TOP STORIES:

ದುಬೈಯಲ್ಲಿ ಯಶಸ್ವಿ ಉದ್ಯಮಿಯಾಗಿ ಲೆಕ್ಕವಿಲ್ಲದಷ್ಟು ಸೇವೆಯನ್ನು ಸಮಾಜಕ್ಕೆ ಅರ್ಪಿಸುತ್ತಿರು ಸೇವಾ ಮಾಣಿಕ್ಯ ನಿಟ್ಟೆ ಸಂದೀಪ್ ಕೋಟ್ಯಾನ್ ಕಾರ್ಕಳ..!


ಅನೇಕ ಜನ ಉದ್ಯಮ ಕ್ಷೇತ್ರದ ಯಶಸ್ವಿಯಾಗಿ ಮುಂದುವರೆದ ಉದ್ಯಮಿಗಳು ಪ್ರಸ್ತುತ ದಿನಗಳಲ್ಲಿ ಸಿಗುತ್ತಾರೆ, ಆದರೆ ತಾವು ಸಂಪಾದಿಸಿರುವ ಹಣವನ್ನು ಮಾತ್ರ ಸಮಾಜದಲ್ಲಿ ಕೇವಲ ಕಾರ್ಯಕ್ರಮ ಮನೊರಂಜನೆಗಳಿಗೆ ಬಳಸಿ ರಾಜಕೀಯ ನಾಯಕರು, ಉದ್ಯಮಿಗಳನ್ನು ಕರೆದು ಹಾರ ಹಾಕುವ ಮೂಲಕ ಹೆಸರು ಗಳಿಸುವ ಮುಂದಾಳೊಚನೆಯಿಂದ ಸಮಾಜದಲ್ಲಿ ನಾಯಕರಾಗಿ ಗುರುತಿಸಲ್ಪಡುವವರೇ ಹೆಚ್ಚು….

ಆದರೆ ಇಲ್ಲೊಬ್ಬ ವ್ಯಕ್ತಿ ಕಾರ್ಕಳ   ಪ್ರತೀಷ್ಠಿತ ಮನೆಯೊಂದರಲಿ ಜನಿಸಿ, ತಂದೆಯಂತೆ, ಸಮಾಜಕ್ಕಾಗಿ ಹತ್ತು ಹಲವಾರು ಸೇವೆಗಳನ್ನು ನೀಡಿರುವ ಒರ್ವ ಶ್ರೇಷ್ಠ ಸೇವಕರ ಬಗೆಗಿನ ಪುಟ್ಟ ಪರಿಚಯ…

ಸಂದೀಪ್ ಕೋಟ್ಯಾನ್, ಭಾರತೀಯ ಸಂಸ್ಕ್ರತಿಯ ಬಗ್ಗೆ ಅಪಾರವಾದ ಗೌರವ ಹೊಂದಿರುವ ಒರ್ವ ವ್ಯಕ್ತಿ, ಉದ್ಯೋಗಕ್ಕಾಗಿ ದುಬೈ ದೇಶಕ್ಕಾಗಿ ಬಂದು ತನ್ನ ವಯಕ್ತಿಕ ಶ್ರಮದಿಂದ ಯಾರೊಬ್ಬರ ಹಂಗಿಲ್ಲದೆ ದುಡಿಯುತ್ತ ನಂತರದಲ್ಲಿ ತನ್ನದೇ ಆದ ಸ್ವಂತ ಉದ್ಯಮವನ್ನು ಪ್ರಾರಂಭಿಸಿದರು, ಪ್ರಾರಂಭದಲ್ಲಿ ಅನೇಕ ರೀತಿಯ ಕಷ್ಟದ ದಿನಗಳನ್ನು ಧೈರ್ಯದಿಂದ ಎದುರಿಸಿ, ಯಾವ ಸಂಘಟನೆ ಸಹಾಯವನ್ನು ಪಡೆಯದೆ, ತನ್ನ ಆತ್ಮಸ್ತೈರ್ಯದ ಮೂಲಕ ತಾನು ಕಲಿತಂತಹ ಕೆಲಸ ಹಾಗೂ ತಾನು ನಂಬಿರುವ ದೇವರ ಮೇಲೆ‌ ಬಾರವನ್ನು ಹಾಕಿ ದುಬೈ ದೇಶದಲ್ಲಿ ಯಶಸ್ವಿ ಉದ್ಯಮಿಯಾಗಿ ಇಂದು ನಿಂತಿರುವ ವ್ಯಕ್ತಿ ಸಂದೀಪ್‌ ಕೋಟ್ಯಾನ್…

ಯಾವ ವ್ಯಕ್ತಿಗೂ ಮೋಸ ವಂಚನೆಯನ್ನು ಮಾಡದೆ ತನ್ನಲ್ಲಿರುವ ಅಪಾರವಾದ ಮಾನವೀಯತೆಯನ್ನು ಬಳಸಿ, ತಂದೆಯಂತೆ ಬಿಲ್ಲವ ಸಂಘಟನೆ ಹಾಗೂ ಬಿರುವೆರ್ ಕುಡ್ಲ ದುಬೈ ಘಟಕದ ಜೊತೆ ತಾನು ಒಬ್ಬರಾಗಿ ಪ್ರತಿಯೊಂದು ವಿಚಾರದಲ್ಲೂ ಸೇವೆಯನ್ನು ನೀಡುತ್ತಿರುವಂತಹ‌ ವ್ಯಕ್ತಿ‌ ಇವರು. ಇಷ್ಟೇ ಅಲ್ಲದೆ ಉದ್ಯೋಗ ಕ್ಷೇತ್ರದಲ್ಲಿ ತನ್ನಿಂದಾಗುವಂತಹ ಯಾವುದೇ ಸಹಕಾರ ವಿದ್ದರೂ ತಕ್ಷಣವೇ ಸ್ಪಂದಿಸುವಂತವರು. ಇವರ ಜೊತೆಗೆ ಬೆಂಬಲವಾಗಿ ನಿಂತಿರುವ ಶ್ರೀಮತಿ ಶ್ವೇತ ಸಂದೀಪ್ ಕೋಟ್ಯಾನ್ ಹಾಗೂ ಇಬ್ಬರು ಮಕ್ಕಳ ಜೊತೆಗಿರುವ ಇವರು ತನ್ನ ಹಿರಿಯ ಮಗನನ್ನು ಬಾಲ್ಯದಿಂದಲೇ ತುಳುಮಾತೃ ಭೂಮಿಯ ಸಂಸ್ಕ್ರತಿಯ ಯನ್ನು ಅರಿಯಲು ಯಕ್ಷಗಾನ ಅಭ್ಯಾಸ‌ ಕೇಂದ್ರಕ್ಕೆ ಸೇರ್ಪಡಿಸಿ, ಯಕ್ಷಗಾನದ ಹಾಗೂ ತುಳು ಮತ್ತು ಕನ್ನಡ ಭಾಷೆಯ ಮಹತ್ವವನ್ನು ತಮ್ಮ ಮಕ್ಕಳಿಗೂ ತಿಳಿಸಿಕೊಡುವಂತಹ ತುಳುನಾಡಿನ‌ ಮಗ ಇವರು…

ಯಾವತ್ತೂ ಯಾವ ವೇದಿಕೆಗೂ ಆಸೆಯನ್ನು ಪಡದೆ, ಯಾವ ಆಮಂತ್ರಣ ಬ್ಯಾನರಿನಲ್ಲೂ‌ ಹೆಸರಿನ ಆಸೆಯನ್ನಿಡದೆ, ಯಾವ ಸಾಮಾಜಿಕ ಜಾಲತಾಣದಲ್ಲೂ ಪ್ರಚಾರದ ಹಂಬಲವನ್ನಿಡದೆ ಸೇವೆಯನ್ನು ನೀಡುತ್ತಿರುವ ಅದ್ಭುತ ಸೇವಕ ಸಂದೀಪ್ ಕೋಟ್ಯಾನ್ ಕಾರ್ಕಳ.

ಇವರಿಗೆ ಇನ್ನಷ್ಟು ಸೇವೆ ಮಾಡುವ ಶಕ್ತಿ ಆ ದೇವರು ಅನುಗ್ರಹಿಸಲಿ ಎಂದು ಈ ಮೂಲಕ ದೇವರಲ್ಲಿ ಪ್ರಾರ್ಥಿಸುತ್ತೇವೆ🙏🏻

ಅಧ್ಯಕ್ಷರು ಹಾಗೂ ಸರ್ವಸದಸ್ಯರು      

ಯೂತ್ ಬಿಲ್ಲವ (ರಿ) ಕಾರ್ಕಳ


Related Posts

ಬಿಲ್ಲವಾಸ್ ಕತಾರ್ ನ ಸ್ವರ ಲಹರಿಗೆ ಸ್ವರ ಸೇರಿಸಿ ಕುಣಿದು ಕುಪ್ಪಳಿಸಿದ ಜನಸ್ತೋಮ


Share        ಬಿಲ್ಲವಾಸ್ ಕತಾರ್  ಆಯೋಜಿಸಿದ  ಸ್ವರ ಲಹರಿ, ಸಂಗೀತ ಸಂಜೆ ಕಾರ್ಯಕ್ರಮ  ದಿನಾಂಕ  ಮೇ 30, 2025 ರಂದು ಡಿ.ಪಿ.ಎಸ್. ಎಂ.ಐ.ಎಸ್ ಅಲ್ ವಕ್ರ   ಸಭಾಂಗಣದಲ್ಲಿ ನವ ಇತಿಹಾಸವನ್ನು ಸೃಷ್ಟಿಸಿತು.  ಅದ್ಭುತ ಸಂಗೀತ


Read More »

ಬಿಕ್ಕಳಿಕೆ ಬಂದಾಗ ಈ ಸರಳ ಟೆಕ್ನಿಕ್ ಟ್ರೈ ಮಾಡಿ ನೋಡಿ, ತಕ್ಷಣ ಕಡಿಮೆಯಾಗುತ್ತೆ


Share        ಬಿಕ್ಕಳಿಕೆ ಯಾರಿಗೆ ಬರಲ್ಲ ಹೇಳಿ? ಅದರಲ್ಲಿಯೂ ಈ ಬಿಕ್ಕಳಿಕೆ ಯಾರನ್ನೂ ಹೇಳಿ, ಕೇಳಿ ಬರುವಂತದ್ದಲ್ಲ. ಆದರೆ ಅವು ಬಂದಾಗ ಎಲ್ಲರ ಮುಂದೆ ಮುಜುಗರ ಆಗುವುದು ಮಾತ್ರ ತಪ್ಪುವುದಿಲ್ಲ. ಏಕೆಂದರೆ ಇದು ಯಾವಾಗ ಬೇಕಾದರೂ


Read More »

ಭಾರತೀಯ ಸೇನೆಯಲ್ಲಿ ಲೆಫ್ಟಿನೆಂಟ್ ಗೆಜೆಟೆಡ್ ಅಧಿಕಾರಿಯಾಗಿ ಆಯ್ಕೆಯಾದ ಸುದೀಪ್ ರಾಜ್ ಮನೆಗೆ ಸೌದಿ ಬಿಲ್ಲಾವಾಸ್ ಅಧ್ಯಕ್ಷರಾದ ಸತೀಶ್ ಕುಮಾರ್ ಬಜಾಲ್ ಭೇಟಿ


Share        ಮಂಗಳೂರು: ಕೇಂದ್ರ ಲೋಕಸೇವಾ ಆಯೋಗ (UPSC) ನಡೆಸಲಾದ ಪರೀಕ್ಷೆಯಲ್ಲಿ ಲೆಫ್ಟಿನೆಂಟ್ (ವರ್ಗ -1 )ಗೆಜೆಟೆಡ್ ಅಧಿಕಾರಿ ಯಾಗಿ ಆಯ್ಕೆಯಾದ ಮಂಗಳೂರಿನ ಚಿಲಿಂಬಿ ಆದರ್ಶನಗರದ ಸುದೀಪ್ ರಾಜ್ ಅವರ ಮನೆಗೆ ತೆರಳಿ ಸೌದಿ ಬಿಲ್ಲಾವಾಸ್


Read More »

UPSC ನಡೆಸಲಾದ ಪರೀಕ್ಷೆಯಲ್ಲಿ. ಲೆಫ್ಟಿನೆಂಟ್ (ವರ್ಗ -1 )ಗೆಜೆಟೆಡ್ ಅಧಿಕಾರಿ ಯಾಗಿ ಸುದೀಪ್ ರಾಜ್ ಆಯ್ಕೆ


Share        ಕೇಂದ್ರ ಲೋಕಸೇವಾ ಆಯೋಗ (UPSC), ಮೇ 23, 2025 ರಂದು ಕಂಬೈನ್ಡ್ ಡಿಫೆನ್ಸ್ ಸರ್ವೀಸಸ್ (CDS) ಪರೀಕ್ಷೆ (II), 2024 ರ ಅಂತಿಮ ಮೆರಿಟ್ ಪಟ್ಟಿಯನ್ನು ಬಿಡುಗಡೆ ಮಾಡಿದೆ, ಅದರಲ್ಲಿ ನಮ್ಮ ಬಿಲ್ಲವ


Read More »

ಮೊಂಟೆಪದವು ಕೋಡಿಯಲ್ಲಿ ಗುಡ್ಡ ಕುಸಿತ; ಪದ್ಮರಾಜ್ ಆರ್.ಪೂಜಾರಿ ಭೇಟಿ ಮಾಡಿ ಸಾಂತ್ವನ


Share        ಮಂಗಳೂರು: ಕರ್ನಾಟಕದ ಕರಾವಳಿ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಭಾರೀ ಮಳೆಯಾಗುತ್ತಿದ್ದು, ಭೂಕುಸಿತ ಸಂಭವಿಸಿ ಮೂವರು ಸಾವನ್ನಪ್ಪಿದ್ದಾರೆ. ಒಬ್ಬ ಮಹಿಳೆ ಮತ್ತು ಆಕೆಯ ಮಗುವನ್ನು ಅವಶೇಷಗಳಿಂದ ರಕ್ಷಿಸಿ, ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅವರ ಸ್ಥಿತಿ ಗಂಭೀರವಾಗಿದೆ


Read More »

ಶಾಸಕ ಸುನಿಲ್ ಕುಮಾರ್ ಸಹೋದರ ಸುಜಿತ್‌ ಕುಮಾರ್‌ ನಿಧನ


Share        ಕಾರ್ಕಳ: ಕಾರ್ಕಳ ಶಾಸಕ ವಿ.ಸುನಿಲ್ ಕುಮಾರ್ ಸಹೋದರ ಸುಜಿತ್ ಕುಮಾರ್ (53) ಶುಕ್ರವಾರ (ಮೇ 23) ಅನಾರೋಗ್ಯದಿಂದ ನಿಧನರಾಗಿದ್ದಾರೆ.   ಅಂತಿಮ ವಿಧಿ ವಿಧಾನವು ಇಂದು ಶುಕ್ರವಾರ ನೆಕ್ಲಾಜೆ ಮನೆಯಲ್ಲಿ ಸಂಜೆ 6


Read More »