮಾಸದಲ್ಲಿ ನವವಿವಾಹಿತರು ದೂರವಿರಬೇಕು ಎನ್ನುವ ಕಾರಣ ಹೆಣ್ಣು ಮಕ್ಕಳು ತವರಿಗೆ ಬರುವ ಸಂಪ್ರದಾಯವಿದೆ. ಈ ಸಮಯದಲ್ಲಿ ಗಂಡ ಹೆಂಡತಿ ಸೇರಿ ಹೆಣ್ಣು ಗರ್ಭವತಿಯಾದರೆ, ಚೈತ್ರ ಮಾಸದಲ್ಲಿ ಮಗುವಿಗೆ ಜನ್ಮ ನೀಡಬಹುದು. ಈ ಏಪ್ರಿಲ್ ತಿಂಗಳಿನಲ್ಲಿ ಉಷ್ಣಾಂಶ ಹೆಚ್ಚಾಗಿರುತ್ತದೆ. ಇದರಿಂದ ತಾಯಿ ಹಾಗೂ ಮಗುವಿಗೆ ಆರೋಗ್ಯ ಸಮಸ್ಯೆಗಳು ಕಾಡಬಹುದು ಎನ್ನುವ ವೈಜ್ಞಾನಿಕ ಕಾರಣವು ಇದೆ.

ಅಷ್ಟೇ ಅಲ್ಲದೇ ಈ ಆಷಾಢ ತಿಂಗಳಿನಲ್ಲಿ ರೈತಾಪಿ ವರ್ಗಕ್ಕೆ ಕೆಲಸಗಳು ಸ್ವಲ್ಪ ಹೆಚ್ಚಾಗಿರುತ್ತದೆ. ಈ ಸಮಯದಲ್ಲಿ ಹೊಸದಾಗಿ ಮದುವೆಯಾದ ಜೋಡಿಗಳು ಜೊತೆಗಿದ್ದರೆ, ಪತಿಯು ಪತ್ನಿಯ ಜೊತೆಗೆ ಸಮಯ ಕಳೆಯಬಹುದು. ಹೀಗಾದಾಗ ಕೃಷಿ ಕೆಲಸಗಳು ಪೂರ್ಣಗೊಳ್ಳದೇ ಇರಬಹುದು. ಆತನು ಸಂಪೂರ್ಣವಾಗಿ ಕೆಲಸದಲ್ಲಿ ತೊಡಗಿಕೊಳ್ಳಲಿ ಎನ್ನುವ ಕಾರಣಕ್ಕೆ ಆಷಾಢದಲ್ಲಿ ತವರಿಗೆ ಹೆಣ್ಣು ಮಕ್ಕಳನ್ನು ಕಳುಹಿಸಿಕೊಡುತ್ತಾರೆ.

ದೂರವಿರುವ ಅತ್ತೆ ಸೊಸೆ ನಡುವೆ ಪ್ರೀತಿ ಹೆಚ್ಚುತ್ತೆ

ಇನ್ನೊಂದು ನಂಬಿಕೆಯ ಪ್ರಕಾರ ಆಷಾಢ ಮಾಸದಲ್ಲಿ ಹೊಸದಾಗಿ ಮದುವೆಯಾದ ಹೆಣ್ಣು ತನ್ನ ಅತ್ತೆಯೊಂದಿಗಿದ್ದರೆ ಜಗಳಗಳು ಉಂಟಾಗುತ್ತದೆ. ಹೀಗಾಗಿ ಸೊಸೆಯನ್ನು ಒಂದು ತಿಂಗಳ ಕಾಲ ತವರು ಮನೆಗೆ ಕಳುಹಿಸಲಾಗುತ್ತದೆ. ಇಬ್ಬರೂ ದೂರವಿದ್ದರೆ ಅತ್ತೆ ಸೊಸೆಯ ನಡುವೆ ಪ್ರೀತಿ ಕಾಳಜಿಯು ಹೆಚ್ಚುತ್ತದೆ. ಅದಲ್ಲದೇ ತಾಯಿ ಮಗಳು ಸಂಬಂಧವು ಗಟ್ಟಿಯಾಗುತ್ತದೆ ಎನ್ನಲಾಗಿದೆ.


Related Posts

ಉದಯೋನ್ಮುಖ ಪ್ರತಿಭಾ ಪುರಸ್ಕಾರಕ್ಕೆ ಅಕ್ಷತಾ ಸುಧೀರ್


Share         ಮಂಗಳೂರು/ಬೆಂಗಳೂರು: ಕರ್ನಾಟಕ ಆರ್ಯ ಈಡಿಗ ಮಹಿಳಾ ಸಂಘದ ವತಿಯಿಂದ ಆಯೋಜಿಸಲಾದ ರಾಷ್ಟ್ರೀಯ ಸಮ್ಮೇಳನದಲ್ಲಿ, ಯುವವಾಹಿನಿಯ ಬೆಂಗಳೂರು ಘಟಕದ ಹೆಮ್ಮೆಯ ಸದಸ್ಯೆಯೂ ಹಾಗೂ ಪ್ರಸಕ್ತ ಲೆಕ್ಕಪರಿಶೋಧಕರೂ ಆಗಿರುವ ಶ್ರೀಮತಿ ಅಕ್ಷತಾ ಸುಧೀರ್ ಅವರಿಗೆ ಉದಯೋನ್ಮುಖ


Read More »

ಕಲರ್ಸ್ ಕನ್ನಡ ಬಿಗ್ ಬಾಸ್ 12ರ ಸ್ಪರ್ಧಿ ಧ್ರುವಂತ್ (ಚರಿತ್ ಬಾಳಪ್ಪ ಪೂಜಾರಿ) ಜೀವನದ ಯಶೋಗಾಥೆ


Share         ಜೀವನದಲ್ಲಿ ಅದೆಷ್ಟೋ ಕಷ್ಟಗಳನ್ನು ಸಹಿಸಿಕೊಂಡು, ಅವಕಾಶಗಳಿಂದ ವಂಚಿತನಾದರೂ ಧೃತಿಗೆಡದೆ, ಸಾಧನೆಯ ಹಾದಿಯಲ್ಲಿ ಹಂತ ಹಂತವಾಗಿ ಮುನ್ನಡೆಯುತ್ತ ಇಂದು ಎಲ್ಲರ ಮನಗಳಲ್ಲಿ ಮನೆ ಮಾಡಿರುವಂತಹ ನಮ್ಮೆಲ್ಲರ ಹೆಮ್ಮೆಯ ಸಾಧಕ ಧ್ರುವಂತ್ ಇವರ ಯಶಸ್ಸಿನ ಹಿಂದಿನ


Read More »

🩸 ಓಮಾನ್ ಬಿಲ್ಲವಾಸ್ ವತಿಯಿಂದ ಆಯೋಜಿಸಲಾದ ಸಾಮೂಹಿಕ ರಕ್ತದಾನ ಶಿಬಿರ 🩸 ಬೌಶರ್ ಬ್ಲಡ್ ಬ್ಯಾಂಕ್, ಘಾಲಾ ಇಲ್ಲಿ ಯಶಸ್ವಿಯಾಗಿ ನಡೆಯಿತು.


Share          ಒಂದು ಕಾಲದಲ್ಲಿ ತುಳುನಾಡಿನ ಮೂಲದವರಾದ ಬಿಲ್ಲವರು ಕೃಷಿಕರಾಗಿ ಹಾಗೂ ಬೈದರಾಗಿ ತಮ್ಮ ಪರಿಶ್ರಮ, ಶ್ರಮಸಾಧನೆ ಮತ್ತು ಸಾಮಾಜಿಕ ಜವಾಬ್ದಾರಿಗಳ ಮೂಲಕ ಸಮಾಜದಲ್ಲಿ ಗೌರವಯುತ ಸ್ಥಾನವನ್ನು ಪಡೆದವರು. ಪ್ರಕೃತಿಯೊಂದಿಗೆ ಸಮನ್ವಯದಿಂದ ಬದುಕನ್ನು ಸಾಗಿಸುತ್ತಾ, ಪರಸ್ಪರ


Read More »

ನಾನು ಕಂಡ ಪ್ರವೀಣ್ ಪೂಜಾರಿ


Share         ನಾನು ಕಂಡ ಪ್ರವೀಣ್ ಪೂಜಾರಿ ಸಾಧಾರಣ 15 ವರ್ಷಗಳಿಂದ ನಮ್ಮ ಆತ್ಮೀಯತೆ ಬಿಲ್ಲವ ಸಮಾಜದ ಸಾಮಾನ್ಯ ಜನರಿಗೂ ಸಮಸ್ಯೆ ಬಂದಂತ ಸಂದರ್ಭದಲ್ಲಿ ವಕೀಲನಾಗಿ ಅಥವಾ ಸಾಮಾಜಿಕ ಕಾರ್ಯಕರ್ತನಾಗಿ ನ್ಯಾಯ ದೊರಕಿಸಿಕೊಟ್ಟಂತಹ ಒಬ್ಬ ನಮ್ಮ


Read More »

ಚಾರ್ಟರ್ಡ್ ಅಕೌಂಟೆಂಟ್ (CA) ಪರೀಕ್ಷೆಯಲ್ಲಿ ಅತ್ಯುತ್ತಮ ಅಂಕಗಳನ್ನು ಗಳಿಸಿ ನಿಶಾ ಪೂಜಾರಿ ಉತ್ತೀರ್ಣರಾಗಿದ್ದಾರೆ.


Share         ಮುಂಬಯಿ : ಕಾಂದಿವಲಿ ಪೂರ್ವದ ಠಾಕೂರ್ ಕಾಂಪ್ಲೆಕ್ಸ್ ನಿವಾಸಿ ನಿಶಾ ಪೂಜಾರಿ ಅವರು ಇತ್ತೀಚೆಗೆ ಸೆಪ್ಟೆಂಬರ್‌ನಲ್ಲಿ ನಡೆದ ಚಾರ್ಟರ್ಡ್ ಅಕೌಂಟೆಂಟ್ (CA) ಪರೀಕ್ಷೆಯಲ್ಲಿ ಅತ್ಯುತ್ತಮ ಅಂಕಗಳನ್ನು ಗಳಿಸಿ ಯಶಸ್ವಿಯಾಗಿ ಉತ್ತೀರ್ಣರಾಗಿದ್ದಾರೆ. ಅವರು ಕಾರ್ಕಳ


Read More »

ಬಹುಮುಖ ಪ್ರತಿಭಾವಂತೆ ಹರ್ಷಿಕಾ ಕಾಣಿಯೂರು ಅವರಿಗೆ ಅಭಿನಂದನೆಗಳು


Share         ಹರ್ಷಿಕಾ ಕಾಣಿಯೂರು ಅವರ ಬಾಲ್ಯದ ವಯಸ್ಸಿನಲ್ಲಿಯೇ ಕೃಷಿ ಕಾರ್ಯದ ಮೇಲಿನ ಆಸಕ್ತಿ ಹಾಗೂ ಶ್ರಮವನ್ನು ಗುರುತಿಸಿ ಸೈಟ್ ರೀಟಾ ವಿದ್ಯಾ ಸಂಸ್ಥೆ ಗೌರವಿಸಿದ ಕ್ಷಣ ನಿಜಕ್ಕೂ ಹೆಮ್ಮೆಯದು. 🌾🌱👏   ಅಷ್ಟೇ ಅಲ್ಲದೆ,


Read More »