TOP STORIES:

ದುಬೈಯಲ್ಲಿ ಯಶಸ್ವಿ ಉದ್ಯಮಿಯಾಗಿ ಲೆಕ್ಕವಿಲ್ಲದಷ್ಟು ಸೇವೆಯನ್ನು ಸಮಾಜಕ್ಕೆ ಅರ್ಪಿಸುತ್ತಿರು ಸೇವಾ ಮಾಣಿಕ್ಯ ನಿಟ್ಟೆ ಸಂದೀಪ್ ಕೋಟ್ಯಾನ್ ಕಾರ್ಕಳ..!


ಅನೇಕ ಜನ ಉದ್ಯಮ ಕ್ಷೇತ್ರದ ಯಶಸ್ವಿಯಾಗಿ ಮುಂದುವರೆದ ಉದ್ಯಮಿಗಳು ಪ್ರಸ್ತುತ ದಿನಗಳಲ್ಲಿ ಸಿಗುತ್ತಾರೆ, ಆದರೆ ತಾವು ಸಂಪಾದಿಸಿರುವ ಹಣವನ್ನು ಮಾತ್ರ ಸಮಾಜದಲ್ಲಿ ಕೇವಲ ಕಾರ್ಯಕ್ರಮ ಮನೊರಂಜನೆಗಳಿಗೆ ಬಳಸಿ ರಾಜಕೀಯ ನಾಯಕರು, ಉದ್ಯಮಿಗಳನ್ನು ಕರೆದು ಹಾರ ಹಾಕುವ ಮೂಲಕ ಹೆಸರು ಗಳಿಸುವ ಮುಂದಾಳೊಚನೆಯಿಂದ ಸಮಾಜದಲ್ಲಿ ನಾಯಕರಾಗಿ ಗುರುತಿಸಲ್ಪಡುವವರೇ ಹೆಚ್ಚು….

ಆದರೆ ಇಲ್ಲೊಬ್ಬ ವ್ಯಕ್ತಿ ಕಾರ್ಕಳ   ಪ್ರತೀಷ್ಠಿತ ಮನೆಯೊಂದರಲಿ ಜನಿಸಿ, ತಂದೆಯಂತೆ, ಸಮಾಜಕ್ಕಾಗಿ ಹತ್ತು ಹಲವಾರು ಸೇವೆಗಳನ್ನು ನೀಡಿರುವ ಒರ್ವ ಶ್ರೇಷ್ಠ ಸೇವಕರ ಬಗೆಗಿನ ಪುಟ್ಟ ಪರಿಚಯ…

ಸಂದೀಪ್ ಕೋಟ್ಯಾನ್, ಭಾರತೀಯ ಸಂಸ್ಕ್ರತಿಯ ಬಗ್ಗೆ ಅಪಾರವಾದ ಗೌರವ ಹೊಂದಿರುವ ಒರ್ವ ವ್ಯಕ್ತಿ, ಉದ್ಯೋಗಕ್ಕಾಗಿ ದುಬೈ ದೇಶಕ್ಕಾಗಿ ಬಂದು ತನ್ನ ವಯಕ್ತಿಕ ಶ್ರಮದಿಂದ ಯಾರೊಬ್ಬರ ಹಂಗಿಲ್ಲದೆ ದುಡಿಯುತ್ತ ನಂತರದಲ್ಲಿ ತನ್ನದೇ ಆದ ಸ್ವಂತ ಉದ್ಯಮವನ್ನು ಪ್ರಾರಂಭಿಸಿದರು, ಪ್ರಾರಂಭದಲ್ಲಿ ಅನೇಕ ರೀತಿಯ ಕಷ್ಟದ ದಿನಗಳನ್ನು ಧೈರ್ಯದಿಂದ ಎದುರಿಸಿ, ಯಾವ ಸಂಘಟನೆ ಸಹಾಯವನ್ನು ಪಡೆಯದೆ, ತನ್ನ ಆತ್ಮಸ್ತೈರ್ಯದ ಮೂಲಕ ತಾನು ಕಲಿತಂತಹ ಕೆಲಸ ಹಾಗೂ ತಾನು ನಂಬಿರುವ ದೇವರ ಮೇಲೆ‌ ಬಾರವನ್ನು ಹಾಕಿ ದುಬೈ ದೇಶದಲ್ಲಿ ಯಶಸ್ವಿ ಉದ್ಯಮಿಯಾಗಿ ಇಂದು ನಿಂತಿರುವ ವ್ಯಕ್ತಿ ಸಂದೀಪ್‌ ಕೋಟ್ಯಾನ್…

ಯಾವ ವ್ಯಕ್ತಿಗೂ ಮೋಸ ವಂಚನೆಯನ್ನು ಮಾಡದೆ ತನ್ನಲ್ಲಿರುವ ಅಪಾರವಾದ ಮಾನವೀಯತೆಯನ್ನು ಬಳಸಿ, ತಂದೆಯಂತೆ ಬಿಲ್ಲವ ಸಂಘಟನೆ ಹಾಗೂ ಬಿರುವೆರ್ ಕುಡ್ಲ ದುಬೈ ಘಟಕದ ಜೊತೆ ತಾನು ಒಬ್ಬರಾಗಿ ಪ್ರತಿಯೊಂದು ವಿಚಾರದಲ್ಲೂ ಸೇವೆಯನ್ನು ನೀಡುತ್ತಿರುವಂತಹ‌ ವ್ಯಕ್ತಿ‌ ಇವರು. ಇಷ್ಟೇ ಅಲ್ಲದೆ ಉದ್ಯೋಗ ಕ್ಷೇತ್ರದಲ್ಲಿ ತನ್ನಿಂದಾಗುವಂತಹ ಯಾವುದೇ ಸಹಕಾರ ವಿದ್ದರೂ ತಕ್ಷಣವೇ ಸ್ಪಂದಿಸುವಂತವರು. ಇವರ ಜೊತೆಗೆ ಬೆಂಬಲವಾಗಿ ನಿಂತಿರುವ ಶ್ರೀಮತಿ ಶ್ವೇತ ಸಂದೀಪ್ ಕೋಟ್ಯಾನ್ ಹಾಗೂ ಇಬ್ಬರು ಮಕ್ಕಳ ಜೊತೆಗಿರುವ ಇವರು ತನ್ನ ಹಿರಿಯ ಮಗನನ್ನು ಬಾಲ್ಯದಿಂದಲೇ ತುಳುಮಾತೃ ಭೂಮಿಯ ಸಂಸ್ಕ್ರತಿಯ ಯನ್ನು ಅರಿಯಲು ಯಕ್ಷಗಾನ ಅಭ್ಯಾಸ‌ ಕೇಂದ್ರಕ್ಕೆ ಸೇರ್ಪಡಿಸಿ, ಯಕ್ಷಗಾನದ ಹಾಗೂ ತುಳು ಮತ್ತು ಕನ್ನಡ ಭಾಷೆಯ ಮಹತ್ವವನ್ನು ತಮ್ಮ ಮಕ್ಕಳಿಗೂ ತಿಳಿಸಿಕೊಡುವಂತಹ ತುಳುನಾಡಿನ‌ ಮಗ ಇವರು…

ಯಾವತ್ತೂ ಯಾವ ವೇದಿಕೆಗೂ ಆಸೆಯನ್ನು ಪಡದೆ, ಯಾವ ಆಮಂತ್ರಣ ಬ್ಯಾನರಿನಲ್ಲೂ‌ ಹೆಸರಿನ ಆಸೆಯನ್ನಿಡದೆ, ಯಾವ ಸಾಮಾಜಿಕ ಜಾಲತಾಣದಲ್ಲೂ ಪ್ರಚಾರದ ಹಂಬಲವನ್ನಿಡದೆ ಸೇವೆಯನ್ನು ನೀಡುತ್ತಿರುವ ಅದ್ಭುತ ಸೇವಕ ಸಂದೀಪ್ ಕೋಟ್ಯಾನ್ ಕಾರ್ಕಳ.

ಇವರಿಗೆ ಇನ್ನಷ್ಟು ಸೇವೆ ಮಾಡುವ ಶಕ್ತಿ ಆ ದೇವರು ಅನುಗ್ರಹಿಸಲಿ ಎಂದು ಈ ಮೂಲಕ ದೇವರಲ್ಲಿ ಪ್ರಾರ್ಥಿಸುತ್ತೇವೆ🙏🏻

ಅಧ್ಯಕ್ಷರು ಹಾಗೂ ಸರ್ವಸದಸ್ಯರು      

ಯೂತ್ ಬಿಲ್ಲವ (ರಿ) ಕಾರ್ಕಳ


Related Posts

ಉದಯೋನ್ಮುಖ ಪ್ರತಿಭಾ ಪುರಸ್ಕಾರಕ್ಕೆ ಅಕ್ಷತಾ ಸುಧೀರ್


Share         ಮಂಗಳೂರು/ಬೆಂಗಳೂರು: ಕರ್ನಾಟಕ ಆರ್ಯ ಈಡಿಗ ಮಹಿಳಾ ಸಂಘದ ವತಿಯಿಂದ ಆಯೋಜಿಸಲಾದ ರಾಷ್ಟ್ರೀಯ ಸಮ್ಮೇಳನದಲ್ಲಿ, ಯುವವಾಹಿನಿಯ ಬೆಂಗಳೂರು ಘಟಕದ ಹೆಮ್ಮೆಯ ಸದಸ್ಯೆಯೂ ಹಾಗೂ ಪ್ರಸಕ್ತ ಲೆಕ್ಕಪರಿಶೋಧಕರೂ ಆಗಿರುವ ಶ್ರೀಮತಿ ಅಕ್ಷತಾ ಸುಧೀರ್ ಅವರಿಗೆ ಉದಯೋನ್ಮುಖ


Read More »

ಕಲರ್ಸ್ ಕನ್ನಡ ಬಿಗ್ ಬಾಸ್ 12ರ ಸ್ಪರ್ಧಿ ಧ್ರುವಂತ್ (ಚರಿತ್ ಬಾಳಪ್ಪ ಪೂಜಾರಿ) ಜೀವನದ ಯಶೋಗಾಥೆ


Share         ಜೀವನದಲ್ಲಿ ಅದೆಷ್ಟೋ ಕಷ್ಟಗಳನ್ನು ಸಹಿಸಿಕೊಂಡು, ಅವಕಾಶಗಳಿಂದ ವಂಚಿತನಾದರೂ ಧೃತಿಗೆಡದೆ, ಸಾಧನೆಯ ಹಾದಿಯಲ್ಲಿ ಹಂತ ಹಂತವಾಗಿ ಮುನ್ನಡೆಯುತ್ತ ಇಂದು ಎಲ್ಲರ ಮನಗಳಲ್ಲಿ ಮನೆ ಮಾಡಿರುವಂತಹ ನಮ್ಮೆಲ್ಲರ ಹೆಮ್ಮೆಯ ಸಾಧಕ ಧ್ರುವಂತ್ ಇವರ ಯಶಸ್ಸಿನ ಹಿಂದಿನ


Read More »

🩸 ಓಮಾನ್ ಬಿಲ್ಲವಾಸ್ ವತಿಯಿಂದ ಆಯೋಜಿಸಲಾದ ಸಾಮೂಹಿಕ ರಕ್ತದಾನ ಶಿಬಿರ 🩸 ಬೌಶರ್ ಬ್ಲಡ್ ಬ್ಯಾಂಕ್, ಘಾಲಾ ಇಲ್ಲಿ ಯಶಸ್ವಿಯಾಗಿ ನಡೆಯಿತು.


Share          ಒಂದು ಕಾಲದಲ್ಲಿ ತುಳುನಾಡಿನ ಮೂಲದವರಾದ ಬಿಲ್ಲವರು ಕೃಷಿಕರಾಗಿ ಹಾಗೂ ಬೈದರಾಗಿ ತಮ್ಮ ಪರಿಶ್ರಮ, ಶ್ರಮಸಾಧನೆ ಮತ್ತು ಸಾಮಾಜಿಕ ಜವಾಬ್ದಾರಿಗಳ ಮೂಲಕ ಸಮಾಜದಲ್ಲಿ ಗೌರವಯುತ ಸ್ಥಾನವನ್ನು ಪಡೆದವರು. ಪ್ರಕೃತಿಯೊಂದಿಗೆ ಸಮನ್ವಯದಿಂದ ಬದುಕನ್ನು ಸಾಗಿಸುತ್ತಾ, ಪರಸ್ಪರ


Read More »

ನಾನು ಕಂಡ ಪ್ರವೀಣ್ ಪೂಜಾರಿ


Share         ನಾನು ಕಂಡ ಪ್ರವೀಣ್ ಪೂಜಾರಿ ಸಾಧಾರಣ 15 ವರ್ಷಗಳಿಂದ ನಮ್ಮ ಆತ್ಮೀಯತೆ ಬಿಲ್ಲವ ಸಮಾಜದ ಸಾಮಾನ್ಯ ಜನರಿಗೂ ಸಮಸ್ಯೆ ಬಂದಂತ ಸಂದರ್ಭದಲ್ಲಿ ವಕೀಲನಾಗಿ ಅಥವಾ ಸಾಮಾಜಿಕ ಕಾರ್ಯಕರ್ತನಾಗಿ ನ್ಯಾಯ ದೊರಕಿಸಿಕೊಟ್ಟಂತಹ ಒಬ್ಬ ನಮ್ಮ


Read More »

ಚಾರ್ಟರ್ಡ್ ಅಕೌಂಟೆಂಟ್ (CA) ಪರೀಕ್ಷೆಯಲ್ಲಿ ಅತ್ಯುತ್ತಮ ಅಂಕಗಳನ್ನು ಗಳಿಸಿ ನಿಶಾ ಪೂಜಾರಿ ಉತ್ತೀರ್ಣರಾಗಿದ್ದಾರೆ.


Share         ಮುಂಬಯಿ : ಕಾಂದಿವಲಿ ಪೂರ್ವದ ಠಾಕೂರ್ ಕಾಂಪ್ಲೆಕ್ಸ್ ನಿವಾಸಿ ನಿಶಾ ಪೂಜಾರಿ ಅವರು ಇತ್ತೀಚೆಗೆ ಸೆಪ್ಟೆಂಬರ್‌ನಲ್ಲಿ ನಡೆದ ಚಾರ್ಟರ್ಡ್ ಅಕೌಂಟೆಂಟ್ (CA) ಪರೀಕ್ಷೆಯಲ್ಲಿ ಅತ್ಯುತ್ತಮ ಅಂಕಗಳನ್ನು ಗಳಿಸಿ ಯಶಸ್ವಿಯಾಗಿ ಉತ್ತೀರ್ಣರಾಗಿದ್ದಾರೆ. ಅವರು ಕಾರ್ಕಳ


Read More »

ಬಹುಮುಖ ಪ್ರತಿಭಾವಂತೆ ಹರ್ಷಿಕಾ ಕಾಣಿಯೂರು ಅವರಿಗೆ ಅಭಿನಂದನೆಗಳು


Share         ಹರ್ಷಿಕಾ ಕಾಣಿಯೂರು ಅವರ ಬಾಲ್ಯದ ವಯಸ್ಸಿನಲ್ಲಿಯೇ ಕೃಷಿ ಕಾರ್ಯದ ಮೇಲಿನ ಆಸಕ್ತಿ ಹಾಗೂ ಶ್ರಮವನ್ನು ಗುರುತಿಸಿ ಸೈಟ್ ರೀಟಾ ವಿದ್ಯಾ ಸಂಸ್ಥೆ ಗೌರವಿಸಿದ ಕ್ಷಣ ನಿಜಕ್ಕೂ ಹೆಮ್ಮೆಯದು. 🌾🌱👏   ಅಷ್ಟೇ ಅಲ್ಲದೆ,


Read More »