TOP STORIES:

FOLLOW US

ಆಷಾಢ ಮಾಸಕ್ಕೆ ಗಂಡ ಹೆಂಡತಿ ಒಟ್ಟಿಗೆ ಇರುವಂತಿಲ್ಲ ಯಾಕೆ?


ಆಷಾಢ ಮಾಸವನ್ನು ಅಶುಭವೆಂದೇ ಪರಿಗಣಿಸಲಾಗುತ್ತದೆ. ಹೀಗಾಗಿ ಈ ಮಾಸದಲ್ಲಿ ಶುಭ ಕಾರ್ಯಗಳು ನಡೆಯುವುದಿಲ್ಲ. ಅದಲ್ಲದೇ, ಹೊಸದಾಗಿ ಮದುವೆಯಾದ ದಂಪತಿಗಳಿಬ್ಬರೂ ಪರಸ್ಪರ ದೂರವಿರಬೇಕಾದ ಕಾರಣ ಹೆಣ್ಣು ಮಕ್ಕಳು ಗಂಡನ ಮನೆಯಿಂದ ತವರು ಮನೆಗೆ ತೆರಳುತ್ತಾರೆ. ಹಾಗಾದ್ರೆ ಈ ಆಚರಣೆಯ ಹಿಂದಿರುವ ಕಾರಣವೇನು ಎನ್ನುವ ಸಂಪೂರ್ಣ ಮಾಹಿತಿ ಇಲ್ಲಿದೆ.

ಹಿಂದೂ ಧರ್ಮದ ಚಾಂದ್ರಮಾನ ಪಂಚಾಂಗದ ನಾಲ್ಕನೇ ಮಾಸ ಈ ‘ಆಷಾಢ’. ದಕ್ಷಿಣಾಯಣದ ಪರ್ವ ಕಾಲದಲ್ಲಿ ಜೇಷ್ಠ ಮಾಸದ ಅಮವಾಸ್ಯೆಯ ಮರುದಿನವಾದ ಪಾಡ್ಯ ತಿಥಿಯಿಂದ ಆಷಾಢ ಮಾಸ ಆರಂಭವಾಗುತ್ತದೆ. ಈ ವರ್ಷ ಆಷಾಢ ಮಾಸವು ಜುಲೈ 6 ರಂದು ಪ್ರಾರಂಭವಾಗಿ ಆಗಸ್ಟ್ 4 ರಂದು ಕೊನೆಗೊಳ್ಳುತ್ತದೆ. ಈ ಮಾಸದಲ್ಲಿ ಹೊಸದಾಗಿ ಮದುವೆಯಾದ ಹೆಣ್ಣು ಮಕ್ಕಳು ತವರಿಗೆ ಬರುವ ಸಂಪ್ರದಾಯವಿದೆ. ಆಂಧ್ರ ಪ್ರದೇಶದಲ್ಲಿ ಆಷಾಢ ಮಾಸದಲ್ಲಿ ಅತ್ತೆ-ಸೊಸೆ ಕೂಡ ಜೊತೆಯಾಗಿರಬಾರದು ಎನ್ನಲಾಗುತ್ತದೆ

ಆಷಾಢ ಮಾಸದಲ್ಲಿ ನವವಿವಾಹಿತರು ದೂರವಿರಬೇಕು ಎನ್ನುವ ಕಾರಣ ಹೆಣ್ಣು ಮಕ್ಕಳು ತವರಿಗೆ ಬರುವ ಸಂಪ್ರದಾಯವಿದೆ. ಈ ಸಮಯದಲ್ಲಿ ಗಂಡ ಹೆಂಡತಿ ಸೇರಿ ಹೆಣ್ಣು ಗರ್ಭವತಿಯಾದರೆ, ಚೈತ್ರ ಮಾಸದಲ್ಲಿ ಮಗುವಿಗೆ ಜನ್ಮ ನೀಡಬಹುದು. ಈ ಏಪ್ರಿಲ್ ತಿಂಗಳಿನಲ್ಲಿ ಉಷ್ಣಾಂಶ ಹೆಚ್ಚಾಗಿರುತ್ತದೆ. ಇದರಿಂದ ತಾಯಿ ಹಾಗೂ ಮಗುವಿಗೆ ಆರೋಗ್ಯ ಸಮಸ್ಯೆಗಳು ಕಾಡಬಹುದು ಎನ್ನುವ ವೈಜ್ಞಾನಿಕ ಕಾರಣವು ಇದೆ.

ಅಷ್ಟೇ ಅಲ್ಲದೇ ಈ ಆಷಾಢ ತಿಂಗಳಿನಲ್ಲಿ ರೈತಾಪಿ ವರ್ಗಕ್ಕೆ ಕೆಲಸಗಳು ಸ್ವಲ್ಪ ಹೆಚ್ಚಾಗಿರುತ್ತದೆ. ಈ ಸಮಯದಲ್ಲಿ ಹೊಸದಾಗಿ ಮದುವೆಯಾದ ಜೋಡಿಗಳು ಜೊತೆಗಿದ್ದರೆ, ಪತಿಯು ಪತ್ನಿಯ ಜೊತೆಗೆ ಸಮಯ ಕಳೆಯಬಹುದು. ಹೀಗಾದಾಗ ಕೃಷಿ ಕೆಲಸಗಳು ಪೂರ್ಣಗೊಳ್ಳದೇ ಇರಬಹುದು. ಆತನು ಸಂಪೂರ್ಣವಾಗಿ ಕೆಲಸದಲ್ಲಿ ತೊಡಗಿಕೊಳ್ಳಲಿ ಎನ್ನುವ ಕಾರಣಕ್ಕೆ ಆಷಾಢದಲ್ಲಿ ತವರಿಗೆ ಹೆಣ್ಣು ಮಕ್ಕಳನ್ನು ಕಳುಹಿಸಿಕೊಡುತ್ತಾರೆ.

ದೂರವಿರುವ ಅತ್ತೆ ಸೊಸೆ ನಡುವೆ ಪ್ರೀತಿ ಹೆಚ್ಚುತ್ತೆ

ಇನ್ನೊಂದು ನಂಬಿಕೆಯ ಪ್ರಕಾರ ಆಷಾಢ ಮಾಸದಲ್ಲಿ ಹೊಸದಾಗಿ ಮದುವೆಯಾದ ಹೆಣ್ಣು ತನ್ನ ಅತ್ತೆಯೊಂದಿಗಿದ್ದರೆ ಜಗಳಗಳು ಉಂಟಾಗುತ್ತದೆ. ಹೀಗಾಗಿ ಸೊಸೆಯನ್ನು ಒಂದು ತಿಂಗಳ ಕಾಲ ತವರು ಮನೆಗೆ ಕಳುಹಿಸಲಾಗುತ್ತದೆ. ಇಬ್ಬರೂ ದೂರವಿದ್ದರೆ ಅತ್ತೆ ಸೊಸೆಯ ನಡುವೆ ಪ್ರೀತಿ ಕಾಳಜಿಯು ಹೆಚ್ಚುತ್ತದೆ. ಅದಲ್ಲದೇ ತಾಯಿ ಮಗಳು ಸಂಬಂಧವು ಗಟ್ಟಿಯಾಗುತ್ತದೆ ಎನ್ನಲಾಗಿದೆ.


Share:

More Posts

Category

Send Us A Message

Related Posts

ಬಂಟ್ವಾಳ: ಬಾಳೆಕಲ್ಲು ಗರಡಿಮನೆ ದೇವಕಿ ನಿಧನ


Share       ಬಂಟ್ವಾಳ: ಬಾಳೆಕಲ್ಲು ಗರಡಿಮನೆ ಶ್ರೀ ಕೊರಗಪ್ಪ ಪೂಜಾರಿಯವರ ಧರ್ಮಪತ್ನಿ ಶ್ರೀಮತಿ ದೇವಕಿ(85 ವ ) ಇವರು 21.10.2024 ನೇ ಸೋಮವಾರ ನಿಧನರಾಗಿದ್ದಾರೆ. ಇತ್ತೀಚೆಗೆ ಅನಾರೋಗ್ಯಕ್ಕೆ ತುತ್ತಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಚೇತರಿಸಿಕೊಂಡಿದ್ದರು. ಎರಡು


Read More »

ಬಿರುವೆರ್ ಕುಡ್ಲ ಸಂಘಟನೆಯಿಂದ ಯುವವಾಹಿನಿಗೆ ಗೌರವದ ಸನ್ಮಾನ.. ಕೇಂದ್ರ ಸಮಿತಿಯ ಅಧ್ಯಕ್ಷರಾದ ಹರೀಶ್ ಕೆ ಪೂಜಾರಿ ಸನ್ಮಾನ ಸ್ವೀಕಾರ


Share       ಮಂಗಳೂರು : ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರ ಬಿರುವೆರ್ ಕುಡ್ಲ(ರಿ) ಮಂಗಳೂರು ಸಂಘಟನಯ ದಶಮಾನೋತ್ಸವದ ಸವಿನೆನಪಿಗಾಗಿ, ರಾಜ್ಯದ ಪ್ರತಿಷ್ಠಿತ ಯುವವಾಹಿನಿ ಸಂಸ್ಥೆಯು ಕಳೆದ 36 ವರ್ಷಗಳ ಸಮಾಜಮುಖಿ ಸೇವೆಯನ್ನು ಗುರುತಿಸಿ ಗೌರವಿಸಿ ಗೌರವದ


Read More »

ದೇಯಿ ಬೈದೆತಿ- ಕೋಟಿ ಚೆನ್ನಯರ ಮೂಲಸ್ಥಾನ ಶ್ರೀ ಕ್ಷೇತ್ರ ಗೆಜ್ಜೆಗಿರಿ ಎಂಬ ಪುಣ್ಯಭೂಮಿ


Share       ಗೆಜ್ಜೆಗಿರಿ ನಂದನ ಬಿತ್ತಲ್ ಎಂಬ ಹೆಸರು ಕೇಳುತ್ತಿದ್ದಂತೆ ಮೈ ರೋಮಾಂಚನಗೊಳ್ಳುತ್ತದೆ. ಕ್ಷೇತ್ರದ ಇತಿಹಾಸವನ್ನು ಕೇಳುವಾಗ ಅವಳಿ ವೀರಪುರುಷರ ಮೂಲಸ್ಥಾನ ಯಾವುದು ಎಂಬ ಪ್ರಶ್ನೆಗೂ ಉತ್ತರ ಸಿಗುತ್ತದೆ. ಅಂತಹ ಪುಣ್ಯ-ಪವಿತ್ರ ಭೂಮಿಯಲ್ಲಿ ದೇಯಿ ಬೈದೈತಿ


Read More »

” ನವ ಕರ್ನಾಟಕ ರತ್ನ ” ಪ್ರಶಸ್ತಿಗೆ ಸತೀಶ್ ಕುಮಾರ್ ಬಜಾಲ್ ಆಯ್ಕೆ


Share       ಬೆಂಗಳೂರು: ವಿದೇಶಗಳಲ್ಲಿ ನೆಲೆಸಿರುವ ಕನ್ನಡಿಗರನ್ನು ಒಂದುಗೂಡಿಸುವ ಉದ್ದೇಶದಿಂದ ಇದೇ ಮೊದಲ ಬಾರಿಗೆ ಅ. 4 ಮತ್ತು 5ರಂದು ಬೆಂಗಳೂರಿನಲ್ಲಿ ಅನಿವಾಸಿ ಕನ್ನಡಿಗರ ಸಮ್ಮೇಳನವನ್ನು ಆಯೋಜಿಸಲಾಗಿದ್ದು, ಬೆಂಗಳೂರಿನ ರವೀಂದ್ರ ಕಲಾ ಕ್ಷೇತ್ರದಲ್ಲಿ ನಡೆಯಲಿದ್ದು. ಅಂದು


Read More »

ಊದುಪೂಜೆಯಲ್ಲಿ ಪಿಲಿಯಾವೇಶ ಎಷ್ಟು ಸರಿ?


Share       ಇನ್ನು ಪಿಲಿಕೋಲ ನೋಡಲು ವರ್ಷಕ್ಕೊಮ್ಮೆ ಕಾಪುವಿಗೆ ಹೋಗಬೇಕಾಗಿಲ್ಲ. ಅಷ್ಟಮಿ, ಚೌತಿ, ಮಾರ್ನೆಮಿಗಳಲ್ಲಿ ನಮ್ಮೂರಿನಲ್ಲೂ ಪಿಲಿಕೋಲಗಳು ಆರಂಭವಾಗಿವೆ. ಹಿಂದೆ ಅಪೂರ್ವವಾಗಿ ಎಲ್ಲಾದರೂ ಒಂದು ಕಡೆ ಊದುಹಾಕುವಾಗ ವೇಷಸಂಕಲ್ಪಿಸಿಕೊಂಡವನಿಗೆ ಆವೇಶ ಆಗುವುದಿತ್ತು. ಹೀಗೆ ಆವೇಶವಾಗುವುದು ಶುಭಲಕ್ಷಣ


Read More »

ದುಬೈ: ದುಬೈ ಬಿಲ್ಲವಸ್ ಫ್ಯಾಮಿಲಿ ವತಿಯಿಂದ ನಡೆದ 170 ನೇ ಬ್ರಹ್ಮ ಶ್ರೀ ನಾರಾಯಣ ಗುರುಜಯಂತಿ


Share       ದುಬೈ: ಬಿಲ್ಲವಸ್ ಫ್ಯಾಮಿಲಿ ದುಬೈ ಇವರ ವತಿಯಿಂದ ಬ್ರಹ್ಮ ಶ್ರೀ ನಾರಾಯಣ ಗುರುವರ್ಯರ 170 ನೇ ಗುರು ಜಯಂತಿಯು ದುಬೈ ನ ಗ್ಲೆಂಡಲೆ ಇಂಟರ್ ನ್ಯಾಷನಲ್ ಸ್ಕೂಲ್ ನಲ್ಲಿ  ಭಾನುವಾರದಂದು ವಿಜೃಂಭಣೆಯಿಂದ ನಡೆಯಿತು.


Read More »