TOP STORIES:

ದುಬೈಯಲ್ಲಿ ಯಶಸ್ವಿ ಉದ್ಯಮಿಯಾಗಿ ಲೆಕ್ಕವಿಲ್ಲದಷ್ಟು ಸೇವೆಯನ್ನು ಸಮಾಜಕ್ಕೆ ಅರ್ಪಿಸುತ್ತಿರು ಸೇವಾ ಮಾಣಿಕ್ಯ ನಿಟ್ಟೆ ಸಂದೀಪ್ ಕೋಟ್ಯಾನ್ ಕಾರ್ಕಳ..!


ಅನೇಕ ಜನ ಉದ್ಯಮ ಕ್ಷೇತ್ರದ ಯಶಸ್ವಿಯಾಗಿ ಮುಂದುವರೆದ ಉದ್ಯಮಿಗಳು ಪ್ರಸ್ತುತ ದಿನಗಳಲ್ಲಿ ಸಿಗುತ್ತಾರೆ, ಆದರೆ ತಾವು ಸಂಪಾದಿಸಿರುವ ಹಣವನ್ನು ಮಾತ್ರ ಸಮಾಜದಲ್ಲಿ ಕೇವಲ ಕಾರ್ಯಕ್ರಮ ಮನೊರಂಜನೆಗಳಿಗೆ ಬಳಸಿ ರಾಜಕೀಯ ನಾಯಕರು, ಉದ್ಯಮಿಗಳನ್ನು ಕರೆದು ಹಾರ ಹಾಕುವ ಮೂಲಕ ಹೆಸರು ಗಳಿಸುವ ಮುಂದಾಳೊಚನೆಯಿಂದ ಸಮಾಜದಲ್ಲಿ ನಾಯಕರಾಗಿ ಗುರುತಿಸಲ್ಪಡುವವರೇ ಹೆಚ್ಚು….

ಆದರೆ ಇಲ್ಲೊಬ್ಬ ವ್ಯಕ್ತಿ ಕಾರ್ಕಳ   ಪ್ರತೀಷ್ಠಿತ ಮನೆಯೊಂದರಲಿ ಜನಿಸಿ, ತಂದೆಯಂತೆ, ಸಮಾಜಕ್ಕಾಗಿ ಹತ್ತು ಹಲವಾರು ಸೇವೆಗಳನ್ನು ನೀಡಿರುವ ಒರ್ವ ಶ್ರೇಷ್ಠ ಸೇವಕರ ಬಗೆಗಿನ ಪುಟ್ಟ ಪರಿಚಯ…

ಸಂದೀಪ್ ಕೋಟ್ಯಾನ್, ಭಾರತೀಯ ಸಂಸ್ಕ್ರತಿಯ ಬಗ್ಗೆ ಅಪಾರವಾದ ಗೌರವ ಹೊಂದಿರುವ ಒರ್ವ ವ್ಯಕ್ತಿ, ಉದ್ಯೋಗಕ್ಕಾಗಿ ದುಬೈ ದೇಶಕ್ಕಾಗಿ ಬಂದು ತನ್ನ ವಯಕ್ತಿಕ ಶ್ರಮದಿಂದ ಯಾರೊಬ್ಬರ ಹಂಗಿಲ್ಲದೆ ದುಡಿಯುತ್ತ ನಂತರದಲ್ಲಿ ತನ್ನದೇ ಆದ ಸ್ವಂತ ಉದ್ಯಮವನ್ನು ಪ್ರಾರಂಭಿಸಿದರು, ಪ್ರಾರಂಭದಲ್ಲಿ ಅನೇಕ ರೀತಿಯ ಕಷ್ಟದ ದಿನಗಳನ್ನು ಧೈರ್ಯದಿಂದ ಎದುರಿಸಿ, ಯಾವ ಸಂಘಟನೆ ಸಹಾಯವನ್ನು ಪಡೆಯದೆ, ತನ್ನ ಆತ್ಮಸ್ತೈರ್ಯದ ಮೂಲಕ ತಾನು ಕಲಿತಂತಹ ಕೆಲಸ ಹಾಗೂ ತಾನು ನಂಬಿರುವ ದೇವರ ಮೇಲೆ‌ ಬಾರವನ್ನು ಹಾಕಿ ದುಬೈ ದೇಶದಲ್ಲಿ ಯಶಸ್ವಿ ಉದ್ಯಮಿಯಾಗಿ ಇಂದು ನಿಂತಿರುವ ವ್ಯಕ್ತಿ ಸಂದೀಪ್‌ ಕೋಟ್ಯಾನ್…

ಯಾವ ವ್ಯಕ್ತಿಗೂ ಮೋಸ ವಂಚನೆಯನ್ನು ಮಾಡದೆ ತನ್ನಲ್ಲಿರುವ ಅಪಾರವಾದ ಮಾನವೀಯತೆಯನ್ನು ಬಳಸಿ, ತಂದೆಯಂತೆ ಬಿಲ್ಲವ ಸಂಘಟನೆ ಹಾಗೂ ಬಿರುವೆರ್ ಕುಡ್ಲ ದುಬೈ ಘಟಕದ ಜೊತೆ ತಾನು ಒಬ್ಬರಾಗಿ ಪ್ರತಿಯೊಂದು ವಿಚಾರದಲ್ಲೂ ಸೇವೆಯನ್ನು ನೀಡುತ್ತಿರುವಂತಹ‌ ವ್ಯಕ್ತಿ‌ ಇವರು. ಇಷ್ಟೇ ಅಲ್ಲದೆ ಉದ್ಯೋಗ ಕ್ಷೇತ್ರದಲ್ಲಿ ತನ್ನಿಂದಾಗುವಂತಹ ಯಾವುದೇ ಸಹಕಾರ ವಿದ್ದರೂ ತಕ್ಷಣವೇ ಸ್ಪಂದಿಸುವಂತವರು. ಇವರ ಜೊತೆಗೆ ಬೆಂಬಲವಾಗಿ ನಿಂತಿರುವ ಶ್ರೀಮತಿ ಶ್ವೇತ ಸಂದೀಪ್ ಕೋಟ್ಯಾನ್ ಹಾಗೂ ಇಬ್ಬರು ಮಕ್ಕಳ ಜೊತೆಗಿರುವ ಇವರು ತನ್ನ ಹಿರಿಯ ಮಗನನ್ನು ಬಾಲ್ಯದಿಂದಲೇ ತುಳುಮಾತೃ ಭೂಮಿಯ ಸಂಸ್ಕ್ರತಿಯ ಯನ್ನು ಅರಿಯಲು ಯಕ್ಷಗಾನ ಅಭ್ಯಾಸ‌ ಕೇಂದ್ರಕ್ಕೆ ಸೇರ್ಪಡಿಸಿ, ಯಕ್ಷಗಾನದ ಹಾಗೂ ತುಳು ಮತ್ತು ಕನ್ನಡ ಭಾಷೆಯ ಮಹತ್ವವನ್ನು ತಮ್ಮ ಮಕ್ಕಳಿಗೂ ತಿಳಿಸಿಕೊಡುವಂತಹ ತುಳುನಾಡಿನ‌ ಮಗ ಇವರು…

ಯಾವತ್ತೂ ಯಾವ ವೇದಿಕೆಗೂ ಆಸೆಯನ್ನು ಪಡದೆ, ಯಾವ ಆಮಂತ್ರಣ ಬ್ಯಾನರಿನಲ್ಲೂ‌ ಹೆಸರಿನ ಆಸೆಯನ್ನಿಡದೆ, ಯಾವ ಸಾಮಾಜಿಕ ಜಾಲತಾಣದಲ್ಲೂ ಪ್ರಚಾರದ ಹಂಬಲವನ್ನಿಡದೆ ಸೇವೆಯನ್ನು ನೀಡುತ್ತಿರುವ ಅದ್ಭುತ ಸೇವಕ ಸಂದೀಪ್ ಕೋಟ್ಯಾನ್ ಕಾರ್ಕಳ.

ಇವರಿಗೆ ಇನ್ನಷ್ಟು ಸೇವೆ ಮಾಡುವ ಶಕ್ತಿ ಆ ದೇವರು ಅನುಗ್ರಹಿಸಲಿ ಎಂದು ಈ ಮೂಲಕ ದೇವರಲ್ಲಿ ಪ್ರಾರ್ಥಿಸುತ್ತೇವೆ🙏🏻

ಅಧ್ಯಕ್ಷರು ಹಾಗೂ ಸರ್ವಸದಸ್ಯರು      

ಯೂತ್ ಬಿಲ್ಲವ (ರಿ) ಕಾರ್ಕಳ


Related Posts

ಕಾರ್ಕಳದ ಸುಧಾಕರ್ ಪೂಜಾರಿಗೆ ‘ಐಕಾನಿಕ್ ಟ್ರೈನರ್’ ಗೌರವ ಪದವಿ


Share         ಬೆಂಗಳೂರು: ಎಕ್ಕಾರ ಲೈಫ್ ಸೈನ್ಸಸ್ ಪ್ರೈವೇಟ್ ಲಿಮಿಟೆಡ್ ಇದರ ಆಡಳಿತ ನಿರ್ದೇಶಕರಾದ ಕಾರ್ಕಳದ ಸುಧಾಕರ್ ಪೂಜಾರಿ ಅವರಿಗೆ ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ವತಿಯಿಂದ “ಐಕಾನಿಕ್ ಟ್ರೈನರ್” ಎಂಬ ಗೌರವಪೂರ್ಣ ಪದವಿ ಪ್ರದಾನ ಮಾಡಲಾಗಿದೆ.


Read More »

ಅನಿತಾ ಪಿ. ತಾಕೊಡೆ ಅವರ ‘ಮೇಣಕ್ಕಂಟಿದ ಬತ್ತಿ’ ಕವನಕ್ಕೆ ಒಲಿದ ಸಂಕಮ್ಮ ಸಂಕಣ್ಣನವರ್ ದತ್ತಿ ಪ್ರಶಸ್ತಿ


Share         ಕರ್ನಾಟಕ ಲೇಖಕಿಯರ ಸಂಘವು 2025ನೇ ಸಾಲಿನ ವಿವಿಧ ದತ್ತಿನಿಧಿ ವಾರ್ಷಿಕ ಪ್ರಶಸ್ತಿಗಳನ್ನು ಪ್ರಕಟಿಸಿದೆ. ಹಸ್ತಪ್ರತಿಯಲ್ಲಿ ಗವಿಸಿದ್ದ ಎನ್. ಬಳ್ಳಾರಿ ಕಾವ್ಯ ಪ್ರಶಸ್ತಿ ಪಡೆದ, ಅನಿತಾ ತಾಕೊಡೆಯವರ ‘ಮೇಣಕ್ಕಂಟಿದ ಬತ್ತಿ’ ಕವನ ಸಂಕಲನ ಕ್ಕೆ 


Read More »

ಚಿಕ್ಕ ವಯಸ್ಸಿನಲ್ಲಿ ಸಾಧನೆ ಇಂಡಿಯಾ ಬುಕ್ ಆಫ್ ರೆಕಾರ್ಡ್‌ನಲ್ಲಿ ಬಾಲಕ ಸುಹಾಂಶ್‌ನ ಎಸ್ ಬಂಗೇರ ದಾಖಲೆ


Share         ದಾವಣಗೆರೆ : ನಗರದ ಶಾಂತಪ್ಪ ಪೂಜಾರಿ ಹಾಗೂ ಶ್ರೀಮತಿ ಹೇಮಾ ಶಾಂತಪ್ಪ ಪೂಜಾರಿ ಇವರ ಮೊಮ್ಮಗನಾದ ಕು. ಸುಹಾಂಶ್ ಎಸ್ ಬಂಗೇರ “ಇಂಡಿಯಾ ಬುಕ್ ಆಫ್ ರೆಕಾರ್ಡ್’ನ ಸಾಧಕನಾಗಿದ್ದು, ಸರಿಸುಮಾರು 195 ರಾಷ್ಟ್ರಗಳ


Read More »

ಖೇಲೋ ಇಂಡಿಯಾ ರಾಷ್ಟ್ರೀಯ ಕರಾಟೆ ತಂಡಕ್ಕೆ ಆಯ್ಕೆಯಾದ ಕರಾಟೆ ಪಟು ಛಾಯಾ ಎಸ್. ಪೂಜಾರಿ.


Share         ಚಿನ್ನ 30 ಬೆಳ್ಳಿ 1 ಕಂಚು – ಇದು ಛಾಯಾ ಎಸ್. ಪೂಜಾರಿ ಅವರ ಒಂದು ದಶಕದ ಪರಿಶ್ರಮ ಹಾಗೂ ಸಾಧನೆಗೆ ಸಂದಿರುವ ಗೌರವದ ತುರಾಯಿ. ಉಡುಪಿ ಜಿಲ್ಲೆಯ ಹೆರ್ಗ ಕಾಂತಾ ಬೆಟ್ಟು


Read More »

ಪವರ್‌ಲಿಫ್ಟಿಂಗ್ ಕ್ರೀಡಾಪಟು ಶ್ರೀಮತಿ ಅಕ್ಷತಾ ಪೂಜಾರಿ ಅವರಿಗೆ ‘ಮಹಿಳಾ ಮಾಣಿಕ್ಯ’ ಪ್ರಶಸ್ತಿ


Share         ನಮ್ಮ ಹೆಮ್ಮೆಯ ಕರಾವಳಿಯ ಪ್ರತಿಭೆ, ಅಂತರಾಷ್ಟ್ರೀಯ ಪವರ್‌ಲಿಫ್ಟಿಂಗ್ ಕ್ರೀಡಾಪಟು ಶ್ರೀಮತಿ ಅಕ್ಷತಾ ಪೂಜಾರಿ ಸಿದ್ದಕಟ್ಟೆ ಅವರಿಗೆ ಫಸ್ಟ್ ನ್ಯೂಸ್ ವಾಹಿನಿಯ ಪ್ರತಿಷ್ಠಿತ ‘ಮಹಿಳಾ ಮಾಣಿಕ್ಯ’ ಪ್ರಶಸ್ತಿ ಲಭಿಸಿರುವುದು ನಾಡಿಗೆ ಸಂದ ಗೌರವ. ಗ್ರಾಮೀಣ


Read More »

ಪುತ್ತೂರು:ಶಾಂತಿಗೋಡು ಬಿಲ್ಲವ ಗ್ರಾಮ ಸಮಿತಿಯ ಮಾಜಿ ಅಧ್ಯಕ್ಷ ರವಿಕುಮಾರ್ ಕಲ್ಕಾರ್ ನಿಧನ


Share         ಪುತ್ತೂರು: ಶಾಂತಿಗೋಡು ಕಲ್ಕಾರ್ ನಿವಾಸಿ ರವಿಕುಮಾರ್ ಕಲ್ಕಾರ್(48ವ.)ರವರು ಫೆ.15ರಂದು ಹೃದಯಾಘಾತದಿಂದ ನಿಧನ ಹೊಂದಿದ್ದಾರೆ. ಬ್ರಹ್ಮಶ್ರೀ ನಾರಾಯಣ ಗುರುಪೂಜೆ ಸಂದರ್ಭ ಶಾಂತಿಗೋಡು ಬಿಲ್ಲವ ಗ್ರಾಮ ಸಮಿತಿ ವತಿಯಿಂದ ನಡೆಸಲ್ಪಟ್ಟ ಕ್ರೀಡಾಕೂಟದಲ್ಲಿ ರವಿ ಕಲ್ಕಾರ್ ರವರು


Read More »