TOP STORIES:

ಆಷಾಢ ಮಾಸಕ್ಕೆ ಗಂಡ ಹೆಂಡತಿ ಒಟ್ಟಿಗೆ ಇರುವಂತಿಲ್ಲ ಯಾಕೆ?


ಆಷಾಢ ಮಾಸವನ್ನು ಅಶುಭವೆಂದೇ ಪರಿಗಣಿಸಲಾಗುತ್ತದೆ. ಹೀಗಾಗಿ ಈ ಮಾಸದಲ್ಲಿ ಶುಭ ಕಾರ್ಯಗಳು ನಡೆಯುವುದಿಲ್ಲ. ಅದಲ್ಲದೇ, ಹೊಸದಾಗಿ ಮದುವೆಯಾದ ದಂಪತಿಗಳಿಬ್ಬರೂ ಪರಸ್ಪರ ದೂರವಿರಬೇಕಾದ ಕಾರಣ ಹೆಣ್ಣು ಮಕ್ಕಳು ಗಂಡನ ಮನೆಯಿಂದ ತವರು ಮನೆಗೆ ತೆರಳುತ್ತಾರೆ. ಹಾಗಾದ್ರೆ ಈ ಆಚರಣೆಯ ಹಿಂದಿರುವ ಕಾರಣವೇನು ಎನ್ನುವ ಸಂಪೂರ್ಣ ಮಾಹಿತಿ ಇಲ್ಲಿದೆ.

ಹಿಂದೂ ಧರ್ಮದ ಚಾಂದ್ರಮಾನ ಪಂಚಾಂಗದ ನಾಲ್ಕನೇ ಮಾಸ ಈ ‘ಆಷಾಢ’. ದಕ್ಷಿಣಾಯಣದ ಪರ್ವ ಕಾಲದಲ್ಲಿ ಜೇಷ್ಠ ಮಾಸದ ಅಮವಾಸ್ಯೆಯ ಮರುದಿನವಾದ ಪಾಡ್ಯ ತಿಥಿಯಿಂದ ಆಷಾಢ ಮಾಸ ಆರಂಭವಾಗುತ್ತದೆ. ಈ ವರ್ಷ ಆಷಾಢ ಮಾಸವು ಜುಲೈ 6 ರಂದು ಪ್ರಾರಂಭವಾಗಿ ಆಗಸ್ಟ್ 4 ರಂದು ಕೊನೆಗೊಳ್ಳುತ್ತದೆ. ಈ ಮಾಸದಲ್ಲಿ ಹೊಸದಾಗಿ ಮದುವೆಯಾದ ಹೆಣ್ಣು ಮಕ್ಕಳು ತವರಿಗೆ ಬರುವ ಸಂಪ್ರದಾಯವಿದೆ. ಆಂಧ್ರ ಪ್ರದೇಶದಲ್ಲಿ ಆಷಾಢ ಮಾಸದಲ್ಲಿ ಅತ್ತೆ-ಸೊಸೆ ಕೂಡ ಜೊತೆಯಾಗಿರಬಾರದು ಎನ್ನಲಾಗುತ್ತದೆ

ಆಷಾಢ ಮಾಸದಲ್ಲಿ ನವವಿವಾಹಿತರು ದೂರವಿರಬೇಕು ಎನ್ನುವ ಕಾರಣ ಹೆಣ್ಣು ಮಕ್ಕಳು ತವರಿಗೆ ಬರುವ ಸಂಪ್ರದಾಯವಿದೆ. ಈ ಸಮಯದಲ್ಲಿ ಗಂಡ ಹೆಂಡತಿ ಸೇರಿ ಹೆಣ್ಣು ಗರ್ಭವತಿಯಾದರೆ, ಚೈತ್ರ ಮಾಸದಲ್ಲಿ ಮಗುವಿಗೆ ಜನ್ಮ ನೀಡಬಹುದು. ಈ ಏಪ್ರಿಲ್ ತಿಂಗಳಿನಲ್ಲಿ ಉಷ್ಣಾಂಶ ಹೆಚ್ಚಾಗಿರುತ್ತದೆ. ಇದರಿಂದ ತಾಯಿ ಹಾಗೂ ಮಗುವಿಗೆ ಆರೋಗ್ಯ ಸಮಸ್ಯೆಗಳು ಕಾಡಬಹುದು ಎನ್ನುವ ವೈಜ್ಞಾನಿಕ ಕಾರಣವು ಇದೆ.

ಅಷ್ಟೇ ಅಲ್ಲದೇ ಈ ಆಷಾಢ ತಿಂಗಳಿನಲ್ಲಿ ರೈತಾಪಿ ವರ್ಗಕ್ಕೆ ಕೆಲಸಗಳು ಸ್ವಲ್ಪ ಹೆಚ್ಚಾಗಿರುತ್ತದೆ. ಈ ಸಮಯದಲ್ಲಿ ಹೊಸದಾಗಿ ಮದುವೆಯಾದ ಜೋಡಿಗಳು ಜೊತೆಗಿದ್ದರೆ, ಪತಿಯು ಪತ್ನಿಯ ಜೊತೆಗೆ ಸಮಯ ಕಳೆಯಬಹುದು. ಹೀಗಾದಾಗ ಕೃಷಿ ಕೆಲಸಗಳು ಪೂರ್ಣಗೊಳ್ಳದೇ ಇರಬಹುದು. ಆತನು ಸಂಪೂರ್ಣವಾಗಿ ಕೆಲಸದಲ್ಲಿ ತೊಡಗಿಕೊಳ್ಳಲಿ ಎನ್ನುವ ಕಾರಣಕ್ಕೆ ಆಷಾಢದಲ್ಲಿ ತವರಿಗೆ ಹೆಣ್ಣು ಮಕ್ಕಳನ್ನು ಕಳುಹಿಸಿಕೊಡುತ್ತಾರೆ.

ದೂರವಿರುವ ಅತ್ತೆ ಸೊಸೆ ನಡುವೆ ಪ್ರೀತಿ ಹೆಚ್ಚುತ್ತೆ

ಇನ್ನೊಂದು ನಂಬಿಕೆಯ ಪ್ರಕಾರ ಆಷಾಢ ಮಾಸದಲ್ಲಿ ಹೊಸದಾಗಿ ಮದುವೆಯಾದ ಹೆಣ್ಣು ತನ್ನ ಅತ್ತೆಯೊಂದಿಗಿದ್ದರೆ ಜಗಳಗಳು ಉಂಟಾಗುತ್ತದೆ. ಹೀಗಾಗಿ ಸೊಸೆಯನ್ನು ಒಂದು ತಿಂಗಳ ಕಾಲ ತವರು ಮನೆಗೆ ಕಳುಹಿಸಲಾಗುತ್ತದೆ. ಇಬ್ಬರೂ ದೂರವಿದ್ದರೆ ಅತ್ತೆ ಸೊಸೆಯ ನಡುವೆ ಪ್ರೀತಿ ಕಾಳಜಿಯು ಹೆಚ್ಚುತ್ತದೆ. ಅದಲ್ಲದೇ ತಾಯಿ ಮಗಳು ಸಂಬಂಧವು ಗಟ್ಟಿಯಾಗುತ್ತದೆ ಎನ್ನಲಾಗಿದೆ.


Related Posts

ಚಾರ್ಟರ್ಡ್ ಅಕೌಂಟೆಂಟ್ (CA) ಪರೀಕ್ಷೆಯಲ್ಲಿ ಅತ್ಯುತ್ತಮ ಅಂಕಗಳನ್ನು ಗಳಿಸಿ ನಿಶಾ ಪೂಜಾರಿ ಉತ್ತೀರ್ಣರಾಗಿದ್ದಾರೆ.


Share         ಮುಂಬಯಿ : ಕಾಂದಿವಲಿ ಪೂರ್ವದ ಠಾಕೂರ್ ಕಾಂಪ್ಲೆಕ್ಸ್ ನಿವಾಸಿ ನಿಶಾ ಪೂಜಾರಿ ಅವರು ಇತ್ತೀಚೆಗೆ ಸೆಪ್ಟೆಂಬರ್‌ನಲ್ಲಿ ನಡೆದ ಚಾರ್ಟರ್ಡ್ ಅಕೌಂಟೆಂಟ್ (CA) ಪರೀಕ್ಷೆಯಲ್ಲಿ ಅತ್ಯುತ್ತಮ ಅಂಕಗಳನ್ನು ಗಳಿಸಿ ಯಶಸ್ವಿಯಾಗಿ ಉತ್ತೀರ್ಣರಾಗಿದ್ದಾರೆ. ಅವರು ಕಾರ್ಕಳ


Read More »

ಬಹುಮುಖ ಪ್ರತಿಭಾವಂತೆ ಹರ್ಷಿಕಾ ಕಾಣಿಯೂರು ಅವರಿಗೆ ಅಭಿನಂದನೆಗಳು


Share         ಹರ್ಷಿಕಾ ಕಾಣಿಯೂರು ಅವರ ಬಾಲ್ಯದ ವಯಸ್ಸಿನಲ್ಲಿಯೇ ಕೃಷಿ ಕಾರ್ಯದ ಮೇಲಿನ ಆಸಕ್ತಿ ಹಾಗೂ ಶ್ರಮವನ್ನು ಗುರುತಿಸಿ ಸೈಟ್ ರೀಟಾ ವಿದ್ಯಾ ಸಂಸ್ಥೆ ಗೌರವಿಸಿದ ಕ್ಷಣ ನಿಜಕ್ಕೂ ಹೆಮ್ಮೆಯದು. 🌾🌱👏   ಅಷ್ಟೇ ಅಲ್ಲದೆ,


Read More »

ಅಕ್ಷತಾ ಪೂಜಾರಿಗೆ ಎಂಬ ಮುಗ್ದ ಯುವತಿಯ ಮೇಲೆ ಪೋಲಿಸರಿಂದ ಹಲ್ಲೆ- ವಕೀಲ‌ ಪ್ರವೀಣ್ ಪೂಜಾರಿ ಆಕ್ರೋಶ


Share         ಅಕ್ಷತಾ ಪೂಜಾರಿಗೆ ಎಂಬ ಮುಗ್ದ ಯುವತಿಯ ಮೇಲೆ ಪೋಲಿಸರಿಂದ ಹಲ್ಲೆ- ವಕೀಲ‌ ಪ್ರವೀಣ್ ಪೂಜಾರಿ ಆಕ್ರೋಶ ಉಡುಪಿ: ಪ್ರಕರಣವೊಂದಕ್ಕೆ ಸಂಬಂಧಿಸಿ ನ್ಯಾಯಾಲಯದ ಜಾರಿ ಆದೇಶವನ್ನು ಕಾರ್ಯಗತಗೊಳಿಸುವ ನೆಪದಲ್ಲಿ ಪೊಲೀಸರು ಮಹಿಳೆಯರಿದ್ದ ಮನೆಗೆ ಬೆಳ್ಳಂ


Read More »

ಯುವ ವೈಭವ 2025 -ಯುವವಾಹಿನಿ (ರಿ.)ಬೆಂಗಳೂರು ಘಟಕದ ಪತ್ರಿಕಾಗೋಷ್ಠಿ


Share         #ಯುವ ವೈಭವ 2025 05/12/25 ಇಂದು ಪ್ರೆಸ್ ಕ್ಲಬ್ ಆಫ್ ಬೆಂಗಳೂರು ಇಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಯುವವಾಹಿನಿ (ರಿ.)ಬೆಂಗಳೂರು ಘಟಕ ಅಧ್ಯಕ್ಷರಾದ ಶಶಿಧರ್ ಕೋಟ್ಯಾನ್ ಮತ್ತು ಕಾರ್ಯದರ್ಶಿ ಸಂತೋಷ್ ಪೂಜಾರಿ ಪಣಪಿಲ ಅವರು


Read More »

ಕೇರಳದ ಶಿವಗಿರಿಯ ಶಾಖಾ ಮಠವನ್ನು ಉಡುಪಿ ಅಥವಾ ಮಂಗಳೂರಿನಲ್ಲಿ ಸ್ಥಾಪಿಸಲು ಅಗತ್ಯ ಇರುವ ಐದು ಎಕರೆ ಜಮೀನನ್ನು ಒದಗಿಸಲಾಗುವುದು : ಮುಖ್ಯಮಂತ್ರಿ ಸಿದ್ದರಾಮಯ್ಯ


Share         ಕೇರಳದ ಶಿವಗಿರಿಯ ಶಾಖಾ ಮಠವನ್ನು ಉಡುಪಿ ಅಥವಾ ಮಂಗಳೂರಿನಲ್ಲಿ ಸ್ಥಾಪಿಸಲು ಅಗತ್ಯ ಇರುವ ಐದು ಎಕರೆ ಜಮೀನನ್ನು ಒದಗಿಸಲಾಗುವುದು : ಮುಖ್ಯಮಂತ್ರಿ ಸಿದ್ದರಾಮಯ್ಯ ಉಳ್ಳಾಲ: ಕೇರಳದ ಶಿವಗಿರಿಯ ಶಾಖಾ ಮಠವನ್ನು ಉಡುಪಿ ಅಥವಾ


Read More »

ವಿಶೇಷ ಮಕ್ಕಳ ಕಲೆಗಾರಿಕೆಯಿಂದ ರೂಪುಗೊಂಡ ಜನನಾಯಕ ಪದ್ಮರಾಜ್ ಆರ್. ಪೂಜಾರಿಯವರ ಭಾವಚಿತ್ರ


Share         ಕಲಾಸೇತು — ಬಂಟ್ವಾಳ ತಾಲೂಕಿನ ಕಾವಳಕಟ್ಟೆಯ ಗುರಿಮಜಲ್ ಹಿದಾಯ ವಿಶೇಷ ಮಕ್ಕಳ ವಸತಿ ಶಾಲೆ ದಶಮಾನೋತ್ಸವ ಕಾರ್ಯಕ್ರಮದಲ್ಲಿ, ವಿಶೇಷ ಮಕ್ಕಳ ಕಲೆಗಾರಿಕೆಯಿಂದ ರೂಪುಗೊಂಡ ಜನನಾಯಕ ಪದ್ಮರಾಜ್ ಆರ್. ಪೂಜಾರಿಯವರ ಭಾವಚಿತ್ರ ವನ್ನು ಶಾಲೆಯ


Read More »