TOP STORIES:

FOLLOW US

ದುಬೈಯಲ್ಲಿ ಯಶಸ್ವಿ ಉದ್ಯಮಿಯಾಗಿ ಲೆಕ್ಕವಿಲ್ಲದಷ್ಟು ಸೇವೆಯನ್ನು ಸಮಾಜಕ್ಕೆ ಅರ್ಪಿಸುತ್ತಿರು ಸೇವಾ ಮಾಣಿಕ್ಯ ನಿಟ್ಟೆ ಸಂದೀಪ್ ಕೋಟ್ಯಾನ್ ಕಾರ್ಕಳ..!


ಅನೇಕ ಜನ ಉದ್ಯಮ ಕ್ಷೇತ್ರದ ಯಶಸ್ವಿಯಾಗಿ ಮುಂದುವರೆದ ಉದ್ಯಮಿಗಳು ಪ್ರಸ್ತುತ ದಿನಗಳಲ್ಲಿ ಸಿಗುತ್ತಾರೆ, ಆದರೆ ತಾವು ಸಂಪಾದಿಸಿರುವ ಹಣವನ್ನು ಮಾತ್ರ ಸಮಾಜದಲ್ಲಿ ಕೇವಲ ಕಾರ್ಯಕ್ರಮ ಮನೊರಂಜನೆಗಳಿಗೆ ಬಳಸಿ ರಾಜಕೀಯ ನಾಯಕರು, ಉದ್ಯಮಿಗಳನ್ನು ಕರೆದು ಹಾರ ಹಾಕುವ ಮೂಲಕ ಹೆಸರು ಗಳಿಸುವ ಮುಂದಾಳೊಚನೆಯಿಂದ ಸಮಾಜದಲ್ಲಿ ನಾಯಕರಾಗಿ ಗುರುತಿಸಲ್ಪಡುವವರೇ ಹೆಚ್ಚು….

ಆದರೆ ಇಲ್ಲೊಬ್ಬ ವ್ಯಕ್ತಿ ಕಾರ್ಕಳ   ಪ್ರತೀಷ್ಠಿತ ಮನೆಯೊಂದರಲಿ ಜನಿಸಿ, ತಂದೆಯಂತೆ, ಸಮಾಜಕ್ಕಾಗಿ ಹತ್ತು ಹಲವಾರು ಸೇವೆಗಳನ್ನು ನೀಡಿರುವ ಒರ್ವ ಶ್ರೇಷ್ಠ ಸೇವಕರ ಬಗೆಗಿನ ಪುಟ್ಟ ಪರಿಚಯ…

ಸಂದೀಪ್ ಕೋಟ್ಯಾನ್, ಭಾರತೀಯ ಸಂಸ್ಕ್ರತಿಯ ಬಗ್ಗೆ ಅಪಾರವಾದ ಗೌರವ ಹೊಂದಿರುವ ಒರ್ವ ವ್ಯಕ್ತಿ, ಉದ್ಯೋಗಕ್ಕಾಗಿ ದುಬೈ ದೇಶಕ್ಕಾಗಿ ಬಂದು ತನ್ನ ವಯಕ್ತಿಕ ಶ್ರಮದಿಂದ ಯಾರೊಬ್ಬರ ಹಂಗಿಲ್ಲದೆ ದುಡಿಯುತ್ತ ನಂತರದಲ್ಲಿ ತನ್ನದೇ ಆದ ಸ್ವಂತ ಉದ್ಯಮವನ್ನು ಪ್ರಾರಂಭಿಸಿದರು, ಪ್ರಾರಂಭದಲ್ಲಿ ಅನೇಕ ರೀತಿಯ ಕಷ್ಟದ ದಿನಗಳನ್ನು ಧೈರ್ಯದಿಂದ ಎದುರಿಸಿ, ಯಾವ ಸಂಘಟನೆ ಸಹಾಯವನ್ನು ಪಡೆಯದೆ, ತನ್ನ ಆತ್ಮಸ್ತೈರ್ಯದ ಮೂಲಕ ತಾನು ಕಲಿತಂತಹ ಕೆಲಸ ಹಾಗೂ ತಾನು ನಂಬಿರುವ ದೇವರ ಮೇಲೆ‌ ಬಾರವನ್ನು ಹಾಕಿ ದುಬೈ ದೇಶದಲ್ಲಿ ಯಶಸ್ವಿ ಉದ್ಯಮಿಯಾಗಿ ಇಂದು ನಿಂತಿರುವ ವ್ಯಕ್ತಿ ಸಂದೀಪ್‌ ಕೋಟ್ಯಾನ್…

ಯಾವ ವ್ಯಕ್ತಿಗೂ ಮೋಸ ವಂಚನೆಯನ್ನು ಮಾಡದೆ ತನ್ನಲ್ಲಿರುವ ಅಪಾರವಾದ ಮಾನವೀಯತೆಯನ್ನು ಬಳಸಿ, ತಂದೆಯಂತೆ ಬಿಲ್ಲವ ಸಂಘಟನೆ ಹಾಗೂ ಬಿರುವೆರ್ ಕುಡ್ಲ ದುಬೈ ಘಟಕದ ಜೊತೆ ತಾನು ಒಬ್ಬರಾಗಿ ಪ್ರತಿಯೊಂದು ವಿಚಾರದಲ್ಲೂ ಸೇವೆಯನ್ನು ನೀಡುತ್ತಿರುವಂತಹ‌ ವ್ಯಕ್ತಿ‌ ಇವರು. ಇಷ್ಟೇ ಅಲ್ಲದೆ ಉದ್ಯೋಗ ಕ್ಷೇತ್ರದಲ್ಲಿ ತನ್ನಿಂದಾಗುವಂತಹ ಯಾವುದೇ ಸಹಕಾರ ವಿದ್ದರೂ ತಕ್ಷಣವೇ ಸ್ಪಂದಿಸುವಂತವರು. ಇವರ ಜೊತೆಗೆ ಬೆಂಬಲವಾಗಿ ನಿಂತಿರುವ ಶ್ರೀಮತಿ ಶ್ವೇತ ಸಂದೀಪ್ ಕೋಟ್ಯಾನ್ ಹಾಗೂ ಇಬ್ಬರು ಮಕ್ಕಳ ಜೊತೆಗಿರುವ ಇವರು ತನ್ನ ಹಿರಿಯ ಮಗನನ್ನು ಬಾಲ್ಯದಿಂದಲೇ ತುಳುಮಾತೃ ಭೂಮಿಯ ಸಂಸ್ಕ್ರತಿಯ ಯನ್ನು ಅರಿಯಲು ಯಕ್ಷಗಾನ ಅಭ್ಯಾಸ‌ ಕೇಂದ್ರಕ್ಕೆ ಸೇರ್ಪಡಿಸಿ, ಯಕ್ಷಗಾನದ ಹಾಗೂ ತುಳು ಮತ್ತು ಕನ್ನಡ ಭಾಷೆಯ ಮಹತ್ವವನ್ನು ತಮ್ಮ ಮಕ್ಕಳಿಗೂ ತಿಳಿಸಿಕೊಡುವಂತಹ ತುಳುನಾಡಿನ‌ ಮಗ ಇವರು…

ಯಾವತ್ತೂ ಯಾವ ವೇದಿಕೆಗೂ ಆಸೆಯನ್ನು ಪಡದೆ, ಯಾವ ಆಮಂತ್ರಣ ಬ್ಯಾನರಿನಲ್ಲೂ‌ ಹೆಸರಿನ ಆಸೆಯನ್ನಿಡದೆ, ಯಾವ ಸಾಮಾಜಿಕ ಜಾಲತಾಣದಲ್ಲೂ ಪ್ರಚಾರದ ಹಂಬಲವನ್ನಿಡದೆ ಸೇವೆಯನ್ನು ನೀಡುತ್ತಿರುವ ಅದ್ಭುತ ಸೇವಕ ಸಂದೀಪ್ ಕೋಟ್ಯಾನ್ ಕಾರ್ಕಳ.

ಇವರಿಗೆ ಇನ್ನಷ್ಟು ಸೇವೆ ಮಾಡುವ ಶಕ್ತಿ ಆ ದೇವರು ಅನುಗ್ರಹಿಸಲಿ ಎಂದು ಈ ಮೂಲಕ ದೇವರಲ್ಲಿ ಪ್ರಾರ್ಥಿಸುತ್ತೇವೆ🙏🏻

ಅಧ್ಯಕ್ಷರು ಹಾಗೂ ಸರ್ವಸದಸ್ಯರು      

ಯೂತ್ ಬಿಲ್ಲವ (ರಿ) ಕಾರ್ಕಳ


Share:

More Posts

Category

Send Us A Message

Related Posts

ಮೊಂಟೆಪದವು ಕೋಡಿಯಲ್ಲಿ ಗುಡ್ಡ ಕುಸಿತ; ಪದ್ಮರಾಜ್ ಆರ್.ಪೂಜಾರಿ ಭೇಟಿ ಮಾಡಿ ಸಾಂತ್ವನ


Share       ಮಂಗಳೂರು: ಕರ್ನಾಟಕದ ಕರಾವಳಿ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಭಾರೀ ಮಳೆಯಾಗುತ್ತಿದ್ದು, ಭೂಕುಸಿತ ಸಂಭವಿಸಿ ಮೂವರು ಸಾವನ್ನಪ್ಪಿದ್ದಾರೆ. ಒಬ್ಬ ಮಹಿಳೆ ಮತ್ತು ಆಕೆಯ ಮಗುವನ್ನು ಅವಶೇಷಗಳಿಂದ ರಕ್ಷಿಸಿ, ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅವರ ಸ್ಥಿತಿ ಗಂಭೀರವಾಗಿದೆ


Read More »

ಶಾಸಕ ಸುನಿಲ್ ಕುಮಾರ್ ಸಹೋದರ ಸುಜಿತ್‌ ಕುಮಾರ್‌ ನಿಧನ


Share       ಕಾರ್ಕಳ: ಕಾರ್ಕಳ ಶಾಸಕ ವಿ.ಸುನಿಲ್ ಕುಮಾರ್ ಸಹೋದರ ಸುಜಿತ್ ಕುಮಾರ್ (53) ಶುಕ್ರವಾರ (ಮೇ 23) ಅನಾರೋಗ್ಯದಿಂದ ನಿಧನರಾಗಿದ್ದಾರೆ.   ಅಂತಿಮ ವಿಧಿ ವಿಧಾನವು ಇಂದು ಶುಕ್ರವಾರ ನೆಕ್ಲಾಜೆ ಮನೆಯಲ್ಲಿ ಸಂಜೆ 6


Read More »

ಅಂತಾರಾಷ್ಟ್ರೀಯ ಆರ್ಯಭಟ ಪ್ರಶಸ್ತಿಗೆ ಪುಣೆಯ ಸಮಾಜಸೇವಕ   “ವಿಶ್ವನಾಥ ಪೂಜಾರಿ ಕಡ್ತಲ’ ಆಯ್ಕೆ


Share       ಪುಣೆ :ಪುಣೆ ಬಿಲ್ಲವ ಸಮಾಜ ಸೇವಾ ಸಂಘ ಇದರ ಅಧ್ಯಕ್ಷ ,ಸಾಮಾಜಿಕ ಚಟುವಟಿಕೆಗಳಲ್ಲಿ ಸದಾ ಗುರುತಿಸಿಕೊಂಡಿರುವ ವಿಶ್ವನಾಥ ಪೂಜಾರಿ ಕಡ್ತಲ ಇವರು ಪ್ರತಿಷ್ಠಿತ ಅಂತಾರಾಷ್ಟ್ರೀಯ ಆರ್ಯಭಟ ಪ್ರಶಸ್ತಿ -2025  ಗೆ ಆಯ್ಕೆಯಾಗಿರುತ್ತಾರೆ .


Read More »

ಅಯೋಧ್ಯೆಯಲ್ಲಿ ಮಹಾಮಂಡಲೇಶ್ಚರ 1008 ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ ಮುಂದಾಳತ್ವದಲ್ಲಿ 4 ಅಂತಸ್ತಿನ ಶಾಖಾ ಮಠಕ್ಕೆ ಭೂಮಿ ಪೂಜೆ,ಶಿಲಾನ್ಯಾಸ


Share       ಅಯೋಧ್ಯೆಯಲ್ಲಿ ಮಹಾಮಂಡಲೇಶ್ಚರ  1008 ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ ಮುಂದಾಳತ್ವದಲ್ಲಿ 4 ಅಂತಸ್ತಿನ ಶಾಖಾ ಮಠಕ್ಕೆ ಭೂಮಿ ಪೂಜೆ,ಶಿಲಾನ್ಯಾಸ ಯತೀವರ್ಯರು, ಸಚಿವ ಮಾಂಕಳ್ ವೈದ್ಯ, ಶಾಸಕ ಹರೀಶ್ ಪೂಂಜ, ಸೇರಿದಂತೆ ಬೆಳ್ತಂಗಡಿಯಿಂದ ಸುಮಾರು 200


Read More »

ಬೈದ್ಯೆರುಗಳಲ್ಲಿ ಲೀನವಾದ ದರ್ಶನ ಪಾತ್ರಿ ಶ್ರೀ ಸುರೇಶ್ ಪೂಜಾರಿ


Share         ಪ್ರಸಿದ್ದ ಬೈದ್ಯೇರುಗಳ ಪಾತ್ರಿಯಾದ  ಶ್ರೀ ಸುರೇಶ್ ಪೂಜಾರಿಯವರು ಅಲ್ಪಕಾಲದ  ಅಸೌಖ್ಯದ ಕಾರಣ ಇಂದು ಭಗವಂತನ ಪಾದ ಸೇರಿದರು. ಕಳತ್ತೂರು ಹಿರಿಯಣ್ಣ ಪೂಜಾರಿ ಹಾಗೂ ಶ್ರೀಮತಿ ಲೀಲಾವತಿ ಪೂಜಾರಿಯವರ ಮಗನಾದ ಶ್ರೀ ಸುರೇಶ್


Read More »

ಭಾರತ್ ಬ್ಯಾಂಕ್‌ನ ಕಾರ್ಯಾಧ್ಯಕ್ಷರಾದ ಸೂರ್ಯಕಾಂತ್ ಜಯ ಸುವರ್ಣರಿಗೆ ಐವತ್ತರ ಸಂಭ್ರಮ


Share       ಸಮಾಜದಲ್ಲಿ ಮಹತ್ವದ ಜವಾಬ್ದಾರಿಯನ್ನು ವಹಿಸಿಕೊಂಡಿರುವ ವ್ಯಕ್ತಿ ಸಾಮಾಜಿಕವಾಗಿ ಮತ್ತು ಭಾವನಾತ್ಮಕವಾಗಿ ಸಮತೋಲನವನ್ನು ಸಾಧಿಸಿದರೆ ಮಾತ್ರ ಅವನು ಯಶಸ್ಸಿನ ಮೆಟ್ಟಿಲೇರಲು ಸಾಧ್ಯ. ‘ಸುಖ-ದುಃಖ, ಲಾಭ -ನಷ್ಟ ಸೋಲು-ಗೆಲುವನ್ನು ಸಮಾನವಾಗಿ ತೆಗೆದುಕೊಳ್ಳುವವನೇ ನಿಜವಾದ ಸುಖಿ’ ಎಂಬ


Read More »